Homeಅಂಕಣಗಳುಯೋಗ್ಯತೆ ಇದೆಯೋ ಇಲ್ಲವೋ ಮಂತ್ರಿಗಿರಿ ಬೇಕೇಬೇಕು

ಯೋಗ್ಯತೆ ಇದೆಯೋ ಇಲ್ಲವೋ ಮಂತ್ರಿಗಿರಿ ಬೇಕೇಬೇಕು

- Advertisement -
- Advertisement -

ಮಂತ್ರಿಮಂಡಲ ರಚಿಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳ ನಡುವೆ ಇತ್ತೀಚೆಗೆ ಎಲ್ಲಿಲ್ಲದ ಸಮಸ್ಯೆ ಹುಟ್ಟಿಕೊಂಡಿದೆ.
ಮಂತ್ರಿಮಂಡಲ ರಚಿಸುವ ಮುನ್ನ ಎರಡೂ ಪಕ್ಷಗಳು ತಮ್ಮ ಶಾಸಕರನ್ನು ಪ್ರತ್ಯೇಕವಾಗಿ ಕರೆದು ನಿಗದಿಯಾದ ಸ್ಥಾನಗಳಿಗೆ ತಕ್ಕಂತೆ ಮಂತ್ರಿಸ್ಥಾನಕ್ಕೆ ಆಯ್ಕೆಮಾಡುವಂತೆ ಕೋರಬಹುದಿತ್ತು. ಜಿಲ್ಲಾವಾರು ಒಬ್ಬೊಬ್ಬರನ್ನು ಆಯ್ಕೆ ಮಾಡ್ತೀರಾ? ಜಾತಿಗೊಬ್ಬೊಬ್ಬರನ್ನು ಆಯ್ಕೆಮಾಡುತ್ತೀರಾ? ಇಲ್ಲವೇ ಜನಸಂಖ್ಯೆಗನುಗುಣವಾಗಿ ಪ್ರತಿ ಜಾತಿಗೆ ಇಂತಿಷ್ಟು ಎಂದು ಆಯ್ಕೆ ಮಾಡ್ತೀರಾ ಎಂದು ಕೇಳಿ ತಿಳಿದುಕೊಳ್ಳಬಹುದಿತ್ತು. ಶಾಸಕರೇ ಮಂತ್ರಿಮಂಡಲವನ್ನು ನಿರ್ಧರಿಸುವುದರಿಂದ, ಮಂತ್ರಿ ಪದವಿ ಸಿಗದ ಶಾಸಕರು ಈಗ ಎಬ್ಬಿಸುತ್ತಿರುವ ಬೀದಿ ಗದ್ದಲವನ್ನು ತಪ್ಪಿಸಬಹುದಿತ್ತು. ಮುಖ್ಯವಾಗಿ ಪ್ರಜಾಪ್ರಭುತ್ವದ ಘನತೆಯನ್ನು ಎತ್ತಿ ಹಿಡಿಯುವ ಗುರಿಯನ್ನು ತಲುಪಬಹುದಿತ್ತು.
ಆದರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ವವನ್ನು ಗಾಳಿಗೆ ತೂರುವಲ್ಲಿ ನಿರತವಾಗಿವೆ. ಮಂತ್ರಿಮಂಡಲ ರಚಿಸುವ ಕೆಲಸ ದೆಹಲಿಯಲ್ಲಿ ಆಗಬೇಕು, ಇಲ್ಲವೇ ದೇವೇಗೌಡರ ಮನೆಯಲ್ಲಿ ಆಗಬೇಕು, ಅಥವ ಅಂತಿಮ ತೀರ್ಮಾನ ರಾಹುಲ್ ಮಾಡಬೇಕು. ಇದು ಇಂದಿನ ಸ್ಥಿತಿ. ಹೋಗಲಿ, ರಾಹುಲ್‍ಗಾಂಧಿ ಅಥವ ದೇವೇಗೌಡರು ಕೈಗೊಂಡ ತೀರ್ಮಾನಗಳಿಗೆ ಮನ್ನಣೆ ದೊರೆಯಿತೇ ಎಂದರೆ ಅದೂ ಇಲ್ಲ.
ಈ ಶಾಸಕರೂ ಇದಕ್ಕೆ ತಕ್ಕನಾಗಿಯೇ ಇದ್ದಾರೆ. ಅವರಿಗೂ ಪ್ರಜಾಪ್ರಭುತ್ವ ಬೇಕಾಗಿಲ್ಲ. ರಾಜಕೀಯ ಮೊದಲೇ ಗೊತ್ತಿಲ್ಲ, ಅವರಿಗೆ ಗೊತ್ತಿರುವ ರಾಜಕೀಯವೆಂದರೆ ಶಾಸಕರಾಗಲು ಸೀಟು ಗಿಟ್ಟಿಸುವುದೂ, ಚುನಾವಣೆಯಲ್ಲಿ ನಾನಾಮಾರ್ಗ ಬಳಸಿ ಗೆಲ್ಲುವುದು. ಯೋಗ್ಯತೆ ಇದೆಯೇ ಇಲ್ಲವೋ ಮಂತ್ರಿಗಳಾಗುವುದು. ಮಂತ್ರಿಮಂಡಲದಲ್ಲಿ ಸ್ಥಾನ ಸಿಗಲಿಲ್ಲ್ಲವೆಂದರೆ ರೆಸಾರ್ಟ್‍ಗಳಲ್ಲಿ ಕೂತು ತಾವು ಸದಸ್ಯನಾಗಿರುವ ಸಂಸ್ಥೆಯನ್ನೇ ನಾಶಮಾಡಲು ಮಸಲತ್ತು ಮಾಡುವುದು.
ಕೆಲವರಂತೂ ಮಂತ್ರಿಗಳಾಗುವುದು ತಮ್ಮ ಆಜನ್ಮಸಿದ್ಧ ಹಕ್ಕು ಅಂತಲೇ ಅಂದುಕೊಂಡಿದ್ದಾರೆ. ಕೆಲವರು ಹತ್ತಾರು ಅವಧಿಗೆ ಶಾಸಕರಾಗಿದ್ದರೂ, ಮಂತ್ರಿಗಳಾಗಿದ್ದರೂ ಗೂಟ ಹೊಡ್ಕೊಂಡು ಸಾಯುವವರೆಗೂ ಅಧಿಕಾರದಲ್ಲಿರಬೇಕೆಂದು ಬಯಸುತ್ತಾರೆ. ಇತ್ತೀಚೆಗಂತೂ ಭೂಗಳ್ಳರು, ಸಾರ್ವಜನಿಕ ಆಸ್ತಿದೋಚಿದವರು, ಅಧಿಕಾರ ದುರುಪಯೋಗಪಡಿಸಿಕೊಂಡವರು, ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್‍ನ ಅಶೋಕ್‍ಖೇಣಿ ಅವರೊಡನೆ ಮಂತ್ರಿಯಾಗಿದ್ದಾಗ ಕೈಜೋಡಿಸಿ, ಪ್ರಥಮವಾಗಿ ಮಾಡಿಕೊಂಡ ಒಪ್ಪಂದವನ್ನು ಬದಿಗಿರಿಸಿ ಖೇಣಿಗೆ ಉತ್ಕøಷ್ಟವಾದ ಭೂಮಿಯನ್ನು ನೀಡಿ, ಮಾರುವುದಕ್ಕೆ ಅವಕಾಶ ಕೊಟ್ಟು ಸಮಾಜಘಾತುಕರೂ ಇದ್ದಾರೆ. ಅನೀತಿಯುತರಾಗಿ ರಿಯಲ್ ಎಸ್ಟೇಟ್ ಏಜೆನ್ಸಿ ನಡೆಸುತ್ತಿರುವವರೂ ಅಕ್ರಮವಾಗಿ ಕೋಟ್ಯಾಂತರ ಸಂಪಾದಿಸಿ, ಈಗ ಸಭ್ಯವ್ಯಕ್ತಿಗಳಂತೆ ಪೋಸ್ ಕೊಡುವ ಛದ್ಮವೇಷಧಾರಿಗಳೂ, ಹಾಲಿ ಮಂತ್ರಿಯಾಗುವ ಸ್ಪರ್ಧೆಯಲ್ಲಿ ತೊಡಗಿದ್ದಾರೆ. ಈ ನೀತಿಬಾಹಿರರೂ, ಸಮಯಸಾಧಕರೂ ರಾಜಕೀಯ ಪಕ್ಷಗಳನ್ನು ಕಬ್ಜಾ ಮಾಡಿಕೊಂಡಿದ್ದಾರೆ. ಇವರಿಗೆ ನೀತಿನಿಯಮ, ಡೀಸೆನ್ಸಿ ಯಾವುವೂ ಅರ್ಥವಾಗದ ಮಾತುಗಳು. ಇವತ್ತು ಅಧಿಕಾರ ಸಿಗುತ್ತೆ ಅಂದರೆ ಈ ಸಂಸ್ಥೆಯಲ್ಲಿರುತ್ತಾರೆ, ಮತ್ತೊಂದು ಅವಧಿಗೆ ಅಲ್ಲಿ ಅಧಿಕಾರ ಸಿಗುತ್ತೆ ಅಂದರೆ ಈ ಪಕ್ಷಬಿಟ್ಟು ಆ ಪಕ್ಷಕ್ಕೇ ಹಾರಿ ಹೋಗುತ್ತಾರೆ. ರಾಜಕೀಯ ಪಕ್ಷಗಳು ತಮ್ಮ ಶಾಸಕರಿಗಿಂತಲೂ ಮುಂದೆ ಇವೆ, ಅವುಗಳೆಲ್ಲ ಧ್ಯೇಯ ಧೋರಣೆ, ಶಿಸ್ತು, ಘನತೆ ಗೌರವಗಳನ್ನೆಲ್ಲ ಗಾಳಿಗೆ ತೂರಿ ಹಸಿದ ನಾಯಿಯಂತೆ ಯಾರಾದರೂ ಭ್ರಷ್ಟರು ಬೇರೆ ಪಕ್ಷದಿಂದ ನಮ್ಮ ಪಕ್ಷಕ್ಕೆ ಬಂದಾರೇನೋ ಎಂದು ಕಾತುರದಿಂದ ಕಾಯುತ್ತಿರುತ್ತಾರೆ. ನಾಯಿ ಹಸಿದಿತ್ತು. ಹಿಟ್ಟು ಹಳಸಿತ್ತು. ಈ ದುಸ್ಥಿತಿಯಲ್ಲಿ ನೀತಿಗೆಟ್ಟ ರಾಜಕೀಯ ಪಕ್ಷಗಳು ಹಾಗೂ ಅನಾಗರಿಕ ಶಾಸಕರೂ ಇದ್ದಾರೆ.
ಇಂತಹವರೇ ಇಂದು ಎಲ್ಲ ರಾಜಕೀಯ ಪಕ್ಷಗಳ ಅಧಿಪತಿಗಳು. ಈಗ ಅಧಿಕಾರದಲ್ಲಿರುವ ಎರಡು ಪಕ್ಷಗಳ ಸಹವಾಸ ಬೇಡವೆಂದರೆ ಮೂರನೆಯ ಪಕ್ಷ ಒಂದಿದೆ. ಅದು ಮತಾಂಧರ ಭಾರತೀಯ ಜನತಾ ಪಕ.್ಷ ಅದರ ಮುಖಂಡರೂ ಕುಲಗೆಟ್ಟ ಶಾಸಕರನ್ನು ತಮ್ಮ ಪಕ್ಷಕ್ಕೆ ಬರಮಾಡಿಕೊಳ್ಳುವುದರಲ್ಲಿ ನಿಸ್ಸೀಮರೇ. ನಂತರ ನಮ್ಮ ಪಕ್ಷದ ಧ್ಯೇಯ ಧೋರಣೆಗಳನ್ನು ಮೆಚ್ಚಿ ಸೇರ್ಪಡೆಯಾಗಿದ್ದಾರೆಂಬ ರೆಡಿಮೇಡ್ ಹೇಳಿಕೆ ಹೇಗೂ ಸಿಧ್ದವಾಗಿರುತ್ತದೆ.
ಕರ್ನಾಟಕದಲ್ಲಿ ಲಿಂಗಾಯತರು, ಒಕ್ಕಲಿಗರು ಬಲಾಢ್ಯರಾಗಿದ್ದ ಮಾತ್ರಕ್ಕೆ ಅವರೇ ಮಂತ್ರಿ ಮಂಡಲದಲ್ಲಿ ಸಿಂಹಪಾಲು ದೋಚಲು ಅರ್ಹರೇ? ಉಳಿದಂತೆ ಸಾಪೇಕ್ಷವಾಗಿ ಕಡಿಮೆ ಜನಸಂಖ್ಯೆಯ ಸಮುದಾಯಗಳು ಮತ್ತು ಅಲ್ಪಸಂಖ್ಯಾತರಲ್ಲಿ ಕೆಲವು ಪಂಗಡದವರಿಗೆ ಕಾಟಾಚಾರಕ್ಕೆ ಒಂದೋ ಎರಡೋ ಸ್ಥಾನ ನೀಡಿ ಮೂಗಿಗೆ ತುಪ್ಪ ಹಚ್ಚುವ ಕೆಲಸ ಎಷ್ಟರಮಟ್ಟಿಗೆ ಸರಿ? ಅಲ್ಪಸಂಖ್ಯಾತರನ್ನು ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷಗಳೂ ಕಡೆಗಣಿಸಿವೆ. ಬಿಜೆಪಿಯಂತೂ ತನ್ನ ಈ ದುರ್ನೀತಿಯನ್ನು ಬಹಿರಂಗವಾಗಿಯೇ ಘೋಷಿಸುವ ದಾಷ್ಟ್ರ್ಯ ತೋರಿದೆ.
ಇದು ಏಕೀಕರಣವಾದ ದಿನದಿಂದಲೂ ನಡೆದೇ ಇದೆ. ಅಲ್ಪಸಂಖ್ಯಾತರ ಜನಸಂಖ್ಯೆಗನುಗುಣವಾಗಿ ಅವರಿಗೆ ಪ್ರಾತಿನಿಧ್ಯ ಕೊಟ್ಟು ಅವರನ್ನ ಗೌರವದಿಂದ ನಡೆಸಿಕೊಳ್ಳಬೇಕೆಂಬ ಪ್ರಾಥಮಿಕ ಪ್ರಜಾತಾಂತ್ರಿಕ ತಿಳಿವಳಿಕೆ ಯಾವ ರಾಜಕೀಯ ಪಕ್ಷಕ್ಕೂ ಇಲ್ಲದಿರುವುದು ಒಂದು ದುರಂತವೇ ಸರಿ.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...