Homeಕರ್ನಾಟಕಹಿರಿಯ ರೈತ ಹೋರಾಟಗಾರರನ್ನು ಅವಮಾನಿಸಿದ ಸಚಿವ ಮಾಧುಸ್ವಾಮಿ ನಡೆಗೆ ತೀವ್ರ ಆಕ್ರೋಶ

ಹಿರಿಯ ರೈತ ಹೋರಾಟಗಾರರನ್ನು ಅವಮಾನಿಸಿದ ಸಚಿವ ಮಾಧುಸ್ವಾಮಿ ನಡೆಗೆ ತೀವ್ರ ಆಕ್ರೋಶ

’ಐ ಆಮ್ ದಿ ಮಿನಿಸ್ಟರ್, ನಾನೇಳಿದ್ದು ಕೇಳಬೇಕು. ಇಲ್ಲದಿದ್ದರೆ ಇಲ್ಲಿಂದ ಹೋಗಿ’ ಎಂದು ಸಚಿವ ಮಾಧುಸ್ವಾಮಿ ಸೌಜನ್ಯ ಮೀರಿದ್ದರು.

- Advertisement -
- Advertisement -

ಪ್ರಶ್ನೆ ಮಾಡುವ ರೈತರ ಮೇಲೆ ರೇಗುವ ಪರಿಪಾಠ ಬೆಳೆಸಿಕೊಂಡಿರುವ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಧೋರಣೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಹಿಂದೆ ಕೋಲಾರ ರೈತ ಮಹಿಳೆಯೊಬ್ಬರನ್ನು ರ್‍ಯಾಸ್ಕಲ್ ಬಾಯ್ಮುಚ್ಚು ಎಂದು ಧಮಕಿ ಹಾಕಿದ್ದ ಕಾನೂನು ಸಚಿವರು ಇದೀಗ ತುಮಕೂರಿನಲ್ಲಿ ಹಿರಿಯ ಹೋರಾಟಗಾರರಿಗೆ ’ಐ ಆಮ್ ದಿ ಮಿನಿಸ್ಟರ್, ನಾನೇಳಿದ್ದು ಕೇಳಬೇಕು. ಇಲ್ಲದಿದ್ದರೆ ಇಲ್ಲಿಂದ ಹೋಗಿ’ ಎಂದು ಸೌಜನ್ಯ ಮೀರಿದ ನಡವಳಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ನಡೆದದ್ದು ಇಷ್ಟು. ರಾಜ್ಯ ರೈತ ಸಂಘ, ಹಸಿರು ಸೇನೆ, ಕರ್ನಾಟಕ ಪ್ರಾಂತ ರೈತ ಸಂಘ, ಎಐಕೆಎಸ್ ಸಿಸಿ ಮತ್ತು ಎಐಕೆಎಸ್ ಮತ್ತು ದಲಿತ ಸಂಘಟನೆಗಳು ಜೂನ್ 29ರಂದು ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲು ಪ್ರತಿಭಟನಾನಿರತ ರೈತ ಮುಖಂಡರು ಕಾದರು. ಅರ್ಧ ಗಂಟೆಯ ನಂತರ ಸಚಿವರು ಡಿಸಿ ಕಚೇರಿಯ ಎಡ ಭಾಗದ ಗೇಟಿನಿಂದ ಹೊರಕ್ಕೆ ಬಂದರು. ಪ್ರತಿಭಟನಾಕಾರರು ಬಲಭಾಗದ ಗೇಟಿನಲ್ಲಿ ಕಾಯುತ್ತಿದ್ದರು. ಸಚಿವರು ಬಲಭಾಗದ ಗೇಟ್ ಗೆ ಬಂದು ಮನವಿ ಸ್ವೀಕರಿಸುವಂತೆ ರೈತರು ಒತ್ತಾಯಿಸಿ ಸಚಿವರ ಕಾರನ್ನು ತಡೆದು ಘೋಷಣೆ ಕೂಗಿದರು.

ಪ್ರತಿಭಟನಾ ನಿರತರ ಬಳಿಗೆ ಬಂದು ಅಧಿಕಾರಿಗಳು ಸಚಿವರು ಮನವಿ ಸ್ವೀಕರಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ದತಿ.( ಕೆಲವೊಂದು ಸನ್ನಿವೇಶಗಳನ್ನು ಹೊರತುಪಡಿಸಿ) ಸಚಿವರು ಬಲ ಭಾಗದ ಗೇಟ್ ಗೆ ಬರಲು ಒಪ್ಪಲಿಲ್ಲ. ತಾನಿರುವಲ್ಲಿಗೇ ಬಂದು ಕೊಡಿ ಎಂದರು. ರೈತರು ಸಿಟ್ಟಿಗೆದ್ದರು. ಮಾಧುಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಇದು ಮಿನಿಸ್ಟರ್ ಅವರನ್ನು ಕೆರಳಿಸಿತು. ಮತ್ತೆ ಕಾರಿನಲ್ಲಿ ಕೂತರು. ಅಧಿಕಾರಿಗಳು ಸಮಾಧಾನ ಪಡಿಸಿ ಸಚಿವರನ್ನು ಕರೆತಂದರು.

ಎರಡನೇ ಅಂಕ: ರೈತರ ಒತ್ತಾಯಕ್ಕೆ ಮಣಿದು ಪ್ರತಿಭಟನಾ ನಿರತರ ಬಳಿಗೆ ಬಂದರು. ಪ್ರಾಂತ ರೈತ ಸಂಘ ಮುಖಂಡ ಬಿ.ಉಮೇಶ್ ಸಚಿವರೊಂದಿಗೆ ಸರ್ಕಾರದ ತೀರ್ಮಾಗಳಿಂದ ರೈತರಿಗಾಗುವ ಅನ್ಯಾಯವನ್ನು ವಿವರಿಸುತ್ತಿದ್ದರು. ಮಧ್ಯ ಪ್ರವೇಶಿಸಿದ ಸಚಿವರು ಉಮೇಶ್ ಅವರನ್ನು ದಬಾಯಿಸಲು ಮುಂದಾದರು. ಕೂಡಲೆ ಬಡವರ ಭೂಮಿ ವಸತಿ ಹಕ್ಕಿಗಾಗಿ ಹೋರಾಟ ಸೇರಿದಂತೆ ಹಲವು ಹೋರಾಟಗಳಲ್ಲಿ ಭಾಗಿಯಾಗಿರುವ ಹಿರಿಯರಾದ ಸಿ. ಯತಿರಾಜು ಅವರು ಸಚಿವರನ್ನು ಪ್ರಶ್ನಿಸತೊಡಗಿದರು.

ಸಿ.ಯತಿರಾಜ್ ರವರು ನಾಡಿನ ಹಿರಿಯ ಹೋರಾಟಗಾರರು. ಸದಾ ರೈತರು ,ಪರಿಸರದ ಕುರಿತು ಕಾಳಿಜಿಯಿಂದ ಹೋರಾಟ ನಡೆಸುತ್ತಿರುವವರು. ಇಂತಹ ಹಿರಿಯರ ಜೊತೆ ಸಚಿವ ಮಾಧುಸ್ವಾಮಿಯವರು ಇತ್ತಿಚಿಗೆ ನಡೆದ ಭೂ ಸುಧಾರಣಾ ಕಾಯ್ದೆ ವಿರುದ್ಧದ ಹೋರಾಟದ ಸಮಯದಲ್ಲಿ ಮನವಿಪತ್ರ ನೀಡುವ ವೇಳೆ ದುರಂಹಕಾರದಿಂದ ನಡೆದುಕೊಂಡಿದ್ದಾರೆ.#NaanuGauri #LawMinister #maduswamy

Posted by Naanu Gauri on Tuesday, June 30, 2020

ಭೂಸ್ವಾದೀನ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನ್ಯಾಯವಾಗುತ್ತದೆ. ಯಾರು ಬೇಕಾದರೂ ಎಷ್ಟು ಬೇಕಾದರೂ ಭೂಮಿ ಹೊಂದಬಹುದು. ಈಗಿರುವ ಕಾನೂನಿನಂತೆ 10 ಯೂನಿಟ್ ಗೆ 5.4 ಎಕರೆಯಂತೆ 54 ಎಕರೆ ಜಮೀನು ಹೊಂದಲು ಅವಕಾಶವಿದೆ. ತಿದ್ದುಪಡಿ ಮಾಡಿದರೆ 4 ಮಂದಿ ಸದಸ್ಯರಿರುವ ಕುಟುಂಬಕ್ಕೆ 20 ಯೂನಿಟ್ ಮಾಡಿದ್ದೀರಿ. ಇದರಿಂದ 108 ಎಕರೆ ಹೊಂದಬಹುದು. 5 ಮಂದಿ ಸದಸ್ಯರಿರುವ ಕುಟುಂಬಕ್ಕೆ 40 ಯೂನಿಟ್ ನಂತೆ 216 ಎಕರೆ ಹೊಂದಬಹುದು ಎಂದು ಹಿರಿಯ ಹೋರಾಟಗಾರ ಯತಿರಾಜು ಅವರು ಸಚಿವರನ್ನು ಪ್ರಶ್ನಿಸುತ್ತಾ ಹೋದರು.

ಇದರಿಂದ ಕೆರೆಳಿ ಕೆಂಡವಾದ ಸಚಿವ ಮಾಧುಸ್ವಾಮಿ, ’ಐ ಆಮ್ ಮಿನಿಸ್ಟರ್, ನಾನು ಹೇಳಿದ್ದು ಮೊದಲು ಕೇಳಿ. ನನಗೆ ಮಾತಾಡಲು ಮೊದಲು ಬಿಡಿ ನಿಮ್ಮ ಭಾಷಣ ಕೇಳಲು ನಾನಿಲ್ಲಿ ಬಂದಿಲ್’ ಎಂದು ಕೋಪಗೊಂಡರು. ಒಂದು ಹಂತದಲ್ಲಿ ನನ್ನ ಮಾತನ್ನು ಕೇಳುವುದಾದರೆ ಕೇಳಿ ಇಲ್ಲಾಂದ್ರೆ ಇಲ್ಲಿಂದ ಹೊರಡಿ ಎಂದು ಕೂಗಾಡಿದರು ಸಚಿವರು. ಸರ್ಕಾರದ ಭೂಸ್ವಾಧೀನ ಕಾಯ್ದೆ ತಿದ್ದುಪಡಿಯನ್ನು ಬಲವಾಗಿ ಸಮರ್ಥಿಸಿಕೊಂಡರು.

ಆಗ ಯತಿರಾಜು ಅವರು ‘ಮೊದಲು ರೈತರ ಸಮಸ್ಯೆಗಳನ್ನು ಕೇಳಿಸಿಕೊಳ್ಳಿ. ರೈತರ ಬೇಡಿಕೆಗಳ ಗಂಭೀರತೆ ತಿಳಿದುಕೊಳ್ಳಿ ಸರ್. ನಮಗೂ ಮಾತನಾಡಲು ಅವಕಾಶ ಕೊಡಿ. ಆಮೇಲೆ ನೀವು ಸರ್ಕಾರದ ನಡೆಯನ್ನು ಬೇಕಾಧರೆ ಸಮರ್ಥಿಸಿಕೊಳ್ಳಿ ಎಂದು ಅತ್ಯಂತ ಗೌರವಯುತವಾಗಿಯೇ ಸಚಿವರಿಗೆ ಹೇಳಿದರು.

ಇದರಿಂದ ಮತ್ತಷ್ಟು ಆಕ್ರೋಶಗೊಂಡ ಸಚಿವರು ಟೆಕ್ಕಿಗಳು ಸರ್ಕಾರಕ್ಕೆ ಭೂಮಿ ಬೇಕೆಂದು ಮನವಿ ಸಲ್ಲಿಸಿದ್ದಾರೆ. ಅದಕ್ಕಾಗಿ ಭೂಸುಧಾರಣೆಗೆ ತಿದ್ದುಪಡಿ ತರುತ್ತಿದ್ದೇವೆ ಎಂದು ಸಚಿವರು ಹೇಳತೊಡಗಿದರು. ಇದರಿಂದ ರೈತರಿಗೆ ದೊಡ್ಡಮಟ್ಟದ ಲಾಭವಾಗುತ್ತದೆ ಎಂದರು. ಇದರಿಂದ ಸಿಟ್ಟುಗೊಂಡ ಯತಿರಾಜು ಅವರು ತಲೆತಲಾಂತರದಿಂದ ಕೃಷಿಯನ್ನೇ ನಂಬಿಕೊಂಡು ಬಂದಿರುವರಿಗೆ ಸರಿಯಾದ ಸೌಲಭ್ಯ ಕಲ್ಪಿಸಿಲ್ಲ ಭೂಮಿ ಜೊತೆ ಭಾವನಾತ್ಮಕ ಸಂಬಂಧ ಹೊಂದಿರುವ ರೈತರನ್ನು ಬಿಟ್ಟು ಸಂಡೇ ಕೃಷಿಕರಿಗೆ ಭೂಮಿ ನೀಡುವುದರಿಂದ ಅನ್ನದ ಅಭದ್ರತೆ ಸೃಷ್ಟಿಯಾಗುತ್ತದೆ ಎಂದು ಹೇಳಿದಾಗ ಸಚಿವರು ಕೆರಳಿ ಕೆಂಡವಾದರು.

ನಿಮ್ಮ ಮಾತು ನಿಲ್ಲಿಸಿ, ನೀವು ಹೇಳುತ್ತಿರುವುದು ಸರಿಯಲ್ಲ.  5 ಜನರಿರುವ ಕುಟುಂಬಕ್ಕೆ 40 ಯೂನಿಟ್ ನಂತೆ ಕೇವಲ 84 ಎಕರೆ ಭೂಮಿ ಹೊಂದಲು ಈಗಿನ ಕಾನೂನಿನಲ್ಲಿ ಅವಕಾಶವಾಗಲಿದೆ ಎಂದು ಸಚಿವರ ಹೇಳಿಕೆ ಸುಳ್ಳಿನಿಂದ ಕೂಡಿದೆ ಈಗಿನ ಕಾನೂನಿನಂತ ಒಂದು ಕುಟುಂಬ 216 ಎಕರೆ ಹೊಂದಬಹುದು. ಇದು ಭೂಮಿಯನ್ನೇ ನಂಬಿರುವ ರೈತರಿಗೆ ತೊಂದರೆಯಾಗುತ್ತದೆ ಎಂದು ವಿವರಿಸಲು ಯತಿರಾಜು ಮುಂದಾದರು.

ಹೀಗಾಗಿ ತನಗೆ ಪ್ರಶ್ನಿಸಲು ಬರುತ್ತಾರೆ ಎಂದುಕೊಂಡ ಸಚಿವರು ಹಿರಿಯ ಹೋರಾಟಗಾರರಿಗೆ ಗೌರವ ಕೊಡದೆ ನಡೆದುಕೊಂಡರು ಎಂದು ಆಡಿಕೊಳ್ಳುವಂತಾಗಿದೆ. ಕೇವಲ ಬಂದು ಮನವಿ ಪಡೆದು ಹೋಗಿದ್ದರೆ ಯಾವುದೇ ಸಮಸ್ಯೆ ಎದುರಾಗುತ್ತಿರಲಿಲ್ಲ. ಸಚಿವರ ಅಹಂಗೆ ಇದು ಉದಾಹರಣೆಯಾಗಿದೆ. ಇಂತಹ ಧೋರಣೆಯನ್ನು ಸಚಿವರು ತಿದ್ದಿಕೊಳ್ಳಬೇಕು ಎಂದು ಹಿರಿಯ ಜೀವಗಳು ಆಗ್ರಹಿಸಿವೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಹಿರಿಯ ಹೋರಾಟಗಾರ ಸಿ.ಯತಿರಾಜು, “ರೈತರ ಆತಂಕವನ್ನು ಸಚಿವರ ಮುಂದೆ ಹೇಳಿದ್ದೇ ತಪ್ಪಾ? ಸದನ ಶೂರ ಎಂದು ಕರೆಸಿಕೊಳ್ಳುವ ಸಚಿವರು ಹೀಗೆ ವರ್ತಿಸಿರುವುದು ಬೇಸರ ಮೂಡಿಸಿದೆ. ಟಿಕ್ಕಿಗಳಿಗೆ ಭೂಮಿ ನೀಡಿದರೆ ನ್ಯಾಚುರಲ್ ಫಾರಂ ಹೆಚ್ಚಾಗುತ್ತದೆ.  ಕೃಷಿ ಉತ್ತೇಜನ ಸಿಗುವುದಿಲ್ಲ. ಶೇ.85ರಷ್ಟು ಸಣ್ಣ ಮಧ್ಯಮ ರೈತರು ಇದ್ದು ಭೂಮಿ ನಂಬಿ ಬದುಕುತ್ತಿದ್ದಾರೆ. ಈಗ ಭೂಮಿಯನ್ನೂ ಕಳೆದುಕೊಂಡರೆ ಅವರ ಬದುಕು ಬರ್ಬರವಾಗುತ್ತದೆ. ಒಂದಿಷ್ಟು ದುಡ್ಡು ಬರಬಹುದು. ರೈತರ ಸ್ವಾಭಿಮಾನ ಮತ್ತು ಘನತೆಯುತ ಬದುಕಿಗೆ ಧಕ್ಕೆ ಬರುತ್ತದೆ ಎಂಬುದನ್ನು ಸಚಿವರು ಅರ್ಥ ಮಾಡಿಕೊಳ್ಳಬೇಕು. ತಾನೇ ಸರ್ವಜ್ಞ ಎಂಬ ಮನೋಭಾವ ಬಿಟ್ಟರೆ ಒಳ್ಳೆಯದು” ಎಂದು ಹೇಳಿದರು.

ಭೂಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ಭೂಮಿ ಕಾರ್ಪೋರೇಟ್ ಕುಳಗಳು ಸಂಡೇ ಕೃಷಿಕರ ಪಾಲಾಗುತ್ತದೆ ಕಂಪನಿಗಳು, ಬಂಡವಾಳಗಾರರು ಭೂಮಿ ಹೊಂದಿ ನಿಜವಾದ ರೈತರು ಜೀತದಾಳುಗಂತೆ ದುಡಿಮೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಆತಂಕ ರೈತ ಮುಖಂಡರದ್ದು.

79 ಎ ಬಿ ಕಲಂಗಳಿಂದ ಹೆಚ್ಚು ಭೂಮಿ ಹೊಂದಲು ಅವಕಾಶವಿಲ್ಲ. ಇವುಗಳನ್ನು ತೆಗೆದುಹಾಕಿದರೆ ಕೃಷಿಕರಿಗೆ ತೊಂದರೆಯಾಗಲಿದೆ. ನೈಸರ್ಗಿಕ ಕೃಷಿ ಹೋಗಿ ರಫ್ತು ಆಧಾರಿತ ಕೃಷಿ ಸಂಸ್ಕೃತಿ ಬರುತ್ತದೆ. ಆಹಾರ ಭದ್ರತೆಗೆ ಧಕ್ಕೆಯಾಗುತ್ತದೆ. ರೈತರ ಆಧಾಯ ಖೋತಾ ಆಗುತ್ತದೆ. ಯಾವುದೇ ಕಾರಣಕ್ಕೂ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮಾಡಬಾರದು. ರೈತರ ಪರವಾಗಿ ಧ್ವನಿ ಎತ್ತಬೇಕಾಗಿದ್ದ ಸಚಿವ ಮಾಧುಸ್ವಾಮಿ ಬಂಡವಾಳಿಗರು ಮತ್ತು ಕಾರ್ಪೋರೇಟ್ ಕಂಪನಿಗಳ ಪರವಾಗಿ ನಿಂತಿರುವುದಕ್ಕೆ ರೈತ ಸಂಘಟನೆಗಳು ಸಿಡಿದೇಳುವಂತೆ ಮಾಡಿದೆ.


ಓದಿ: ಭೂಸುಗ್ರೀವಾಜ್ಞೆ ವಿರೋಧಿಸಿ ಪ್ರತಿಭಟನೆ: ರೈತಮುಖಂಡರೊಂದಿಗೆ ಮಾಧುಸ್ವಾಮಿ ಮಾತಿನ ಚಕಮಕಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...