Homeಮುಖಪುಟಕ್ಷಮೆ ಕೇಳುತ್ತಲೇ ರೈತ ಮಹಿಳೆಯ ಮೇಲೆ ಆರೋಪಗಳ ಸುರಿಮಳೆಗೈದ ಮಾಧುಸ್ವಾಮಿ!

ಕ್ಷಮೆ ಕೇಳುತ್ತಲೇ ರೈತ ಮಹಿಳೆಯ ಮೇಲೆ ಆರೋಪಗಳ ಸುರಿಮಳೆಗೈದ ಮಾಧುಸ್ವಾಮಿ!

ಈ ನಡುಗೆ ಕಾಂಗ್ರೆಸ್‌ ಪಕ್ಷವು ಮಾಧುಸ್ವಾಮಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸ್‌ ಮಹಾನಿರ್ದೇಶಕರಾದ ಪ್ರವೀಣ್‌ ಸೂದ್‌ ಬಳಿ ದೂರು ಸಲ್ಲಿಸಿದ್ದಾರೆ.

- Advertisement -
- Advertisement -

ರೈತ ಹೋರಾಟಗಾರ್ತಿಯೊಂದಿಗೆ ಅನುಚಿತವಾಗಿ ವರ್ತಿಸಿ ತೀವ್ರ ಟೀಕೆಗೆ ಗುರಿಯಾಗಿದ್ದ ಸಣ್ಣ ನೀರಾವರಿ ಮತ್ತು ಕಾನೂನು ಸಚಿವ ಮಾಧುಸ್ವಾಮಿಯವರು ಇಂದು ಕ್ಷಮೆ ಕೇಳುತ್ತಲೇ ಆ ಹೋರಾಟಗಾರ್ತಿಯ ಮೇಲೆ ಮತ್ತಷ್ಟು ಆರೋಪಗಳ ಸುರಿಮಳೆಗೈಯ್ಯುವ ಮೂಲಕ ಮತ್ತೆ ವಿವಾದಕ್ಕೊಳಗಾಗಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, “ನಾನು ರಾಜೀನಾಮೆ ಕೊಡುವ ಪ್ರಶ್ನೆ ಉದ್ಬವಿಸಲ್ಲ, ನನ್ನನ್ನು ಮಂತ್ರಿ ಮಾಡಿರುವುದು ಸಿದ್ದರಾಮಯ್ಯನಲ್ಲ, ನಮ್ಮ ನಾಯಕರು ಹೇಳಿದರೆ ಮಾತ್ರ ರಾಜೀನಾಮೆ ನೀಡತ್ತೇನೆ, ಆದರೆ ರಾಜೀನಾಮೆ ಕೊಡುವ ತಪ್ಪು ನಾನು ಮಾಡಿಲ್ಲ” ಎಂದು ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ.

ನಾನು ಅಂದಿದ್ದು ನಿಜ. ಆಯಮ್ಮ ನನ್ನನ್ನ ಟೆಂಪ್ಟ್ ಮಾಡಿದ್ದಾರೆ, ಒಬ್ಬ ಮಂತ್ರಿ ಅವರ ಊರಿಗೆ ಹೋಗಿ ಸುಮ್ಮನೆ ಬೈಸಿಕೊಂಡು ಬರುವುದಕ್ಕಾಗುತ್ತದೆಯೇ? ನಾನು ಒಬ್ಬ ಮನುಷ್ಯ, ಸ್ವಾಭಿಮಾನಿ ಇದೆ. ಎಲ್ಲರಿಗೂ ಶರಣಾಗಲು ಸಾಧ್ಯವಿಲ್ಲ.

ನನಗೆ ಮುಖ ಪರಚುವಂತೆ ಮಾತನಾಡಿದರೆ ನಾನು ಸುಮ್ಮನಿರಲು ಸಾಧ್ಯವಿಲ್ಲ. ರಿಕ್ವೆಸ್ಟ್‌ ಮಾಡಿಕೊಳ್ಳಬೇಕು ಹೊರತು ನನಗೆ ಆದೇಶ ಕೊಡಬಾರದು. ನನಗೆ ಮುಖಪರಚಲು ಬಂದಾಗ ಅವರನ್ನು ಹಿಡಿದುಕೊಳ್ಳದೇ ಏನು ಮಾಡಬೇಕು ಮಾಧುಸ್ವಾಮಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಘಟನೆಯಿಂದ ಬಹಳ ಬೇಸರವಾಗಿದೆ. ನಾನು ಮಾತನಾಡಿದ್ದು ತಪ್ಪು.. ಆಯಮ್ಮನಿಗೆ ಅದೇನಾಗಿತ್ತೊ ಗೊತ್ತಿಲ್ಲ. ಆಯಮ್ಮ ಬಹುಶಃ ಅದೇ ರೀತಿ ಬೆಳೆದುಕೊಂಡಬಂದಿರಬಹುದು. ಆದರೆ ನಾನು ಅದನ್ನು ಸಹಿಸಿಕೊಳ್ಳುವುದಿಲ್ಲ.

ಇದರಿಂದಾಗಿ ಯಾರಾದರೂ ಹೆಣ್ಣು ಮಕ್ಕಳ ಭಾವನೆಗೆ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಆ ಪದ ಕೆಟ್ಟದಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ನಂದು ತಪ್ಪು ಎಂದು ಒಪ್ಪಿಕೊಳ್ಳುತ್ತೇನೆ. ಹಾಗಾಂತ ಇನ್ನು ಮುಂದೆ ಎಲ್ಲಾ ಮಂತ್ರಿಗಳಿಗೆ, ಅಧಿಕಾರಿಗಳಿಗೆ ಏನು ಬೇಕಾದರೂ ಮಾತಾಡಬಹುದು ಎಂದು ಭಾವಿಸಿಕೊಂಡರೆ ಆಡಳಿತ ಮಾಡುವುದು ಕಷ್ಟ ಎಂದಿದ್ದಾರೆ.

ಈಯಮ್ಮನ ನೇಚರ್‌ ಅಂತದ್ದು ಎಂದು ಸ್ಥಳೀಯವಾಗಿ ಹೇಳಿದ್ದಾರೆ. ಯಾರು ಹೋದರು ಈಯಮ್ಮ ಹೀಗೆ ಮಾಡುತ್ತೆ ಅಂತ ಹೇಳಿದ್ದಾರೆ. ಆಕೆಯ ನಡೆವಳಿಕೆ ತೀರಾ ಕೆಟ್ಟದಾಗಿತ್ತು. ಸಿಟ್ಟು ಬಂದಾಗ ಒಬ್ಬ ಮನುಷ್ಯ ಏನು ಮಾತಾಡುತ್ತಾನೆ ಅದನ್ನೆ ನಾನು ಮಾತನಾಡಿದ್ದೇನೆ. ಮುಚ್ಚು ಬಾಯಿ ರಾಸ್ಕಲ್ ಎನ್ನುವುದರಲ್ಲಿ ತಪ್ಪೇನಿದೆ ಎಂದು ಸಚಿವರು ಪ್ರಶ್ನಿಸಿದ್ದಾರೆ.

ನಾನು ಹೇಳಿರುವುದು ತಪ್ಪು ಎಂದರೆ ನೀನು ಹೇಳಿದ್ದು ಸರಿನಾ ನೋಡಿಕೊಳ್ಳಮ್ಮ. ನಿನ್ನ ತಂದೆಗಾದ ವಯಸ್ಸು ನನಗಾಗಿದೆ. ಹೆಣ್ಣು ಮಕ್ಕಳು ನೋಡಿಕೊಂಡು ಮಾತಾಡಬೇಕು. ನಾನು ಒಂದು ಹೆಣ್ಣು ಮಗಳಿಗೆ ಹೇಳಿದ್ದನ್ನು ಇಡಿ ಮಹಿಳೆಯರಿಗೆ ಅನ್ವಯಿಸುವುದು, ಯಾರಿಗಾದರೂ ಬೈದರೆ ಇಡೀ ಜಾತಿಗೆ ಅನ್ವಯಿಸುವುದು, ಯಾರೋ ಅಧಿಕಾರಿಗೆ ಬೈದರೆ ಇಡೀ ಸಮುದಾಯಕ್ಕೆ ಅನ್ವಯಿಸಿದರೆ ಆಡಳಿತ ನಡೆಸುವುದು ಕಷ್ಟ ಎಂದು ಸಚಿವರು ಹೇಳಿದ್ದಾರೆ.

ಒಟ್ಟಿನಲ್ಲಿ ಶಾಸಕರ ಮಾತಿನಲ್ಲಿ ಆ ಹುಡುಗಿಯ ಮೇಲೆ ಆರೋಪಗಳ ಸುರಿಮಳೆ ಇತ್ತೆ ಹೊರತು ಕ್ಷಮೆ ಕೇಳುವ ಉದ್ದೇಶವಿದ್ದಂತೆ ಕಾಣುತ್ತಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಆ ಮಹಿಳೆಯು ನಿನ್ನೆ ಸಾವಧಾನವಾಗಿಯೇ ನಡೆದುಕೊಂಡಿರುವುದು, ಅವರದೇ ಊರಿನ ಸಮಸ್ಯೆಯ ಬಗ್ಗೆ ಮಾತನಾಡಿರುವುದು ವಿಡಿಯೋದಲ್ಲಿ ಕಂಡುಬಂದಿದ್ದರೂ ಸಚಿವರು ಮಾತ್ರ ನನ್ನ ಮುಖ ಪರಚಲು ಬಂದರು, ಎತ್ತರಿಸಿದ ದನಿಯಲ್ಲಿ ಮಾತನಾಡಿದರು ಎಂದು ಆರೋಪಿಸಿದ್ದಾರೆ.

ಈ ನಡುಗೆ ಕಾಂಗ್ರೆಸ್‌ ಪಕ್ಷವು ಮಾಧುಸ್ವಾಮಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸ್‌ ಮಹಾನಿರ್ದೇಶಕರಾದ ಪ್ರವೀಣ್‌ ಸೂದ್‌ ಬಳಿ ದೂರು ಸಲ್ಲಿಸಿದ್ದಾರೆ.

ಅಲ್ಲಿಗೆ ಒಂದು ಕ್ಷಮೆಯಿಂದ ಮುಗಿದುಹೋಗಬಹುದಾಗಿದ್ದ ಪ್ರಕರಣವನ್ನು ಮಾಧುಸ್ವಾಮಿಯವರು ಮತ್ತೆ ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...