Homeಕರ್ನಾಟಕಬೌದ್ಧರಿಗೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯದ ಭರವಸೆ ನೀಡಿದ ಸಚಿವ ಜಮೀರ್

ಬೌದ್ಧರಿಗೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯದ ಭರವಸೆ ನೀಡಿದ ಸಚಿವ ಜಮೀರ್

- Advertisement -
- Advertisement -

ಬೌದ್ಧ ಧರ್ಮಕ್ಕೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗುವುದು ಎಂದು ಬೌದ್ಧ ಗುರುಗಳ ನಿಯೋಗಕ್ಕೆ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್‌ ಭರವಸೆ ನೀಡಿದ್ದಾರೆ.

ಬೌದ್ಧ ಗುರುಗಳ ನಿಯೋಗವು ಬುಧವಾರ ಸಚಿವರನ್ನು ಭೇಟಿ ಮಾಡಿ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ಮನವಿ ಮಾಡಿದರು. ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ಜಮೀರ್, ‘ಬೌದ್ಧ ಸಮುದಾಯದ ವಿದ್ಯಾರ್ಥಿಗಳು ಜಾತಿ ಪ್ರಮಾಣಪತ್ರ ಮತ್ತು ಮತದಾರರ ಗುರುತಿನ ಚೀಟಿ ಪಡೆಯಲು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ಸಚಿವರ ಜತೆ ಚರ್ಚಿಸಲಾಗುವುದು’ ಎಂದು ತಿಳಿಸಿದರು.

”ಬೌದ್ಧ ಧರ್ಮದ ವಿದ್ಯಾರ್ಥಿಗಳಿಗೆ ಹುಣಸೂರಿನ ಬೈಲುಕುಪ್ಪೆಯಲ್ಲಿ ಸಮುದಾಯ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗೆ ಕಾಲೇಜು ಹಾಗೂ ಉನ್ನತ ಶಿಕ್ಷಣ ಆರಂಭಿಸಲು ಅನುಮತಿ ದೊರಕಿಸಿಕೊಡಲಾಗುವುದು. ಅಲ್ಪಸಂಖ್ಯಾತ ಆಯೋಗ, ನಿರ್ದೇಶನಾಲಯ, ಅಭಿವೃದ್ಧಿ ನಿಗಮ ಹೀಗೆ ಎಲ್ಲ ಕಡೆ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸಿದರೆ ಸಮಸ್ಯೆ ಪರಿಹರಿಸಲು ಅನುಕೂಲವಾಗಲಿದೆ. ಒಂದು ವರ್ಷದಲ್ಲಿ ಎಲ್ಲ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಸಚಿವರು ನಿಯೋಗಕ್ಕೆ ಆಶ್ವಾಸನೆ ನೀಡಿದ್ದಾರೆ.

ಇನ್ನು, ಇದೇ ವೇಳೆ ನಿಯೋಗವು, ಮೈಸೂರಿನ ಮುಡಾದಲ್ಲಿ ಶೈಕ್ಷಣಿಕ ಉದ್ದೇಶಕ್ಕೆ ನಿವೇಶನ ನೀಡಬೇಕು ಮತ್ತು ದಲೈ ಲಾಮಾ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚೋದ್ದಿ ತಾಶಿ ಲುಮೋ ಸಾಂಸ್ಕೃತಿಕ ಸೊಸೈಟಿಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿತು. ಇದಕ್ಕೆ ಸ್ಪಂದಿಸಿದ ಸಚಿವರು ತಕ್ಷಣ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಬೌದ್ಧ ಗುರುಗಳ ನಿಯೋಗವು ಸಚಿವರಿಗೆ ಟಿಬೆಟಿಯನ್ ಸಾಂಪ್ರದಾಯಿಕ ಗೌರವ ನೀಡಿ ಸನ್ಮಾನಿಸಿತು. ಬೆಂಗಳೂರಿನ ಗಾಂಧಿ ನಗರದಲ್ಲಿರುವ ಮಹಾಬೋಧಿ ಸೊಸೈಟಿಗೆ ಭೇಟಿ ನೀಡುವಂತೆ ಆಹ್ವಾನಿಸಿತು. ದಕ್ಷಿಣ ಭಾರತದ ಸೆಂಟ್ರಲ್ ಟಿಬೆಟಿಯನ್ ಆಡಳಿತ ವಿಭಾಗದ ಪ್ರತಿನಿಧಿಗಳು ನಿಯೋಗದಲ್ಲಿದ್ದರು.

ದರ್ಗಾ ಮಸೀದಿಗಳಿಗೆ ಕಾಣಿಕೆ ಸಲ್ಲಿಸಲು ಇ-ಹುಂಡಿ ಸೇವೆ ಆರಂಭ

ದರ್ಗಾ ಹಾಗೂ ಮಸೀದಿಗಳಲ್ಲಿ ಭಕ್ತರ ಕಾಣಿಕೆ ಹಣ ಸಂಗ್ರಹಿಸಲು ಸರ್ಕಾರ ಈಗ ಇ ಹುಂಡಿ ಸೇವೆಯನ್ನು ಜಾರಿಗೆ ತಂದಿದೆ. ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಈ ಸೇವೆಗೆ ಚಾಲನೆ ನೀಡಿದ್ದಾರೆ.

ಮಂಗಳವಾರ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಬೋರ್ಡ್ ಸಭೆಯಲ್ಲಿ ನೂತನ ಆಪ್‌ಗೆ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ”ದರ್ಗಾ ಹಾಗೂ ಮಸೀದಿಗಳಿಗೆ ಸಮುದಾಯ ನೀಡುವ ಕಾಣಿಕೆ ಹಾಗೂ ದೇಣಿಗೆ ದುರುಪಯೋಗ ಆಗದಂತೆ ಜತೆಗೆ ನಿಗದಿತ ಉದ್ದೇಶಕ್ಕೆ ಬಳಕೆ ಆಗುವಂತೆ ನೋಡಿಕೊಳ್ಳಲು ಆಪ್ ಸಿದ್ದಪಡಿಸಲಾಗಿದೆ. ಮೊದಲಿಗೆ ಬೆಂಗಳೂರಿನ ಹಜರತ್ ತವಕ್ಕಲ್ ಮಸ್ತಾನ್ ಶಾ ದರ್ಗಾ ದಲ್ಲಿ ಈ ಹುಂಡಿ ವ್ಯವಸ್ಥೆ ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ” ಎಂದು ತಿಳಿಸಿದರು.

”ಈ ಸೇವೆಯು ಮುಂದಿನ ದಿನಗಳಲ್ಲಿ ವಖ್ಫ್ ವ್ಯಾಪ್ತಿಗೆ ಬರುವ 3,131 ದರ್ಗಾ, 10,398 ಮಸೀದಿಗಳಲ್ಲೂ ಜಾರಿಗೊಳಿಸಲಾಗುವುದು. ಸಮುದಾಯ ಎಲ್ಲಿಂದ ಯಾವುದೇ ಸಮಯದಲ್ಲಿ ಫೋನ್ ಪೇ, ಗೂಗಲ್ ಪೇ ಮೂಲಕ ದೇಣಿಗೆ, ಕಾಣಿಕೆ ನೀಡಬಹುದಾಗಿದೆ” ಎಂದು ತಿಳಿಸಿದರು.

ವಕ್ಪ್ ಬೋರ್ಡ್‌ನಲ್ಲಿ 45 ಕೋಟಿ ರೂ. ಅನುದಾನ ಲಭ್ಯವಿದ್ದು, ಅದನ್ನು ಶಾಲಾ ಕಾಲೇಜು ಕಟ್ಟಡ ನಿರ್ಮಾಣ, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಬಳಕೆ ಮಾಡಲು ತೀರ್ಮಾನಿಸಲಾಯಿತು. ಈ ನಿಟ್ಟಿನಲ್ಲಿ ತ್ವರಿತ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...