Homeಅಂಕಣಗಳುಯೋಗ್ಯತೆ ಇದೆಯೋ ಇಲ್ಲವೋ ಮಂತ್ರಿಗಿರಿ ಬೇಕೇಬೇಕು

ಯೋಗ್ಯತೆ ಇದೆಯೋ ಇಲ್ಲವೋ ಮಂತ್ರಿಗಿರಿ ಬೇಕೇಬೇಕು

- Advertisement -
- Advertisement -

ಮಂತ್ರಿಮಂಡಲ ರಚಿಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳ ನಡುವೆ ಇತ್ತೀಚೆಗೆ ಎಲ್ಲಿಲ್ಲದ ಸಮಸ್ಯೆ ಹುಟ್ಟಿಕೊಂಡಿದೆ.
ಮಂತ್ರಿಮಂಡಲ ರಚಿಸುವ ಮುನ್ನ ಎರಡೂ ಪಕ್ಷಗಳು ತಮ್ಮ ಶಾಸಕರನ್ನು ಪ್ರತ್ಯೇಕವಾಗಿ ಕರೆದು ನಿಗದಿಯಾದ ಸ್ಥಾನಗಳಿಗೆ ತಕ್ಕಂತೆ ಮಂತ್ರಿಸ್ಥಾನಕ್ಕೆ ಆಯ್ಕೆಮಾಡುವಂತೆ ಕೋರಬಹುದಿತ್ತು. ಜಿಲ್ಲಾವಾರು ಒಬ್ಬೊಬ್ಬರನ್ನು ಆಯ್ಕೆ ಮಾಡ್ತೀರಾ? ಜಾತಿಗೊಬ್ಬೊಬ್ಬರನ್ನು ಆಯ್ಕೆಮಾಡುತ್ತೀರಾ? ಇಲ್ಲವೇ ಜನಸಂಖ್ಯೆಗನುಗುಣವಾಗಿ ಪ್ರತಿ ಜಾತಿಗೆ ಇಂತಿಷ್ಟು ಎಂದು ಆಯ್ಕೆ ಮಾಡ್ತೀರಾ ಎಂದು ಕೇಳಿ ತಿಳಿದುಕೊಳ್ಳಬಹುದಿತ್ತು. ಶಾಸಕರೇ ಮಂತ್ರಿಮಂಡಲವನ್ನು ನಿರ್ಧರಿಸುವುದರಿಂದ, ಮಂತ್ರಿ ಪದವಿ ಸಿಗದ ಶಾಸಕರು ಈಗ ಎಬ್ಬಿಸುತ್ತಿರುವ ಬೀದಿ ಗದ್ದಲವನ್ನು ತಪ್ಪಿಸಬಹುದಿತ್ತು. ಮುಖ್ಯವಾಗಿ ಪ್ರಜಾಪ್ರಭುತ್ವದ ಘನತೆಯನ್ನು ಎತ್ತಿ ಹಿಡಿಯುವ ಗುರಿಯನ್ನು ತಲುಪಬಹುದಿತ್ತು.
ಆದರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ವವನ್ನು ಗಾಳಿಗೆ ತೂರುವಲ್ಲಿ ನಿರತವಾಗಿವೆ. ಮಂತ್ರಿಮಂಡಲ ರಚಿಸುವ ಕೆಲಸ ದೆಹಲಿಯಲ್ಲಿ ಆಗಬೇಕು, ಇಲ್ಲವೇ ದೇವೇಗೌಡರ ಮನೆಯಲ್ಲಿ ಆಗಬೇಕು, ಅಥವ ಅಂತಿಮ ತೀರ್ಮಾನ ರಾಹುಲ್ ಮಾಡಬೇಕು. ಇದು ಇಂದಿನ ಸ್ಥಿತಿ. ಹೋಗಲಿ, ರಾಹುಲ್‍ಗಾಂಧಿ ಅಥವ ದೇವೇಗೌಡರು ಕೈಗೊಂಡ ತೀರ್ಮಾನಗಳಿಗೆ ಮನ್ನಣೆ ದೊರೆಯಿತೇ ಎಂದರೆ ಅದೂ ಇಲ್ಲ.
ಈ ಶಾಸಕರೂ ಇದಕ್ಕೆ ತಕ್ಕನಾಗಿಯೇ ಇದ್ದಾರೆ. ಅವರಿಗೂ ಪ್ರಜಾಪ್ರಭುತ್ವ ಬೇಕಾಗಿಲ್ಲ. ರಾಜಕೀಯ ಮೊದಲೇ ಗೊತ್ತಿಲ್ಲ, ಅವರಿಗೆ ಗೊತ್ತಿರುವ ರಾಜಕೀಯವೆಂದರೆ ಶಾಸಕರಾಗಲು ಸೀಟು ಗಿಟ್ಟಿಸುವುದೂ, ಚುನಾವಣೆಯಲ್ಲಿ ನಾನಾಮಾರ್ಗ ಬಳಸಿ ಗೆಲ್ಲುವುದು. ಯೋಗ್ಯತೆ ಇದೆಯೇ ಇಲ್ಲವೋ ಮಂತ್ರಿಗಳಾಗುವುದು. ಮಂತ್ರಿಮಂಡಲದಲ್ಲಿ ಸ್ಥಾನ ಸಿಗಲಿಲ್ಲ್ಲವೆಂದರೆ ರೆಸಾರ್ಟ್‍ಗಳಲ್ಲಿ ಕೂತು ತಾವು ಸದಸ್ಯನಾಗಿರುವ ಸಂಸ್ಥೆಯನ್ನೇ ನಾಶಮಾಡಲು ಮಸಲತ್ತು ಮಾಡುವುದು.
ಕೆಲವರಂತೂ ಮಂತ್ರಿಗಳಾಗುವುದು ತಮ್ಮ ಆಜನ್ಮಸಿದ್ಧ ಹಕ್ಕು ಅಂತಲೇ ಅಂದುಕೊಂಡಿದ್ದಾರೆ. ಕೆಲವರು ಹತ್ತಾರು ಅವಧಿಗೆ ಶಾಸಕರಾಗಿದ್ದರೂ, ಮಂತ್ರಿಗಳಾಗಿದ್ದರೂ ಗೂಟ ಹೊಡ್ಕೊಂಡು ಸಾಯುವವರೆಗೂ ಅಧಿಕಾರದಲ್ಲಿರಬೇಕೆಂದು ಬಯಸುತ್ತಾರೆ. ಇತ್ತೀಚೆಗಂತೂ ಭೂಗಳ್ಳರು, ಸಾರ್ವಜನಿಕ ಆಸ್ತಿದೋಚಿದವರು, ಅಧಿಕಾರ ದುರುಪಯೋಗಪಡಿಸಿಕೊಂಡವರು, ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್‍ನ ಅಶೋಕ್‍ಖೇಣಿ ಅವರೊಡನೆ ಮಂತ್ರಿಯಾಗಿದ್ದಾಗ ಕೈಜೋಡಿಸಿ, ಪ್ರಥಮವಾಗಿ ಮಾಡಿಕೊಂಡ ಒಪ್ಪಂದವನ್ನು ಬದಿಗಿರಿಸಿ ಖೇಣಿಗೆ ಉತ್ಕøಷ್ಟವಾದ ಭೂಮಿಯನ್ನು ನೀಡಿ, ಮಾರುವುದಕ್ಕೆ ಅವಕಾಶ ಕೊಟ್ಟು ಸಮಾಜಘಾತುಕರೂ ಇದ್ದಾರೆ. ಅನೀತಿಯುತರಾಗಿ ರಿಯಲ್ ಎಸ್ಟೇಟ್ ಏಜೆನ್ಸಿ ನಡೆಸುತ್ತಿರುವವರೂ ಅಕ್ರಮವಾಗಿ ಕೋಟ್ಯಾಂತರ ಸಂಪಾದಿಸಿ, ಈಗ ಸಭ್ಯವ್ಯಕ್ತಿಗಳಂತೆ ಪೋಸ್ ಕೊಡುವ ಛದ್ಮವೇಷಧಾರಿಗಳೂ, ಹಾಲಿ ಮಂತ್ರಿಯಾಗುವ ಸ್ಪರ್ಧೆಯಲ್ಲಿ ತೊಡಗಿದ್ದಾರೆ. ಈ ನೀತಿಬಾಹಿರರೂ, ಸಮಯಸಾಧಕರೂ ರಾಜಕೀಯ ಪಕ್ಷಗಳನ್ನು ಕಬ್ಜಾ ಮಾಡಿಕೊಂಡಿದ್ದಾರೆ. ಇವರಿಗೆ ನೀತಿನಿಯಮ, ಡೀಸೆನ್ಸಿ ಯಾವುವೂ ಅರ್ಥವಾಗದ ಮಾತುಗಳು. ಇವತ್ತು ಅಧಿಕಾರ ಸಿಗುತ್ತೆ ಅಂದರೆ ಈ ಸಂಸ್ಥೆಯಲ್ಲಿರುತ್ತಾರೆ, ಮತ್ತೊಂದು ಅವಧಿಗೆ ಅಲ್ಲಿ ಅಧಿಕಾರ ಸಿಗುತ್ತೆ ಅಂದರೆ ಈ ಪಕ್ಷಬಿಟ್ಟು ಆ ಪಕ್ಷಕ್ಕೇ ಹಾರಿ ಹೋಗುತ್ತಾರೆ. ರಾಜಕೀಯ ಪಕ್ಷಗಳು ತಮ್ಮ ಶಾಸಕರಿಗಿಂತಲೂ ಮುಂದೆ ಇವೆ, ಅವುಗಳೆಲ್ಲ ಧ್ಯೇಯ ಧೋರಣೆ, ಶಿಸ್ತು, ಘನತೆ ಗೌರವಗಳನ್ನೆಲ್ಲ ಗಾಳಿಗೆ ತೂರಿ ಹಸಿದ ನಾಯಿಯಂತೆ ಯಾರಾದರೂ ಭ್ರಷ್ಟರು ಬೇರೆ ಪಕ್ಷದಿಂದ ನಮ್ಮ ಪಕ್ಷಕ್ಕೆ ಬಂದಾರೇನೋ ಎಂದು ಕಾತುರದಿಂದ ಕಾಯುತ್ತಿರುತ್ತಾರೆ. ನಾಯಿ ಹಸಿದಿತ್ತು. ಹಿಟ್ಟು ಹಳಸಿತ್ತು. ಈ ದುಸ್ಥಿತಿಯಲ್ಲಿ ನೀತಿಗೆಟ್ಟ ರಾಜಕೀಯ ಪಕ್ಷಗಳು ಹಾಗೂ ಅನಾಗರಿಕ ಶಾಸಕರೂ ಇದ್ದಾರೆ.
ಇಂತಹವರೇ ಇಂದು ಎಲ್ಲ ರಾಜಕೀಯ ಪಕ್ಷಗಳ ಅಧಿಪತಿಗಳು. ಈಗ ಅಧಿಕಾರದಲ್ಲಿರುವ ಎರಡು ಪಕ್ಷಗಳ ಸಹವಾಸ ಬೇಡವೆಂದರೆ ಮೂರನೆಯ ಪಕ್ಷ ಒಂದಿದೆ. ಅದು ಮತಾಂಧರ ಭಾರತೀಯ ಜನತಾ ಪಕ.್ಷ ಅದರ ಮುಖಂಡರೂ ಕುಲಗೆಟ್ಟ ಶಾಸಕರನ್ನು ತಮ್ಮ ಪಕ್ಷಕ್ಕೆ ಬರಮಾಡಿಕೊಳ್ಳುವುದರಲ್ಲಿ ನಿಸ್ಸೀಮರೇ. ನಂತರ ನಮ್ಮ ಪಕ್ಷದ ಧ್ಯೇಯ ಧೋರಣೆಗಳನ್ನು ಮೆಚ್ಚಿ ಸೇರ್ಪಡೆಯಾಗಿದ್ದಾರೆಂಬ ರೆಡಿಮೇಡ್ ಹೇಳಿಕೆ ಹೇಗೂ ಸಿಧ್ದವಾಗಿರುತ್ತದೆ.
ಕರ್ನಾಟಕದಲ್ಲಿ ಲಿಂಗಾಯತರು, ಒಕ್ಕಲಿಗರು ಬಲಾಢ್ಯರಾಗಿದ್ದ ಮಾತ್ರಕ್ಕೆ ಅವರೇ ಮಂತ್ರಿ ಮಂಡಲದಲ್ಲಿ ಸಿಂಹಪಾಲು ದೋಚಲು ಅರ್ಹರೇ? ಉಳಿದಂತೆ ಸಾಪೇಕ್ಷವಾಗಿ ಕಡಿಮೆ ಜನಸಂಖ್ಯೆಯ ಸಮುದಾಯಗಳು ಮತ್ತು ಅಲ್ಪಸಂಖ್ಯಾತರಲ್ಲಿ ಕೆಲವು ಪಂಗಡದವರಿಗೆ ಕಾಟಾಚಾರಕ್ಕೆ ಒಂದೋ ಎರಡೋ ಸ್ಥಾನ ನೀಡಿ ಮೂಗಿಗೆ ತುಪ್ಪ ಹಚ್ಚುವ ಕೆಲಸ ಎಷ್ಟರಮಟ್ಟಿಗೆ ಸರಿ? ಅಲ್ಪಸಂಖ್ಯಾತರನ್ನು ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷಗಳೂ ಕಡೆಗಣಿಸಿವೆ. ಬಿಜೆಪಿಯಂತೂ ತನ್ನ ಈ ದುರ್ನೀತಿಯನ್ನು ಬಹಿರಂಗವಾಗಿಯೇ ಘೋಷಿಸುವ ದಾಷ್ಟ್ರ್ಯ ತೋರಿದೆ.
ಇದು ಏಕೀಕರಣವಾದ ದಿನದಿಂದಲೂ ನಡೆದೇ ಇದೆ. ಅಲ್ಪಸಂಖ್ಯಾತರ ಜನಸಂಖ್ಯೆಗನುಗುಣವಾಗಿ ಅವರಿಗೆ ಪ್ರಾತಿನಿಧ್ಯ ಕೊಟ್ಟು ಅವರನ್ನ ಗೌರವದಿಂದ ನಡೆಸಿಕೊಳ್ಳಬೇಕೆಂಬ ಪ್ರಾಥಮಿಕ ಪ್ರಜಾತಾಂತ್ರಿಕ ತಿಳಿವಳಿಕೆ ಯಾವ ರಾಜಕೀಯ ಪಕ್ಷಕ್ಕೂ ಇಲ್ಲದಿರುವುದು ಒಂದು ದುರಂತವೇ ಸರಿ.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...