Homeಅಂತರಾಷ್ಟ್ರೀಯಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಝಿಯಾ ಅಂತ್ಯಕ್ರಿಯೆ : ಭಾರತದಿಂದ ಸಚಿವ ಜೈಶಂಕರ್ ಭಾಗಿ

ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಝಿಯಾ ಅಂತ್ಯಕ್ರಿಯೆ : ಭಾರತದಿಂದ ಸಚಿವ ಜೈಶಂಕರ್ ಭಾಗಿ

- Advertisement -
- Advertisement -

ಮಂಗಳವಾರ (ಡಿ.30) ನಿಧನರಾದ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ಅವರ ಅಂತ್ಯಕ್ರಿಯೆ ಬುಧವಾರ (ಡಿ.31) ಢಾಕಾದಲ್ಲಿ ನಡೆಯಿತು. ಭಾರತದಿಂದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್ ಪಾಲ್ಗೊಂಡು ಪ್ರಧಾನಿ ಮೋದಿ ನೀಡಿದ ಪತ್ರವನ್ನು ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರೀಖ್ ರಹ್ಮಾನ್ ಅವರಿಗೆ ಹಸ್ತಾಂತರಿಸಿದರು.

ಢಾಕಾದ ಪ್ರಸಿದ್ದ ಮಾನಿಕ್ ಮಿಯಾ ಅವೆನ್ಯೂದಲ್ಲಿ ಮಧ್ಯಾಹ್ನದ ನಂತರ ಅಂತಿಮ ಪ್ರಾರ್ಥನೆ (ಜನಾಝಾ ನಮಾಝ್‌) ನಡೆಯಿತು. ಬೈತುಲ್ ಮುಕರ್ರಮ್ ನ್ಯಾಷನಲ್ ಮಸೀದಿಯ ಖತೀಬ್ (ಧರ್ಮಗುರು) ಮುಫ್ತಿ ಮುಹಮ್ಮದ್ ಅಬ್ದುಲ್ ಮಲಿಕ್ ಪ್ರಾರ್ಥನೆಗೆ ನೇತೃತ್ವ ನೀಡಿದರು. ಬಿಎನ್‌ಪಿ ಸ್ಥಾಯಿ ಸಮಿತಿ ಸದಸ್ಯ ನಝ್ರುಲ್ ಇಸ್ಲಾಂ ಖಾನ್ ಖಾಲಿದಾ ಝಿಯಾ ಅವರ ಸಂಕ್ಷಿಪ್ತ ಜೀವನ ಚರಿತ್ರೆಯನ್ನು ಓದಿದರು.

ಢಾಕಾದಲ್ಲಿ ಬಂದಿಳಿದ ಸ್ವಲ್ಪ ಸಮಯದ ನಂತರ, ಜೈಶಂಕರ್ ಅವರು ಬಿಎನ್‌ಪಿಯ ಹಂಗಾಮಿ ಅಧ್ಯಕ್ಷ ಮತ್ತು ಖಾಲಿದಾ ಅವರ ಹಿರಿಯ ಮಗ ತಾರೀಖ್ ರಹ್ಮಾನ್ ಅವರನ್ನು ಭೇಟಿಯಾದರು ಮತ್ತು ಮೂರು ದಶಕಗಳಿಗೂ ಹೆಚ್ಚು ಕಾಲ ದೇಶದ ರಾಜಕೀಯದಲ್ಲಿ ಪ್ರಾಬಲ್ಯ ಹೊಂದಿದ್ದ ಅಪ್ರತಿಮ ನಾಯಕಿಯ ನಿಧನಕ್ಕೆ ಭಾರತದ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದರು.

“ಪ್ರಧಾನಿ ನರೇಂದ್ರ ಮೋದಿ ಅವರಿಂದ ಬಂದ ವೈಯಕ್ತಿಕ ಪತ್ರವನ್ನು ರಹ್ಮಾನ್ ಅವರಿಗೆ ಹಸ್ತಾಂತರಿಸಲಾಗಿದೆ. ಭಾರತ ಸರ್ಕಾರ ಮತ್ತು ಜನರ ಪರವಾಗಿ ನಾನು ತೀವ್ರ ಸಂತಾಪ ಸೂಚಿಸುತ್ತೇನೆ” ಎಂದು ಜೈಶಂಕರ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

“ಬೇಗಂ ಖಲೀದಾ ಝಿಯಾ ಅವರ ದೃಷ್ಟಿಕೋನ ಮತ್ತು ಮೌಲ್ಯಗಳು ನಮ್ಮ ಪಾಲುದಾರಿಕೆಯ ಅಭಿವೃದ್ಧಿಗೆ ಮಾರ್ಗದರ್ಶನ ನೀಡುತ್ತವೆ ಎಂಬ ವಿಶ್ವಾಸವಿದೆ” ಎಂದು ಜೈಶಂಕರ್ ಬರೆದುಕೊಂಡಿದ್ದಾರೆ.

ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಖಾಲಿದಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, 2015ರಲ್ಲಿ ಢಾಕಾಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರೊಂದಿಗಿನ ಭೇಟಿಯನ್ನು ನೆನಪಿಸಿಕೊಂಡಿದ್ದಾರೆ.

ಇತ್ತೀಚೆಗೆ ದೊಡ್ಡ ಮಟ್ಟದ ಹಿಂಸಾಚಾರ ನಡೆದು ಬಾಂಗ್ಲಾದೇಶದ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಇತ್ತೀಚಿನ ಹಿಂಸಾಚಾರದ ವೇಳೆ ಭಾರತದ ವಿರುದ್ದವೇ ಪ್ರಮುಖವಾಗಿ ಪ್ರತಿಭಟನೆಗಳು ವ್ಯಕ್ತಿವಾಗಿತ್ತು. ಭಾರತ ವಿರೋಧಿ ಗುಂಪಿನ ನಾಯಕ ಉಸ್ಮಾನ್ ಹಾದಿಯ ಹತ್ಯೆ, ಯುವಕರು ಭಾರತದ ವಿರುದ್ದ ಇನ್ನಷ್ಟು ಆಕ್ರೋಶಿತರಾಗುವಂತೆ ಮಾಡಿತ್ತು. ಈ ನಡುವೆ ಜೈಶಂಕರ್ ಅವರು ಬಾಂಗ್ಲಾದೇಶಕ್ಕೆ ಭೇಟಿ ನೀಡಿರುವುದು ಮಹತ್ವವೆನಿಸಿದೆ.

ವರದಿಗಳ ಪ್ರಕಾರ, ಜೈಶಂಕರ್ ಅವರ ಭೇಟಿಯ ವೇಳೆ ಭಾರೀ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...