Homeಅಂಕಣಗಳುಯೋಗ್ಯತೆ ಇದೆಯೋ ಇಲ್ಲವೋ ಮಂತ್ರಿಗಿರಿ ಬೇಕೇಬೇಕು

ಯೋಗ್ಯತೆ ಇದೆಯೋ ಇಲ್ಲವೋ ಮಂತ್ರಿಗಿರಿ ಬೇಕೇಬೇಕು

- Advertisement -
- Advertisement -

ಮಂತ್ರಿಮಂಡಲ ರಚಿಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳ ನಡುವೆ ಇತ್ತೀಚೆಗೆ ಎಲ್ಲಿಲ್ಲದ ಸಮಸ್ಯೆ ಹುಟ್ಟಿಕೊಂಡಿದೆ.
ಮಂತ್ರಿಮಂಡಲ ರಚಿಸುವ ಮುನ್ನ ಎರಡೂ ಪಕ್ಷಗಳು ತಮ್ಮ ಶಾಸಕರನ್ನು ಪ್ರತ್ಯೇಕವಾಗಿ ಕರೆದು ನಿಗದಿಯಾದ ಸ್ಥಾನಗಳಿಗೆ ತಕ್ಕಂತೆ ಮಂತ್ರಿಸ್ಥಾನಕ್ಕೆ ಆಯ್ಕೆಮಾಡುವಂತೆ ಕೋರಬಹುದಿತ್ತು. ಜಿಲ್ಲಾವಾರು ಒಬ್ಬೊಬ್ಬರನ್ನು ಆಯ್ಕೆ ಮಾಡ್ತೀರಾ? ಜಾತಿಗೊಬ್ಬೊಬ್ಬರನ್ನು ಆಯ್ಕೆಮಾಡುತ್ತೀರಾ? ಇಲ್ಲವೇ ಜನಸಂಖ್ಯೆಗನುಗುಣವಾಗಿ ಪ್ರತಿ ಜಾತಿಗೆ ಇಂತಿಷ್ಟು ಎಂದು ಆಯ್ಕೆ ಮಾಡ್ತೀರಾ ಎಂದು ಕೇಳಿ ತಿಳಿದುಕೊಳ್ಳಬಹುದಿತ್ತು. ಶಾಸಕರೇ ಮಂತ್ರಿಮಂಡಲವನ್ನು ನಿರ್ಧರಿಸುವುದರಿಂದ, ಮಂತ್ರಿ ಪದವಿ ಸಿಗದ ಶಾಸಕರು ಈಗ ಎಬ್ಬಿಸುತ್ತಿರುವ ಬೀದಿ ಗದ್ದಲವನ್ನು ತಪ್ಪಿಸಬಹುದಿತ್ತು. ಮುಖ್ಯವಾಗಿ ಪ್ರಜಾಪ್ರಭುತ್ವದ ಘನತೆಯನ್ನು ಎತ್ತಿ ಹಿಡಿಯುವ ಗುರಿಯನ್ನು ತಲುಪಬಹುದಿತ್ತು.
ಆದರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ವವನ್ನು ಗಾಳಿಗೆ ತೂರುವಲ್ಲಿ ನಿರತವಾಗಿವೆ. ಮಂತ್ರಿಮಂಡಲ ರಚಿಸುವ ಕೆಲಸ ದೆಹಲಿಯಲ್ಲಿ ಆಗಬೇಕು, ಇಲ್ಲವೇ ದೇವೇಗೌಡರ ಮನೆಯಲ್ಲಿ ಆಗಬೇಕು, ಅಥವ ಅಂತಿಮ ತೀರ್ಮಾನ ರಾಹುಲ್ ಮಾಡಬೇಕು. ಇದು ಇಂದಿನ ಸ್ಥಿತಿ. ಹೋಗಲಿ, ರಾಹುಲ್‍ಗಾಂಧಿ ಅಥವ ದೇವೇಗೌಡರು ಕೈಗೊಂಡ ತೀರ್ಮಾನಗಳಿಗೆ ಮನ್ನಣೆ ದೊರೆಯಿತೇ ಎಂದರೆ ಅದೂ ಇಲ್ಲ.
ಈ ಶಾಸಕರೂ ಇದಕ್ಕೆ ತಕ್ಕನಾಗಿಯೇ ಇದ್ದಾರೆ. ಅವರಿಗೂ ಪ್ರಜಾಪ್ರಭುತ್ವ ಬೇಕಾಗಿಲ್ಲ. ರಾಜಕೀಯ ಮೊದಲೇ ಗೊತ್ತಿಲ್ಲ, ಅವರಿಗೆ ಗೊತ್ತಿರುವ ರಾಜಕೀಯವೆಂದರೆ ಶಾಸಕರಾಗಲು ಸೀಟು ಗಿಟ್ಟಿಸುವುದೂ, ಚುನಾವಣೆಯಲ್ಲಿ ನಾನಾಮಾರ್ಗ ಬಳಸಿ ಗೆಲ್ಲುವುದು. ಯೋಗ್ಯತೆ ಇದೆಯೇ ಇಲ್ಲವೋ ಮಂತ್ರಿಗಳಾಗುವುದು. ಮಂತ್ರಿಮಂಡಲದಲ್ಲಿ ಸ್ಥಾನ ಸಿಗಲಿಲ್ಲ್ಲವೆಂದರೆ ರೆಸಾರ್ಟ್‍ಗಳಲ್ಲಿ ಕೂತು ತಾವು ಸದಸ್ಯನಾಗಿರುವ ಸಂಸ್ಥೆಯನ್ನೇ ನಾಶಮಾಡಲು ಮಸಲತ್ತು ಮಾಡುವುದು.
ಕೆಲವರಂತೂ ಮಂತ್ರಿಗಳಾಗುವುದು ತಮ್ಮ ಆಜನ್ಮಸಿದ್ಧ ಹಕ್ಕು ಅಂತಲೇ ಅಂದುಕೊಂಡಿದ್ದಾರೆ. ಕೆಲವರು ಹತ್ತಾರು ಅವಧಿಗೆ ಶಾಸಕರಾಗಿದ್ದರೂ, ಮಂತ್ರಿಗಳಾಗಿದ್ದರೂ ಗೂಟ ಹೊಡ್ಕೊಂಡು ಸಾಯುವವರೆಗೂ ಅಧಿಕಾರದಲ್ಲಿರಬೇಕೆಂದು ಬಯಸುತ್ತಾರೆ. ಇತ್ತೀಚೆಗಂತೂ ಭೂಗಳ್ಳರು, ಸಾರ್ವಜನಿಕ ಆಸ್ತಿದೋಚಿದವರು, ಅಧಿಕಾರ ದುರುಪಯೋಗಪಡಿಸಿಕೊಂಡವರು, ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್‍ನ ಅಶೋಕ್‍ಖೇಣಿ ಅವರೊಡನೆ ಮಂತ್ರಿಯಾಗಿದ್ದಾಗ ಕೈಜೋಡಿಸಿ, ಪ್ರಥಮವಾಗಿ ಮಾಡಿಕೊಂಡ ಒಪ್ಪಂದವನ್ನು ಬದಿಗಿರಿಸಿ ಖೇಣಿಗೆ ಉತ್ಕøಷ್ಟವಾದ ಭೂಮಿಯನ್ನು ನೀಡಿ, ಮಾರುವುದಕ್ಕೆ ಅವಕಾಶ ಕೊಟ್ಟು ಸಮಾಜಘಾತುಕರೂ ಇದ್ದಾರೆ. ಅನೀತಿಯುತರಾಗಿ ರಿಯಲ್ ಎಸ್ಟೇಟ್ ಏಜೆನ್ಸಿ ನಡೆಸುತ್ತಿರುವವರೂ ಅಕ್ರಮವಾಗಿ ಕೋಟ್ಯಾಂತರ ಸಂಪಾದಿಸಿ, ಈಗ ಸಭ್ಯವ್ಯಕ್ತಿಗಳಂತೆ ಪೋಸ್ ಕೊಡುವ ಛದ್ಮವೇಷಧಾರಿಗಳೂ, ಹಾಲಿ ಮಂತ್ರಿಯಾಗುವ ಸ್ಪರ್ಧೆಯಲ್ಲಿ ತೊಡಗಿದ್ದಾರೆ. ಈ ನೀತಿಬಾಹಿರರೂ, ಸಮಯಸಾಧಕರೂ ರಾಜಕೀಯ ಪಕ್ಷಗಳನ್ನು ಕಬ್ಜಾ ಮಾಡಿಕೊಂಡಿದ್ದಾರೆ. ಇವರಿಗೆ ನೀತಿನಿಯಮ, ಡೀಸೆನ್ಸಿ ಯಾವುವೂ ಅರ್ಥವಾಗದ ಮಾತುಗಳು. ಇವತ್ತು ಅಧಿಕಾರ ಸಿಗುತ್ತೆ ಅಂದರೆ ಈ ಸಂಸ್ಥೆಯಲ್ಲಿರುತ್ತಾರೆ, ಮತ್ತೊಂದು ಅವಧಿಗೆ ಅಲ್ಲಿ ಅಧಿಕಾರ ಸಿಗುತ್ತೆ ಅಂದರೆ ಈ ಪಕ್ಷಬಿಟ್ಟು ಆ ಪಕ್ಷಕ್ಕೇ ಹಾರಿ ಹೋಗುತ್ತಾರೆ. ರಾಜಕೀಯ ಪಕ್ಷಗಳು ತಮ್ಮ ಶಾಸಕರಿಗಿಂತಲೂ ಮುಂದೆ ಇವೆ, ಅವುಗಳೆಲ್ಲ ಧ್ಯೇಯ ಧೋರಣೆ, ಶಿಸ್ತು, ಘನತೆ ಗೌರವಗಳನ್ನೆಲ್ಲ ಗಾಳಿಗೆ ತೂರಿ ಹಸಿದ ನಾಯಿಯಂತೆ ಯಾರಾದರೂ ಭ್ರಷ್ಟರು ಬೇರೆ ಪಕ್ಷದಿಂದ ನಮ್ಮ ಪಕ್ಷಕ್ಕೆ ಬಂದಾರೇನೋ ಎಂದು ಕಾತುರದಿಂದ ಕಾಯುತ್ತಿರುತ್ತಾರೆ. ನಾಯಿ ಹಸಿದಿತ್ತು. ಹಿಟ್ಟು ಹಳಸಿತ್ತು. ಈ ದುಸ್ಥಿತಿಯಲ್ಲಿ ನೀತಿಗೆಟ್ಟ ರಾಜಕೀಯ ಪಕ್ಷಗಳು ಹಾಗೂ ಅನಾಗರಿಕ ಶಾಸಕರೂ ಇದ್ದಾರೆ.
ಇಂತಹವರೇ ಇಂದು ಎಲ್ಲ ರಾಜಕೀಯ ಪಕ್ಷಗಳ ಅಧಿಪತಿಗಳು. ಈಗ ಅಧಿಕಾರದಲ್ಲಿರುವ ಎರಡು ಪಕ್ಷಗಳ ಸಹವಾಸ ಬೇಡವೆಂದರೆ ಮೂರನೆಯ ಪಕ್ಷ ಒಂದಿದೆ. ಅದು ಮತಾಂಧರ ಭಾರತೀಯ ಜನತಾ ಪಕ.್ಷ ಅದರ ಮುಖಂಡರೂ ಕುಲಗೆಟ್ಟ ಶಾಸಕರನ್ನು ತಮ್ಮ ಪಕ್ಷಕ್ಕೆ ಬರಮಾಡಿಕೊಳ್ಳುವುದರಲ್ಲಿ ನಿಸ್ಸೀಮರೇ. ನಂತರ ನಮ್ಮ ಪಕ್ಷದ ಧ್ಯೇಯ ಧೋರಣೆಗಳನ್ನು ಮೆಚ್ಚಿ ಸೇರ್ಪಡೆಯಾಗಿದ್ದಾರೆಂಬ ರೆಡಿಮೇಡ್ ಹೇಳಿಕೆ ಹೇಗೂ ಸಿಧ್ದವಾಗಿರುತ್ತದೆ.
ಕರ್ನಾಟಕದಲ್ಲಿ ಲಿಂಗಾಯತರು, ಒಕ್ಕಲಿಗರು ಬಲಾಢ್ಯರಾಗಿದ್ದ ಮಾತ್ರಕ್ಕೆ ಅವರೇ ಮಂತ್ರಿ ಮಂಡಲದಲ್ಲಿ ಸಿಂಹಪಾಲು ದೋಚಲು ಅರ್ಹರೇ? ಉಳಿದಂತೆ ಸಾಪೇಕ್ಷವಾಗಿ ಕಡಿಮೆ ಜನಸಂಖ್ಯೆಯ ಸಮುದಾಯಗಳು ಮತ್ತು ಅಲ್ಪಸಂಖ್ಯಾತರಲ್ಲಿ ಕೆಲವು ಪಂಗಡದವರಿಗೆ ಕಾಟಾಚಾರಕ್ಕೆ ಒಂದೋ ಎರಡೋ ಸ್ಥಾನ ನೀಡಿ ಮೂಗಿಗೆ ತುಪ್ಪ ಹಚ್ಚುವ ಕೆಲಸ ಎಷ್ಟರಮಟ್ಟಿಗೆ ಸರಿ? ಅಲ್ಪಸಂಖ್ಯಾತರನ್ನು ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷಗಳೂ ಕಡೆಗಣಿಸಿವೆ. ಬಿಜೆಪಿಯಂತೂ ತನ್ನ ಈ ದುರ್ನೀತಿಯನ್ನು ಬಹಿರಂಗವಾಗಿಯೇ ಘೋಷಿಸುವ ದಾಷ್ಟ್ರ್ಯ ತೋರಿದೆ.
ಇದು ಏಕೀಕರಣವಾದ ದಿನದಿಂದಲೂ ನಡೆದೇ ಇದೆ. ಅಲ್ಪಸಂಖ್ಯಾತರ ಜನಸಂಖ್ಯೆಗನುಗುಣವಾಗಿ ಅವರಿಗೆ ಪ್ರಾತಿನಿಧ್ಯ ಕೊಟ್ಟು ಅವರನ್ನ ಗೌರವದಿಂದ ನಡೆಸಿಕೊಳ್ಳಬೇಕೆಂಬ ಪ್ರಾಥಮಿಕ ಪ್ರಜಾತಾಂತ್ರಿಕ ತಿಳಿವಳಿಕೆ ಯಾವ ರಾಜಕೀಯ ಪಕ್ಷಕ್ಕೂ ಇಲ್ಲದಿರುವುದು ಒಂದು ದುರಂತವೇ ಸರಿ.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...