Homeಕರ್ನಾಟಕಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ?: ಮತ್ತೆ ನಾಲಿಗೆ ಹರಿಯಬಿಟ್ಟ ಸಚಿವ ಮಾಧುಸ್ವಾಮಿ

ಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ?: ಮತ್ತೆ ನಾಲಿಗೆ ಹರಿಯಬಿಟ್ಟ ಸಚಿವ ಮಾಧುಸ್ವಾಮಿ

ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತಿಯಾ ಗೊತ್ತಾ? ಯಾವ ಸೋಪು ಹಾಕಿ ನಿನ್ನ ಹೆಂಡ್ತಿ ಸೀರೆ ತೋಳಿತ್ತೀಯಾ? ರ್ಯಾಸ್ಕಲ್ ಏನು ತಿಳ್ಕಂಡಿದ್ದೀರಾ ನೀವು? ರೆಸ್ಯುಲೂಷನ್ ಮಾಡ್ಸಿ ಸಸ್ಪೆಂಡ್ ಮಾಡ್ಸಿ ಈ ನನ್ಮಕ್ಕಳನ್ನ.. ಎಂದು ಮಾಧುಸ್ವಾಮಿಯವರು ನಾಲಿಗೆ ಹರಿಬಿಟ್ಟಿದ್ದಾರೆ.

- Advertisement -
- Advertisement -

ಹಲವು ಬಾರಿ ನಾಲಿಗೆ ಹರಿಯಬಿಟ್ಟು ಮನಬಂದಂತೆ ಮಾತನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಇಂದು ಮತ್ತೆ ತಮ್ಮ ತಪ್ಪನ್ನು ಪುನಾರಾವರ್ತನೆ ಮಾಡಿದ್ದಾರೆ. ಅಧಿಕಾರಿಯೊಬ್ಬರ ಮನೆಯ ವೈಯಕ್ತಿಕ ವಿಷಯಗಳನ್ನೆಲ್ಲ ಸಾರ್ವಜನಿಕ ಸಭೆಯಲ್ಲಿ ಪ್ರಸ್ತಾಪಿಸುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಧುಸ್ವಾಮಿಯವರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ತುಮಕೂರಿನಲ್ಲಿ ನಡೆದ 2020-21 ನೇ ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಪಿಆರ್‌ಐಡಿ ಎಇಇ ಅಧಿಕಾರಿಯ ವಿರುದ್ದ ಏಕವಚನದಲ್ಲಿ ಹರಿಹಾಯ್ದಿದ್ದಾರೆ.

ಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ? ಕೆಲಸ ಮಾಡದಿದ್ದರೂ ನಿನ್ನ ರಕ್ಷಣೆಗೆ ಬರುವ ಆ ಸೀರೆ ಸುತ್ತುವ ಕೃಷ್ಣ ಯಾರು? ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತಿಯಾ ಗೊತ್ತಾ? ಯಾವ ಸೋಪು ಹಾಕಿ ನಿನ್ನ ಹೆಂಡ್ತಿ ಸೀರೆ ತೋಳಿತ್ತೀಯಾ? ರ್ಯಾಸ್ಕಲ್ ಏನು ತಿಳ್ಕಂಡಿದ್ದೀರಾ ನೀವು? ರೆಸ್ಯುಲೂಷನ್ ಮಾಡ್ಸಿ ಸಸ್ಪೆಂಡ್ ಮಾಡ್ಸಿ ಈ ನನ್ಮಕ್ಕಳನ್ನ.. ಎಂದು ಮಾಧುಸ್ವಾಮಿಯವರು ನಾಲಿಗೆ ಹರಿಬಿಟ್ಟಿದ್ದಾರೆ.

ಕೆಲಸ ಮಾಡದೇ ಅಧಿಕಾರಿಗಳು ಜಿಲ್ಲೆಯನ್ನೇ ಸಾಯಿಸುತ್ತಿದ್ದಾರೆ. ಕೊರೊನಾ, ನೀತಿ ಸಂಹಿತೆಯ ಹೆಸರಿನಲ್ಲಿ ಜಡಗಟ್ಟಿದ್ದಾರೆ. ಒಂದೇ ಒಂದು ಕಾಮಗಾರಿಯನ್ನು ಸಮರ್ಪಕವಾಗಿ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಚಿವ ಮಾಧುಸ್ವಾಮಿ ವರ್ತನೆ ತಪ್ಪು, ಸಹಿಸಲು ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ

ಇದೇ ಮಾಧುಸ್ವಾಮಿಯವರು ಈ ಹಿಂದೆ ಕೋಲಾರದಲ್ಲಿ ಮನವಿ ನೀಡಲು ಬಂದ ರೈತ ಮಹಿಳೆಯನ್ನು ರ್ಯಾಸ್ಕಲ್ ಎಂದು ಕರೆಯುವ ಮೂಲಕ ತೀವ್ರ ಟೀಕೆಗೆ ಒಳಗಾಗಿದ್ದರು. ತುಮಕೂರಿನಲ್ಲಿ ಹಿರಿಯ ರೈತ ಮುಖಂಡರೊಂದಿಗೆ ಅನುಚಿತವಾಗಿ ವರ್ತಿಸಿ ಟೀಕೆ ಎದುರಿಸಿದ್ದರು. ಇಂದು ಸಹ ಅದನ್ನು ಪುನಾರಾವರ್ತನೆ ಮಾಡಿದ್ದಾರೆ.

ಮಾಧುಸ್ವಾಮಿಯವರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಮಾಜಿ ಸಚಿವರಾದ ಡಾ.ಎಚ್.ಸಿ ಮಹದೇವಪ್ಪನವರು ಪ್ರತಿಕ್ರಿಯಿಸಿ “ಶಾಸನಬದ್ಧವಾಗಿ ಆಯ್ಕೆಯಾದ ಜನಪ್ರತಿನಿಧಿಗಳು ವಿಶ್ವಾಸನೀಯವಾದ ಭಾಷೆಯನ್ನು ಬಳಸದೇ ಇದ್ದರೆ ಅದು ಸಂವಿಧಾನಕ್ಕೆ ಅಗೌರವ ತೋರಿದಂತೆ. ಕಾನೂನು ಸಚಿವರಾದ ಮಾಧುಸ್ವಾಮಿಯವರು ಹೀಗೆ ದರ್ಪದಿಂದ ಮಾತನಾಡುತ್ತಿರುವುದು ಮೊದಲ ಬಾರಿ ಏನಲ್ಲ. ಆದರೂ ಇವರು ಹೇಗೆ ಮಾತನಾಡಿದರೂ ನಡೆಯುತ್ತದೆ. ಆದರೆ ಅಹಿಂದ ವರ್ಗಗಳು ಮತ್ತು ತಳ ವರ್ಗದವರು ಮಾತನಾಡಿದಾಗ ಮಾತ್ರ ಅದು ಅಹಂಕಾರ, ದರ್ಪ ಇತ್ಯಾದಿ ಎನಿಸಿಕೊಳ್ಳುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಧರ್ಮ ಪ್ರಕಾಶ್ ಎಂಬುವವರು “ಅವರ ಹೆಂಡತಿಯ ಸೀರೆಯನ್ನು ಯಾವ ಸೋಪಲ್ಲಿ ಆದ್ರೂ ತೊಳಿತಾರೆ ಅದನ್ ಕಟ್ಕೊಂಡು ನಿನಗೇನಾಗಬೇಕು’ ಡಿಟರ್ಜೆಂಟ್ ಮಾಧುಸ್ವಾಮಿ. ಅವರ ಮನೆಗೆ ಹೋಗಿ ಅವರ ಬಟ್ಟೆಗಳನ್ನು ನೀನು ತೊಳೆದು ಕೊಡುತ್ತೀಯಾ. ಇಂತಹ ದರ್ಪದ ಮಾತುಗಳನ್ನು ಮೊದಲು ಬಿಡು ಇಲ್ಲಾಂದ್ರೆ ನಿಮ್ಮ ಪಕ್ಷವನ್ನು ಕರ್ನಾಟಕ ಜನ ತೊಳೆದು ಹಾಕುತ್ತಾರೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾದೇವಸ್ವಾಮಿ ಒಬ್ಬ ಮಂತ್ರಿಯಾಗಿರಿ ಅಷ್ಟೇ ..ಸಂಸತ್ತಿನಲ್ಲಿ ಎರಡು ಮಾತಾಡ್ ತಕ್ಷಣ ಅವರು ತನ್ನನ್ನು ತಾನು ರಾಜ ಅಂತ ತಿಳ್ಕೊಂಡಿದ್ದಾರೆ. ಸಸ್ಪೆಂಡ್ ಮಾಡೊಕೆ ನೀವ್ಯಾರು ?ಆಡಳಿತ ನಡೆಸಿ . ದಬ್ಬಾಳಿಕೆ ಬೇಡ.

LEAVE A REPLY

Please enter your comment!
Please enter your name here

- Advertisment -

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...