Homeಕರ್ನಾಟಕಬೌದ್ಧರಿಗೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯದ ಭರವಸೆ ನೀಡಿದ ಸಚಿವ ಜಮೀರ್

ಬೌದ್ಧರಿಗೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯದ ಭರವಸೆ ನೀಡಿದ ಸಚಿವ ಜಮೀರ್

- Advertisement -
- Advertisement -

ಬೌದ್ಧ ಧರ್ಮಕ್ಕೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗುವುದು ಎಂದು ಬೌದ್ಧ ಗುರುಗಳ ನಿಯೋಗಕ್ಕೆ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್‌ ಭರವಸೆ ನೀಡಿದ್ದಾರೆ.

ಬೌದ್ಧ ಗುರುಗಳ ನಿಯೋಗವು ಬುಧವಾರ ಸಚಿವರನ್ನು ಭೇಟಿ ಮಾಡಿ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ಮನವಿ ಮಾಡಿದರು. ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ಜಮೀರ್, ‘ಬೌದ್ಧ ಸಮುದಾಯದ ವಿದ್ಯಾರ್ಥಿಗಳು ಜಾತಿ ಪ್ರಮಾಣಪತ್ರ ಮತ್ತು ಮತದಾರರ ಗುರುತಿನ ಚೀಟಿ ಪಡೆಯಲು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ಸಚಿವರ ಜತೆ ಚರ್ಚಿಸಲಾಗುವುದು’ ಎಂದು ತಿಳಿಸಿದರು.

”ಬೌದ್ಧ ಧರ್ಮದ ವಿದ್ಯಾರ್ಥಿಗಳಿಗೆ ಹುಣಸೂರಿನ ಬೈಲುಕುಪ್ಪೆಯಲ್ಲಿ ಸಮುದಾಯ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗೆ ಕಾಲೇಜು ಹಾಗೂ ಉನ್ನತ ಶಿಕ್ಷಣ ಆರಂಭಿಸಲು ಅನುಮತಿ ದೊರಕಿಸಿಕೊಡಲಾಗುವುದು. ಅಲ್ಪಸಂಖ್ಯಾತ ಆಯೋಗ, ನಿರ್ದೇಶನಾಲಯ, ಅಭಿವೃದ್ಧಿ ನಿಗಮ ಹೀಗೆ ಎಲ್ಲ ಕಡೆ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸಿದರೆ ಸಮಸ್ಯೆ ಪರಿಹರಿಸಲು ಅನುಕೂಲವಾಗಲಿದೆ. ಒಂದು ವರ್ಷದಲ್ಲಿ ಎಲ್ಲ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಸಚಿವರು ನಿಯೋಗಕ್ಕೆ ಆಶ್ವಾಸನೆ ನೀಡಿದ್ದಾರೆ.

ಇನ್ನು, ಇದೇ ವೇಳೆ ನಿಯೋಗವು, ಮೈಸೂರಿನ ಮುಡಾದಲ್ಲಿ ಶೈಕ್ಷಣಿಕ ಉದ್ದೇಶಕ್ಕೆ ನಿವೇಶನ ನೀಡಬೇಕು ಮತ್ತು ದಲೈ ಲಾಮಾ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚೋದ್ದಿ ತಾಶಿ ಲುಮೋ ಸಾಂಸ್ಕೃತಿಕ ಸೊಸೈಟಿಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿತು. ಇದಕ್ಕೆ ಸ್ಪಂದಿಸಿದ ಸಚಿವರು ತಕ್ಷಣ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಬೌದ್ಧ ಗುರುಗಳ ನಿಯೋಗವು ಸಚಿವರಿಗೆ ಟಿಬೆಟಿಯನ್ ಸಾಂಪ್ರದಾಯಿಕ ಗೌರವ ನೀಡಿ ಸನ್ಮಾನಿಸಿತು. ಬೆಂಗಳೂರಿನ ಗಾಂಧಿ ನಗರದಲ್ಲಿರುವ ಮಹಾಬೋಧಿ ಸೊಸೈಟಿಗೆ ಭೇಟಿ ನೀಡುವಂತೆ ಆಹ್ವಾನಿಸಿತು. ದಕ್ಷಿಣ ಭಾರತದ ಸೆಂಟ್ರಲ್ ಟಿಬೆಟಿಯನ್ ಆಡಳಿತ ವಿಭಾಗದ ಪ್ರತಿನಿಧಿಗಳು ನಿಯೋಗದಲ್ಲಿದ್ದರು.

ದರ್ಗಾ ಮಸೀದಿಗಳಿಗೆ ಕಾಣಿಕೆ ಸಲ್ಲಿಸಲು ಇ-ಹುಂಡಿ ಸೇವೆ ಆರಂಭ

ದರ್ಗಾ ಹಾಗೂ ಮಸೀದಿಗಳಲ್ಲಿ ಭಕ್ತರ ಕಾಣಿಕೆ ಹಣ ಸಂಗ್ರಹಿಸಲು ಸರ್ಕಾರ ಈಗ ಇ ಹುಂಡಿ ಸೇವೆಯನ್ನು ಜಾರಿಗೆ ತಂದಿದೆ. ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಈ ಸೇವೆಗೆ ಚಾಲನೆ ನೀಡಿದ್ದಾರೆ.

ಮಂಗಳವಾರ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಬೋರ್ಡ್ ಸಭೆಯಲ್ಲಿ ನೂತನ ಆಪ್‌ಗೆ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ”ದರ್ಗಾ ಹಾಗೂ ಮಸೀದಿಗಳಿಗೆ ಸಮುದಾಯ ನೀಡುವ ಕಾಣಿಕೆ ಹಾಗೂ ದೇಣಿಗೆ ದುರುಪಯೋಗ ಆಗದಂತೆ ಜತೆಗೆ ನಿಗದಿತ ಉದ್ದೇಶಕ್ಕೆ ಬಳಕೆ ಆಗುವಂತೆ ನೋಡಿಕೊಳ್ಳಲು ಆಪ್ ಸಿದ್ದಪಡಿಸಲಾಗಿದೆ. ಮೊದಲಿಗೆ ಬೆಂಗಳೂರಿನ ಹಜರತ್ ತವಕ್ಕಲ್ ಮಸ್ತಾನ್ ಶಾ ದರ್ಗಾ ದಲ್ಲಿ ಈ ಹುಂಡಿ ವ್ಯವಸ್ಥೆ ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ” ಎಂದು ತಿಳಿಸಿದರು.

”ಈ ಸೇವೆಯು ಮುಂದಿನ ದಿನಗಳಲ್ಲಿ ವಖ್ಫ್ ವ್ಯಾಪ್ತಿಗೆ ಬರುವ 3,131 ದರ್ಗಾ, 10,398 ಮಸೀದಿಗಳಲ್ಲೂ ಜಾರಿಗೊಳಿಸಲಾಗುವುದು. ಸಮುದಾಯ ಎಲ್ಲಿಂದ ಯಾವುದೇ ಸಮಯದಲ್ಲಿ ಫೋನ್ ಪೇ, ಗೂಗಲ್ ಪೇ ಮೂಲಕ ದೇಣಿಗೆ, ಕಾಣಿಕೆ ನೀಡಬಹುದಾಗಿದೆ” ಎಂದು ತಿಳಿಸಿದರು.

ವಕ್ಪ್ ಬೋರ್ಡ್‌ನಲ್ಲಿ 45 ಕೋಟಿ ರೂ. ಅನುದಾನ ಲಭ್ಯವಿದ್ದು, ಅದನ್ನು ಶಾಲಾ ಕಾಲೇಜು ಕಟ್ಟಡ ನಿರ್ಮಾಣ, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಬಳಕೆ ಮಾಡಲು ತೀರ್ಮಾನಿಸಲಾಯಿತು. ಈ ನಿಟ್ಟಿನಲ್ಲಿ ತ್ವರಿತ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...