Homeಕರ್ನಾಟಕಸಚಿವೆ ಲಕ್ಷ್ಮಿ ವಿರುದ್ಧ ಅಶ್ಲೀಲ ನಿಂದನೆ ಪ್ರಕರಣ - ಬಿಜೆಪಿಯ ಸಿ.ಟಿ. ರವಿಗೆ ಮಧ್ಯಂತರ ಜಾಮೀನು

ಸಚಿವೆ ಲಕ್ಷ್ಮಿ ವಿರುದ್ಧ ಅಶ್ಲೀಲ ನಿಂದನೆ ಪ್ರಕರಣ – ಬಿಜೆಪಿಯ ಸಿ.ಟಿ. ರವಿಗೆ ಮಧ್ಯಂತರ ಜಾಮೀನು

- Advertisement -
- Advertisement -

ಬೆಳಗಾವಿಯ ಸುವರ್ಣ ಸೌಧದ ಸದನದಲ್ಲೆ ಸಚಿವರಾದ ಲಕ್ಷ್ಮಿ ಹೆಬ್ಬಾಲ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ ಬಿಜೆಪಿ ಎಮ್‌ಎಲ್‌ಸಿ ಸಿ.ಟಿ. ರವಿ ಅವರನ್ನು ಬಿಡುಗಡೆ ಮಾಡುವಂತೆ ಶುಕ್ರವಾರ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಬಂಧನದ ಪ್ರಕ್ರಿಯೆ ಪಾಲಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಎಂದು ಹೇಳಿರುವ ಕೋರ್ಟ್, ಪ್ರಕರಣದ ವಿಚಾರಣೆಯಲ್ಲಿ ಮುಂದೂಡಿದೆ. ಸಚಿವೆ ಲಕ್ಷ್ಮಿ

ಷರತ್ತು ಬದ್ಧ ಬಿಡುಗಡೆಗೆ ಹೈಕೋರ್ಟ್ ಅದೇಶ ನೀಡಿದ್ದು, ಪ್ರಕರಣದಲ್ಲಿ  ಸಹರಿಸುವಂತೆ ಹೇಳಿದೆ. ಅವರ ಬಂಧನಕ್ಕೂ ಮೊದಲು ನೋಟಿಸ್ ನೀಡಬಹುದಿತ್ತು ಎಂದು ಹೇಳಿರುವ ಕೋರ್ಟ್, ಅವರು ಈಗ ಎಲ್ಲಿದ್ದಾರೊ ಅಲ್ಲಿಂದಲೆ ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದರು. ಈ ಬಗ್ಗೆ ಸದನದ ಒಳಗೆ ಮತ್ತು ಹೊರಗೆ ವ್ಯಾಪಾಕ ಆಕ್ರೋಶ ವ್ಯಕ್ತವಾಗಿದ್ದು, ಸಚಿವರ ಅಭಿಮಾನಿಗಳು ಸುವರ್ಣಸೌಧದ ಮೊಗಸಾಲೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದರು. ಸಚಿವೆ ಲಕ್ಷ್ಮಿ

ಬಿಜೆಪಿಯ ಸಿ.ಟಿ. ರವಿ ಅವರ ಮಾತು ಕೇಳಿ ಲಕ್ಷ್ಮಿ ಹೆಬ್ಬಾಳ್ಕರ್ ಕೆಂಡಾಮಂಡಲವಾಗಿದ್ದು, ಇದರಿಂದ ತಮಗಾದ ಅವಮಾನ ತಡೆದುಕೊಳ್ಳಲಾಗದೇ ಕಣ್ಣಿರು ಹಾಕುತ್ತಾ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ ಎಂದು ವರದಿಯಾಗಿತ್ತು. ಹೆಬ್ಬಾಳ್ಕರ್ ಮಾತಿಗೆ ಕಾಂಗ್ರೆಸ್ ಸದಸ್ಯರು ಧ್ವನಿ ಗೂಡಿಸಿದ್ದು, ಹತ್ತು ಬಾರಿ ಅಸಂವಿಧಾನಿಕ ಪದ ಬಳಸಿದ್ದಾರೆ ಎಂದು ಹೆಬ್ಬಾಳ್ಕರ್ ಆರೋಪ ಮಾಡಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರೆಲ್ಲರೂ ಸದನದಲ್ಲಿ ಕಿಡಿ ಕಾರಿದ್ದಾರೆ. ಸಹ ಸದಸ್ಯರನ್ನು ಕರೆತಂದು ಲಕ್ಷ್ಮಿ ಹೆಬ್ಬಾಳ್ಕರ್ ಸಭಾಪತಿ ಹೊರಟ್ಟಿ ಅವರಿಗೆ ದೂರು ನೀಡಿದ್ದಾರೆ.

ಸದನದಲ್ಲಿ ಕೋಲಾಹಲ ಉಂಟಾದಾಗ ಕಲಾಪವನ್ನು ಸಭಾಪತಿ ಬಸವರಾಜ ಹೊರಟ್ಟಿ ಮುಂದೂಡಿದ್ದರು. ಕಲಾಪ ಮುಂದೂಡಿಕೆಯಾದರೂ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಸದನದ ಒಳಗೆ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದರು. ಈ ಗದ್ದಲದ ಮಧ್ಯೆ ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಸಭಾಪತಿಗೆ ದೂರು ನೀಡಿದ ಬಳಿಕ ಸಭಾಪತಿ, ಆಡಿಯೊ ವಿಡಿಯೊ ಪರಿಶೀಲನೆಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಸದನದಲ್ಲೆ ಅಶ್ಲೀಲವಾಗಿ ನಿಂದಿಸಿದ ಸಿಟಿ ರವಿಗೆ ಮಂತ್ರಿ ಲಕ್ಷ್ಮಿ ಹೆಬ್ಬಾಲ್ಕರ್ ಅವರ ಬೆಂಬಲಿಗರಿಂದ ಹಲ್ಲೆ ಆರೋಪ

ಸದನದಲ್ಲೆ ಅಶ್ಲೀಲವಾಗಿ ನಿಂದಿಸಿದ ಸಿಟಿ ರವಿಗೆ ಮಂತ್ರಿ ಲಕ್ಷ್ಮಿ ಹೆಬ್ಬಾಲ್ಕರ್ ಅವರ ಬೆಂಬಲಿಗರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...