Homeಮುಖಪುಟರಾಜ್ಯಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

ರಾಜ್ಯಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

- Advertisement -
- Advertisement -

ಲೋಕಸಭೆಯಲ್ಲಿ ಅಂಗೀಕಾರ ಪಡೆದ ಬಳಿಕ ವಿವಾದಿತ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಗುರುವಾರ (ಏ.3) ರಾಜ್ಯಸಭೆಯಲ್ಲಿ ಮಂಡಿಸಿದರು.

ಬುಧವಾರ ಲೋಕಸಭೆಯಲ್ಲಿ ಮಸೂದೆ ಮಂಡನೆ ಮಾಡಲಾಗಿತ್ತು. ಸಂಸತ್ತಿನ ಕೆಳಮನೆಯಲ್ಲಿ ಸುದೀರ್ಘ 12 ಗಂಟೆಗೂ ಹೆಚ್ಚು ಸಮಯ, ಅಂದರೆ ತಡರಾತ್ರಿ 2 ಗಂಟೆಯವರೆಗೂ ಮಸೂದೆ ಮೇಲೆ ಚರ್ಚೆ ನಡೆದು, ಬಳಿಕ ಅಂಗೀಕಾರ ಪಡೆಯಲಾಗಿದೆ. ಲೋಕಸಭೆಯಲ್ಲಿ ಮಸೂದೆ ಪರ 288 ಮತಗಳು ಮತ್ತು ವಿರುದ್ಧ 232 ಮತಗಳು ಚಲಾವಣೆಯಾಗಿವೆ.

ರಾಜ್ಯಸಭೆಯಲ್ಲಿ ಮಸೂದೆ ಮಂಡಿಸಿದ ಕಿರಣ್ ರಿಜಿಜು ಅವರು, “ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು ನಾವು ರಾಜ್ಯ ಸರ್ಕಾರಗಳು, ಅಲ್ಪಸಂಖ್ಯಾತ ಆಯೋಗಗಳು ಮತ್ತು ವಕ್ಫ್ ಮಂಡಳಿಗಳೊಂದಿಗೆ ಸಮಾಲೋಚಿಸಿದ್ದೇವೆ. ರಾಜ್ಯಸಭೆ ಮತ್ತು ಲೋಕಸಭೆಯ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಲಾಗಿತ್ತು. ಜೆಪಿಸಿಯ ಸಮಾಲೋಚನೆಗಳ ಬಗ್ಗೆ ಸಂದೇಹಗಳು ಎದ್ದಿದ್ದರೂ, ವ್ಯಾಪಕ ಚರ್ಚೆಗಳ ನಂತರ ಮಸೂದೆಯನ್ನು ನಿನ್ನೆ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ ಎಂದು ಹೇಳಿದರು.

ವಕ್ಫ್‌ ಆಸ್ತಿಗಳ ಸರಿಯಾದ ಬಳಕೆ ಭಾರತವನ್ನು ಅಭಿವೃದ್ದಿಯತ್ತ ಕೊಂಡಯ್ಯಲಿದೆ ಎಂದ ರಿಜಿಜು, ಕಾಂಗ್ರೆಸ್‌ ಸೇರಿದಂತೆ ಇತರ ಪ್ರತಿಪಕ್ಷಗಳಿಗೆ ಮಸೂದೆಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ವಿಶ್ವದಲ್ಲಿಯೇ ಅತಿ ಹೆಚ್ಚು ವಕ್ಫ್‌ ಆಸ್ತಿಗಳು ಭಾರತದಲ್ಲಿದೆ. ಭಾರತೀಯ ಸೇನೆ ಮತ್ತು ರೈಲ್ವೆ ಬಳಿಕ ಅತೀ ಹೆಚ್ಚು ಆಸ್ತಿ ವಕ್ಫ್‌ ಮಂಡಳಿಗಳ ಬಳಿ ಇದೆ. ಇಷ್ಟು ಆಸ್ತಿ ಇದ್ದರೂ ಬಡ ಮುಸ್ಲಿಮರಿಗೆ ಇದರಿಂದ ಏನೂ ಪ್ರಯೋಜನ ಆಗುತ್ತಿಲ್ಲ. ಹಾಗಾಗಿ, ನಾವು ವಕ್ಫ್‌ ಆಸ್ತಿಗಳು ಮುಸ್ಲಿಂ ಸಮುದಾಯಕ್ಕೆ ಉಪಯೋಗವಾಗುವಂತೆ ಮಾಡುತ್ತಿದ್ದೇವೆ ಎಂದರು.

ಸೇನೆ ಮತ್ತು ರೈಲ್ವೆ ಆಸ್ತಿಗಳು ಸರ್ಕಾರಿ ಆಸ್ತಿಯಾಗಿದ್ದು, ಅದು ರಾಷ್ಟ್ರದ ಆಸ್ತಿ. ಆದರೆ, ವಕ್ಫ್‌ ಖಾಸಗಿ ಆಸ್ತಿ, ಇಷ್ಟು ದೊಡ್ಡ ಮಟ್ಟದಲ್ಲಿ ಖಾಸಗಿ ಆಸ್ತಿಗಳು ಇರುವಾಗ ಅದರ ಲೆಕ್ಕಾಚಾರಗಳು ಬೇಕಿದೆ. ಹಾಗಾಗಿ, ಈ ಮಸೂದೆಯನ್ನು ತರುತ್ತಿದ್ದೇವೆ ಎಂದು ಹೇಳಿದರು.

ವಕ್ಫ್‌ ತಿದ್ದುಪಡಿ ಮಸೂದೆಯು ಕೇವಲ ಬಳಕೆಯ ಕಾರಣಕ್ಕೆ ದಾಖಲೆಗಳಿಲ್ಲದೆ ಯಾವುದೇ ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಣೆ ಮಾಡುವುದನ್ನು ತಡೆಯಲಿದೆ. ಆದಿವಾಸಿಗಳ ಆಸ್ತಿಗಳನ್ನು ವಕ್ಫ್‌ ಆಸ್ತಿ ಎನ್ನಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

ವಕ್ಫ್‌ ಕಾಯ್ದೆಯ ಸೆಕ್ಷನ್ 40 ಅನ್ನು ದುರ್ಬಳಕೆ ಮಾಡಲಾಗುತ್ತಿದೆ. ಕೇರಳದಲ್ಲಿ ಕ್ರೈಸ್ತ ಸಮುದಾಯದವರು ವಾಸಿಸುತ್ತಿರುವ ಒಂದು ಇಡೀ ಗ್ರಾಮವನ್ನೇ ವಕ್ಫ್‌ ಆಸ್ತಿ ಎನ್ನಲಾಗಿದೆ. ಇದರು ವಿರುದ್ದ ಕ್ರೈಸ್ತ ಸಮುದಾಯ ನಮಗೆ ದೂರು ನೀಡಿದೆ. ಇಂತಹ ಉದಾಹರಣೆಗಳು ಕರ್ನಾಟಕ, ಹರಿಯಾಣದಲ್ಲಿ ನಡೆದಿವೆ. ಇಂತಹ ದುರ್ಬಳಕೆಯನ್ನು ತಿದ್ದುಪಡಿ ಮಸೂದೆಯ ತಡೆಯಲಿದೆ ಎಂದು ಹೇಳಿದರು.

ಪ್ರಸ್ತುತ, ದೇಶದಲ್ಲಿ 8.72 ಲಕ್ಷ ವಕ್ಫ್ ಆಸ್ತಿಗಳಿವೆ. 2006ರಲ್ಲಿ ಸಾಚಾರ್ ಸಮಿತಿಯು 4.9 ಲಕ್ಷ ವಕ್ಫ್ ಆಸ್ತಿಗಳಿಂದ 12,000 ಕೋಟಿ ರೂ.ಗಳ ಆದಾಯವನ್ನು ಅಂದಾಜಿಸಿದ್ದರೆ, ಈ ಆಸ್ತಿಗಳ ಈಗಿನ ಆದಾಯ ಎಷ್ಟಿರಬಹುದು ಊಹಿಸಿ ಎಂದು ಹೇಳಿದರು.

ಈ ಮಸೂದೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಸದಸ್ಯರು ಯಾವುದೇ ಗೊಂದಲಗಳಿದ್ದರೂ ಚರ್ಚೆ ನಡೆಸಬಹುದು. ನಿಮ್ಮ ಎಲ್ಲಾ ಪ್ರಶ್ನೆಗಳನ್ನು ಆಲಿಸಲು ನಾನು ಸಿದ್ದ ಎಂದು ಸಚಿವ ರಿಜಿಜು ಹೇಳಿದರು.

ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನದ ಮೇಲಿನ ‘ಲಜ್ಜೆಗೆಟ್ಟ ದಾಳಿ’: ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...