Homeಮುಖಪುಟಕ್ಷಮೆ ಕೇಳುತ್ತಲೇ ರೈತ ಮಹಿಳೆಯ ಮೇಲೆ ಆರೋಪಗಳ ಸುರಿಮಳೆಗೈದ ಮಾಧುಸ್ವಾಮಿ!

ಕ್ಷಮೆ ಕೇಳುತ್ತಲೇ ರೈತ ಮಹಿಳೆಯ ಮೇಲೆ ಆರೋಪಗಳ ಸುರಿಮಳೆಗೈದ ಮಾಧುಸ್ವಾಮಿ!

ಈ ನಡುಗೆ ಕಾಂಗ್ರೆಸ್‌ ಪಕ್ಷವು ಮಾಧುಸ್ವಾಮಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸ್‌ ಮಹಾನಿರ್ದೇಶಕರಾದ ಪ್ರವೀಣ್‌ ಸೂದ್‌ ಬಳಿ ದೂರು ಸಲ್ಲಿಸಿದ್ದಾರೆ.

- Advertisement -
- Advertisement -

ರೈತ ಹೋರಾಟಗಾರ್ತಿಯೊಂದಿಗೆ ಅನುಚಿತವಾಗಿ ವರ್ತಿಸಿ ತೀವ್ರ ಟೀಕೆಗೆ ಗುರಿಯಾಗಿದ್ದ ಸಣ್ಣ ನೀರಾವರಿ ಮತ್ತು ಕಾನೂನು ಸಚಿವ ಮಾಧುಸ್ವಾಮಿಯವರು ಇಂದು ಕ್ಷಮೆ ಕೇಳುತ್ತಲೇ ಆ ಹೋರಾಟಗಾರ್ತಿಯ ಮೇಲೆ ಮತ್ತಷ್ಟು ಆರೋಪಗಳ ಸುರಿಮಳೆಗೈಯ್ಯುವ ಮೂಲಕ ಮತ್ತೆ ವಿವಾದಕ್ಕೊಳಗಾಗಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, “ನಾನು ರಾಜೀನಾಮೆ ಕೊಡುವ ಪ್ರಶ್ನೆ ಉದ್ಬವಿಸಲ್ಲ, ನನ್ನನ್ನು ಮಂತ್ರಿ ಮಾಡಿರುವುದು ಸಿದ್ದರಾಮಯ್ಯನಲ್ಲ, ನಮ್ಮ ನಾಯಕರು ಹೇಳಿದರೆ ಮಾತ್ರ ರಾಜೀನಾಮೆ ನೀಡತ್ತೇನೆ, ಆದರೆ ರಾಜೀನಾಮೆ ಕೊಡುವ ತಪ್ಪು ನಾನು ಮಾಡಿಲ್ಲ” ಎಂದು ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ.

ನಾನು ಅಂದಿದ್ದು ನಿಜ. ಆಯಮ್ಮ ನನ್ನನ್ನ ಟೆಂಪ್ಟ್ ಮಾಡಿದ್ದಾರೆ, ಒಬ್ಬ ಮಂತ್ರಿ ಅವರ ಊರಿಗೆ ಹೋಗಿ ಸುಮ್ಮನೆ ಬೈಸಿಕೊಂಡು ಬರುವುದಕ್ಕಾಗುತ್ತದೆಯೇ? ನಾನು ಒಬ್ಬ ಮನುಷ್ಯ, ಸ್ವಾಭಿಮಾನಿ ಇದೆ. ಎಲ್ಲರಿಗೂ ಶರಣಾಗಲು ಸಾಧ್ಯವಿಲ್ಲ.

ನನಗೆ ಮುಖ ಪರಚುವಂತೆ ಮಾತನಾಡಿದರೆ ನಾನು ಸುಮ್ಮನಿರಲು ಸಾಧ್ಯವಿಲ್ಲ. ರಿಕ್ವೆಸ್ಟ್‌ ಮಾಡಿಕೊಳ್ಳಬೇಕು ಹೊರತು ನನಗೆ ಆದೇಶ ಕೊಡಬಾರದು. ನನಗೆ ಮುಖಪರಚಲು ಬಂದಾಗ ಅವರನ್ನು ಹಿಡಿದುಕೊಳ್ಳದೇ ಏನು ಮಾಡಬೇಕು ಮಾಧುಸ್ವಾಮಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಘಟನೆಯಿಂದ ಬಹಳ ಬೇಸರವಾಗಿದೆ. ನಾನು ಮಾತನಾಡಿದ್ದು ತಪ್ಪು.. ಆಯಮ್ಮನಿಗೆ ಅದೇನಾಗಿತ್ತೊ ಗೊತ್ತಿಲ್ಲ. ಆಯಮ್ಮ ಬಹುಶಃ ಅದೇ ರೀತಿ ಬೆಳೆದುಕೊಂಡಬಂದಿರಬಹುದು. ಆದರೆ ನಾನು ಅದನ್ನು ಸಹಿಸಿಕೊಳ್ಳುವುದಿಲ್ಲ.

ಇದರಿಂದಾಗಿ ಯಾರಾದರೂ ಹೆಣ್ಣು ಮಕ್ಕಳ ಭಾವನೆಗೆ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಆ ಪದ ಕೆಟ್ಟದಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ನಂದು ತಪ್ಪು ಎಂದು ಒಪ್ಪಿಕೊಳ್ಳುತ್ತೇನೆ. ಹಾಗಾಂತ ಇನ್ನು ಮುಂದೆ ಎಲ್ಲಾ ಮಂತ್ರಿಗಳಿಗೆ, ಅಧಿಕಾರಿಗಳಿಗೆ ಏನು ಬೇಕಾದರೂ ಮಾತಾಡಬಹುದು ಎಂದು ಭಾವಿಸಿಕೊಂಡರೆ ಆಡಳಿತ ಮಾಡುವುದು ಕಷ್ಟ ಎಂದಿದ್ದಾರೆ.

ಈಯಮ್ಮನ ನೇಚರ್‌ ಅಂತದ್ದು ಎಂದು ಸ್ಥಳೀಯವಾಗಿ ಹೇಳಿದ್ದಾರೆ. ಯಾರು ಹೋದರು ಈಯಮ್ಮ ಹೀಗೆ ಮಾಡುತ್ತೆ ಅಂತ ಹೇಳಿದ್ದಾರೆ. ಆಕೆಯ ನಡೆವಳಿಕೆ ತೀರಾ ಕೆಟ್ಟದಾಗಿತ್ತು. ಸಿಟ್ಟು ಬಂದಾಗ ಒಬ್ಬ ಮನುಷ್ಯ ಏನು ಮಾತಾಡುತ್ತಾನೆ ಅದನ್ನೆ ನಾನು ಮಾತನಾಡಿದ್ದೇನೆ. ಮುಚ್ಚು ಬಾಯಿ ರಾಸ್ಕಲ್ ಎನ್ನುವುದರಲ್ಲಿ ತಪ್ಪೇನಿದೆ ಎಂದು ಸಚಿವರು ಪ್ರಶ್ನಿಸಿದ್ದಾರೆ.

ನಾನು ಹೇಳಿರುವುದು ತಪ್ಪು ಎಂದರೆ ನೀನು ಹೇಳಿದ್ದು ಸರಿನಾ ನೋಡಿಕೊಳ್ಳಮ್ಮ. ನಿನ್ನ ತಂದೆಗಾದ ವಯಸ್ಸು ನನಗಾಗಿದೆ. ಹೆಣ್ಣು ಮಕ್ಕಳು ನೋಡಿಕೊಂಡು ಮಾತಾಡಬೇಕು. ನಾನು ಒಂದು ಹೆಣ್ಣು ಮಗಳಿಗೆ ಹೇಳಿದ್ದನ್ನು ಇಡಿ ಮಹಿಳೆಯರಿಗೆ ಅನ್ವಯಿಸುವುದು, ಯಾರಿಗಾದರೂ ಬೈದರೆ ಇಡೀ ಜಾತಿಗೆ ಅನ್ವಯಿಸುವುದು, ಯಾರೋ ಅಧಿಕಾರಿಗೆ ಬೈದರೆ ಇಡೀ ಸಮುದಾಯಕ್ಕೆ ಅನ್ವಯಿಸಿದರೆ ಆಡಳಿತ ನಡೆಸುವುದು ಕಷ್ಟ ಎಂದು ಸಚಿವರು ಹೇಳಿದ್ದಾರೆ.

ಒಟ್ಟಿನಲ್ಲಿ ಶಾಸಕರ ಮಾತಿನಲ್ಲಿ ಆ ಹುಡುಗಿಯ ಮೇಲೆ ಆರೋಪಗಳ ಸುರಿಮಳೆ ಇತ್ತೆ ಹೊರತು ಕ್ಷಮೆ ಕೇಳುವ ಉದ್ದೇಶವಿದ್ದಂತೆ ಕಾಣುತ್ತಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಆ ಮಹಿಳೆಯು ನಿನ್ನೆ ಸಾವಧಾನವಾಗಿಯೇ ನಡೆದುಕೊಂಡಿರುವುದು, ಅವರದೇ ಊರಿನ ಸಮಸ್ಯೆಯ ಬಗ್ಗೆ ಮಾತನಾಡಿರುವುದು ವಿಡಿಯೋದಲ್ಲಿ ಕಂಡುಬಂದಿದ್ದರೂ ಸಚಿವರು ಮಾತ್ರ ನನ್ನ ಮುಖ ಪರಚಲು ಬಂದರು, ಎತ್ತರಿಸಿದ ದನಿಯಲ್ಲಿ ಮಾತನಾಡಿದರು ಎಂದು ಆರೋಪಿಸಿದ್ದಾರೆ.

ಈ ನಡುಗೆ ಕಾಂಗ್ರೆಸ್‌ ಪಕ್ಷವು ಮಾಧುಸ್ವಾಮಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸ್‌ ಮಹಾನಿರ್ದೇಶಕರಾದ ಪ್ರವೀಣ್‌ ಸೂದ್‌ ಬಳಿ ದೂರು ಸಲ್ಲಿಸಿದ್ದಾರೆ.

ಅಲ್ಲಿಗೆ ಒಂದು ಕ್ಷಮೆಯಿಂದ ಮುಗಿದುಹೋಗಬಹುದಾಗಿದ್ದ ಪ್ರಕರಣವನ್ನು ಮಾಧುಸ್ವಾಮಿಯವರು ಮತ್ತೆ ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಗಣಿ ಲೂಟಿಯಾದಾಗ ಮೌನವಿದ್ದ ಮಾಧುಸ್ವಾಮಿ, ಸಾಮಾನ್ಯರ ವಿರುದ್ಧ ತಿರುಗಿಬೀಳುವುದೇಕೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...