Homeಮುಖಪುಟಕೊರೊನಾ ನಿಭಾಯಿಸಲು ತುಮಕೂರಿನಲ್ಲಿ ಸಚಿವ ಮಾಧುಸ್ವಾಮಿಯವರೇ ಕಾಣುತ್ತಿಲ್ಲ...

ಕೊರೊನಾ ನಿಭಾಯಿಸಲು ತುಮಕೂರಿನಲ್ಲಿ ಸಚಿವ ಮಾಧುಸ್ವಾಮಿಯವರೇ ಕಾಣುತ್ತಿಲ್ಲ…

- Advertisement -
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ತುಮಕೂರಿನಲ್ಲಿ 200ಕ್ಕೂ ಹೆಚ್ಚು ಮಂದಿಯ ಮೇಲೆ ನಿಗಾ ಇರಿಸಲಾಗಿದೆ. ಲಾಕ್‌ಡೌನ್‌ ಆಗಿದೆ. ಸಚಿವರು ಇತ್ತ ಗಮನಹರಿಸಿದಂತೆ ಕಾಣುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ಸಭೆ ಕರೆದು ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಸಿಲ್ಲ. ಕೇವಲ ಅಧಿಕಾರಿಗಳು ಮಾತ್ರ ಸಭೆ ನಡೆಸುತ್ತಿದ್ದಾರೆಯೇ ಹೊರತು ಸಚಿವರು ಸಭೆಗಳಿಗೆ ಹಾಜರಾಗಿ ಅಧಿಕಾರಿಗಳಲ್ಲಿ ಉತ್ಸಾಹ ಮೂಡಿಸುವ ಕೆಲಸ ಮಾಡುತ್ತಿಲ್ಲ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ.
ತುಮಕೂರು ಜಿಲ್ಲೆಯಲ್ಲಿ ಒಟ್ಟು 63 ವೆಂಟಿಲೇಟರ್ ಗಳಿವೆ. ಈ ವೆಂಟಿಲೇಟರ್ ಬಳಸಿಕೊಳ್ಳುವ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಆರೋಗ್ಯ ಮತ್ತು ಖಾಸಗಿ ನರ್ಸಿಂಗ್ ಹೋಂಗಳ ವೈದ್ಯರೊಂದಿಗೆ ಮಾತುಕತೆ ನಡೆಸಬೇಕಿತ್ತು. ಆದರೆ ಇದುವರೆಗೂ ಅಂತಹ ಯಾವುದೇ ಬೆಳೆವಣಿಗೆಗಳೂ ನಡೆದಿಲ್ಲ. ಜೆ.ಸಿ.ಮಾಧುಸ್ವಾಮಿ ಅವರು ಕೊರೊನ ವೈರಸ್ ನಿಯಂತ್ರಣದ ಬಗ್ಗೆ ಒಂದು ಸಭೆಯನ್ನು ಮಾಡಿಲ್ಲ. ಆದರೆ ಜಿಲ್ಲಾಧಿಕಾರಿಗಳು ನಿರಂತರ ಸಭೆಗಳನ್ನು ಮಾಡುತ್ತ ಪ್ರಸಕ್ತ ಸನ್ನಿವೇಶದ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಇರುವ ಎರಡು ವೆಂಟಿಲೇಟರ್‌ಗಳು ಬೇರೆ ರೋಗಿಗಳನ್ನು ಇಡಲು ಅವಕಾಶವಿದೆ. ಬೇರೆ ಆಸ್ಪತ್ರೆಗಳಲ್ಲೂ ಸಾಮಾನ್ಯ ರೋಗಿಗಳು ಬಂದರೆ ಮಾತ್ರ ಇರಿಸಲು ವೆಂಟಿಲೇಟರ್‌ಗಳು ಇವೆ. ವಿಶೇಷವಾಗಿ ಕೊರೊನಾ ರೋಗಿಗಳಿಗೆ ವೆಂಟಿಲೇಟರ್‌ಗಳ ಕೊರತೆ ಇದೆ. ಇಂತಹ ಸಮಸ್ಯೆಗಳನ್ನು ನಿವಾರಿಸಲು ಅಧಿಕಾರಿಗಳ ಸಭೆ ಕರೆದು ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿ ಕ್ರಮಕೈಗೊಂಡಿದ್ದರೆ ಹೆಚ್ಚು ಅನುಕೂಲವಾಗುತ್ತಿತ್ತು ಎಂಬ ಅಭಿಪ್ರಾಯ ಜಿಲ್ಲೆಯಾದ್ಯಂತ ವ್ಯಕ್ತವಾಗಿದೆ.
ಜಿಲ್ಲೆಯಲ್ಲಿರುವ ಎಲ್ಲಾ 63 ವೆಂಟಿಲೇಟರ್್‌ಗಳು ಕೂಡ ಖಾಸಗಿ ನರ್ಸಿಂಗ್ ಹೋಂಗಳಲ್ಲಿಯೇ ಇವೆ. ತುರ್ತು ಸಂದರ್ಭದಲ್ಲಿ ಅವಗಳನ್ನು ರೋಗಿಗಳಿಗಾಗಿ ಬಳಸಿಕೊಳ್ಳಲು ಮುಂದಾಗಬೇಕು. ಇದುವೆರೆಗೆ ಸಿದ್ದಗಂಗಾ ಆಸ್ಪತ್ರೆ ಮತ್ತು ಸಿದ್ದಾರ್ಥ ಮತ್ತು ಶ್ರೀದೇವಿ ವೈದ್ಯಕೀಯ ಕಾಲೇಜುಗಳಲ್ಲಿ ಕೆಲವು ಹಾಸಿಗೆಗಳನ್ನು ಮಾತ್ರ ಕೊರೊನಾ ಸೋಂಕು ಪೀಡಿತರನ್ನು ಇಡಲು ಪ್ರತ್ಯೇಕ ವ್ಯವಸ್ಥೆ ಮಾಡಿರುವುದು ಸರಿಯಾದ ಕ್ರಮ. ಆದರೆ ವೆಂಟಿಲೇಟರ್‌ಗಳ ಕೊರತೆ ಇದ್ದು ಜಿಲ್ಲೆಯ ಜನರ ಆರೋಗ್ಯದ ಕುರಿತು ಸಚಿವ ಮಾಧುಸ್ವಾಮಿ ಹೆಚ್ಚು ಕಾಳಜಿ ವಹಿಸಬೇಕಿತ್ತು. ಸಚಿವರು ಚಿಕ್ಕನಾಯಕನಹಳ್ಳಿಗೆ ಮಾತ್ರ ಸೀಮಿತರಾಗಿದ್ದಾರೆಯೇ ಹೊರತು ಜಿಲ್ಲೆಯ ಸಮಸ್ಯೆಗಳನ್ನು ಪರಿಗಣಿಸುತ್ತಿಲ್ಲ ಎಂದು ಜನತೆ ಪ್ರಶ್ನಿಸತೊಡಗಿದ್ದಾರೆ.
ಖಾಸಗಿ ನರ್ಸಿಂಗ್ ಹೋಂನಲ್ಲಿ ಕೊರೊನಾ ಸೋಂಕಿತರನ್ನು ಇಟ್ಟುಕೊಳ್ಳುವುದು ಅಪರೂಪ. ಯಾಕೆಂದರೆ ಎಲ್ಲವನ್ನೂ ಲಾಭದ ದೃಷ್ಟಿಯಿಂದಲೇ ನೋಡುವ ನರ್ಸಿಂಗ್ ಹೋಂಗಳು ಅಷ್ಟು ಸುಲಭವಾಗಿ ವೆಂಟಿಲೇಟರ್ ಬಿಟ್ಟುಕೊಡುವ ಸಾಧ್ಯತೆ ಇಲ್ಲ. ಕೊರೊನಾ ಸೋಂಕಿತರನ್ನು ನರ್ಸಿಂಗ್ ಹೋಂನಲ್ಲಿಟ್ಟರೆ ಅಲ್ಲಿಗೆ ಬರುವ ರೋಗಿಗಳು ಬರದಂತಾಗುತ್ತಾರೆ ಎಂಬ ಮಾತುಗಳು ಇವೆ. ಜೊತೆಗೆ ನರ್ಸಿಂಗ್ ಹೋಂಗಳಲ್ಲಿ ಒಂದು ದಿನ ವೆಂಟಿಲೇಟರ್್‌ನಲ್ಲಿಡಲು ಕನಿಷ್ಠ 10 ರಿಂದ 20 ಸಾವಿರ ರೂಪಾಯಿ ನಿಗದಿ ಮಾಡುತ್ತಾರೆ. ಪರಿಸ್ಥಿತಿ ಹೀಗಿರುವಾಗ ಸಚಿವರು ಈ ನಿಟ್ಟಿನಲ್ಲಿ ಮಾತುಕತೆ ನಡೆಸಿ ವ್ಯವಸ್ಥೆ ಮಾಡಬೇಕಿತ್ತು.
ತುಮಕೂರು ಜಿಲ್ಲೆಯ ಮೂಲಕ ರಾಜ್ಯದ 23 ಜಿಲ್ಲೆಗಳಿಗೆ ಜನರು ಪ್ರಯಾಣಿಸುತ್ತಾರೆ. ಇದು ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂಬ ಮಾತೂ ಇದೆ.. ಜೊತೆಗೆ ತುಮಕೂರು ನಗರದ ಬಹುತೇಕರು ಬೆಂಗಳೂರು ನಗರವನ್ನು ಕೆಲಸಕ್ಕಾಗಿ ಆಶ್ರಯಿಸಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಕಂಡು ಬಂದಿದ್ದು, ಅಲ್ಲಿನ ಸಂಪರ್ಕ ಹೊಂದಿರುವ ತುಮಕೂರು ನಗರದ ಜನತೆಗೂ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲಿದ್ದ ಜನರು ತುಮಕೂರಿಗೆ ಆಗಮಿಸಿದ್ದಾರೆ ಮತ್ತು ವಿದೇಶಗಳಿಂದಲೂ ತುಮಕೂರಿಗೆ ಬಂದಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ಸಭೆ ಕರೆದು ಸಮನ್ವಯತೆ ಸಾಧಿಸುವಂತಹ ಕೆಲಸ ಮಾಡಬೇಕಿತ್ತು. ಅಂತಹ ಕೆಲಸ ಇದುವರೆಗೂ ನಡೆದಿಲ್ಲ.
ಎಲ್ಲವನ್ನೂ ಅಧಿಕಾರಿಗಳೇ ನಿಭಾಯಿಸುತ್ತಿದ್ದಾರೆ. ಕೊರೊನಾ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಲಕ್ಷ್ಯ ವಹಿಸುತ್ತಿಲ್ಲ. ಈಗಾಗಲೇ ಜಿಲ್ಲಾಸ್ಪತ್ರೆಗೆ 10 ಮಂದಿ ಶಂಕಿತ ಕೊರೊನ ವೈರಸ್ ಸೋಂಕಿತರು ದಾಖಲಾಗಿದ್ದು ಅವರ ರಕ್ತ ಮತ್ತು ಕಫಾ ಮಾದರಿಗಳನ್ನು ಬೆಂಗಳೂರಿಗೆ ಕಳಿಸಿಕೊಡಲಾಗಿದೆ. ಇನ್ನು ವರದಿ ಬಂದಿಲ್ಲ. ಈ ವರದಿ ಬರುವ ಮೊದಲು ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚೆತ್ತುಕೊಂಡು ಸಮರೋಪಾದಿಯಲ್ಲಿ ಕೊರೊನಾ ಹರಡದಂತೆ ಕ್ರಮ ವಹಿಸಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...