Homeಮುಖಪುಟವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಟ್ವೀಟ್‌ಗೆ ವ್ಯಂಗ್ಯ

ವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಟ್ವೀಟ್‌ಗೆ ವ್ಯಂಗ್ಯ

- Advertisement -
- Advertisement -

ಮುಸ್ಲಿಂ ವ್ಯಕ್ತಿಯನ್ನು, ದಲಿತರನ್ನು, ಆದಿವಾಸಿ ಮಹಿಳೆಯನ್ನು ರಾಷ್ಟ್ರಪತಿ ಮಾಡಿದ್ದು ನಾವೇ (ವಾಟ್ಸಾಪ್‌ನಲ್ಲಿ ಬಂದಿದ್ದು) ಎಂಬುದಾಗಿ ಟ್ವೀಟ್ ಮಾಡಿದ್ದ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಸಾಮಾಜಿಕ ಜಾಲತಾಣಗಳಲ್ಲಿ ವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿ ಎಂದು ಕರೆದು ವ್ಯಂಗ್ಯವಾಡಲಾಗಿದೆ.

ಮುಸ್ಲಿಂ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದು ನಾವೇ, ದಲಿತ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದೂ ನಾವೇ, ಇಂದು ಮಹಿಳೆ ಅದೂ ಆದಿವಾಸಿ ಬುಡಕಟ್ಟು ಜನಾಂಗದ ಮಹಿಳೆಯನ್ನು ರಾಷ್ಟ್ರಪತಿ ಮಾಡುವುದು ನಾವೇ… ಏಕೆಂದರೆ ನಾವು ಜಾತಿವಾದಿಗಳಲ್ಲಾ-ರಾಷ್ಟ್ರವಾದಿಗಳು. (ವಾಟ್ಸಪ್‌‌ನಲ್ಲಿ ಬಂದಿದ್ದು) ಎಂದು ಮಂಗಳವಾರ ಸಚಿವರು, ವಿಧಾನಪರಿಷತ್ ಸಭಾನಾಯಕರು ಆದ ಕೋಟಾ ಶ್ರೀನಿವಾಸ ಪೂಜಾರಿಯವರು ಟ್ವೀಟ್ ಮಾಡಿದ್ದರು.

ಆ ಟ್ವೀಟ್‌ಗೆ ನೂರಾರು ಜನರು ಪ್ರತಿಕ್ರಿಯಿಸಿ ನೀವು ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದಿದ್ದಾರೆ. “ಬಿಜೆಪಿಯವರೆಲ್ಲರೂ ವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿಗಳು, ಅದೇ ಅವರ ಜ್ಞಾನದ ಮೂಲ! ಕೋಟಾ ಶ್ರೀನಿವಾಸ್ ಪೂಜಾರಿ ಅವರೇ, ವಾಟ್ಸಾಪ್ ಬಿಟ್ಟು ಪುಸ್ತಕಗಳನ್ನು ಓದಿ ಜ್ಞಾನಾರ್ಜನೆ ಮಾಡಿಕೊಳ್ಳಿ, ನೀವು ಮೊದಲಲ್ಲ, ಇವರೆಲ್ಲ ಮೊದಲೇ ರಾಷ್ಟ್ರಪತಿಗಳಾಗಿದ್ದಾರೆ. ಜಾಕಿರ್ ಹುಸೇನ್(ಮುಸ್ಲಿಂ), ಆರ್.ಕೆ ನಾರಾಯಣ್(ದಲಿತ), ಪ್ರತಿಭಾ ಪಾಟೀಲ್ ಮಹಿಳೆ” ಎಂದು ಶಿವಶೆಟ್ಟಿ ಎಂಬುವವರು ಪ್ರತಿಕ್ರಿಯೆ ನೀಡಿದ್ದಾರೆ.

ಸ್ವತಂತ್ರ ಭಾರತದ ಮೊದಲ ಮುಸ್ಲಿಂ ರಾಷ್ಟ್ರಪತಿ : ಝಾಕಿರ್ ಹುಸೇನ್, ಸ್ವತಂತ್ರ ಭಾರತದ ಮೊದಲ ಸಿಖ್ ಧರ್ಮದ ರಾಷ್ಟ್ರಪತಿ : ಗ್ಯಾನಿ ಜೈಲ್ ಸಿಂಗ್, ಸ್ವತಂತ್ರ ಭಾರತದ ಮೊದಲ ದಲಿತ ರಾಷ್ಟ್ರಪತಿ : ಕೆ ಆರ್ ನಾರಾಯಣನ್, ಹಾಗೆ, ಸ್ವತಂತ್ರ ಭಾರತದ ಮೊದಲ ಮಹಿಳಾ ರಾಷ್ಟ್ರಪತಿ : ಪ್ರತಿಭಾ ಪಾಟೀಲ್ ಎಂದು ಇರ್ಷಾದ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡ, ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ಪ್ರತಿಕ್ರಿಯೆ ನೀಡಿದ್ದು, ವಾಟ್ಸ್‌ಅಪ್‌ನಲ್ಲಿ ಬಂದಿರುವುದನ್ನು ಪೋಸ್ಟ್ ಮಾಡುವ ಮುನ್ನ ಇತಿಹಾಸ ಓದಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. “ವಾಟ್ಸ್‌ಅಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿಗಳಾದ BJPಯವರ ಜ್ಞಾನದ ಮಟ್ಟವಿದು.‌ಕೋಟಾ ಶ್ರೀನಿವಾಸ ಪೂಜಾರಿಯವರೆ, “ಸಚಿವರಾಗಿದ್ದುಕೊಂಡು ವಾಟ್ಸ್‌ಅಪ್‌ನಲ್ಲಿ ಬಂದಿದನ್ನು ಯಥಾವತ್ತಾಗಿ ಪೋಸ್ಟ್‌ ಮಾಡುತ್ತಾರೆಂದರೆ ಅವರ ಬುದ್ದಿಗೆ ಎಷ್ಟು ಮಂಕು ಕವಿದಿರಬಹುದು? ಪೂಜಾರಿಯವರೆ ವಾಟ್ಸ್‌ಅಪ್‌ನಲ್ಲಿ ಬಂದಿರುವುದನ್ನು ಪೋಸ್ಟ್ ಮಾಡುವ ಮುನ್ನ ಇತಿಹಾಸ ಓದಿಕೊಳ್ಳಿ” ಎಂದಿದ್ದಾರೆ.

ರಾಷ್ಟ್ರದ ಮೊದಲ ಮುಸ್ಲಿಂ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ! ರಾಷ್ಟ್ರದ ಮೊದಲ ಸಿಖ್ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ! ರಾಷ್ಟ್ರದ ಮೊದಲ ದಲಿತ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ! ಅಷ್ಟೆ ಏಕೆ, ಮೊದಲ‌ ಮಹಿಳಾ ರಾಷ್ಟ್ರಪತಿಯ ಕೊಡುಗೆಯೂ ಕಾಂಗ್ರೆಸ್‌ನದ್ದೆ! ಆದರೆ ಕಾಂಗ್ರೆಸ್ ಯಾವತ್ತೂ ಇದನ್ನು ಪ್ರಚಾರಕ್ಕೆ ಬಳಸಲಿಲ್ಲ. ಇದೇ ವ್ಯತ್ಯಾಸ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಅಲ್ಲದೆ ಬಹಳಷ್ಟು ಜನ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನಿಡಿದ್ದು, ದಯವಿಟ್ಟು ವಾಟ್ಸಾಪ್ ಯೂನಿವರ್ಸಿಟಿಯಿಂದ ಹೊರಬನ್ನಿ ಎಂದು ಸಲಹೆ ನೀಡಿದ್ದಾರೆ.

ಪುಸ್ತಕಗಳನ್ನು ಓದಿ ಮೊದಲ ಸ್ತರದ ಮಾಹಿತಿಯನ್ನು ಪಡೆಯದೆ ವಾಟ್ಸಾಪ್‌ನಲ್ಲಿ ಬಂದಿದ್ದೆಲ್ಲ ನಿಜ ಎಂದು ನಂಬಿ ವಾದಿಸುವವರನ್ನು ವಾಟ್ಸಾಪ್ ಯೂನಿವರ್ಸಿಟಿಯಿಂದ ಬಂದಿದ್ದೀರಾ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...