Homeಮುಖಪುಟವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಟ್ವೀಟ್‌ಗೆ ವ್ಯಂಗ್ಯ

ವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಟ್ವೀಟ್‌ಗೆ ವ್ಯಂಗ್ಯ

- Advertisement -
- Advertisement -

ಮುಸ್ಲಿಂ ವ್ಯಕ್ತಿಯನ್ನು, ದಲಿತರನ್ನು, ಆದಿವಾಸಿ ಮಹಿಳೆಯನ್ನು ರಾಷ್ಟ್ರಪತಿ ಮಾಡಿದ್ದು ನಾವೇ (ವಾಟ್ಸಾಪ್‌ನಲ್ಲಿ ಬಂದಿದ್ದು) ಎಂಬುದಾಗಿ ಟ್ವೀಟ್ ಮಾಡಿದ್ದ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಸಾಮಾಜಿಕ ಜಾಲತಾಣಗಳಲ್ಲಿ ವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿ ಎಂದು ಕರೆದು ವ್ಯಂಗ್ಯವಾಡಲಾಗಿದೆ.

ಮುಸ್ಲಿಂ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದು ನಾವೇ, ದಲಿತ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದೂ ನಾವೇ, ಇಂದು ಮಹಿಳೆ ಅದೂ ಆದಿವಾಸಿ ಬುಡಕಟ್ಟು ಜನಾಂಗದ ಮಹಿಳೆಯನ್ನು ರಾಷ್ಟ್ರಪತಿ ಮಾಡುವುದು ನಾವೇ… ಏಕೆಂದರೆ ನಾವು ಜಾತಿವಾದಿಗಳಲ್ಲಾ-ರಾಷ್ಟ್ರವಾದಿಗಳು. (ವಾಟ್ಸಪ್‌‌ನಲ್ಲಿ ಬಂದಿದ್ದು) ಎಂದು ಮಂಗಳವಾರ ಸಚಿವರು, ವಿಧಾನಪರಿಷತ್ ಸಭಾನಾಯಕರು ಆದ ಕೋಟಾ ಶ್ರೀನಿವಾಸ ಪೂಜಾರಿಯವರು ಟ್ವೀಟ್ ಮಾಡಿದ್ದರು.

ಆ ಟ್ವೀಟ್‌ಗೆ ನೂರಾರು ಜನರು ಪ್ರತಿಕ್ರಿಯಿಸಿ ನೀವು ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದಿದ್ದಾರೆ. “ಬಿಜೆಪಿಯವರೆಲ್ಲರೂ ವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿಗಳು, ಅದೇ ಅವರ ಜ್ಞಾನದ ಮೂಲ! ಕೋಟಾ ಶ್ರೀನಿವಾಸ್ ಪೂಜಾರಿ ಅವರೇ, ವಾಟ್ಸಾಪ್ ಬಿಟ್ಟು ಪುಸ್ತಕಗಳನ್ನು ಓದಿ ಜ್ಞಾನಾರ್ಜನೆ ಮಾಡಿಕೊಳ್ಳಿ, ನೀವು ಮೊದಲಲ್ಲ, ಇವರೆಲ್ಲ ಮೊದಲೇ ರಾಷ್ಟ್ರಪತಿಗಳಾಗಿದ್ದಾರೆ. ಜಾಕಿರ್ ಹುಸೇನ್(ಮುಸ್ಲಿಂ), ಆರ್.ಕೆ ನಾರಾಯಣ್(ದಲಿತ), ಪ್ರತಿಭಾ ಪಾಟೀಲ್ ಮಹಿಳೆ” ಎಂದು ಶಿವಶೆಟ್ಟಿ ಎಂಬುವವರು ಪ್ರತಿಕ್ರಿಯೆ ನೀಡಿದ್ದಾರೆ.

ಸ್ವತಂತ್ರ ಭಾರತದ ಮೊದಲ ಮುಸ್ಲಿಂ ರಾಷ್ಟ್ರಪತಿ : ಝಾಕಿರ್ ಹುಸೇನ್, ಸ್ವತಂತ್ರ ಭಾರತದ ಮೊದಲ ಸಿಖ್ ಧರ್ಮದ ರಾಷ್ಟ್ರಪತಿ : ಗ್ಯಾನಿ ಜೈಲ್ ಸಿಂಗ್, ಸ್ವತಂತ್ರ ಭಾರತದ ಮೊದಲ ದಲಿತ ರಾಷ್ಟ್ರಪತಿ : ಕೆ ಆರ್ ನಾರಾಯಣನ್, ಹಾಗೆ, ಸ್ವತಂತ್ರ ಭಾರತದ ಮೊದಲ ಮಹಿಳಾ ರಾಷ್ಟ್ರಪತಿ : ಪ್ರತಿಭಾ ಪಾಟೀಲ್ ಎಂದು ಇರ್ಷಾದ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡ, ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ಪ್ರತಿಕ್ರಿಯೆ ನೀಡಿದ್ದು, ವಾಟ್ಸ್‌ಅಪ್‌ನಲ್ಲಿ ಬಂದಿರುವುದನ್ನು ಪೋಸ್ಟ್ ಮಾಡುವ ಮುನ್ನ ಇತಿಹಾಸ ಓದಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. “ವಾಟ್ಸ್‌ಅಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿಗಳಾದ BJPಯವರ ಜ್ಞಾನದ ಮಟ್ಟವಿದು.‌ಕೋಟಾ ಶ್ರೀನಿವಾಸ ಪೂಜಾರಿಯವರೆ, “ಸಚಿವರಾಗಿದ್ದುಕೊಂಡು ವಾಟ್ಸ್‌ಅಪ್‌ನಲ್ಲಿ ಬಂದಿದನ್ನು ಯಥಾವತ್ತಾಗಿ ಪೋಸ್ಟ್‌ ಮಾಡುತ್ತಾರೆಂದರೆ ಅವರ ಬುದ್ದಿಗೆ ಎಷ್ಟು ಮಂಕು ಕವಿದಿರಬಹುದು? ಪೂಜಾರಿಯವರೆ ವಾಟ್ಸ್‌ಅಪ್‌ನಲ್ಲಿ ಬಂದಿರುವುದನ್ನು ಪೋಸ್ಟ್ ಮಾಡುವ ಮುನ್ನ ಇತಿಹಾಸ ಓದಿಕೊಳ್ಳಿ” ಎಂದಿದ್ದಾರೆ.

ರಾಷ್ಟ್ರದ ಮೊದಲ ಮುಸ್ಲಿಂ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ! ರಾಷ್ಟ್ರದ ಮೊದಲ ಸಿಖ್ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ! ರಾಷ್ಟ್ರದ ಮೊದಲ ದಲಿತ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ! ಅಷ್ಟೆ ಏಕೆ, ಮೊದಲ‌ ಮಹಿಳಾ ರಾಷ್ಟ್ರಪತಿಯ ಕೊಡುಗೆಯೂ ಕಾಂಗ್ರೆಸ್‌ನದ್ದೆ! ಆದರೆ ಕಾಂಗ್ರೆಸ್ ಯಾವತ್ತೂ ಇದನ್ನು ಪ್ರಚಾರಕ್ಕೆ ಬಳಸಲಿಲ್ಲ. ಇದೇ ವ್ಯತ್ಯಾಸ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಅಲ್ಲದೆ ಬಹಳಷ್ಟು ಜನ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನಿಡಿದ್ದು, ದಯವಿಟ್ಟು ವಾಟ್ಸಾಪ್ ಯೂನಿವರ್ಸಿಟಿಯಿಂದ ಹೊರಬನ್ನಿ ಎಂದು ಸಲಹೆ ನೀಡಿದ್ದಾರೆ.

ಪುಸ್ತಕಗಳನ್ನು ಓದಿ ಮೊದಲ ಸ್ತರದ ಮಾಹಿತಿಯನ್ನು ಪಡೆಯದೆ ವಾಟ್ಸಾಪ್‌ನಲ್ಲಿ ಬಂದಿದ್ದೆಲ್ಲ ನಿಜ ಎಂದು ನಂಬಿ ವಾದಿಸುವವರನ್ನು ವಾಟ್ಸಾಪ್ ಯೂನಿವರ್ಸಿಟಿಯಿಂದ ಬಂದಿದ್ದೀರಾ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...