Homeಕರ್ನಾಟಕಹಿರಿಯ ರೈತ ಹೋರಾಟಗಾರರನ್ನು ಅವಮಾನಿಸಿದ ಸಚಿವ ಮಾಧುಸ್ವಾಮಿ ನಡೆಗೆ ತೀವ್ರ ಆಕ್ರೋಶ

ಹಿರಿಯ ರೈತ ಹೋರಾಟಗಾರರನ್ನು ಅವಮಾನಿಸಿದ ಸಚಿವ ಮಾಧುಸ್ವಾಮಿ ನಡೆಗೆ ತೀವ್ರ ಆಕ್ರೋಶ

’ಐ ಆಮ್ ದಿ ಮಿನಿಸ್ಟರ್, ನಾನೇಳಿದ್ದು ಕೇಳಬೇಕು. ಇಲ್ಲದಿದ್ದರೆ ಇಲ್ಲಿಂದ ಹೋಗಿ’ ಎಂದು ಸಚಿವ ಮಾಧುಸ್ವಾಮಿ ಸೌಜನ್ಯ ಮೀರಿದ್ದರು.

- Advertisement -
- Advertisement -

ಪ್ರಶ್ನೆ ಮಾಡುವ ರೈತರ ಮೇಲೆ ರೇಗುವ ಪರಿಪಾಠ ಬೆಳೆಸಿಕೊಂಡಿರುವ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಧೋರಣೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಹಿಂದೆ ಕೋಲಾರ ರೈತ ಮಹಿಳೆಯೊಬ್ಬರನ್ನು ರ್‍ಯಾಸ್ಕಲ್ ಬಾಯ್ಮುಚ್ಚು ಎಂದು ಧಮಕಿ ಹಾಕಿದ್ದ ಕಾನೂನು ಸಚಿವರು ಇದೀಗ ತುಮಕೂರಿನಲ್ಲಿ ಹಿರಿಯ ಹೋರಾಟಗಾರರಿಗೆ ’ಐ ಆಮ್ ದಿ ಮಿನಿಸ್ಟರ್, ನಾನೇಳಿದ್ದು ಕೇಳಬೇಕು. ಇಲ್ಲದಿದ್ದರೆ ಇಲ್ಲಿಂದ ಹೋಗಿ’ ಎಂದು ಸೌಜನ್ಯ ಮೀರಿದ ನಡವಳಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ನಡೆದದ್ದು ಇಷ್ಟು. ರಾಜ್ಯ ರೈತ ಸಂಘ, ಹಸಿರು ಸೇನೆ, ಕರ್ನಾಟಕ ಪ್ರಾಂತ ರೈತ ಸಂಘ, ಎಐಕೆಎಸ್ ಸಿಸಿ ಮತ್ತು ಎಐಕೆಎಸ್ ಮತ್ತು ದಲಿತ ಸಂಘಟನೆಗಳು ಜೂನ್ 29ರಂದು ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲು ಪ್ರತಿಭಟನಾನಿರತ ರೈತ ಮುಖಂಡರು ಕಾದರು. ಅರ್ಧ ಗಂಟೆಯ ನಂತರ ಸಚಿವರು ಡಿಸಿ ಕಚೇರಿಯ ಎಡ ಭಾಗದ ಗೇಟಿನಿಂದ ಹೊರಕ್ಕೆ ಬಂದರು. ಪ್ರತಿಭಟನಾಕಾರರು ಬಲಭಾಗದ ಗೇಟಿನಲ್ಲಿ ಕಾಯುತ್ತಿದ್ದರು. ಸಚಿವರು ಬಲಭಾಗದ ಗೇಟ್ ಗೆ ಬಂದು ಮನವಿ ಸ್ವೀಕರಿಸುವಂತೆ ರೈತರು ಒತ್ತಾಯಿಸಿ ಸಚಿವರ ಕಾರನ್ನು ತಡೆದು ಘೋಷಣೆ ಕೂಗಿದರು.

ಪ್ರತಿಭಟನಾ ನಿರತರ ಬಳಿಗೆ ಬಂದು ಅಧಿಕಾರಿಗಳು ಸಚಿವರು ಮನವಿ ಸ್ವೀಕರಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ದತಿ.( ಕೆಲವೊಂದು ಸನ್ನಿವೇಶಗಳನ್ನು ಹೊರತುಪಡಿಸಿ) ಸಚಿವರು ಬಲ ಭಾಗದ ಗೇಟ್ ಗೆ ಬರಲು ಒಪ್ಪಲಿಲ್ಲ. ತಾನಿರುವಲ್ಲಿಗೇ ಬಂದು ಕೊಡಿ ಎಂದರು. ರೈತರು ಸಿಟ್ಟಿಗೆದ್ದರು. ಮಾಧುಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಇದು ಮಿನಿಸ್ಟರ್ ಅವರನ್ನು ಕೆರಳಿಸಿತು. ಮತ್ತೆ ಕಾರಿನಲ್ಲಿ ಕೂತರು. ಅಧಿಕಾರಿಗಳು ಸಮಾಧಾನ ಪಡಿಸಿ ಸಚಿವರನ್ನು ಕರೆತಂದರು.

ಎರಡನೇ ಅಂಕ: ರೈತರ ಒತ್ತಾಯಕ್ಕೆ ಮಣಿದು ಪ್ರತಿಭಟನಾ ನಿರತರ ಬಳಿಗೆ ಬಂದರು. ಪ್ರಾಂತ ರೈತ ಸಂಘ ಮುಖಂಡ ಬಿ.ಉಮೇಶ್ ಸಚಿವರೊಂದಿಗೆ ಸರ್ಕಾರದ ತೀರ್ಮಾಗಳಿಂದ ರೈತರಿಗಾಗುವ ಅನ್ಯಾಯವನ್ನು ವಿವರಿಸುತ್ತಿದ್ದರು. ಮಧ್ಯ ಪ್ರವೇಶಿಸಿದ ಸಚಿವರು ಉಮೇಶ್ ಅವರನ್ನು ದಬಾಯಿಸಲು ಮುಂದಾದರು. ಕೂಡಲೆ ಬಡವರ ಭೂಮಿ ವಸತಿ ಹಕ್ಕಿಗಾಗಿ ಹೋರಾಟ ಸೇರಿದಂತೆ ಹಲವು ಹೋರಾಟಗಳಲ್ಲಿ ಭಾಗಿಯಾಗಿರುವ ಹಿರಿಯರಾದ ಸಿ. ಯತಿರಾಜು ಅವರು ಸಚಿವರನ್ನು ಪ್ರಶ್ನಿಸತೊಡಗಿದರು.

ಸಿ.ಯತಿರಾಜ್ ರವರು ನಾಡಿನ ಹಿರಿಯ ಹೋರಾಟಗಾರರು. ಸದಾ ರೈತರು ,ಪರಿಸರದ ಕುರಿತು ಕಾಳಿಜಿಯಿಂದ ಹೋರಾಟ ನಡೆಸುತ್ತಿರುವವರು. ಇಂತಹ ಹಿರಿಯರ ಜೊತೆ ಸಚಿವ ಮಾಧುಸ್ವಾಮಿಯವರು ಇತ್ತಿಚಿಗೆ ನಡೆದ ಭೂ ಸುಧಾರಣಾ ಕಾಯ್ದೆ ವಿರುದ್ಧದ ಹೋರಾಟದ ಸಮಯದಲ್ಲಿ ಮನವಿಪತ್ರ ನೀಡುವ ವೇಳೆ ದುರಂಹಕಾರದಿಂದ ನಡೆದುಕೊಂಡಿದ್ದಾರೆ.#NaanuGauri #LawMinister #maduswamy

Posted by Naanu Gauri on Tuesday, June 30, 2020

ಭೂಸ್ವಾದೀನ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನ್ಯಾಯವಾಗುತ್ತದೆ. ಯಾರು ಬೇಕಾದರೂ ಎಷ್ಟು ಬೇಕಾದರೂ ಭೂಮಿ ಹೊಂದಬಹುದು. ಈಗಿರುವ ಕಾನೂನಿನಂತೆ 10 ಯೂನಿಟ್ ಗೆ 5.4 ಎಕರೆಯಂತೆ 54 ಎಕರೆ ಜಮೀನು ಹೊಂದಲು ಅವಕಾಶವಿದೆ. ತಿದ್ದುಪಡಿ ಮಾಡಿದರೆ 4 ಮಂದಿ ಸದಸ್ಯರಿರುವ ಕುಟುಂಬಕ್ಕೆ 20 ಯೂನಿಟ್ ಮಾಡಿದ್ದೀರಿ. ಇದರಿಂದ 108 ಎಕರೆ ಹೊಂದಬಹುದು. 5 ಮಂದಿ ಸದಸ್ಯರಿರುವ ಕುಟುಂಬಕ್ಕೆ 40 ಯೂನಿಟ್ ನಂತೆ 216 ಎಕರೆ ಹೊಂದಬಹುದು ಎಂದು ಹಿರಿಯ ಹೋರಾಟಗಾರ ಯತಿರಾಜು ಅವರು ಸಚಿವರನ್ನು ಪ್ರಶ್ನಿಸುತ್ತಾ ಹೋದರು.

ಇದರಿಂದ ಕೆರೆಳಿ ಕೆಂಡವಾದ ಸಚಿವ ಮಾಧುಸ್ವಾಮಿ, ’ಐ ಆಮ್ ಮಿನಿಸ್ಟರ್, ನಾನು ಹೇಳಿದ್ದು ಮೊದಲು ಕೇಳಿ. ನನಗೆ ಮಾತಾಡಲು ಮೊದಲು ಬಿಡಿ ನಿಮ್ಮ ಭಾಷಣ ಕೇಳಲು ನಾನಿಲ್ಲಿ ಬಂದಿಲ್’ ಎಂದು ಕೋಪಗೊಂಡರು. ಒಂದು ಹಂತದಲ್ಲಿ ನನ್ನ ಮಾತನ್ನು ಕೇಳುವುದಾದರೆ ಕೇಳಿ ಇಲ್ಲಾಂದ್ರೆ ಇಲ್ಲಿಂದ ಹೊರಡಿ ಎಂದು ಕೂಗಾಡಿದರು ಸಚಿವರು. ಸರ್ಕಾರದ ಭೂಸ್ವಾಧೀನ ಕಾಯ್ದೆ ತಿದ್ದುಪಡಿಯನ್ನು ಬಲವಾಗಿ ಸಮರ್ಥಿಸಿಕೊಂಡರು.

ಆಗ ಯತಿರಾಜು ಅವರು ‘ಮೊದಲು ರೈತರ ಸಮಸ್ಯೆಗಳನ್ನು ಕೇಳಿಸಿಕೊಳ್ಳಿ. ರೈತರ ಬೇಡಿಕೆಗಳ ಗಂಭೀರತೆ ತಿಳಿದುಕೊಳ್ಳಿ ಸರ್. ನಮಗೂ ಮಾತನಾಡಲು ಅವಕಾಶ ಕೊಡಿ. ಆಮೇಲೆ ನೀವು ಸರ್ಕಾರದ ನಡೆಯನ್ನು ಬೇಕಾಧರೆ ಸಮರ್ಥಿಸಿಕೊಳ್ಳಿ ಎಂದು ಅತ್ಯಂತ ಗೌರವಯುತವಾಗಿಯೇ ಸಚಿವರಿಗೆ ಹೇಳಿದರು.

ಇದರಿಂದ ಮತ್ತಷ್ಟು ಆಕ್ರೋಶಗೊಂಡ ಸಚಿವರು ಟೆಕ್ಕಿಗಳು ಸರ್ಕಾರಕ್ಕೆ ಭೂಮಿ ಬೇಕೆಂದು ಮನವಿ ಸಲ್ಲಿಸಿದ್ದಾರೆ. ಅದಕ್ಕಾಗಿ ಭೂಸುಧಾರಣೆಗೆ ತಿದ್ದುಪಡಿ ತರುತ್ತಿದ್ದೇವೆ ಎಂದು ಸಚಿವರು ಹೇಳತೊಡಗಿದರು. ಇದರಿಂದ ರೈತರಿಗೆ ದೊಡ್ಡಮಟ್ಟದ ಲಾಭವಾಗುತ್ತದೆ ಎಂದರು. ಇದರಿಂದ ಸಿಟ್ಟುಗೊಂಡ ಯತಿರಾಜು ಅವರು ತಲೆತಲಾಂತರದಿಂದ ಕೃಷಿಯನ್ನೇ ನಂಬಿಕೊಂಡು ಬಂದಿರುವರಿಗೆ ಸರಿಯಾದ ಸೌಲಭ್ಯ ಕಲ್ಪಿಸಿಲ್ಲ ಭೂಮಿ ಜೊತೆ ಭಾವನಾತ್ಮಕ ಸಂಬಂಧ ಹೊಂದಿರುವ ರೈತರನ್ನು ಬಿಟ್ಟು ಸಂಡೇ ಕೃಷಿಕರಿಗೆ ಭೂಮಿ ನೀಡುವುದರಿಂದ ಅನ್ನದ ಅಭದ್ರತೆ ಸೃಷ್ಟಿಯಾಗುತ್ತದೆ ಎಂದು ಹೇಳಿದಾಗ ಸಚಿವರು ಕೆರಳಿ ಕೆಂಡವಾದರು.

ನಿಮ್ಮ ಮಾತು ನಿಲ್ಲಿಸಿ, ನೀವು ಹೇಳುತ್ತಿರುವುದು ಸರಿಯಲ್ಲ.  5 ಜನರಿರುವ ಕುಟುಂಬಕ್ಕೆ 40 ಯೂನಿಟ್ ನಂತೆ ಕೇವಲ 84 ಎಕರೆ ಭೂಮಿ ಹೊಂದಲು ಈಗಿನ ಕಾನೂನಿನಲ್ಲಿ ಅವಕಾಶವಾಗಲಿದೆ ಎಂದು ಸಚಿವರ ಹೇಳಿಕೆ ಸುಳ್ಳಿನಿಂದ ಕೂಡಿದೆ ಈಗಿನ ಕಾನೂನಿನಂತ ಒಂದು ಕುಟುಂಬ 216 ಎಕರೆ ಹೊಂದಬಹುದು. ಇದು ಭೂಮಿಯನ್ನೇ ನಂಬಿರುವ ರೈತರಿಗೆ ತೊಂದರೆಯಾಗುತ್ತದೆ ಎಂದು ವಿವರಿಸಲು ಯತಿರಾಜು ಮುಂದಾದರು.

ಹೀಗಾಗಿ ತನಗೆ ಪ್ರಶ್ನಿಸಲು ಬರುತ್ತಾರೆ ಎಂದುಕೊಂಡ ಸಚಿವರು ಹಿರಿಯ ಹೋರಾಟಗಾರರಿಗೆ ಗೌರವ ಕೊಡದೆ ನಡೆದುಕೊಂಡರು ಎಂದು ಆಡಿಕೊಳ್ಳುವಂತಾಗಿದೆ. ಕೇವಲ ಬಂದು ಮನವಿ ಪಡೆದು ಹೋಗಿದ್ದರೆ ಯಾವುದೇ ಸಮಸ್ಯೆ ಎದುರಾಗುತ್ತಿರಲಿಲ್ಲ. ಸಚಿವರ ಅಹಂಗೆ ಇದು ಉದಾಹರಣೆಯಾಗಿದೆ. ಇಂತಹ ಧೋರಣೆಯನ್ನು ಸಚಿವರು ತಿದ್ದಿಕೊಳ್ಳಬೇಕು ಎಂದು ಹಿರಿಯ ಜೀವಗಳು ಆಗ್ರಹಿಸಿವೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಹಿರಿಯ ಹೋರಾಟಗಾರ ಸಿ.ಯತಿರಾಜು, “ರೈತರ ಆತಂಕವನ್ನು ಸಚಿವರ ಮುಂದೆ ಹೇಳಿದ್ದೇ ತಪ್ಪಾ? ಸದನ ಶೂರ ಎಂದು ಕರೆಸಿಕೊಳ್ಳುವ ಸಚಿವರು ಹೀಗೆ ವರ್ತಿಸಿರುವುದು ಬೇಸರ ಮೂಡಿಸಿದೆ. ಟಿಕ್ಕಿಗಳಿಗೆ ಭೂಮಿ ನೀಡಿದರೆ ನ್ಯಾಚುರಲ್ ಫಾರಂ ಹೆಚ್ಚಾಗುತ್ತದೆ.  ಕೃಷಿ ಉತ್ತೇಜನ ಸಿಗುವುದಿಲ್ಲ. ಶೇ.85ರಷ್ಟು ಸಣ್ಣ ಮಧ್ಯಮ ರೈತರು ಇದ್ದು ಭೂಮಿ ನಂಬಿ ಬದುಕುತ್ತಿದ್ದಾರೆ. ಈಗ ಭೂಮಿಯನ್ನೂ ಕಳೆದುಕೊಂಡರೆ ಅವರ ಬದುಕು ಬರ್ಬರವಾಗುತ್ತದೆ. ಒಂದಿಷ್ಟು ದುಡ್ಡು ಬರಬಹುದು. ರೈತರ ಸ್ವಾಭಿಮಾನ ಮತ್ತು ಘನತೆಯುತ ಬದುಕಿಗೆ ಧಕ್ಕೆ ಬರುತ್ತದೆ ಎಂಬುದನ್ನು ಸಚಿವರು ಅರ್ಥ ಮಾಡಿಕೊಳ್ಳಬೇಕು. ತಾನೇ ಸರ್ವಜ್ಞ ಎಂಬ ಮನೋಭಾವ ಬಿಟ್ಟರೆ ಒಳ್ಳೆಯದು” ಎಂದು ಹೇಳಿದರು.

ಭೂಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ಭೂಮಿ ಕಾರ್ಪೋರೇಟ್ ಕುಳಗಳು ಸಂಡೇ ಕೃಷಿಕರ ಪಾಲಾಗುತ್ತದೆ ಕಂಪನಿಗಳು, ಬಂಡವಾಳಗಾರರು ಭೂಮಿ ಹೊಂದಿ ನಿಜವಾದ ರೈತರು ಜೀತದಾಳುಗಂತೆ ದುಡಿಮೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಆತಂಕ ರೈತ ಮುಖಂಡರದ್ದು.

79 ಎ ಬಿ ಕಲಂಗಳಿಂದ ಹೆಚ್ಚು ಭೂಮಿ ಹೊಂದಲು ಅವಕಾಶವಿಲ್ಲ. ಇವುಗಳನ್ನು ತೆಗೆದುಹಾಕಿದರೆ ಕೃಷಿಕರಿಗೆ ತೊಂದರೆಯಾಗಲಿದೆ. ನೈಸರ್ಗಿಕ ಕೃಷಿ ಹೋಗಿ ರಫ್ತು ಆಧಾರಿತ ಕೃಷಿ ಸಂಸ್ಕೃತಿ ಬರುತ್ತದೆ. ಆಹಾರ ಭದ್ರತೆಗೆ ಧಕ್ಕೆಯಾಗುತ್ತದೆ. ರೈತರ ಆಧಾಯ ಖೋತಾ ಆಗುತ್ತದೆ. ಯಾವುದೇ ಕಾರಣಕ್ಕೂ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮಾಡಬಾರದು. ರೈತರ ಪರವಾಗಿ ಧ್ವನಿ ಎತ್ತಬೇಕಾಗಿದ್ದ ಸಚಿವ ಮಾಧುಸ್ವಾಮಿ ಬಂಡವಾಳಿಗರು ಮತ್ತು ಕಾರ್ಪೋರೇಟ್ ಕಂಪನಿಗಳ ಪರವಾಗಿ ನಿಂತಿರುವುದಕ್ಕೆ ರೈತ ಸಂಘಟನೆಗಳು ಸಿಡಿದೇಳುವಂತೆ ಮಾಡಿದೆ.


ಓದಿ: ಭೂಸುಗ್ರೀವಾಜ್ಞೆ ವಿರೋಧಿಸಿ ಪ್ರತಿಭಟನೆ: ರೈತಮುಖಂಡರೊಂದಿಗೆ ಮಾಧುಸ್ವಾಮಿ ಮಾತಿನ ಚಕಮಕಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...