Homeಕರ್ನಾಟಕಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ?: ಮತ್ತೆ ನಾಲಿಗೆ ಹರಿಯಬಿಟ್ಟ ಸಚಿವ ಮಾಧುಸ್ವಾಮಿ

ಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ?: ಮತ್ತೆ ನಾಲಿಗೆ ಹರಿಯಬಿಟ್ಟ ಸಚಿವ ಮಾಧುಸ್ವಾಮಿ

ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತಿಯಾ ಗೊತ್ತಾ? ಯಾವ ಸೋಪು ಹಾಕಿ ನಿನ್ನ ಹೆಂಡ್ತಿ ಸೀರೆ ತೋಳಿತ್ತೀಯಾ? ರ್ಯಾಸ್ಕಲ್ ಏನು ತಿಳ್ಕಂಡಿದ್ದೀರಾ ನೀವು? ರೆಸ್ಯುಲೂಷನ್ ಮಾಡ್ಸಿ ಸಸ್ಪೆಂಡ್ ಮಾಡ್ಸಿ ಈ ನನ್ಮಕ್ಕಳನ್ನ.. ಎಂದು ಮಾಧುಸ್ವಾಮಿಯವರು ನಾಲಿಗೆ ಹರಿಬಿಟ್ಟಿದ್ದಾರೆ.

- Advertisement -
- Advertisement -

ಹಲವು ಬಾರಿ ನಾಲಿಗೆ ಹರಿಯಬಿಟ್ಟು ಮನಬಂದಂತೆ ಮಾತನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಇಂದು ಮತ್ತೆ ತಮ್ಮ ತಪ್ಪನ್ನು ಪುನಾರಾವರ್ತನೆ ಮಾಡಿದ್ದಾರೆ. ಅಧಿಕಾರಿಯೊಬ್ಬರ ಮನೆಯ ವೈಯಕ್ತಿಕ ವಿಷಯಗಳನ್ನೆಲ್ಲ ಸಾರ್ವಜನಿಕ ಸಭೆಯಲ್ಲಿ ಪ್ರಸ್ತಾಪಿಸುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಧುಸ್ವಾಮಿಯವರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ತುಮಕೂರಿನಲ್ಲಿ ನಡೆದ 2020-21 ನೇ ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಪಿಆರ್‌ಐಡಿ ಎಇಇ ಅಧಿಕಾರಿಯ ವಿರುದ್ದ ಏಕವಚನದಲ್ಲಿ ಹರಿಹಾಯ್ದಿದ್ದಾರೆ.

ಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ? ಕೆಲಸ ಮಾಡದಿದ್ದರೂ ನಿನ್ನ ರಕ್ಷಣೆಗೆ ಬರುವ ಆ ಸೀರೆ ಸುತ್ತುವ ಕೃಷ್ಣ ಯಾರು? ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತಿಯಾ ಗೊತ್ತಾ? ಯಾವ ಸೋಪು ಹಾಕಿ ನಿನ್ನ ಹೆಂಡ್ತಿ ಸೀರೆ ತೋಳಿತ್ತೀಯಾ? ರ್ಯಾಸ್ಕಲ್ ಏನು ತಿಳ್ಕಂಡಿದ್ದೀರಾ ನೀವು? ರೆಸ್ಯುಲೂಷನ್ ಮಾಡ್ಸಿ ಸಸ್ಪೆಂಡ್ ಮಾಡ್ಸಿ ಈ ನನ್ಮಕ್ಕಳನ್ನ.. ಎಂದು ಮಾಧುಸ್ವಾಮಿಯವರು ನಾಲಿಗೆ ಹರಿಬಿಟ್ಟಿದ್ದಾರೆ.

ಕೆಲಸ ಮಾಡದೇ ಅಧಿಕಾರಿಗಳು ಜಿಲ್ಲೆಯನ್ನೇ ಸಾಯಿಸುತ್ತಿದ್ದಾರೆ. ಕೊರೊನಾ, ನೀತಿ ಸಂಹಿತೆಯ ಹೆಸರಿನಲ್ಲಿ ಜಡಗಟ್ಟಿದ್ದಾರೆ. ಒಂದೇ ಒಂದು ಕಾಮಗಾರಿಯನ್ನು ಸಮರ್ಪಕವಾಗಿ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಚಿವ ಮಾಧುಸ್ವಾಮಿ ವರ್ತನೆ ತಪ್ಪು, ಸಹಿಸಲು ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ

ಇದೇ ಮಾಧುಸ್ವಾಮಿಯವರು ಈ ಹಿಂದೆ ಕೋಲಾರದಲ್ಲಿ ಮನವಿ ನೀಡಲು ಬಂದ ರೈತ ಮಹಿಳೆಯನ್ನು ರ್ಯಾಸ್ಕಲ್ ಎಂದು ಕರೆಯುವ ಮೂಲಕ ತೀವ್ರ ಟೀಕೆಗೆ ಒಳಗಾಗಿದ್ದರು. ತುಮಕೂರಿನಲ್ಲಿ ಹಿರಿಯ ರೈತ ಮುಖಂಡರೊಂದಿಗೆ ಅನುಚಿತವಾಗಿ ವರ್ತಿಸಿ ಟೀಕೆ ಎದುರಿಸಿದ್ದರು. ಇಂದು ಸಹ ಅದನ್ನು ಪುನಾರಾವರ್ತನೆ ಮಾಡಿದ್ದಾರೆ.

ಮಾಧುಸ್ವಾಮಿಯವರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಮಾಜಿ ಸಚಿವರಾದ ಡಾ.ಎಚ್.ಸಿ ಮಹದೇವಪ್ಪನವರು ಪ್ರತಿಕ್ರಿಯಿಸಿ “ಶಾಸನಬದ್ಧವಾಗಿ ಆಯ್ಕೆಯಾದ ಜನಪ್ರತಿನಿಧಿಗಳು ವಿಶ್ವಾಸನೀಯವಾದ ಭಾಷೆಯನ್ನು ಬಳಸದೇ ಇದ್ದರೆ ಅದು ಸಂವಿಧಾನಕ್ಕೆ ಅಗೌರವ ತೋರಿದಂತೆ. ಕಾನೂನು ಸಚಿವರಾದ ಮಾಧುಸ್ವಾಮಿಯವರು ಹೀಗೆ ದರ್ಪದಿಂದ ಮಾತನಾಡುತ್ತಿರುವುದು ಮೊದಲ ಬಾರಿ ಏನಲ್ಲ. ಆದರೂ ಇವರು ಹೇಗೆ ಮಾತನಾಡಿದರೂ ನಡೆಯುತ್ತದೆ. ಆದರೆ ಅಹಿಂದ ವರ್ಗಗಳು ಮತ್ತು ತಳ ವರ್ಗದವರು ಮಾತನಾಡಿದಾಗ ಮಾತ್ರ ಅದು ಅಹಂಕಾರ, ದರ್ಪ ಇತ್ಯಾದಿ ಎನಿಸಿಕೊಳ್ಳುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಧರ್ಮ ಪ್ರಕಾಶ್ ಎಂಬುವವರು “ಅವರ ಹೆಂಡತಿಯ ಸೀರೆಯನ್ನು ಯಾವ ಸೋಪಲ್ಲಿ ಆದ್ರೂ ತೊಳಿತಾರೆ ಅದನ್ ಕಟ್ಕೊಂಡು ನಿನಗೇನಾಗಬೇಕು’ ಡಿಟರ್ಜೆಂಟ್ ಮಾಧುಸ್ವಾಮಿ. ಅವರ ಮನೆಗೆ ಹೋಗಿ ಅವರ ಬಟ್ಟೆಗಳನ್ನು ನೀನು ತೊಳೆದು ಕೊಡುತ್ತೀಯಾ. ಇಂತಹ ದರ್ಪದ ಮಾತುಗಳನ್ನು ಮೊದಲು ಬಿಡು ಇಲ್ಲಾಂದ್ರೆ ನಿಮ್ಮ ಪಕ್ಷವನ್ನು ಕರ್ನಾಟಕ ಜನ ತೊಳೆದು ಹಾಕುತ್ತಾರೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾದೇವಸ್ವಾಮಿ ಒಬ್ಬ ಮಂತ್ರಿಯಾಗಿರಿ ಅಷ್ಟೇ ..ಸಂಸತ್ತಿನಲ್ಲಿ ಎರಡು ಮಾತಾಡ್ ತಕ್ಷಣ ಅವರು ತನ್ನನ್ನು ತಾನು ರಾಜ ಅಂತ ತಿಳ್ಕೊಂಡಿದ್ದಾರೆ. ಸಸ್ಪೆಂಡ್ ಮಾಡೊಕೆ ನೀವ್ಯಾರು ?ಆಡಳಿತ ನಡೆಸಿ . ದಬ್ಬಾಳಿಕೆ ಬೇಡ.

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...