Homeಕರ್ನಾಟಕಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ?: ಮತ್ತೆ ನಾಲಿಗೆ ಹರಿಯಬಿಟ್ಟ ಸಚಿವ ಮಾಧುಸ್ವಾಮಿ

ಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ?: ಮತ್ತೆ ನಾಲಿಗೆ ಹರಿಯಬಿಟ್ಟ ಸಚಿವ ಮಾಧುಸ್ವಾಮಿ

ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತಿಯಾ ಗೊತ್ತಾ? ಯಾವ ಸೋಪು ಹಾಕಿ ನಿನ್ನ ಹೆಂಡ್ತಿ ಸೀರೆ ತೋಳಿತ್ತೀಯಾ? ರ್ಯಾಸ್ಕಲ್ ಏನು ತಿಳ್ಕಂಡಿದ್ದೀರಾ ನೀವು? ರೆಸ್ಯುಲೂಷನ್ ಮಾಡ್ಸಿ ಸಸ್ಪೆಂಡ್ ಮಾಡ್ಸಿ ಈ ನನ್ಮಕ್ಕಳನ್ನ.. ಎಂದು ಮಾಧುಸ್ವಾಮಿಯವರು ನಾಲಿಗೆ ಹರಿಬಿಟ್ಟಿದ್ದಾರೆ.

- Advertisement -
- Advertisement -

ಹಲವು ಬಾರಿ ನಾಲಿಗೆ ಹರಿಯಬಿಟ್ಟು ಮನಬಂದಂತೆ ಮಾತನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಇಂದು ಮತ್ತೆ ತಮ್ಮ ತಪ್ಪನ್ನು ಪುನಾರಾವರ್ತನೆ ಮಾಡಿದ್ದಾರೆ. ಅಧಿಕಾರಿಯೊಬ್ಬರ ಮನೆಯ ವೈಯಕ್ತಿಕ ವಿಷಯಗಳನ್ನೆಲ್ಲ ಸಾರ್ವಜನಿಕ ಸಭೆಯಲ್ಲಿ ಪ್ರಸ್ತಾಪಿಸುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಧುಸ್ವಾಮಿಯವರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ತುಮಕೂರಿನಲ್ಲಿ ನಡೆದ 2020-21 ನೇ ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಪಿಆರ್‌ಐಡಿ ಎಇಇ ಅಧಿಕಾರಿಯ ವಿರುದ್ದ ಏಕವಚನದಲ್ಲಿ ಹರಿಹಾಯ್ದಿದ್ದಾರೆ.

ಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ? ಕೆಲಸ ಮಾಡದಿದ್ದರೂ ನಿನ್ನ ರಕ್ಷಣೆಗೆ ಬರುವ ಆ ಸೀರೆ ಸುತ್ತುವ ಕೃಷ್ಣ ಯಾರು? ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತಿಯಾ ಗೊತ್ತಾ? ಯಾವ ಸೋಪು ಹಾಕಿ ನಿನ್ನ ಹೆಂಡ್ತಿ ಸೀರೆ ತೋಳಿತ್ತೀಯಾ? ರ್ಯಾಸ್ಕಲ್ ಏನು ತಿಳ್ಕಂಡಿದ್ದೀರಾ ನೀವು? ರೆಸ್ಯುಲೂಷನ್ ಮಾಡ್ಸಿ ಸಸ್ಪೆಂಡ್ ಮಾಡ್ಸಿ ಈ ನನ್ಮಕ್ಕಳನ್ನ.. ಎಂದು ಮಾಧುಸ್ವಾಮಿಯವರು ನಾಲಿಗೆ ಹರಿಬಿಟ್ಟಿದ್ದಾರೆ.

ಕೆಲಸ ಮಾಡದೇ ಅಧಿಕಾರಿಗಳು ಜಿಲ್ಲೆಯನ್ನೇ ಸಾಯಿಸುತ್ತಿದ್ದಾರೆ. ಕೊರೊನಾ, ನೀತಿ ಸಂಹಿತೆಯ ಹೆಸರಿನಲ್ಲಿ ಜಡಗಟ್ಟಿದ್ದಾರೆ. ಒಂದೇ ಒಂದು ಕಾಮಗಾರಿಯನ್ನು ಸಮರ್ಪಕವಾಗಿ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಚಿವ ಮಾಧುಸ್ವಾಮಿ ವರ್ತನೆ ತಪ್ಪು, ಸಹಿಸಲು ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ

ಇದೇ ಮಾಧುಸ್ವಾಮಿಯವರು ಈ ಹಿಂದೆ ಕೋಲಾರದಲ್ಲಿ ಮನವಿ ನೀಡಲು ಬಂದ ರೈತ ಮಹಿಳೆಯನ್ನು ರ್ಯಾಸ್ಕಲ್ ಎಂದು ಕರೆಯುವ ಮೂಲಕ ತೀವ್ರ ಟೀಕೆಗೆ ಒಳಗಾಗಿದ್ದರು. ತುಮಕೂರಿನಲ್ಲಿ ಹಿರಿಯ ರೈತ ಮುಖಂಡರೊಂದಿಗೆ ಅನುಚಿತವಾಗಿ ವರ್ತಿಸಿ ಟೀಕೆ ಎದುರಿಸಿದ್ದರು. ಇಂದು ಸಹ ಅದನ್ನು ಪುನಾರಾವರ್ತನೆ ಮಾಡಿದ್ದಾರೆ.

ಮಾಧುಸ್ವಾಮಿಯವರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಮಾಜಿ ಸಚಿವರಾದ ಡಾ.ಎಚ್.ಸಿ ಮಹದೇವಪ್ಪನವರು ಪ್ರತಿಕ್ರಿಯಿಸಿ “ಶಾಸನಬದ್ಧವಾಗಿ ಆಯ್ಕೆಯಾದ ಜನಪ್ರತಿನಿಧಿಗಳು ವಿಶ್ವಾಸನೀಯವಾದ ಭಾಷೆಯನ್ನು ಬಳಸದೇ ಇದ್ದರೆ ಅದು ಸಂವಿಧಾನಕ್ಕೆ ಅಗೌರವ ತೋರಿದಂತೆ. ಕಾನೂನು ಸಚಿವರಾದ ಮಾಧುಸ್ವಾಮಿಯವರು ಹೀಗೆ ದರ್ಪದಿಂದ ಮಾತನಾಡುತ್ತಿರುವುದು ಮೊದಲ ಬಾರಿ ಏನಲ್ಲ. ಆದರೂ ಇವರು ಹೇಗೆ ಮಾತನಾಡಿದರೂ ನಡೆಯುತ್ತದೆ. ಆದರೆ ಅಹಿಂದ ವರ್ಗಗಳು ಮತ್ತು ತಳ ವರ್ಗದವರು ಮಾತನಾಡಿದಾಗ ಮಾತ್ರ ಅದು ಅಹಂಕಾರ, ದರ್ಪ ಇತ್ಯಾದಿ ಎನಿಸಿಕೊಳ್ಳುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಧರ್ಮ ಪ್ರಕಾಶ್ ಎಂಬುವವರು “ಅವರ ಹೆಂಡತಿಯ ಸೀರೆಯನ್ನು ಯಾವ ಸೋಪಲ್ಲಿ ಆದ್ರೂ ತೊಳಿತಾರೆ ಅದನ್ ಕಟ್ಕೊಂಡು ನಿನಗೇನಾಗಬೇಕು’ ಡಿಟರ್ಜೆಂಟ್ ಮಾಧುಸ್ವಾಮಿ. ಅವರ ಮನೆಗೆ ಹೋಗಿ ಅವರ ಬಟ್ಟೆಗಳನ್ನು ನೀನು ತೊಳೆದು ಕೊಡುತ್ತೀಯಾ. ಇಂತಹ ದರ್ಪದ ಮಾತುಗಳನ್ನು ಮೊದಲು ಬಿಡು ಇಲ್ಲಾಂದ್ರೆ ನಿಮ್ಮ ಪಕ್ಷವನ್ನು ಕರ್ನಾಟಕ ಜನ ತೊಳೆದು ಹಾಕುತ್ತಾರೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾದೇವಸ್ವಾಮಿ ಒಬ್ಬ ಮಂತ್ರಿಯಾಗಿರಿ ಅಷ್ಟೇ ..ಸಂಸತ್ತಿನಲ್ಲಿ ಎರಡು ಮಾತಾಡ್ ತಕ್ಷಣ ಅವರು ತನ್ನನ್ನು ತಾನು ರಾಜ ಅಂತ ತಿಳ್ಕೊಂಡಿದ್ದಾರೆ. ಸಸ್ಪೆಂಡ್ ಮಾಡೊಕೆ ನೀವ್ಯಾರು ?ಆಡಳಿತ ನಡೆಸಿ . ದಬ್ಬಾಳಿಕೆ ಬೇಡ.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...