Homeಕರ್ನಾಟಕಕುಣಿಗಲ್‌ ಶಾಸಕರನ್ನು ’ಫ್ರಾಡ್’ ಎಂದು ಕರೆದ ಸಚಿವ ಜೆ. ಸಿ. ಮಾಧುಸ್ವಾಮಿ

ಕುಣಿಗಲ್‌ ಶಾಸಕರನ್ನು ’ಫ್ರಾಡ್’ ಎಂದು ಕರೆದ ಸಚಿವ ಜೆ. ಸಿ. ಮಾಧುಸ್ವಾಮಿ

ಸಚಿವರ ಮಾತಿಗೆ ಜೆಡಿಎಸ್ ಜಿಲ್ಲಾ ಪಂಚಾಯತ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವರು ಕ್ಷಮೆ ಯಾಚಿಸಬೇಕು ಎಂದು ಘೋಷಣೆ ಕೂಗಿದ್ದಾರೆ.

- Advertisement -
- Advertisement -

ಮನೆಗಳ ಹಂಚಿಕೆಯ ವಿಷಯದ ಕುರಿತು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ಕುಣಿಗಲ್ ಕ್ಷೇತ್ರದ ಶಾಸಕ ಡಾ.ರಂಗನಾಥ್ ನಡುವೆ ಮಾತಿನ ಜಟಾಪಟಿಗೆ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆ ವೇದಿಕೆಯಾಯಿತು.

ಇಂದು ನಡೆದ ಕೆಡಿಪಿ ಸಭೆಯಲ್ಲಿ ಕುಣಿಗಲ್ ಕ್ಷೇತ್ರದ ಶಾಸಕ ಡಾ. ರಂಗನಾಥ್ ರೈತರಿಗೆ ಮನೆಗಳು ಹಂಚಿಕೆಯಾಗಿವೆ. ನಮಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಕುಣಿಗಲ್ ಕ್ಷೇತ್ರಕ್ಕೆ ಆರು ತಿಂಗಲಿಂದಲೂ ಹಣ ಬಿಡುಗಡೆಯಾಗಿಲ್ಲ. ವಿಳಂಬ ಮಾಡುತ್ತಿದ್ದೀರಿ ಎಂದು ಸಚಿವರಿಗೆ ಕೇಳಿದರು.

ಇದರಿಂದ ಕೆರಳಿದ ಸಚಿವ ಮಾಧುಸ್ವಾಮಿ ಅವರು ಕುಣಿಗಲ್ ಕ್ಷೇತ್ರದಲ್ಲಿ ಫ್ರಾಡ್ ನಡೆದಿದೆ. 38 ಮನೆಗಳಿಗೆ ಎರಡು ಬಾರಿ ಬಿಲ್ ಮಾಡಲಾಗಿದೆ. ಹಾಗಾಗಿ ನೀವು ಫ್ರಾಢ್ ಎಂದು ಮಾತಿನ ಭರದಲ್ಲಿ ಕೂಗಾಡಿದರು ಎನ್ನಲಾಗಿದೆ.

ಸಚಿವರ ಮಾತಿಗೆ ಜೆಡಿಎಸ್ ಜಿಲ್ಲಾ ಪಂಚಾಯತ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಸಚಿವರು ಕ್ಷಮೆ ಯಾಚಿಸಬೇಕು ಎಂದು ಘೋಷಣೆ ಕೂಗಿದರು. ಇದರಿಂದ ಸಭೆಯಲ್ಲಿ ಕೋಲಾಹಲ ಉಂಟಾಯಿತು.

 

ಈ ಸಂದರ್ಭದಲ್ಲಿ ಸಮಾಧಾನದಿಂದಲೇ ಮಾತನಾಡಿದ ಶಾಸಕ ಡಾ.ರಂಗನಾಥ್, ನನ್ನ ಕ್ಷೇತ್ರದಲ್ಲಿ 38 ಮನೆಗಳಿಗೆ ಎರಡು ಬಿಲ್ ಆಗಿದ್ದರೆ ಅದಕ್ಕೆ ಪಿಡಿಓ, ಇಒ ಹೊಣೆಗಾರರು. ಅಲ್ಲಿ ಮೋಸವಾಗಿದ್ದರೆ ಕ್ರಮ ತೆಗೆದುಕೊಳ್ಳಿ. ಅದನ್ನೇ ನೆಪ ಮಾಡಿಕೊಂಡು ನನ್ನನ್ನೇ ಫ್ರಾಡ್ ಎನ್ನುವುದು ಸರಿಯಲ್ಲ ಎಂದು ಸಚಿವರ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದರು.


ಓದಿ: ಹಿರಿಯ ರೈತ ಹೋರಾಟಗಾರರನ್ನು ಅವಮಾನಿಸಿದ ಸಚಿವ ಮಾಧುಸ್ವಾಮಿ ನಡೆಗೆ ತೀವ್ರ ಆಕ್ರೋಶ


ಕೇವಲ 38 ಮನೆಗಳಲ್ಲಿ ಅಕ್ರಮವಾಗಿದೆ ಎಂದು ಹಣ ಹಂಚಿಕೆ ಮಾಡದೇ ಇರುವುದು ಸರಿಯಲ್ಲ. ಬಡವರಿಗೆ ಮನೆಗಳು ಮಂಜೂರಾಗಿವೆ. ಹಣ ಬಿಡುಗಡೆ ಮಾಡಿ ಬಡ ರೈತರು ನೆಮ್ಮದಿಯಿಂದ ಜೀವನ ನಡೆಸಲು ಅನುವು ಮಾಡಿಕೊಡಿ. ದುಡ್ಡಿದೆ ಅಂದ್ರೆ ಬಿಡುಗಡೆ ಮಾಡಿ. ಇಲ್ಲಾಂದ್ರೆ ಇಲ್ಲವೆಂದು ಹೇಳಿ ಎಂದು ಸಚಿವರಿಗೆ ತಿಳಿಸಿದರು.

ಸಚಿವ ಮಾಧುಸ್ವಾಮಿ ಮಾತುಗಳಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಸಾರ್ವಜನಿಕ ಸಭೆಯಲ್ಲಿ ಮಾತನಾಡುವಾಗ ರಾಜಕೀಯ ಭಾಷಣದಂತೆ ಮಾತನಾಡಿರುವುದು ಅವರ ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದು ಜೆಡಿಎಸ್ ಜಿಲ್ಲಾ ಪಂಚಾಯಿತಿ ಸದಸ್ಯರು ಕಿಡಿಕಾರಿದ್ದಾರೆ.

ಈ ಸಂಬಂಧ ಶಾಸಕ ಡಾ.ರಂಗನಾಥ್ ನಾನುಗೌರಿ.ಕಾಂ ಮಾತನಾಡಿ “ಸಚಿವರು ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಎಂದು ತಿಳಿಯದು. ಹಣ ಬಿಡುಗಡೆ ಮಾಡುವ ಬಗ್ಗೆ ಸಚಿವರಿಂದ ಸೂಕ್ತ  ಉತ್ತರ ಬರುತ್ತಿಲ್ಲ. ಇದು ಮೂರನೇ ಬಾರಿ ಹೀಗೆ ಮಾಡುತ್ತಿರುವುದು. ಸರ್ಕಾರದ ಬಳಿ ಹಣ ಇಲ್ಲವೆಂದರೆ ಸ್ಪಷ್ಟನೆ ನೀಡಲಿ ಅದು ಬಿಟ್ಟು ಹೀಗೆಲ್ಲಾ ಮಾಡುವುದರಿ ಸರಿಯಾದ ಕ್ರಮವಲ್ಲ. ದೇವರು ಅವರಿಗೆ ಯಾವಾಗ ಬುದ್ದಿ ಕೊಡುತ್ತಾನೋ ಗೊತ್ತಿಲ್ಲ. ಆದರೂ ನನಗೆ ಫೋನ್ ಮಾಡಿ ಕ್ಷಮೆಯಾಚಿಸಿದ್ದಾರೆ” ಎಂದು ಹೇಳಿದ್ದಾರೆ.


ಓದಿ: ಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...