Homeಮುಖಪುಟಕೊರೊನಾ ನಿಭಾಯಿಸಲು ತುಮಕೂರಿನಲ್ಲಿ ಸಚಿವ ಮಾಧುಸ್ವಾಮಿಯವರೇ ಕಾಣುತ್ತಿಲ್ಲ...

ಕೊರೊನಾ ನಿಭಾಯಿಸಲು ತುಮಕೂರಿನಲ್ಲಿ ಸಚಿವ ಮಾಧುಸ್ವಾಮಿಯವರೇ ಕಾಣುತ್ತಿಲ್ಲ…

- Advertisement -
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ತುಮಕೂರಿನಲ್ಲಿ 200ಕ್ಕೂ ಹೆಚ್ಚು ಮಂದಿಯ ಮೇಲೆ ನಿಗಾ ಇರಿಸಲಾಗಿದೆ. ಲಾಕ್‌ಡೌನ್‌ ಆಗಿದೆ. ಸಚಿವರು ಇತ್ತ ಗಮನಹರಿಸಿದಂತೆ ಕಾಣುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ಸಭೆ ಕರೆದು ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಸಿಲ್ಲ. ಕೇವಲ ಅಧಿಕಾರಿಗಳು ಮಾತ್ರ ಸಭೆ ನಡೆಸುತ್ತಿದ್ದಾರೆಯೇ ಹೊರತು ಸಚಿವರು ಸಭೆಗಳಿಗೆ ಹಾಜರಾಗಿ ಅಧಿಕಾರಿಗಳಲ್ಲಿ ಉತ್ಸಾಹ ಮೂಡಿಸುವ ಕೆಲಸ ಮಾಡುತ್ತಿಲ್ಲ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ.
ತುಮಕೂರು ಜಿಲ್ಲೆಯಲ್ಲಿ ಒಟ್ಟು 63 ವೆಂಟಿಲೇಟರ್ ಗಳಿವೆ. ಈ ವೆಂಟಿಲೇಟರ್ ಬಳಸಿಕೊಳ್ಳುವ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಆರೋಗ್ಯ ಮತ್ತು ಖಾಸಗಿ ನರ್ಸಿಂಗ್ ಹೋಂಗಳ ವೈದ್ಯರೊಂದಿಗೆ ಮಾತುಕತೆ ನಡೆಸಬೇಕಿತ್ತು. ಆದರೆ ಇದುವರೆಗೂ ಅಂತಹ ಯಾವುದೇ ಬೆಳೆವಣಿಗೆಗಳೂ ನಡೆದಿಲ್ಲ. ಜೆ.ಸಿ.ಮಾಧುಸ್ವಾಮಿ ಅವರು ಕೊರೊನ ವೈರಸ್ ನಿಯಂತ್ರಣದ ಬಗ್ಗೆ ಒಂದು ಸಭೆಯನ್ನು ಮಾಡಿಲ್ಲ. ಆದರೆ ಜಿಲ್ಲಾಧಿಕಾರಿಗಳು ನಿರಂತರ ಸಭೆಗಳನ್ನು ಮಾಡುತ್ತ ಪ್ರಸಕ್ತ ಸನ್ನಿವೇಶದ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಇರುವ ಎರಡು ವೆಂಟಿಲೇಟರ್‌ಗಳು ಬೇರೆ ರೋಗಿಗಳನ್ನು ಇಡಲು ಅವಕಾಶವಿದೆ. ಬೇರೆ ಆಸ್ಪತ್ರೆಗಳಲ್ಲೂ ಸಾಮಾನ್ಯ ರೋಗಿಗಳು ಬಂದರೆ ಮಾತ್ರ ಇರಿಸಲು ವೆಂಟಿಲೇಟರ್‌ಗಳು ಇವೆ. ವಿಶೇಷವಾಗಿ ಕೊರೊನಾ ರೋಗಿಗಳಿಗೆ ವೆಂಟಿಲೇಟರ್‌ಗಳ ಕೊರತೆ ಇದೆ. ಇಂತಹ ಸಮಸ್ಯೆಗಳನ್ನು ನಿವಾರಿಸಲು ಅಧಿಕಾರಿಗಳ ಸಭೆ ಕರೆದು ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿ ಕ್ರಮಕೈಗೊಂಡಿದ್ದರೆ ಹೆಚ್ಚು ಅನುಕೂಲವಾಗುತ್ತಿತ್ತು ಎಂಬ ಅಭಿಪ್ರಾಯ ಜಿಲ್ಲೆಯಾದ್ಯಂತ ವ್ಯಕ್ತವಾಗಿದೆ.
ಜಿಲ್ಲೆಯಲ್ಲಿರುವ ಎಲ್ಲಾ 63 ವೆಂಟಿಲೇಟರ್್‌ಗಳು ಕೂಡ ಖಾಸಗಿ ನರ್ಸಿಂಗ್ ಹೋಂಗಳಲ್ಲಿಯೇ ಇವೆ. ತುರ್ತು ಸಂದರ್ಭದಲ್ಲಿ ಅವಗಳನ್ನು ರೋಗಿಗಳಿಗಾಗಿ ಬಳಸಿಕೊಳ್ಳಲು ಮುಂದಾಗಬೇಕು. ಇದುವೆರೆಗೆ ಸಿದ್ದಗಂಗಾ ಆಸ್ಪತ್ರೆ ಮತ್ತು ಸಿದ್ದಾರ್ಥ ಮತ್ತು ಶ್ರೀದೇವಿ ವೈದ್ಯಕೀಯ ಕಾಲೇಜುಗಳಲ್ಲಿ ಕೆಲವು ಹಾಸಿಗೆಗಳನ್ನು ಮಾತ್ರ ಕೊರೊನಾ ಸೋಂಕು ಪೀಡಿತರನ್ನು ಇಡಲು ಪ್ರತ್ಯೇಕ ವ್ಯವಸ್ಥೆ ಮಾಡಿರುವುದು ಸರಿಯಾದ ಕ್ರಮ. ಆದರೆ ವೆಂಟಿಲೇಟರ್‌ಗಳ ಕೊರತೆ ಇದ್ದು ಜಿಲ್ಲೆಯ ಜನರ ಆರೋಗ್ಯದ ಕುರಿತು ಸಚಿವ ಮಾಧುಸ್ವಾಮಿ ಹೆಚ್ಚು ಕಾಳಜಿ ವಹಿಸಬೇಕಿತ್ತು. ಸಚಿವರು ಚಿಕ್ಕನಾಯಕನಹಳ್ಳಿಗೆ ಮಾತ್ರ ಸೀಮಿತರಾಗಿದ್ದಾರೆಯೇ ಹೊರತು ಜಿಲ್ಲೆಯ ಸಮಸ್ಯೆಗಳನ್ನು ಪರಿಗಣಿಸುತ್ತಿಲ್ಲ ಎಂದು ಜನತೆ ಪ್ರಶ್ನಿಸತೊಡಗಿದ್ದಾರೆ.
ಖಾಸಗಿ ನರ್ಸಿಂಗ್ ಹೋಂನಲ್ಲಿ ಕೊರೊನಾ ಸೋಂಕಿತರನ್ನು ಇಟ್ಟುಕೊಳ್ಳುವುದು ಅಪರೂಪ. ಯಾಕೆಂದರೆ ಎಲ್ಲವನ್ನೂ ಲಾಭದ ದೃಷ್ಟಿಯಿಂದಲೇ ನೋಡುವ ನರ್ಸಿಂಗ್ ಹೋಂಗಳು ಅಷ್ಟು ಸುಲಭವಾಗಿ ವೆಂಟಿಲೇಟರ್ ಬಿಟ್ಟುಕೊಡುವ ಸಾಧ್ಯತೆ ಇಲ್ಲ. ಕೊರೊನಾ ಸೋಂಕಿತರನ್ನು ನರ್ಸಿಂಗ್ ಹೋಂನಲ್ಲಿಟ್ಟರೆ ಅಲ್ಲಿಗೆ ಬರುವ ರೋಗಿಗಳು ಬರದಂತಾಗುತ್ತಾರೆ ಎಂಬ ಮಾತುಗಳು ಇವೆ. ಜೊತೆಗೆ ನರ್ಸಿಂಗ್ ಹೋಂಗಳಲ್ಲಿ ಒಂದು ದಿನ ವೆಂಟಿಲೇಟರ್್‌ನಲ್ಲಿಡಲು ಕನಿಷ್ಠ 10 ರಿಂದ 20 ಸಾವಿರ ರೂಪಾಯಿ ನಿಗದಿ ಮಾಡುತ್ತಾರೆ. ಪರಿಸ್ಥಿತಿ ಹೀಗಿರುವಾಗ ಸಚಿವರು ಈ ನಿಟ್ಟಿನಲ್ಲಿ ಮಾತುಕತೆ ನಡೆಸಿ ವ್ಯವಸ್ಥೆ ಮಾಡಬೇಕಿತ್ತು.
ತುಮಕೂರು ಜಿಲ್ಲೆಯ ಮೂಲಕ ರಾಜ್ಯದ 23 ಜಿಲ್ಲೆಗಳಿಗೆ ಜನರು ಪ್ರಯಾಣಿಸುತ್ತಾರೆ. ಇದು ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂಬ ಮಾತೂ ಇದೆ.. ಜೊತೆಗೆ ತುಮಕೂರು ನಗರದ ಬಹುತೇಕರು ಬೆಂಗಳೂರು ನಗರವನ್ನು ಕೆಲಸಕ್ಕಾಗಿ ಆಶ್ರಯಿಸಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಕಂಡು ಬಂದಿದ್ದು, ಅಲ್ಲಿನ ಸಂಪರ್ಕ ಹೊಂದಿರುವ ತುಮಕೂರು ನಗರದ ಜನತೆಗೂ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲಿದ್ದ ಜನರು ತುಮಕೂರಿಗೆ ಆಗಮಿಸಿದ್ದಾರೆ ಮತ್ತು ವಿದೇಶಗಳಿಂದಲೂ ತುಮಕೂರಿಗೆ ಬಂದಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ಸಭೆ ಕರೆದು ಸಮನ್ವಯತೆ ಸಾಧಿಸುವಂತಹ ಕೆಲಸ ಮಾಡಬೇಕಿತ್ತು. ಅಂತಹ ಕೆಲಸ ಇದುವರೆಗೂ ನಡೆದಿಲ್ಲ.
ಎಲ್ಲವನ್ನೂ ಅಧಿಕಾರಿಗಳೇ ನಿಭಾಯಿಸುತ್ತಿದ್ದಾರೆ. ಕೊರೊನಾ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಲಕ್ಷ್ಯ ವಹಿಸುತ್ತಿಲ್ಲ. ಈಗಾಗಲೇ ಜಿಲ್ಲಾಸ್ಪತ್ರೆಗೆ 10 ಮಂದಿ ಶಂಕಿತ ಕೊರೊನ ವೈರಸ್ ಸೋಂಕಿತರು ದಾಖಲಾಗಿದ್ದು ಅವರ ರಕ್ತ ಮತ್ತು ಕಫಾ ಮಾದರಿಗಳನ್ನು ಬೆಂಗಳೂರಿಗೆ ಕಳಿಸಿಕೊಡಲಾಗಿದೆ. ಇನ್ನು ವರದಿ ಬಂದಿಲ್ಲ. ಈ ವರದಿ ಬರುವ ಮೊದಲು ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚೆತ್ತುಕೊಂಡು ಸಮರೋಪಾದಿಯಲ್ಲಿ ಕೊರೊನಾ ಹರಡದಂತೆ ಕ್ರಮ ವಹಿಸಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...