Homeಕರ್ನಾಟಕಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ?: ಮತ್ತೆ ನಾಲಿಗೆ ಹರಿಯಬಿಟ್ಟ ಸಚಿವ ಮಾಧುಸ್ವಾಮಿ

ಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ?: ಮತ್ತೆ ನಾಲಿಗೆ ಹರಿಯಬಿಟ್ಟ ಸಚಿವ ಮಾಧುಸ್ವಾಮಿ

ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತಿಯಾ ಗೊತ್ತಾ? ಯಾವ ಸೋಪು ಹಾಕಿ ನಿನ್ನ ಹೆಂಡ್ತಿ ಸೀರೆ ತೋಳಿತ್ತೀಯಾ? ರ್ಯಾಸ್ಕಲ್ ಏನು ತಿಳ್ಕಂಡಿದ್ದೀರಾ ನೀವು? ರೆಸ್ಯುಲೂಷನ್ ಮಾಡ್ಸಿ ಸಸ್ಪೆಂಡ್ ಮಾಡ್ಸಿ ಈ ನನ್ಮಕ್ಕಳನ್ನ.. ಎಂದು ಮಾಧುಸ್ವಾಮಿಯವರು ನಾಲಿಗೆ ಹರಿಬಿಟ್ಟಿದ್ದಾರೆ.

- Advertisement -
- Advertisement -

ಹಲವು ಬಾರಿ ನಾಲಿಗೆ ಹರಿಯಬಿಟ್ಟು ಮನಬಂದಂತೆ ಮಾತನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಇಂದು ಮತ್ತೆ ತಮ್ಮ ತಪ್ಪನ್ನು ಪುನಾರಾವರ್ತನೆ ಮಾಡಿದ್ದಾರೆ. ಅಧಿಕಾರಿಯೊಬ್ಬರ ಮನೆಯ ವೈಯಕ್ತಿಕ ವಿಷಯಗಳನ್ನೆಲ್ಲ ಸಾರ್ವಜನಿಕ ಸಭೆಯಲ್ಲಿ ಪ್ರಸ್ತಾಪಿಸುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಧುಸ್ವಾಮಿಯವರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ತುಮಕೂರಿನಲ್ಲಿ ನಡೆದ 2020-21 ನೇ ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಪಿಆರ್‌ಐಡಿ ಎಇಇ ಅಧಿಕಾರಿಯ ವಿರುದ್ದ ಏಕವಚನದಲ್ಲಿ ಹರಿಹಾಯ್ದಿದ್ದಾರೆ.

ಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ? ಕೆಲಸ ಮಾಡದಿದ್ದರೂ ನಿನ್ನ ರಕ್ಷಣೆಗೆ ಬರುವ ಆ ಸೀರೆ ಸುತ್ತುವ ಕೃಷ್ಣ ಯಾರು? ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತಿಯಾ ಗೊತ್ತಾ? ಯಾವ ಸೋಪು ಹಾಕಿ ನಿನ್ನ ಹೆಂಡ್ತಿ ಸೀರೆ ತೋಳಿತ್ತೀಯಾ? ರ್ಯಾಸ್ಕಲ್ ಏನು ತಿಳ್ಕಂಡಿದ್ದೀರಾ ನೀವು? ರೆಸ್ಯುಲೂಷನ್ ಮಾಡ್ಸಿ ಸಸ್ಪೆಂಡ್ ಮಾಡ್ಸಿ ಈ ನನ್ಮಕ್ಕಳನ್ನ.. ಎಂದು ಮಾಧುಸ್ವಾಮಿಯವರು ನಾಲಿಗೆ ಹರಿಬಿಟ್ಟಿದ್ದಾರೆ.

ಕೆಲಸ ಮಾಡದೇ ಅಧಿಕಾರಿಗಳು ಜಿಲ್ಲೆಯನ್ನೇ ಸಾಯಿಸುತ್ತಿದ್ದಾರೆ. ಕೊರೊನಾ, ನೀತಿ ಸಂಹಿತೆಯ ಹೆಸರಿನಲ್ಲಿ ಜಡಗಟ್ಟಿದ್ದಾರೆ. ಒಂದೇ ಒಂದು ಕಾಮಗಾರಿಯನ್ನು ಸಮರ್ಪಕವಾಗಿ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಚಿವ ಮಾಧುಸ್ವಾಮಿ ವರ್ತನೆ ತಪ್ಪು, ಸಹಿಸಲು ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ

ಇದೇ ಮಾಧುಸ್ವಾಮಿಯವರು ಈ ಹಿಂದೆ ಕೋಲಾರದಲ್ಲಿ ಮನವಿ ನೀಡಲು ಬಂದ ರೈತ ಮಹಿಳೆಯನ್ನು ರ್ಯಾಸ್ಕಲ್ ಎಂದು ಕರೆಯುವ ಮೂಲಕ ತೀವ್ರ ಟೀಕೆಗೆ ಒಳಗಾಗಿದ್ದರು. ತುಮಕೂರಿನಲ್ಲಿ ಹಿರಿಯ ರೈತ ಮುಖಂಡರೊಂದಿಗೆ ಅನುಚಿತವಾಗಿ ವರ್ತಿಸಿ ಟೀಕೆ ಎದುರಿಸಿದ್ದರು. ಇಂದು ಸಹ ಅದನ್ನು ಪುನಾರಾವರ್ತನೆ ಮಾಡಿದ್ದಾರೆ.

ಮಾಧುಸ್ವಾಮಿಯವರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಮಾಜಿ ಸಚಿವರಾದ ಡಾ.ಎಚ್.ಸಿ ಮಹದೇವಪ್ಪನವರು ಪ್ರತಿಕ್ರಿಯಿಸಿ “ಶಾಸನಬದ್ಧವಾಗಿ ಆಯ್ಕೆಯಾದ ಜನಪ್ರತಿನಿಧಿಗಳು ವಿಶ್ವಾಸನೀಯವಾದ ಭಾಷೆಯನ್ನು ಬಳಸದೇ ಇದ್ದರೆ ಅದು ಸಂವಿಧಾನಕ್ಕೆ ಅಗೌರವ ತೋರಿದಂತೆ. ಕಾನೂನು ಸಚಿವರಾದ ಮಾಧುಸ್ವಾಮಿಯವರು ಹೀಗೆ ದರ್ಪದಿಂದ ಮಾತನಾಡುತ್ತಿರುವುದು ಮೊದಲ ಬಾರಿ ಏನಲ್ಲ. ಆದರೂ ಇವರು ಹೇಗೆ ಮಾತನಾಡಿದರೂ ನಡೆಯುತ್ತದೆ. ಆದರೆ ಅಹಿಂದ ವರ್ಗಗಳು ಮತ್ತು ತಳ ವರ್ಗದವರು ಮಾತನಾಡಿದಾಗ ಮಾತ್ರ ಅದು ಅಹಂಕಾರ, ದರ್ಪ ಇತ್ಯಾದಿ ಎನಿಸಿಕೊಳ್ಳುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಧರ್ಮ ಪ್ರಕಾಶ್ ಎಂಬುವವರು “ಅವರ ಹೆಂಡತಿಯ ಸೀರೆಯನ್ನು ಯಾವ ಸೋಪಲ್ಲಿ ಆದ್ರೂ ತೊಳಿತಾರೆ ಅದನ್ ಕಟ್ಕೊಂಡು ನಿನಗೇನಾಗಬೇಕು’ ಡಿಟರ್ಜೆಂಟ್ ಮಾಧುಸ್ವಾಮಿ. ಅವರ ಮನೆಗೆ ಹೋಗಿ ಅವರ ಬಟ್ಟೆಗಳನ್ನು ನೀನು ತೊಳೆದು ಕೊಡುತ್ತೀಯಾ. ಇಂತಹ ದರ್ಪದ ಮಾತುಗಳನ್ನು ಮೊದಲು ಬಿಡು ಇಲ್ಲಾಂದ್ರೆ ನಿಮ್ಮ ಪಕ್ಷವನ್ನು ಕರ್ನಾಟಕ ಜನ ತೊಳೆದು ಹಾಕುತ್ತಾರೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾದೇವಸ್ವಾಮಿ ಒಬ್ಬ ಮಂತ್ರಿಯಾಗಿರಿ ಅಷ್ಟೇ ..ಸಂಸತ್ತಿನಲ್ಲಿ ಎರಡು ಮಾತಾಡ್ ತಕ್ಷಣ ಅವರು ತನ್ನನ್ನು ತಾನು ರಾಜ ಅಂತ ತಿಳ್ಕೊಂಡಿದ್ದಾರೆ. ಸಸ್ಪೆಂಡ್ ಮಾಡೊಕೆ ನೀವ್ಯಾರು ?ಆಡಳಿತ ನಡೆಸಿ . ದಬ್ಬಾಳಿಕೆ ಬೇಡ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...