Homeಕರ್ನಾಟಕಭೂ ಸವಕಳಿ: ರೈತರ ಪರಿಹಾರದ ಮೊತ್ತ ಹೆಚ್ಚಳಕ್ಕೆ ಸಚಿವ ಮುರುಗೇಶ್ ನಿರಾಣಿ ಮನವಿ

ಭೂ ಸವಕಳಿ: ರೈತರ ಪರಿಹಾರದ ಮೊತ್ತ ಹೆಚ್ಚಳಕ್ಕೆ ಸಚಿವ ಮುರುಗೇಶ್ ನಿರಾಣಿ ಮನವಿ

- Advertisement -
- Advertisement -

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನಲ್ಲಿ ಕೃಷ್ಣ ನದಿಯ ಪ್ರವಾಹದಿಂದಾಗಿ ಕೃಷಿ ಭೂಮಿಯು ಫಲವತ್ತತೆಯನ್ನು ಕಳೆದುಕೊಂಡಿದ್ದು ರೈತರಿಗೆ ನೀಡುವ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂದು ಸಚಿವ ಮುರುಗೇಶ್ ನಿರಾಣಿ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರದ್ಲಾಂಜೆ ಅವರನ್ನು ಭೇಟಿಯಾದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ನಿರಾಣಿ ಅವರು ತಕ್ಷಣವೇ ಪರಿಹಾರದ ಮೊತ್ತವನ್ನು ಹೆಚ್ಚಿಸಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮನವಿ ಪತ್ರ ಸಲ್ಲಿಸಿದ್ದಾರೆ.

ಜಮಖಂಡಿ ತಾಲ್ಲೂಕಿನ ಉಪವಿಭಾಗದಲ್ಲಿ ಕೃಷ್ಣ ನದಿಯಿಂದ ಪದೇ ಪದೇ ಪ್ರವಾಹ ಉಂಟಾಗುವ ಕಾರಣ,ರೈತರ ಜಮೀನಿನ ಫಲವತ್ತಾದ ಮಣ್ಣು ಕೊಚ್ಚಿ ಹೋಗುತ್ತದೆ. ಪರಿಣಾಮ ಸರಿಯಾದ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲೆಯ ವಸ್ತುಸ್ಥಿತಿಯನ್ನು ತಿಳಿಸಿದ್ದಾರೆ.

ಒಂದು ಕಡೆ ರೈತರು ಪ್ರವಾಹದಿಂದ ತಮ್ಮ ಬೆಳೆಗಳನ್ನು ನಾಶವಾದರೆ ಮತ್ತೊಂದು ಕಡೆ ಕೃಷಿ ಜಮೀನು ಫಲವತ್ತತೆಯನ್ನು ಕಳೆದುಕೊಂಡಿದ್ದರಿಂದ ಮಣ್ಣು ಸವಕಳಿಗೆ ಬಂದಿದೆ. ಇದರಿಂದಾಗಿ ರೈತರು ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ತಾಲ್ಲೂಕಿನ ಒಟ್ಟು 14,051 ಹೆಕ್ಟೇರ್ ಪ್ರದೇಶದಲ್ಲಿ 5,994 ಪ್ರದೇಶವು ಸವಕಳಿಗೆ ತುತ್ತಾಗಿದೆ. ಪ್ರಸ್ತುತ 1 ಹೆಕ್ಟೇರ್ ಗೆ 65,000 ರೂಪಾಯಿ ಪರಿಹಾರವನ್ನು ನೀಡಲಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವನ ವಿಗ್ರಹ ಅನಾವರಣ

ಜಮಖಂಡಿ ತಾಲ್ಲೂಕಿನಲ್ಲಿ ಸಣ್ಣ, ಅತಿ ಸಣ್ಣ ಮತ್ತು ಕಡಿಮೆ ಆದಾಯ ಹೊಂದಿರುವ ರೈತರಿದ್ದು, ಕೃಷಿಯೇ ಜೀವನದ ಆಧಾರವಾಗಿದೆ. ಸರಕಾರ ನೀಡುತ್ತಿರುವ ಪರಿಹಾರದ ಮೊತ್ತ ಜೀವನ ನಿರ್ವಾಹಣೆಗೆ ಸಾಕಾಗದ ಕಾರಣ, ಪರಿಹಾರದ ಮೊತ್ತ ಹೆಚ್ಚಳವಾಗಬೇಕದ ಅಗತ್ಯವಿದೆ ಎಂದು ಮನವಿ ಮಾಡಿದ್ದಾರೆ.

ಸಚಿವ ನಿರಾಣಿ ಮನವಿಗೆ ಸ್ಪಂಧಿಸಿರುವ ಶೋಭಾ ಕರದ್ಲಾಂಜೆ, ರೈತರ ಹಿತಕಾಪಾಡಲು ಕೇಂದ್ರ ಸರ್ಕಾರ ಬದ್ದವಾಗಿದೆ ಎಂಬ ಭರವಸೆಯನ್ನು ನೀಡಿದ್ದಾರೆ. ಪ್ರತಿವರ್ಷ ಮಳೆಗಾಲದ ವೇಳೆ ಕೃಷ್ಣ ನದಿಯ ಪ್ರವಾಹ
ಹಾಗೂ ಹಿನ್ನೀರಿನ ಕಾರಣ ಪ್ರವಾಹ ಉಂಟಾಗಿ ಸಾವಿರಾರು ಕುಟುಂಬಗಳಿಗೆ ತೊಂದರೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ರೈತರಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದೆ. ಈ ಬಗ್ಗೆ ಸದ್ಯದಲ್ಲಿಯೇ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ಸೂಕ್ತ ನ್ಯಾಯ ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...