Homeಕರ್ನಾಟಕಪಿಯುಸಿ ಪಠ್ಯ ಪರಿಷ್ಕರಣೆಯ ‘ಚಕ್ರತೀರ್ಥ ವರದಿ’ ಪಡೆಯಲ್ಲ ಎಂದ ಸಚಿವ ಬಿಸಿ ನಾಗೇಶ್‌; ಜನಾಕ್ರೋಶಕ್ಕೆ ಮಣಿದ...

ಪಿಯುಸಿ ಪಠ್ಯ ಪರಿಷ್ಕರಣೆಯ ‘ಚಕ್ರತೀರ್ಥ ವರದಿ’ ಪಡೆಯಲ್ಲ ಎಂದ ಸಚಿವ ಬಿಸಿ ನಾಗೇಶ್‌; ಜನಾಕ್ರೋಶಕ್ಕೆ ಮಣಿದ ಸರ್ಕಾರ

- Advertisement -
- Advertisement -

ಬಲಪಂಥೀಯ ಟ್ರೋಲರ್‌ ರೋಹಿತ್ ಚಕ್ರತೀರ್ಥ ಅವರನ್ನು ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ಕೈಬಿಟ್ಟಿದ್ದು, ಅವರು ನೀಡುವ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ ಎಂದು ಟಿವಿ9 ಮಂಗಳವಾರ ವರದಿ ಮಾಡಿದೆ. ಈ ಮೂಲಕ ಪಠ್ಯ ಪರಿಷ್ಕರಣೆ ವಿರುದ್ದ ರಾಜ್ಯದಾದ್ಯಂತ ಎದ್ದಿರುವ ಜನರ ಆಕ್ರೋಶಕ್ಕೆ ಸರ್ಕಾರ ಮಣಿದಿದೆ.

ಪ್ರಾಥಮಿಕ ಮತ್ತು ಹೈಸ್ಕೂಲ್ ಪಠ್ಯ ಪುಸ್ತಕಗಳ ಬ್ರಾಹ್ಮಣೀಕರಣ ಮಾಡಿರುವ ರೋಹಿತ್ ಚಕ್ರತೀರ್ಥ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದರೂ, ರಾಜ್ಯ ಸರ್ಕಾರ ಮತ್ತೇ ದ್ವಿತೀಯ ಪಿಯುಸಿ ಪಠ್ಯಪುಸ್ತಕದ ಪರಿಷ್ಕರಣೆಗೆ ಅವರ ಸಮಿತಿಯನ್ನೇ ನೇಮಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದ್ವಿತೀಯ ಪಿಯುಸಿ ಪಠ್ಯದಲ್ಲಿರುವ ‘ಹೊಸ ಧರ್ಮಗಳ ಉದಯ’ ಎಂಬ ಪಠ್ಯಭಾಗದ ಪರಿಷ್ಕರಣೆ ಮಾಡುವ ಬಗ್ಗೆ ಸರ್ಕಾರ ರೋಹಿತ್ ಚಕ್ರತೀರ್ಥ ಸಮಿತಿಗೆ ಸೂಚಿಸಿತ್ತು. ಇದೀಗ ರಾಜ್ಯದಾದ್ಯಂತ ಚಕ್ರತೀರ್ಥ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಮಿತಿಯನ್ನು ಕೈಬಿಡಲು ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ: ಬಾಬಾ ಸಾಹೇಬರಿಗೆ ಅಗೌರವ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನೇ ಕತ್ತರಿಸಿದ ಚಕ್ರತೀರ್ಥ ಸಮಿತಿ!

“ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜಿಸಿರುವ ಕಾರಣ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ” ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ ಎಂದು ಟಿವಿ9 ವರದಿ ಮಾಡಿದೆ.

ಹೈಸ್ಕೂಲ್ ಮತ್ತು ಪ್ರಾಥಮಿಕ ತರಗತಿಗಳ ಪಠ್ಯಪುಸ್ತಕ ಮರು ಪರಿಶೀಲನೆ ಮಾಡುವಾಗ ಚಕ್ರತೀರ್ಥ ಸಮಿತಿ ಮಾಡಿರುವ ಎಡವಟ್ಟುಗಳು ಒಂದೊಂದಾಗಿ ಹೊರಬೀಳತೊಡಗಿವೆ. ಏಳನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಪದ್ಯವನ್ನು ಪೂರಕ ಪಠ್ಯವಾಗಿ ರೋಹಿತ್ ಚಕ್ರತೀರ್ಥ ಸಮಿತಿ ನೀಡಿದೆ. ಅದನ್ನು ಬರೆದವರು ‘ಆರ್‌.ಎನ್‌.ಜಯಗೋಪಾಲ್‌’ ಎಂದು ತಿಳಿಸಿ ಕವಿ ಪರಿಚಯವನ್ನೂ ನೀಡಲಾಗಿದೆ. ವಾಸ್ತವದಲ್ಲಿ ಇದನ್ನು ಬರೆದವರು ಖ್ಯಾತ ಗೀತರಚನಾಕಾರ ಚಿ.ಉದಯಶಂಕರ್‌ ಆಗಿದ್ದಾರೆ.

ಸಾಹಿತಿ ಚೆನ್ನಣ್ಣ ವಾಲೀಕಾರ ಅವರು ಅಂಬೇಡ್ಕರ್‌‌ ಬರೆದಿರುವ ‘ನೀ ಹೋದ ಮರುದಿನ’ ಎಂಬ ಪದ್ಯವನ್ನು ಆರನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಪಠ್ಯಪರಿಶೀಲನಾ ಸಮಿತಿ ಅಳವಡಿಸಿತ್ತು. ಈ ಪದ್ಯವನ್ನು ನೂತನ ಪಠ್ಯಪುಸ್ತಕಗಳ ಪರಿಶೀಲನಾ ಸಮಿತಿಯು ತೆಗೆದುಹಾಕಿದೆ.

ಇದನ್ನೂ ಓದಿ: ಬಲಪಂಥೀಯ ಟ್ರೋಲರ್ ಒಬ್ಬನ ಕೈಗೆ ಪಠ್ಯ ಪರಿಷ್ಕರಣೆ ಜವಾಬ್ದಾರಿ..: ರೋಹಿತ್ ಚಕ್ರತೀರ್ಥ ಮಾಡಿದ ಅಸಹ್ಯದ ಪೋಸ್ಟ್‌ಗಳಿವು

ಆರನೇ ತರಗತಿಯ ‘ಸಿರಿಗನ್ನಡ’ ಪ್ರಥಮಭಾಷಾ ಪಠ್ಯಪುಸ್ತಕದಲ್ಲಿ ‘ಮೆರವಣಿಗೆ’ ಎಂಬ ಪಾಠ ಇತ್ತು. ಈ ಪಠ್ಯವನ್ನು ಸಮಿತಿಯೇ ರೂಪಿಸಿತ್ತು. ಕನ್ನಡ ರಾಜ್ಯೋತ್ಸವಕ್ಕಾಗಿ ಶಾಲೆಯೊಂದರಲ್ಲಿ ನಡೆದ ಸಿದ್ಧತೆ ಕುರಿತು ಮಾತನಾಡುವ ಈ ಪಾಠ, ನವೆಂಬರ್‌ 1ರ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಯನ್ನು ತಿಳಿಸುತ್ತದೆ. ವಿವಿಧ ಧರ್ಮಗಳ ಹಿನ್ನೆಲೆಯ ಮಕ್ಕಳಲ್ಲಿ ಕನ್ನಡ ಪ್ರೇಮವನ್ನು ಉದ್ದೀಪಿಸುವ ಕೆಲಸವನ್ನು ಈ ಗದ್ಯಭಾಗ ಮಾಡುತ್ತದೆ. ಆದರೆ ಈ ಪಾಠವನ್ನು ಚಕ್ರತೀರ್ಥ ಸಮಿತಿ ಕಿತ್ತು ಹಾಕಿದೆ.

ಹಳೆಯ ಪಠ್ಯದಲ್ಲಿದ್ದ ಹಲವಾರು ಮೌಲ್ಯಯುತ ವಿಚಾರಗಳಿಗೆ ಕತ್ತರಿ ಪ್ರಯೋಗ ಮಾಡಿರುವ ಸಮಿತಿಯು, ‘ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಕುರಿತ ವಿಚಾರಗಳನ್ನೂ ತಿರುಚುವ ಕೆಲಸ ಮಾಡಿದೆ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮಕ್ಕೆ ಮರಳಿದ್ದು ಏಕೆಂಬ ವಿಷಯವನ್ನು ಹೊಸ ಪಠ್ಯದಲ್ಲಿ ಮರೆಮಾಚಿರುವುದು ಬೆಳಕಿಗೆ ಬಂದಿತ್ತು. ಇತಿಹಾಸವಷ್ಟೇ ಅಲ್ಲದೇ ರಾಜಶಾಸ್ತ್ರ ವಿಭಾಗದಲ್ಲೂ ಬಾಬಾ ಸಾಹೇಬರ ವಿಚಾರಗಳಲ್ಲಿ ಕತ್ತರಿ ಪ್ರಯೋಗ ಮಾಡಿದ್ದಾರೆ. ಅಷ್ಟೇ ಅಲ್ಲದೆ ಅಂಬೇಡ್ಕರ್‌ ಅವರು ‘ಸಂವಿಧಾನ ಶಿಲ್ಪಿ’ ಎಂಬ ವಾಕ್ಯಕ್ಕೆ ಚಕ್ರತೀರ್ಥ ಸಮಿತಿ ಕತ್ತರಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...