Homeಮುಖಪುಟಕೊರೊನಾ ನಿಭಾಯಿಸಲು ತುಮಕೂರಿನಲ್ಲಿ ಸಚಿವ ಮಾಧುಸ್ವಾಮಿಯವರೇ ಕಾಣುತ್ತಿಲ್ಲ...

ಕೊರೊನಾ ನಿಭಾಯಿಸಲು ತುಮಕೂರಿನಲ್ಲಿ ಸಚಿವ ಮಾಧುಸ್ವಾಮಿಯವರೇ ಕಾಣುತ್ತಿಲ್ಲ…

- Advertisement -
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ತುಮಕೂರಿನಲ್ಲಿ 200ಕ್ಕೂ ಹೆಚ್ಚು ಮಂದಿಯ ಮೇಲೆ ನಿಗಾ ಇರಿಸಲಾಗಿದೆ. ಲಾಕ್‌ಡೌನ್‌ ಆಗಿದೆ. ಸಚಿವರು ಇತ್ತ ಗಮನಹರಿಸಿದಂತೆ ಕಾಣುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ಸಭೆ ಕರೆದು ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಸಿಲ್ಲ. ಕೇವಲ ಅಧಿಕಾರಿಗಳು ಮಾತ್ರ ಸಭೆ ನಡೆಸುತ್ತಿದ್ದಾರೆಯೇ ಹೊರತು ಸಚಿವರು ಸಭೆಗಳಿಗೆ ಹಾಜರಾಗಿ ಅಧಿಕಾರಿಗಳಲ್ಲಿ ಉತ್ಸಾಹ ಮೂಡಿಸುವ ಕೆಲಸ ಮಾಡುತ್ತಿಲ್ಲ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ.
ತುಮಕೂರು ಜಿಲ್ಲೆಯಲ್ಲಿ ಒಟ್ಟು 63 ವೆಂಟಿಲೇಟರ್ ಗಳಿವೆ. ಈ ವೆಂಟಿಲೇಟರ್ ಬಳಸಿಕೊಳ್ಳುವ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಆರೋಗ್ಯ ಮತ್ತು ಖಾಸಗಿ ನರ್ಸಿಂಗ್ ಹೋಂಗಳ ವೈದ್ಯರೊಂದಿಗೆ ಮಾತುಕತೆ ನಡೆಸಬೇಕಿತ್ತು. ಆದರೆ ಇದುವರೆಗೂ ಅಂತಹ ಯಾವುದೇ ಬೆಳೆವಣಿಗೆಗಳೂ ನಡೆದಿಲ್ಲ. ಜೆ.ಸಿ.ಮಾಧುಸ್ವಾಮಿ ಅವರು ಕೊರೊನ ವೈರಸ್ ನಿಯಂತ್ರಣದ ಬಗ್ಗೆ ಒಂದು ಸಭೆಯನ್ನು ಮಾಡಿಲ್ಲ. ಆದರೆ ಜಿಲ್ಲಾಧಿಕಾರಿಗಳು ನಿರಂತರ ಸಭೆಗಳನ್ನು ಮಾಡುತ್ತ ಪ್ರಸಕ್ತ ಸನ್ನಿವೇಶದ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಇರುವ ಎರಡು ವೆಂಟಿಲೇಟರ್‌ಗಳು ಬೇರೆ ರೋಗಿಗಳನ್ನು ಇಡಲು ಅವಕಾಶವಿದೆ. ಬೇರೆ ಆಸ್ಪತ್ರೆಗಳಲ್ಲೂ ಸಾಮಾನ್ಯ ರೋಗಿಗಳು ಬಂದರೆ ಮಾತ್ರ ಇರಿಸಲು ವೆಂಟಿಲೇಟರ್‌ಗಳು ಇವೆ. ವಿಶೇಷವಾಗಿ ಕೊರೊನಾ ರೋಗಿಗಳಿಗೆ ವೆಂಟಿಲೇಟರ್‌ಗಳ ಕೊರತೆ ಇದೆ. ಇಂತಹ ಸಮಸ್ಯೆಗಳನ್ನು ನಿವಾರಿಸಲು ಅಧಿಕಾರಿಗಳ ಸಭೆ ಕರೆದು ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿ ಕ್ರಮಕೈಗೊಂಡಿದ್ದರೆ ಹೆಚ್ಚು ಅನುಕೂಲವಾಗುತ್ತಿತ್ತು ಎಂಬ ಅಭಿಪ್ರಾಯ ಜಿಲ್ಲೆಯಾದ್ಯಂತ ವ್ಯಕ್ತವಾಗಿದೆ.
ಜಿಲ್ಲೆಯಲ್ಲಿರುವ ಎಲ್ಲಾ 63 ವೆಂಟಿಲೇಟರ್್‌ಗಳು ಕೂಡ ಖಾಸಗಿ ನರ್ಸಿಂಗ್ ಹೋಂಗಳಲ್ಲಿಯೇ ಇವೆ. ತುರ್ತು ಸಂದರ್ಭದಲ್ಲಿ ಅವಗಳನ್ನು ರೋಗಿಗಳಿಗಾಗಿ ಬಳಸಿಕೊಳ್ಳಲು ಮುಂದಾಗಬೇಕು. ಇದುವೆರೆಗೆ ಸಿದ್ದಗಂಗಾ ಆಸ್ಪತ್ರೆ ಮತ್ತು ಸಿದ್ದಾರ್ಥ ಮತ್ತು ಶ್ರೀದೇವಿ ವೈದ್ಯಕೀಯ ಕಾಲೇಜುಗಳಲ್ಲಿ ಕೆಲವು ಹಾಸಿಗೆಗಳನ್ನು ಮಾತ್ರ ಕೊರೊನಾ ಸೋಂಕು ಪೀಡಿತರನ್ನು ಇಡಲು ಪ್ರತ್ಯೇಕ ವ್ಯವಸ್ಥೆ ಮಾಡಿರುವುದು ಸರಿಯಾದ ಕ್ರಮ. ಆದರೆ ವೆಂಟಿಲೇಟರ್‌ಗಳ ಕೊರತೆ ಇದ್ದು ಜಿಲ್ಲೆಯ ಜನರ ಆರೋಗ್ಯದ ಕುರಿತು ಸಚಿವ ಮಾಧುಸ್ವಾಮಿ ಹೆಚ್ಚು ಕಾಳಜಿ ವಹಿಸಬೇಕಿತ್ತು. ಸಚಿವರು ಚಿಕ್ಕನಾಯಕನಹಳ್ಳಿಗೆ ಮಾತ್ರ ಸೀಮಿತರಾಗಿದ್ದಾರೆಯೇ ಹೊರತು ಜಿಲ್ಲೆಯ ಸಮಸ್ಯೆಗಳನ್ನು ಪರಿಗಣಿಸುತ್ತಿಲ್ಲ ಎಂದು ಜನತೆ ಪ್ರಶ್ನಿಸತೊಡಗಿದ್ದಾರೆ.
ಖಾಸಗಿ ನರ್ಸಿಂಗ್ ಹೋಂನಲ್ಲಿ ಕೊರೊನಾ ಸೋಂಕಿತರನ್ನು ಇಟ್ಟುಕೊಳ್ಳುವುದು ಅಪರೂಪ. ಯಾಕೆಂದರೆ ಎಲ್ಲವನ್ನೂ ಲಾಭದ ದೃಷ್ಟಿಯಿಂದಲೇ ನೋಡುವ ನರ್ಸಿಂಗ್ ಹೋಂಗಳು ಅಷ್ಟು ಸುಲಭವಾಗಿ ವೆಂಟಿಲೇಟರ್ ಬಿಟ್ಟುಕೊಡುವ ಸಾಧ್ಯತೆ ಇಲ್ಲ. ಕೊರೊನಾ ಸೋಂಕಿತರನ್ನು ನರ್ಸಿಂಗ್ ಹೋಂನಲ್ಲಿಟ್ಟರೆ ಅಲ್ಲಿಗೆ ಬರುವ ರೋಗಿಗಳು ಬರದಂತಾಗುತ್ತಾರೆ ಎಂಬ ಮಾತುಗಳು ಇವೆ. ಜೊತೆಗೆ ನರ್ಸಿಂಗ್ ಹೋಂಗಳಲ್ಲಿ ಒಂದು ದಿನ ವೆಂಟಿಲೇಟರ್್‌ನಲ್ಲಿಡಲು ಕನಿಷ್ಠ 10 ರಿಂದ 20 ಸಾವಿರ ರೂಪಾಯಿ ನಿಗದಿ ಮಾಡುತ್ತಾರೆ. ಪರಿಸ್ಥಿತಿ ಹೀಗಿರುವಾಗ ಸಚಿವರು ಈ ನಿಟ್ಟಿನಲ್ಲಿ ಮಾತುಕತೆ ನಡೆಸಿ ವ್ಯವಸ್ಥೆ ಮಾಡಬೇಕಿತ್ತು.
ತುಮಕೂರು ಜಿಲ್ಲೆಯ ಮೂಲಕ ರಾಜ್ಯದ 23 ಜಿಲ್ಲೆಗಳಿಗೆ ಜನರು ಪ್ರಯಾಣಿಸುತ್ತಾರೆ. ಇದು ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂಬ ಮಾತೂ ಇದೆ.. ಜೊತೆಗೆ ತುಮಕೂರು ನಗರದ ಬಹುತೇಕರು ಬೆಂಗಳೂರು ನಗರವನ್ನು ಕೆಲಸಕ್ಕಾಗಿ ಆಶ್ರಯಿಸಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಕಂಡು ಬಂದಿದ್ದು, ಅಲ್ಲಿನ ಸಂಪರ್ಕ ಹೊಂದಿರುವ ತುಮಕೂರು ನಗರದ ಜನತೆಗೂ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲಿದ್ದ ಜನರು ತುಮಕೂರಿಗೆ ಆಗಮಿಸಿದ್ದಾರೆ ಮತ್ತು ವಿದೇಶಗಳಿಂದಲೂ ತುಮಕೂರಿಗೆ ಬಂದಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ಸಭೆ ಕರೆದು ಸಮನ್ವಯತೆ ಸಾಧಿಸುವಂತಹ ಕೆಲಸ ಮಾಡಬೇಕಿತ್ತು. ಅಂತಹ ಕೆಲಸ ಇದುವರೆಗೂ ನಡೆದಿಲ್ಲ.
ಎಲ್ಲವನ್ನೂ ಅಧಿಕಾರಿಗಳೇ ನಿಭಾಯಿಸುತ್ತಿದ್ದಾರೆ. ಕೊರೊನಾ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಲಕ್ಷ್ಯ ವಹಿಸುತ್ತಿಲ್ಲ. ಈಗಾಗಲೇ ಜಿಲ್ಲಾಸ್ಪತ್ರೆಗೆ 10 ಮಂದಿ ಶಂಕಿತ ಕೊರೊನ ವೈರಸ್ ಸೋಂಕಿತರು ದಾಖಲಾಗಿದ್ದು ಅವರ ರಕ್ತ ಮತ್ತು ಕಫಾ ಮಾದರಿಗಳನ್ನು ಬೆಂಗಳೂರಿಗೆ ಕಳಿಸಿಕೊಡಲಾಗಿದೆ. ಇನ್ನು ವರದಿ ಬಂದಿಲ್ಲ. ಈ ವರದಿ ಬರುವ ಮೊದಲು ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚೆತ್ತುಕೊಂಡು ಸಮರೋಪಾದಿಯಲ್ಲಿ ಕೊರೊನಾ ಹರಡದಂತೆ ಕ್ರಮ ವಹಿಸಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...