Homeಅಂಕಣಗಳುಯೋಗ್ಯತೆ ಇದೆಯೋ ಇಲ್ಲವೋ ಮಂತ್ರಿಗಿರಿ ಬೇಕೇಬೇಕು

ಯೋಗ್ಯತೆ ಇದೆಯೋ ಇಲ್ಲವೋ ಮಂತ್ರಿಗಿರಿ ಬೇಕೇಬೇಕು

- Advertisement -
- Advertisement -

ಮಂತ್ರಿಮಂಡಲ ರಚಿಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳ ನಡುವೆ ಇತ್ತೀಚೆಗೆ ಎಲ್ಲಿಲ್ಲದ ಸಮಸ್ಯೆ ಹುಟ್ಟಿಕೊಂಡಿದೆ.
ಮಂತ್ರಿಮಂಡಲ ರಚಿಸುವ ಮುನ್ನ ಎರಡೂ ಪಕ್ಷಗಳು ತಮ್ಮ ಶಾಸಕರನ್ನು ಪ್ರತ್ಯೇಕವಾಗಿ ಕರೆದು ನಿಗದಿಯಾದ ಸ್ಥಾನಗಳಿಗೆ ತಕ್ಕಂತೆ ಮಂತ್ರಿಸ್ಥಾನಕ್ಕೆ ಆಯ್ಕೆಮಾಡುವಂತೆ ಕೋರಬಹುದಿತ್ತು. ಜಿಲ್ಲಾವಾರು ಒಬ್ಬೊಬ್ಬರನ್ನು ಆಯ್ಕೆ ಮಾಡ್ತೀರಾ? ಜಾತಿಗೊಬ್ಬೊಬ್ಬರನ್ನು ಆಯ್ಕೆಮಾಡುತ್ತೀರಾ? ಇಲ್ಲವೇ ಜನಸಂಖ್ಯೆಗನುಗುಣವಾಗಿ ಪ್ರತಿ ಜಾತಿಗೆ ಇಂತಿಷ್ಟು ಎಂದು ಆಯ್ಕೆ ಮಾಡ್ತೀರಾ ಎಂದು ಕೇಳಿ ತಿಳಿದುಕೊಳ್ಳಬಹುದಿತ್ತು. ಶಾಸಕರೇ ಮಂತ್ರಿಮಂಡಲವನ್ನು ನಿರ್ಧರಿಸುವುದರಿಂದ, ಮಂತ್ರಿ ಪದವಿ ಸಿಗದ ಶಾಸಕರು ಈಗ ಎಬ್ಬಿಸುತ್ತಿರುವ ಬೀದಿ ಗದ್ದಲವನ್ನು ತಪ್ಪಿಸಬಹುದಿತ್ತು. ಮುಖ್ಯವಾಗಿ ಪ್ರಜಾಪ್ರಭುತ್ವದ ಘನತೆಯನ್ನು ಎತ್ತಿ ಹಿಡಿಯುವ ಗುರಿಯನ್ನು ತಲುಪಬಹುದಿತ್ತು.
ಆದರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ವವನ್ನು ಗಾಳಿಗೆ ತೂರುವಲ್ಲಿ ನಿರತವಾಗಿವೆ. ಮಂತ್ರಿಮಂಡಲ ರಚಿಸುವ ಕೆಲಸ ದೆಹಲಿಯಲ್ಲಿ ಆಗಬೇಕು, ಇಲ್ಲವೇ ದೇವೇಗೌಡರ ಮನೆಯಲ್ಲಿ ಆಗಬೇಕು, ಅಥವ ಅಂತಿಮ ತೀರ್ಮಾನ ರಾಹುಲ್ ಮಾಡಬೇಕು. ಇದು ಇಂದಿನ ಸ್ಥಿತಿ. ಹೋಗಲಿ, ರಾಹುಲ್‍ಗಾಂಧಿ ಅಥವ ದೇವೇಗೌಡರು ಕೈಗೊಂಡ ತೀರ್ಮಾನಗಳಿಗೆ ಮನ್ನಣೆ ದೊರೆಯಿತೇ ಎಂದರೆ ಅದೂ ಇಲ್ಲ.
ಈ ಶಾಸಕರೂ ಇದಕ್ಕೆ ತಕ್ಕನಾಗಿಯೇ ಇದ್ದಾರೆ. ಅವರಿಗೂ ಪ್ರಜಾಪ್ರಭುತ್ವ ಬೇಕಾಗಿಲ್ಲ. ರಾಜಕೀಯ ಮೊದಲೇ ಗೊತ್ತಿಲ್ಲ, ಅವರಿಗೆ ಗೊತ್ತಿರುವ ರಾಜಕೀಯವೆಂದರೆ ಶಾಸಕರಾಗಲು ಸೀಟು ಗಿಟ್ಟಿಸುವುದೂ, ಚುನಾವಣೆಯಲ್ಲಿ ನಾನಾಮಾರ್ಗ ಬಳಸಿ ಗೆಲ್ಲುವುದು. ಯೋಗ್ಯತೆ ಇದೆಯೇ ಇಲ್ಲವೋ ಮಂತ್ರಿಗಳಾಗುವುದು. ಮಂತ್ರಿಮಂಡಲದಲ್ಲಿ ಸ್ಥಾನ ಸಿಗಲಿಲ್ಲ್ಲವೆಂದರೆ ರೆಸಾರ್ಟ್‍ಗಳಲ್ಲಿ ಕೂತು ತಾವು ಸದಸ್ಯನಾಗಿರುವ ಸಂಸ್ಥೆಯನ್ನೇ ನಾಶಮಾಡಲು ಮಸಲತ್ತು ಮಾಡುವುದು.
ಕೆಲವರಂತೂ ಮಂತ್ರಿಗಳಾಗುವುದು ತಮ್ಮ ಆಜನ್ಮಸಿದ್ಧ ಹಕ್ಕು ಅಂತಲೇ ಅಂದುಕೊಂಡಿದ್ದಾರೆ. ಕೆಲವರು ಹತ್ತಾರು ಅವಧಿಗೆ ಶಾಸಕರಾಗಿದ್ದರೂ, ಮಂತ್ರಿಗಳಾಗಿದ್ದರೂ ಗೂಟ ಹೊಡ್ಕೊಂಡು ಸಾಯುವವರೆಗೂ ಅಧಿಕಾರದಲ್ಲಿರಬೇಕೆಂದು ಬಯಸುತ್ತಾರೆ. ಇತ್ತೀಚೆಗಂತೂ ಭೂಗಳ್ಳರು, ಸಾರ್ವಜನಿಕ ಆಸ್ತಿದೋಚಿದವರು, ಅಧಿಕಾರ ದುರುಪಯೋಗಪಡಿಸಿಕೊಂಡವರು, ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್‍ನ ಅಶೋಕ್‍ಖೇಣಿ ಅವರೊಡನೆ ಮಂತ್ರಿಯಾಗಿದ್ದಾಗ ಕೈಜೋಡಿಸಿ, ಪ್ರಥಮವಾಗಿ ಮಾಡಿಕೊಂಡ ಒಪ್ಪಂದವನ್ನು ಬದಿಗಿರಿಸಿ ಖೇಣಿಗೆ ಉತ್ಕøಷ್ಟವಾದ ಭೂಮಿಯನ್ನು ನೀಡಿ, ಮಾರುವುದಕ್ಕೆ ಅವಕಾಶ ಕೊಟ್ಟು ಸಮಾಜಘಾತುಕರೂ ಇದ್ದಾರೆ. ಅನೀತಿಯುತರಾಗಿ ರಿಯಲ್ ಎಸ್ಟೇಟ್ ಏಜೆನ್ಸಿ ನಡೆಸುತ್ತಿರುವವರೂ ಅಕ್ರಮವಾಗಿ ಕೋಟ್ಯಾಂತರ ಸಂಪಾದಿಸಿ, ಈಗ ಸಭ್ಯವ್ಯಕ್ತಿಗಳಂತೆ ಪೋಸ್ ಕೊಡುವ ಛದ್ಮವೇಷಧಾರಿಗಳೂ, ಹಾಲಿ ಮಂತ್ರಿಯಾಗುವ ಸ್ಪರ್ಧೆಯಲ್ಲಿ ತೊಡಗಿದ್ದಾರೆ. ಈ ನೀತಿಬಾಹಿರರೂ, ಸಮಯಸಾಧಕರೂ ರಾಜಕೀಯ ಪಕ್ಷಗಳನ್ನು ಕಬ್ಜಾ ಮಾಡಿಕೊಂಡಿದ್ದಾರೆ. ಇವರಿಗೆ ನೀತಿನಿಯಮ, ಡೀಸೆನ್ಸಿ ಯಾವುವೂ ಅರ್ಥವಾಗದ ಮಾತುಗಳು. ಇವತ್ತು ಅಧಿಕಾರ ಸಿಗುತ್ತೆ ಅಂದರೆ ಈ ಸಂಸ್ಥೆಯಲ್ಲಿರುತ್ತಾರೆ, ಮತ್ತೊಂದು ಅವಧಿಗೆ ಅಲ್ಲಿ ಅಧಿಕಾರ ಸಿಗುತ್ತೆ ಅಂದರೆ ಈ ಪಕ್ಷಬಿಟ್ಟು ಆ ಪಕ್ಷಕ್ಕೇ ಹಾರಿ ಹೋಗುತ್ತಾರೆ. ರಾಜಕೀಯ ಪಕ್ಷಗಳು ತಮ್ಮ ಶಾಸಕರಿಗಿಂತಲೂ ಮುಂದೆ ಇವೆ, ಅವುಗಳೆಲ್ಲ ಧ್ಯೇಯ ಧೋರಣೆ, ಶಿಸ್ತು, ಘನತೆ ಗೌರವಗಳನ್ನೆಲ್ಲ ಗಾಳಿಗೆ ತೂರಿ ಹಸಿದ ನಾಯಿಯಂತೆ ಯಾರಾದರೂ ಭ್ರಷ್ಟರು ಬೇರೆ ಪಕ್ಷದಿಂದ ನಮ್ಮ ಪಕ್ಷಕ್ಕೆ ಬಂದಾರೇನೋ ಎಂದು ಕಾತುರದಿಂದ ಕಾಯುತ್ತಿರುತ್ತಾರೆ. ನಾಯಿ ಹಸಿದಿತ್ತು. ಹಿಟ್ಟು ಹಳಸಿತ್ತು. ಈ ದುಸ್ಥಿತಿಯಲ್ಲಿ ನೀತಿಗೆಟ್ಟ ರಾಜಕೀಯ ಪಕ್ಷಗಳು ಹಾಗೂ ಅನಾಗರಿಕ ಶಾಸಕರೂ ಇದ್ದಾರೆ.
ಇಂತಹವರೇ ಇಂದು ಎಲ್ಲ ರಾಜಕೀಯ ಪಕ್ಷಗಳ ಅಧಿಪತಿಗಳು. ಈಗ ಅಧಿಕಾರದಲ್ಲಿರುವ ಎರಡು ಪಕ್ಷಗಳ ಸಹವಾಸ ಬೇಡವೆಂದರೆ ಮೂರನೆಯ ಪಕ್ಷ ಒಂದಿದೆ. ಅದು ಮತಾಂಧರ ಭಾರತೀಯ ಜನತಾ ಪಕ.್ಷ ಅದರ ಮುಖಂಡರೂ ಕುಲಗೆಟ್ಟ ಶಾಸಕರನ್ನು ತಮ್ಮ ಪಕ್ಷಕ್ಕೆ ಬರಮಾಡಿಕೊಳ್ಳುವುದರಲ್ಲಿ ನಿಸ್ಸೀಮರೇ. ನಂತರ ನಮ್ಮ ಪಕ್ಷದ ಧ್ಯೇಯ ಧೋರಣೆಗಳನ್ನು ಮೆಚ್ಚಿ ಸೇರ್ಪಡೆಯಾಗಿದ್ದಾರೆಂಬ ರೆಡಿಮೇಡ್ ಹೇಳಿಕೆ ಹೇಗೂ ಸಿಧ್ದವಾಗಿರುತ್ತದೆ.
ಕರ್ನಾಟಕದಲ್ಲಿ ಲಿಂಗಾಯತರು, ಒಕ್ಕಲಿಗರು ಬಲಾಢ್ಯರಾಗಿದ್ದ ಮಾತ್ರಕ್ಕೆ ಅವರೇ ಮಂತ್ರಿ ಮಂಡಲದಲ್ಲಿ ಸಿಂಹಪಾಲು ದೋಚಲು ಅರ್ಹರೇ? ಉಳಿದಂತೆ ಸಾಪೇಕ್ಷವಾಗಿ ಕಡಿಮೆ ಜನಸಂಖ್ಯೆಯ ಸಮುದಾಯಗಳು ಮತ್ತು ಅಲ್ಪಸಂಖ್ಯಾತರಲ್ಲಿ ಕೆಲವು ಪಂಗಡದವರಿಗೆ ಕಾಟಾಚಾರಕ್ಕೆ ಒಂದೋ ಎರಡೋ ಸ್ಥಾನ ನೀಡಿ ಮೂಗಿಗೆ ತುಪ್ಪ ಹಚ್ಚುವ ಕೆಲಸ ಎಷ್ಟರಮಟ್ಟಿಗೆ ಸರಿ? ಅಲ್ಪಸಂಖ್ಯಾತರನ್ನು ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷಗಳೂ ಕಡೆಗಣಿಸಿವೆ. ಬಿಜೆಪಿಯಂತೂ ತನ್ನ ಈ ದುರ್ನೀತಿಯನ್ನು ಬಹಿರಂಗವಾಗಿಯೇ ಘೋಷಿಸುವ ದಾಷ್ಟ್ರ್ಯ ತೋರಿದೆ.
ಇದು ಏಕೀಕರಣವಾದ ದಿನದಿಂದಲೂ ನಡೆದೇ ಇದೆ. ಅಲ್ಪಸಂಖ್ಯಾತರ ಜನಸಂಖ್ಯೆಗನುಗುಣವಾಗಿ ಅವರಿಗೆ ಪ್ರಾತಿನಿಧ್ಯ ಕೊಟ್ಟು ಅವರನ್ನ ಗೌರವದಿಂದ ನಡೆಸಿಕೊಳ್ಳಬೇಕೆಂಬ ಪ್ರಾಥಮಿಕ ಪ್ರಜಾತಾಂತ್ರಿಕ ತಿಳಿವಳಿಕೆ ಯಾವ ರಾಜಕೀಯ ಪಕ್ಷಕ್ಕೂ ಇಲ್ಲದಿರುವುದು ಒಂದು ದುರಂತವೇ ಸರಿ.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...