Homeಮುಖಪುಟವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಟ್ವೀಟ್‌ಗೆ ವ್ಯಂಗ್ಯ

ವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಟ್ವೀಟ್‌ಗೆ ವ್ಯಂಗ್ಯ

- Advertisement -
- Advertisement -

ಮುಸ್ಲಿಂ ವ್ಯಕ್ತಿಯನ್ನು, ದಲಿತರನ್ನು, ಆದಿವಾಸಿ ಮಹಿಳೆಯನ್ನು ರಾಷ್ಟ್ರಪತಿ ಮಾಡಿದ್ದು ನಾವೇ (ವಾಟ್ಸಾಪ್‌ನಲ್ಲಿ ಬಂದಿದ್ದು) ಎಂಬುದಾಗಿ ಟ್ವೀಟ್ ಮಾಡಿದ್ದ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಸಾಮಾಜಿಕ ಜಾಲತಾಣಗಳಲ್ಲಿ ವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿ ಎಂದು ಕರೆದು ವ್ಯಂಗ್ಯವಾಡಲಾಗಿದೆ.

ಮುಸ್ಲಿಂ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದು ನಾವೇ, ದಲಿತ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದೂ ನಾವೇ, ಇಂದು ಮಹಿಳೆ ಅದೂ ಆದಿವಾಸಿ ಬುಡಕಟ್ಟು ಜನಾಂಗದ ಮಹಿಳೆಯನ್ನು ರಾಷ್ಟ್ರಪತಿ ಮಾಡುವುದು ನಾವೇ… ಏಕೆಂದರೆ ನಾವು ಜಾತಿವಾದಿಗಳಲ್ಲಾ-ರಾಷ್ಟ್ರವಾದಿಗಳು. (ವಾಟ್ಸಪ್‌‌ನಲ್ಲಿ ಬಂದಿದ್ದು) ಎಂದು ಮಂಗಳವಾರ ಸಚಿವರು, ವಿಧಾನಪರಿಷತ್ ಸಭಾನಾಯಕರು ಆದ ಕೋಟಾ ಶ್ರೀನಿವಾಸ ಪೂಜಾರಿಯವರು ಟ್ವೀಟ್ ಮಾಡಿದ್ದರು.

ಆ ಟ್ವೀಟ್‌ಗೆ ನೂರಾರು ಜನರು ಪ್ರತಿಕ್ರಿಯಿಸಿ ನೀವು ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದಿದ್ದಾರೆ. “ಬಿಜೆಪಿಯವರೆಲ್ಲರೂ ವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿಗಳು, ಅದೇ ಅವರ ಜ್ಞಾನದ ಮೂಲ! ಕೋಟಾ ಶ್ರೀನಿವಾಸ್ ಪೂಜಾರಿ ಅವರೇ, ವಾಟ್ಸಾಪ್ ಬಿಟ್ಟು ಪುಸ್ತಕಗಳನ್ನು ಓದಿ ಜ್ಞಾನಾರ್ಜನೆ ಮಾಡಿಕೊಳ್ಳಿ, ನೀವು ಮೊದಲಲ್ಲ, ಇವರೆಲ್ಲ ಮೊದಲೇ ರಾಷ್ಟ್ರಪತಿಗಳಾಗಿದ್ದಾರೆ. ಜಾಕಿರ್ ಹುಸೇನ್(ಮುಸ್ಲಿಂ), ಆರ್.ಕೆ ನಾರಾಯಣ್(ದಲಿತ), ಪ್ರತಿಭಾ ಪಾಟೀಲ್ ಮಹಿಳೆ” ಎಂದು ಶಿವಶೆಟ್ಟಿ ಎಂಬುವವರು ಪ್ರತಿಕ್ರಿಯೆ ನೀಡಿದ್ದಾರೆ.

ಸ್ವತಂತ್ರ ಭಾರತದ ಮೊದಲ ಮುಸ್ಲಿಂ ರಾಷ್ಟ್ರಪತಿ : ಝಾಕಿರ್ ಹುಸೇನ್, ಸ್ವತಂತ್ರ ಭಾರತದ ಮೊದಲ ಸಿಖ್ ಧರ್ಮದ ರಾಷ್ಟ್ರಪತಿ : ಗ್ಯಾನಿ ಜೈಲ್ ಸಿಂಗ್, ಸ್ವತಂತ್ರ ಭಾರತದ ಮೊದಲ ದಲಿತ ರಾಷ್ಟ್ರಪತಿ : ಕೆ ಆರ್ ನಾರಾಯಣನ್, ಹಾಗೆ, ಸ್ವತಂತ್ರ ಭಾರತದ ಮೊದಲ ಮಹಿಳಾ ರಾಷ್ಟ್ರಪತಿ : ಪ್ರತಿಭಾ ಪಾಟೀಲ್ ಎಂದು ಇರ್ಷಾದ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡ, ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ಪ್ರತಿಕ್ರಿಯೆ ನೀಡಿದ್ದು, ವಾಟ್ಸ್‌ಅಪ್‌ನಲ್ಲಿ ಬಂದಿರುವುದನ್ನು ಪೋಸ್ಟ್ ಮಾಡುವ ಮುನ್ನ ಇತಿಹಾಸ ಓದಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. “ವಾಟ್ಸ್‌ಅಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿಗಳಾದ BJPಯವರ ಜ್ಞಾನದ ಮಟ್ಟವಿದು.‌ಕೋಟಾ ಶ್ರೀನಿವಾಸ ಪೂಜಾರಿಯವರೆ, “ಸಚಿವರಾಗಿದ್ದುಕೊಂಡು ವಾಟ್ಸ್‌ಅಪ್‌ನಲ್ಲಿ ಬಂದಿದನ್ನು ಯಥಾವತ್ತಾಗಿ ಪೋಸ್ಟ್‌ ಮಾಡುತ್ತಾರೆಂದರೆ ಅವರ ಬುದ್ದಿಗೆ ಎಷ್ಟು ಮಂಕು ಕವಿದಿರಬಹುದು? ಪೂಜಾರಿಯವರೆ ವಾಟ್ಸ್‌ಅಪ್‌ನಲ್ಲಿ ಬಂದಿರುವುದನ್ನು ಪೋಸ್ಟ್ ಮಾಡುವ ಮುನ್ನ ಇತಿಹಾಸ ಓದಿಕೊಳ್ಳಿ” ಎಂದಿದ್ದಾರೆ.

ರಾಷ್ಟ್ರದ ಮೊದಲ ಮುಸ್ಲಿಂ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ! ರಾಷ್ಟ್ರದ ಮೊದಲ ಸಿಖ್ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ! ರಾಷ್ಟ್ರದ ಮೊದಲ ದಲಿತ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ! ಅಷ್ಟೆ ಏಕೆ, ಮೊದಲ‌ ಮಹಿಳಾ ರಾಷ್ಟ್ರಪತಿಯ ಕೊಡುಗೆಯೂ ಕಾಂಗ್ರೆಸ್‌ನದ್ದೆ! ಆದರೆ ಕಾಂಗ್ರೆಸ್ ಯಾವತ್ತೂ ಇದನ್ನು ಪ್ರಚಾರಕ್ಕೆ ಬಳಸಲಿಲ್ಲ. ಇದೇ ವ್ಯತ್ಯಾಸ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಅಲ್ಲದೆ ಬಹಳಷ್ಟು ಜನ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನಿಡಿದ್ದು, ದಯವಿಟ್ಟು ವಾಟ್ಸಾಪ್ ಯೂನಿವರ್ಸಿಟಿಯಿಂದ ಹೊರಬನ್ನಿ ಎಂದು ಸಲಹೆ ನೀಡಿದ್ದಾರೆ.

ಪುಸ್ತಕಗಳನ್ನು ಓದಿ ಮೊದಲ ಸ್ತರದ ಮಾಹಿತಿಯನ್ನು ಪಡೆಯದೆ ವಾಟ್ಸಾಪ್‌ನಲ್ಲಿ ಬಂದಿದ್ದೆಲ್ಲ ನಿಜ ಎಂದು ನಂಬಿ ವಾದಿಸುವವರನ್ನು ವಾಟ್ಸಾಪ್ ಯೂನಿವರ್ಸಿಟಿಯಿಂದ ಬಂದಿದ್ದೀರಾ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...