Homeಮುಖಪುಟಕ್ಷಮೆ ಕೇಳುತ್ತಲೇ ರೈತ ಮಹಿಳೆಯ ಮೇಲೆ ಆರೋಪಗಳ ಸುರಿಮಳೆಗೈದ ಮಾಧುಸ್ವಾಮಿ!

ಕ್ಷಮೆ ಕೇಳುತ್ತಲೇ ರೈತ ಮಹಿಳೆಯ ಮೇಲೆ ಆರೋಪಗಳ ಸುರಿಮಳೆಗೈದ ಮಾಧುಸ್ವಾಮಿ!

ಈ ನಡುಗೆ ಕಾಂಗ್ರೆಸ್‌ ಪಕ್ಷವು ಮಾಧುಸ್ವಾಮಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸ್‌ ಮಹಾನಿರ್ದೇಶಕರಾದ ಪ್ರವೀಣ್‌ ಸೂದ್‌ ಬಳಿ ದೂರು ಸಲ್ಲಿಸಿದ್ದಾರೆ.

- Advertisement -
- Advertisement -

ರೈತ ಹೋರಾಟಗಾರ್ತಿಯೊಂದಿಗೆ ಅನುಚಿತವಾಗಿ ವರ್ತಿಸಿ ತೀವ್ರ ಟೀಕೆಗೆ ಗುರಿಯಾಗಿದ್ದ ಸಣ್ಣ ನೀರಾವರಿ ಮತ್ತು ಕಾನೂನು ಸಚಿವ ಮಾಧುಸ್ವಾಮಿಯವರು ಇಂದು ಕ್ಷಮೆ ಕೇಳುತ್ತಲೇ ಆ ಹೋರಾಟಗಾರ್ತಿಯ ಮೇಲೆ ಮತ್ತಷ್ಟು ಆರೋಪಗಳ ಸುರಿಮಳೆಗೈಯ್ಯುವ ಮೂಲಕ ಮತ್ತೆ ವಿವಾದಕ್ಕೊಳಗಾಗಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, “ನಾನು ರಾಜೀನಾಮೆ ಕೊಡುವ ಪ್ರಶ್ನೆ ಉದ್ಬವಿಸಲ್ಲ, ನನ್ನನ್ನು ಮಂತ್ರಿ ಮಾಡಿರುವುದು ಸಿದ್ದರಾಮಯ್ಯನಲ್ಲ, ನಮ್ಮ ನಾಯಕರು ಹೇಳಿದರೆ ಮಾತ್ರ ರಾಜೀನಾಮೆ ನೀಡತ್ತೇನೆ, ಆದರೆ ರಾಜೀನಾಮೆ ಕೊಡುವ ತಪ್ಪು ನಾನು ಮಾಡಿಲ್ಲ” ಎಂದು ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ.

ನಾನು ಅಂದಿದ್ದು ನಿಜ. ಆಯಮ್ಮ ನನ್ನನ್ನ ಟೆಂಪ್ಟ್ ಮಾಡಿದ್ದಾರೆ, ಒಬ್ಬ ಮಂತ್ರಿ ಅವರ ಊರಿಗೆ ಹೋಗಿ ಸುಮ್ಮನೆ ಬೈಸಿಕೊಂಡು ಬರುವುದಕ್ಕಾಗುತ್ತದೆಯೇ? ನಾನು ಒಬ್ಬ ಮನುಷ್ಯ, ಸ್ವಾಭಿಮಾನಿ ಇದೆ. ಎಲ್ಲರಿಗೂ ಶರಣಾಗಲು ಸಾಧ್ಯವಿಲ್ಲ.

ನನಗೆ ಮುಖ ಪರಚುವಂತೆ ಮಾತನಾಡಿದರೆ ನಾನು ಸುಮ್ಮನಿರಲು ಸಾಧ್ಯವಿಲ್ಲ. ರಿಕ್ವೆಸ್ಟ್‌ ಮಾಡಿಕೊಳ್ಳಬೇಕು ಹೊರತು ನನಗೆ ಆದೇಶ ಕೊಡಬಾರದು. ನನಗೆ ಮುಖಪರಚಲು ಬಂದಾಗ ಅವರನ್ನು ಹಿಡಿದುಕೊಳ್ಳದೇ ಏನು ಮಾಡಬೇಕು ಮಾಧುಸ್ವಾಮಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಘಟನೆಯಿಂದ ಬಹಳ ಬೇಸರವಾಗಿದೆ. ನಾನು ಮಾತನಾಡಿದ್ದು ತಪ್ಪು.. ಆಯಮ್ಮನಿಗೆ ಅದೇನಾಗಿತ್ತೊ ಗೊತ್ತಿಲ್ಲ. ಆಯಮ್ಮ ಬಹುಶಃ ಅದೇ ರೀತಿ ಬೆಳೆದುಕೊಂಡಬಂದಿರಬಹುದು. ಆದರೆ ನಾನು ಅದನ್ನು ಸಹಿಸಿಕೊಳ್ಳುವುದಿಲ್ಲ.

ಇದರಿಂದಾಗಿ ಯಾರಾದರೂ ಹೆಣ್ಣು ಮಕ್ಕಳ ಭಾವನೆಗೆ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಆ ಪದ ಕೆಟ್ಟದಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ನಂದು ತಪ್ಪು ಎಂದು ಒಪ್ಪಿಕೊಳ್ಳುತ್ತೇನೆ. ಹಾಗಾಂತ ಇನ್ನು ಮುಂದೆ ಎಲ್ಲಾ ಮಂತ್ರಿಗಳಿಗೆ, ಅಧಿಕಾರಿಗಳಿಗೆ ಏನು ಬೇಕಾದರೂ ಮಾತಾಡಬಹುದು ಎಂದು ಭಾವಿಸಿಕೊಂಡರೆ ಆಡಳಿತ ಮಾಡುವುದು ಕಷ್ಟ ಎಂದಿದ್ದಾರೆ.

ಈಯಮ್ಮನ ನೇಚರ್‌ ಅಂತದ್ದು ಎಂದು ಸ್ಥಳೀಯವಾಗಿ ಹೇಳಿದ್ದಾರೆ. ಯಾರು ಹೋದರು ಈಯಮ್ಮ ಹೀಗೆ ಮಾಡುತ್ತೆ ಅಂತ ಹೇಳಿದ್ದಾರೆ. ಆಕೆಯ ನಡೆವಳಿಕೆ ತೀರಾ ಕೆಟ್ಟದಾಗಿತ್ತು. ಸಿಟ್ಟು ಬಂದಾಗ ಒಬ್ಬ ಮನುಷ್ಯ ಏನು ಮಾತಾಡುತ್ತಾನೆ ಅದನ್ನೆ ನಾನು ಮಾತನಾಡಿದ್ದೇನೆ. ಮುಚ್ಚು ಬಾಯಿ ರಾಸ್ಕಲ್ ಎನ್ನುವುದರಲ್ಲಿ ತಪ್ಪೇನಿದೆ ಎಂದು ಸಚಿವರು ಪ್ರಶ್ನಿಸಿದ್ದಾರೆ.

ನಾನು ಹೇಳಿರುವುದು ತಪ್ಪು ಎಂದರೆ ನೀನು ಹೇಳಿದ್ದು ಸರಿನಾ ನೋಡಿಕೊಳ್ಳಮ್ಮ. ನಿನ್ನ ತಂದೆಗಾದ ವಯಸ್ಸು ನನಗಾಗಿದೆ. ಹೆಣ್ಣು ಮಕ್ಕಳು ನೋಡಿಕೊಂಡು ಮಾತಾಡಬೇಕು. ನಾನು ಒಂದು ಹೆಣ್ಣು ಮಗಳಿಗೆ ಹೇಳಿದ್ದನ್ನು ಇಡಿ ಮಹಿಳೆಯರಿಗೆ ಅನ್ವಯಿಸುವುದು, ಯಾರಿಗಾದರೂ ಬೈದರೆ ಇಡೀ ಜಾತಿಗೆ ಅನ್ವಯಿಸುವುದು, ಯಾರೋ ಅಧಿಕಾರಿಗೆ ಬೈದರೆ ಇಡೀ ಸಮುದಾಯಕ್ಕೆ ಅನ್ವಯಿಸಿದರೆ ಆಡಳಿತ ನಡೆಸುವುದು ಕಷ್ಟ ಎಂದು ಸಚಿವರು ಹೇಳಿದ್ದಾರೆ.

ಒಟ್ಟಿನಲ್ಲಿ ಶಾಸಕರ ಮಾತಿನಲ್ಲಿ ಆ ಹುಡುಗಿಯ ಮೇಲೆ ಆರೋಪಗಳ ಸುರಿಮಳೆ ಇತ್ತೆ ಹೊರತು ಕ್ಷಮೆ ಕೇಳುವ ಉದ್ದೇಶವಿದ್ದಂತೆ ಕಾಣುತ್ತಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಆ ಮಹಿಳೆಯು ನಿನ್ನೆ ಸಾವಧಾನವಾಗಿಯೇ ನಡೆದುಕೊಂಡಿರುವುದು, ಅವರದೇ ಊರಿನ ಸಮಸ್ಯೆಯ ಬಗ್ಗೆ ಮಾತನಾಡಿರುವುದು ವಿಡಿಯೋದಲ್ಲಿ ಕಂಡುಬಂದಿದ್ದರೂ ಸಚಿವರು ಮಾತ್ರ ನನ್ನ ಮುಖ ಪರಚಲು ಬಂದರು, ಎತ್ತರಿಸಿದ ದನಿಯಲ್ಲಿ ಮಾತನಾಡಿದರು ಎಂದು ಆರೋಪಿಸಿದ್ದಾರೆ.

ಈ ನಡುಗೆ ಕಾಂಗ್ರೆಸ್‌ ಪಕ್ಷವು ಮಾಧುಸ್ವಾಮಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸ್‌ ಮಹಾನಿರ್ದೇಶಕರಾದ ಪ್ರವೀಣ್‌ ಸೂದ್‌ ಬಳಿ ದೂರು ಸಲ್ಲಿಸಿದ್ದಾರೆ.

ಅಲ್ಲಿಗೆ ಒಂದು ಕ್ಷಮೆಯಿಂದ ಮುಗಿದುಹೋಗಬಹುದಾಗಿದ್ದ ಪ್ರಕರಣವನ್ನು ಮಾಧುಸ್ವಾಮಿಯವರು ಮತ್ತೆ ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...