Homeಮುಖಪುಟಕೊರೊನಾ ನಿಭಾಯಿಸಲು ತುಮಕೂರಿನಲ್ಲಿ ಸಚಿವ ಮಾಧುಸ್ವಾಮಿಯವರೇ ಕಾಣುತ್ತಿಲ್ಲ...

ಕೊರೊನಾ ನಿಭಾಯಿಸಲು ತುಮಕೂರಿನಲ್ಲಿ ಸಚಿವ ಮಾಧುಸ್ವಾಮಿಯವರೇ ಕಾಣುತ್ತಿಲ್ಲ…

- Advertisement -
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ತುಮಕೂರಿನಲ್ಲಿ 200ಕ್ಕೂ ಹೆಚ್ಚು ಮಂದಿಯ ಮೇಲೆ ನಿಗಾ ಇರಿಸಲಾಗಿದೆ. ಲಾಕ್‌ಡೌನ್‌ ಆಗಿದೆ. ಸಚಿವರು ಇತ್ತ ಗಮನಹರಿಸಿದಂತೆ ಕಾಣುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ಸಭೆ ಕರೆದು ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಸಿಲ್ಲ. ಕೇವಲ ಅಧಿಕಾರಿಗಳು ಮಾತ್ರ ಸಭೆ ನಡೆಸುತ್ತಿದ್ದಾರೆಯೇ ಹೊರತು ಸಚಿವರು ಸಭೆಗಳಿಗೆ ಹಾಜರಾಗಿ ಅಧಿಕಾರಿಗಳಲ್ಲಿ ಉತ್ಸಾಹ ಮೂಡಿಸುವ ಕೆಲಸ ಮಾಡುತ್ತಿಲ್ಲ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ.
ತುಮಕೂರು ಜಿಲ್ಲೆಯಲ್ಲಿ ಒಟ್ಟು 63 ವೆಂಟಿಲೇಟರ್ ಗಳಿವೆ. ಈ ವೆಂಟಿಲೇಟರ್ ಬಳಸಿಕೊಳ್ಳುವ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಆರೋಗ್ಯ ಮತ್ತು ಖಾಸಗಿ ನರ್ಸಿಂಗ್ ಹೋಂಗಳ ವೈದ್ಯರೊಂದಿಗೆ ಮಾತುಕತೆ ನಡೆಸಬೇಕಿತ್ತು. ಆದರೆ ಇದುವರೆಗೂ ಅಂತಹ ಯಾವುದೇ ಬೆಳೆವಣಿಗೆಗಳೂ ನಡೆದಿಲ್ಲ. ಜೆ.ಸಿ.ಮಾಧುಸ್ವಾಮಿ ಅವರು ಕೊರೊನ ವೈರಸ್ ನಿಯಂತ್ರಣದ ಬಗ್ಗೆ ಒಂದು ಸಭೆಯನ್ನು ಮಾಡಿಲ್ಲ. ಆದರೆ ಜಿಲ್ಲಾಧಿಕಾರಿಗಳು ನಿರಂತರ ಸಭೆಗಳನ್ನು ಮಾಡುತ್ತ ಪ್ರಸಕ್ತ ಸನ್ನಿವೇಶದ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಇರುವ ಎರಡು ವೆಂಟಿಲೇಟರ್‌ಗಳು ಬೇರೆ ರೋಗಿಗಳನ್ನು ಇಡಲು ಅವಕಾಶವಿದೆ. ಬೇರೆ ಆಸ್ಪತ್ರೆಗಳಲ್ಲೂ ಸಾಮಾನ್ಯ ರೋಗಿಗಳು ಬಂದರೆ ಮಾತ್ರ ಇರಿಸಲು ವೆಂಟಿಲೇಟರ್‌ಗಳು ಇವೆ. ವಿಶೇಷವಾಗಿ ಕೊರೊನಾ ರೋಗಿಗಳಿಗೆ ವೆಂಟಿಲೇಟರ್‌ಗಳ ಕೊರತೆ ಇದೆ. ಇಂತಹ ಸಮಸ್ಯೆಗಳನ್ನು ನಿವಾರಿಸಲು ಅಧಿಕಾರಿಗಳ ಸಭೆ ಕರೆದು ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿ ಕ್ರಮಕೈಗೊಂಡಿದ್ದರೆ ಹೆಚ್ಚು ಅನುಕೂಲವಾಗುತ್ತಿತ್ತು ಎಂಬ ಅಭಿಪ್ರಾಯ ಜಿಲ್ಲೆಯಾದ್ಯಂತ ವ್ಯಕ್ತವಾಗಿದೆ.
ಜಿಲ್ಲೆಯಲ್ಲಿರುವ ಎಲ್ಲಾ 63 ವೆಂಟಿಲೇಟರ್್‌ಗಳು ಕೂಡ ಖಾಸಗಿ ನರ್ಸಿಂಗ್ ಹೋಂಗಳಲ್ಲಿಯೇ ಇವೆ. ತುರ್ತು ಸಂದರ್ಭದಲ್ಲಿ ಅವಗಳನ್ನು ರೋಗಿಗಳಿಗಾಗಿ ಬಳಸಿಕೊಳ್ಳಲು ಮುಂದಾಗಬೇಕು. ಇದುವೆರೆಗೆ ಸಿದ್ದಗಂಗಾ ಆಸ್ಪತ್ರೆ ಮತ್ತು ಸಿದ್ದಾರ್ಥ ಮತ್ತು ಶ್ರೀದೇವಿ ವೈದ್ಯಕೀಯ ಕಾಲೇಜುಗಳಲ್ಲಿ ಕೆಲವು ಹಾಸಿಗೆಗಳನ್ನು ಮಾತ್ರ ಕೊರೊನಾ ಸೋಂಕು ಪೀಡಿತರನ್ನು ಇಡಲು ಪ್ರತ್ಯೇಕ ವ್ಯವಸ್ಥೆ ಮಾಡಿರುವುದು ಸರಿಯಾದ ಕ್ರಮ. ಆದರೆ ವೆಂಟಿಲೇಟರ್‌ಗಳ ಕೊರತೆ ಇದ್ದು ಜಿಲ್ಲೆಯ ಜನರ ಆರೋಗ್ಯದ ಕುರಿತು ಸಚಿವ ಮಾಧುಸ್ವಾಮಿ ಹೆಚ್ಚು ಕಾಳಜಿ ವಹಿಸಬೇಕಿತ್ತು. ಸಚಿವರು ಚಿಕ್ಕನಾಯಕನಹಳ್ಳಿಗೆ ಮಾತ್ರ ಸೀಮಿತರಾಗಿದ್ದಾರೆಯೇ ಹೊರತು ಜಿಲ್ಲೆಯ ಸಮಸ್ಯೆಗಳನ್ನು ಪರಿಗಣಿಸುತ್ತಿಲ್ಲ ಎಂದು ಜನತೆ ಪ್ರಶ್ನಿಸತೊಡಗಿದ್ದಾರೆ.
ಖಾಸಗಿ ನರ್ಸಿಂಗ್ ಹೋಂನಲ್ಲಿ ಕೊರೊನಾ ಸೋಂಕಿತರನ್ನು ಇಟ್ಟುಕೊಳ್ಳುವುದು ಅಪರೂಪ. ಯಾಕೆಂದರೆ ಎಲ್ಲವನ್ನೂ ಲಾಭದ ದೃಷ್ಟಿಯಿಂದಲೇ ನೋಡುವ ನರ್ಸಿಂಗ್ ಹೋಂಗಳು ಅಷ್ಟು ಸುಲಭವಾಗಿ ವೆಂಟಿಲೇಟರ್ ಬಿಟ್ಟುಕೊಡುವ ಸಾಧ್ಯತೆ ಇಲ್ಲ. ಕೊರೊನಾ ಸೋಂಕಿತರನ್ನು ನರ್ಸಿಂಗ್ ಹೋಂನಲ್ಲಿಟ್ಟರೆ ಅಲ್ಲಿಗೆ ಬರುವ ರೋಗಿಗಳು ಬರದಂತಾಗುತ್ತಾರೆ ಎಂಬ ಮಾತುಗಳು ಇವೆ. ಜೊತೆಗೆ ನರ್ಸಿಂಗ್ ಹೋಂಗಳಲ್ಲಿ ಒಂದು ದಿನ ವೆಂಟಿಲೇಟರ್್‌ನಲ್ಲಿಡಲು ಕನಿಷ್ಠ 10 ರಿಂದ 20 ಸಾವಿರ ರೂಪಾಯಿ ನಿಗದಿ ಮಾಡುತ್ತಾರೆ. ಪರಿಸ್ಥಿತಿ ಹೀಗಿರುವಾಗ ಸಚಿವರು ಈ ನಿಟ್ಟಿನಲ್ಲಿ ಮಾತುಕತೆ ನಡೆಸಿ ವ್ಯವಸ್ಥೆ ಮಾಡಬೇಕಿತ್ತು.
ತುಮಕೂರು ಜಿಲ್ಲೆಯ ಮೂಲಕ ರಾಜ್ಯದ 23 ಜಿಲ್ಲೆಗಳಿಗೆ ಜನರು ಪ್ರಯಾಣಿಸುತ್ತಾರೆ. ಇದು ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂಬ ಮಾತೂ ಇದೆ.. ಜೊತೆಗೆ ತುಮಕೂರು ನಗರದ ಬಹುತೇಕರು ಬೆಂಗಳೂರು ನಗರವನ್ನು ಕೆಲಸಕ್ಕಾಗಿ ಆಶ್ರಯಿಸಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಕಂಡು ಬಂದಿದ್ದು, ಅಲ್ಲಿನ ಸಂಪರ್ಕ ಹೊಂದಿರುವ ತುಮಕೂರು ನಗರದ ಜನತೆಗೂ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲಿದ್ದ ಜನರು ತುಮಕೂರಿಗೆ ಆಗಮಿಸಿದ್ದಾರೆ ಮತ್ತು ವಿದೇಶಗಳಿಂದಲೂ ತುಮಕೂರಿಗೆ ಬಂದಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ಸಭೆ ಕರೆದು ಸಮನ್ವಯತೆ ಸಾಧಿಸುವಂತಹ ಕೆಲಸ ಮಾಡಬೇಕಿತ್ತು. ಅಂತಹ ಕೆಲಸ ಇದುವರೆಗೂ ನಡೆದಿಲ್ಲ.
ಎಲ್ಲವನ್ನೂ ಅಧಿಕಾರಿಗಳೇ ನಿಭಾಯಿಸುತ್ತಿದ್ದಾರೆ. ಕೊರೊನಾ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಲಕ್ಷ್ಯ ವಹಿಸುತ್ತಿಲ್ಲ. ಈಗಾಗಲೇ ಜಿಲ್ಲಾಸ್ಪತ್ರೆಗೆ 10 ಮಂದಿ ಶಂಕಿತ ಕೊರೊನ ವೈರಸ್ ಸೋಂಕಿತರು ದಾಖಲಾಗಿದ್ದು ಅವರ ರಕ್ತ ಮತ್ತು ಕಫಾ ಮಾದರಿಗಳನ್ನು ಬೆಂಗಳೂರಿಗೆ ಕಳಿಸಿಕೊಡಲಾಗಿದೆ. ಇನ್ನು ವರದಿ ಬಂದಿಲ್ಲ. ಈ ವರದಿ ಬರುವ ಮೊದಲು ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚೆತ್ತುಕೊಂಡು ಸಮರೋಪಾದಿಯಲ್ಲಿ ಕೊರೊನಾ ಹರಡದಂತೆ ಕ್ರಮ ವಹಿಸಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...