Homeಕರ್ನಾಟಕಕಾಳಿ ನದಿ ಮೇಲೆ ಸಚಿವ ನಿರಾಣಿ ಸಹೋದರರ ಕಣ್ಣು!

ಕಾಳಿ ನದಿ ಮೇಲೆ ಸಚಿವ ನಿರಾಣಿ ಸಹೋದರರ ಕಣ್ಣು!

ಇದು ಮತ್ತೊಂದು ಎತ್ತಿನ ಹೊಳೆ ಯೋಜನೆಯಾಗಿ ಹಾಳಾಗುವುದರಲ್ಲಿ ಅನಮಾನವೇ ಇಲ್ಲ; ನದಿ ಹರಿವಿನ ವಿರುದ್ಧ ದಿಕ್ಕಿಗೆ ನದಿ ತಿರುಗಿಸುವ ಪ್ರಯತ್ನವೇ ಅವೈಜ್ಞಾನಿಕ ಎಂದು ಪರಿಸರ ತಜ್ಞರು ಹೇಳುತ್ತಾರೆ.

- Advertisement -
- Advertisement -

ಕಾಳಿ-ಮಲಪ್ರಭಾ-ಘಟಪ್ರಭಾ ನದಿ ಜೋಡಣೆಗೆ ಉತ್ತರ ಕನ್ನಡದಲ್ಲಿ ವಿರೋಧ ವ್ಯಕ್ತವಾಗಿದೆ. ಕಾಳಿ ನದಿ ಉತ್ತರ ಕನ್ನಡದ ಕಾರವಾರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲ್ಲೂಕಿನ ಜೀವಜಾಲದ ಜೀವನ! ಈ ತಾಲೂಕಿನ ಬದುಕಿನೊಂದಿಗೆ ಭಾವನಾತ್ಮಕವಾಗಿ ಬೆಸೆದುಕೊಂಡಿರುವ ಕಾಳಿ ಇಲ್ಲದಿದ್ದರೆ ಎಲ್ಲವೂ ಖಾಲಿ-ಖಾಲಿ!! ಉತ್ತರ ಕರ್ನಾಟಕದ ಸಕ್ಕರೆ ಫ್ಯಾಕ್ಟರಿ ಲಾಬಿಯ ಕಣ್ಣು ಕಾಳಿ ಮೇಲೆ ಬಿದ್ದಾಗಿಂದ ಅದರ ಎರಡೂ ದಂಡೆ ಮೇಲಿರುವ ಮಂದಿ ಕಂಗಾಲಾಗಿ ಹೋಗಿದ್ದಾರೆ. ಮುರುಗೇಶ್ ನಿರಾಣಿ ಬೃಹತ್ ಕೈಗಾರಿಕಾ ಮಂತ್ರಿಯಾದಾಗೆಲ್ಲ ಕಾಳಿಯನ್ನು ಮಲಪ್ರಭಾ ಮತ್ತು ಘಟಪ್ರಭಾ ನದಿಗೆ ಜೋಡಿಸಿ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಿಗೆ ನೀರೊದಗಿಸುವ ಕಾರ್ಯಸಾಧ್ಯವಲ್ಲದ ಹುಚ್ಚು ಯೋಜನೆ ಕಾರ್ಯಗತಗೊಳಿಸುವ ಸಂಚೊಂದು ಒಳಗೊಳಗೇ ಬಿರುಸಿಂದ ನಡೆಯುತ್ತದೆಂದು ಕಾಳಿ ನದಿ ಪಾತ್ರದ ಮಂದಿ ಆತಂಕಿತರಾಗುತ್ತಾರೆ.

ಮೊನ್ನೆ ನಿರಾಣಿ ಮತ್ತೆ ದೊಡ್ಡ ಕೈಗಾರಿಕಾ ಮಂತ್ರಿಯಾಗುತ್ತಲೇ ತಮ್ಮ ಜೀವ ನದಿಗೆ ಕುತ್ತು ಬರುವ ಭಯಕ್ಕೆ ಕಾಳಿ ಮಕ್ಕಳು ಬಿದ್ದಿದ್ದಾರೆ. 2019ರಲ್ಲಿ ನಿರಾಣಿ ಸಹೋದರರಾದ ಮಂತ್ರಿ ಮುರುಗೇಶ್, ಎಮ್‌ಎಲ್‌ಸಿ ಹನುಮಂತ ಮತ್ತು ಉದ್ಯಮಿ ಸಂಗಮೇಶ್‌ರ ನಿರಾಣಿ ಪೌಂಡೇಶನ್ ಘಟಪ್ರಭಾ-ಮಲಪ್ರಭಾ ನದಿಗಳಿಗೆ ಉತ್ತರ ಕನ್ನಡದ ಕಾಳಿ ನದಿಯ 25 ಟಿಎಮ್‌ಸಿ ನೀರನ್ನು ಹರಿಸುವ ವಿಸ್ತ್ರತ ವರದಿಯೊಂದನ್ನು ಸರಕಾಕ್ಕೆ ನೀಡಿತ್ತು. ಏತ ನೀರಾವರಿ ಯೋಜನೆಯಿಂದ ಘಟಪ್ರಭಾ ಮತ್ತು ಮಲಪ್ರಭಾಕ್ಕೆ ಕಾಳಿ ನೀರನ್ನು ತುಂಬಿದರೆ ಬೆಳಗಾವಿ, ಧಾರವಾಡ, ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳ ಸಮಗ್ರ ಕುಡಿಯುವ ನೀರು ಮತ್ತು ಸುಮಾರು 600 ಕೆರೆಗಳ ಪುನಶ್ಚೇತನ ಯೋಜನೆಗಳನ್ನು ಕೈಗೊಳ್ಳಬಹುದೆಂಬ ಆಕರ್ಷಕ ವರದಿ ನಿರಾಣಿ ಪೌಂಡೇಶನ್ ತಯಾರು ಮಾಡಿತ್ತು. ಸದ್ರಿ ಯೋಜನೆಗೆ ಒಪ್ಪಿಗೆ ಪಡೆಯಲು ಸಚಿವ ನಿರಾಣಿ ಆರು ಬಾರಿ ಕೇಂದ್ರ ಸರಕಾರದ ಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.

PC : Kannada News – News18, (ಮುರುಗೇಶ್ ನಿರಾಣಿ)

ಘಟಪ್ರಭಾ-ಮಲಪ್ರಭಾದಲ್ಲಿ ನೀರಿನ ಹರಿವು ಕಡಿಮೆಯಾಗಿರುವುದರಿಂದ ಈ ಯೋಜನೆ ಜಾರಿಗೆ ಬಯಲು ಸೀಮೆ ಕಡೆಯ ಕೆಲವು ಮಠಾಧೀಶರು ಮತ್ತು ರೈತ ನಾಯಕರು ಒತ್ತಾಯಿಸುತ್ತಿದ್ದಾರೆ. ಆದರೆ ಉತ್ತರ ಕನ್ನಡದಲ್ಲಿ ಸದ್ರಿ ನದಿ ತಿರುವು ಯೋಜನೆ ವಿರುದ್ಧ ದೊಡ್ಡ ಕೂಗೆದದ್ದಿದೆ. ಕಾಳಿಯ 140 ಟಿಎಮ್‌ಸಿ ನೀರು ವಿದ್ಯುತ್ ಉತ್ಪಾದನೆಯ ಬಳಿಕ ವ್ಯರ್ಥವಾಗಿ ಸಮುದ್ರ ಸೇರುತ್ತದೆಂಬುದು ನಿರಾಣಿ ಬಳಗದ ವಾದ. ಆದರೆ ಸೂಪಾ ಜಲಾಶಯದ ನೀರಿನ ಸಂಗ್ರಹದ ಸಾಮರ್ಥ್ಯವೇ 144 ಟಿಎಮ್‌ಸಿ; ನಿರಾಣಿಗಳ ವರದಿಯಲ್ಲಿ ಹೇಳಿರುವಷ್ಟು ಸುಲಭವಾಗಿ ಕಾಳಿ ನೀರನ್ನು ಬಯಲು ಸೀಮೆಯೆಡೆ ತಿರುಗಿಸಲಾಗದು. ಇದು ಮತ್ತೊಂದು ಎತ್ತಿನ ಹೊಳೆ ಯೋಜನೆಯಾಗಿ ಹಾಳಾಗುವುದರಲ್ಲಿ ಅನಮಾನವೇ ಇಲ್ಲ; ನದಿ ಹರಿವಿನ ವಿರುದ್ಧ ದಿಕ್ಕಿಗೆ ನದಿ ತಿರುಗಿಸುವ ಪ್ರಯತ್ನವೇ ಅವೈಜ್ಞಾನಿಕ ಎಂದು ಪರಿಸರ ತಜ್ಞರು ಹೇಳುತ್ತಾರೆ.

ಕಾಳಿ ಜನ್ಮ ತಳೆಯುವ ಜೋಯಿಡಾದ ಡಿಗ್ಗಿ ಗ್ರಾಮದಿಂದ ಕಾರವಾರದಲ್ಲಿ ಅರಬ್ಬಿ ಸಮುದ್ರ ಸೇರುವ ತನಕ ಐದು ಜಲ ವಿದ್ಯುತ್ ತಯಾರಿಸುವ ಆಣೆಕಟ್ಟುಗಳಿವೆ. ಈ ಜಲಾಶಯಗಳಲ್ಲಿ ಸಂಗ್ರಹವಾಗುವ ನೀರು ವಿದ್ಯುತ್ ಉತ್ಪಾದನೆ ನಂತರ ಸಮುದ್ರ ಸೇರುತ್ತದೆ. ಇದು ನಿರಾಣಿಗಳು ಹೇಳುವಂತೆ ವ್ಯರ್ಥ ನೀರಲ್ಲ. ಸಮುದ್ರದ ಲವಣಾಂಶ ಕಾಪಾಡಲು ಸಿಹಿ ನಿರು ಬೇಕು. ಆಗ ಮಾತ್ರ ಸಮುದ್ರದಲ್ಲಿರುವ ಜಲಚರಗಳು ಬದುಕಲು ಸಾಧ್ಯವೆಂದು ಅಧ್ಯಯನ ವರದಿಗಳು ಹೇಳುತ್ತವೆ. ನದಿಯ ಇಕ್ಕೆಲದಲ್ಲಿ ಕುಡಿಯುವ ನೀರಿಗಾಗಿ ಹಲವು ಚೆಕ್ ಡ್ಯಾಮ್‌ಗಳನ್ನು ನಿರ್ಮಿಸಲಾಗಿದೆ. ಕಾಳಿ ದಡದ ಮೇಲೆಯೇ ಕೈಗಾ ಅಣು ಸ್ಥಾವರವಿದ್ದು ಅದರ ಶೀಥಲೀಕರಣಕ್ಕೆ ಕಾಳಿ ನೀರನ್ನೆ ಬಳಸಲಾಗುತ್ತಿದೆ. ಹಳಿಯಾಳ ಭಾಗದ ರೈತರಿಗೆ ಅನಿವಾರ್ಯವಾದ ಕಾಳಿ ನೀರಾವರಿ ಯೋಜನೆಯಿದೆ. ಈ ನದಿ ಪಶ್ಚಿಮ ಘಟ್ಟದ ಜೀವ ವೈವಿದ್ಯತೆಯ ಮತ್ತು ತೀರಾ ಸೂಕ್ಷ್ಮಜೀವವಲಯವಾದ ಮಧ್ಯ ಪಶ್ಚಿಮ ಘಟ್ಟ ಪ್ರದೇಶದಿಂದ ಹರಿಯುತ್ತಿದೆ. ಇಂಥ ನದಿಯನ್ನು ತಿರುಗಿಸಲು ಪ್ರಯತ್ನಿಸುವುದು ಅಪಾಯಕಾರಿ ದುಸ್ಸಾಹಸವೆಂದು ಪರಿಸರ ವಿಜ್ಞಾನಿಗಳು ಅಭಿಪ್ರಾಯಪಡುತ್ತಾರೆ.

ಕಾಳಿ ನೀರು ಬಯಲು ಸೀಮೆಯೆಡೆ ತಿರುಗಿಸಿದರೆ ನದಿ ಪಾತ್ರದಲ್ಲಿ ಹರಿವು ಸೊರಗಿ ಕಣಿವೆ ಬರಡಾಗುವುದು ಖಂಡಿತ. ಅಷ್ಟೇ ಅಲ್ಲ, ನೀರು ಬಯಲು ಸೀಮೆಗೂ ತಲುಪದೆ ಯೋಜಿತ ಉದ್ದೇಶ ವಿಫಲವಾಗಲಿದೆ.

ಸ್ಥಳಿಯ ಜೀವ ಜಾಲವನ್ನು ಛಿದ್ರಗೊಳಿಸುವ ಈ ನದಿ ತಿರುವು ಯೋಜನೆಗೆ ಅವಕಾಶ ಕೊಡುವುದಿಲ್ಲವೆಂದು ಕಾಳಿ ತೀರದ ಮಂದಿ ಒಂದಾಗಿ ಒಕ್ಕೊರಳಲ್ಲಿ ಹೇಳುತ್ತಿದ್ದಾರೆ. ಕಾಳಿ ಕಣಿವೆ ಇಡೀ ಭಾರತಕ್ಕೆ ಮುಂಗಾರು ಮಳೆ ತರುವ ಪಶ್ಚಿಮ ಘಟ್ಟದ ಸೂಕ್ಷ್ಮಾತಿ ಸೂಕ್ಷ್ಮ ಪ್ರದೇಶ ಅದರಲ್ಲೂ ಜೋಯಿಡಾ ಮತ್ತು ದಾಂಡೇಲಿ ಭಾಗಗಳು ಸೂಕ್ಷ್ಮಜೀವ ವಲಯ ವ್ಯಾಪ್ತಿಯಲ್ಲಿವೆ. ಯುನೆಸ್ಕೊ ಪಶ್ಚಿಮ ಘಟ್ಟವನ್ನು ಪಾರಂಪರಿಕ ತಾಣವೆಂದು ಘೋಶಿಸಿದೆ. ಕಾಳಿ ಕಣಿವೆ ಹುಲಿ ಸಂರಕ್ಷಿತ ಪ್ರದೇಶವಾದರೆ ಜೋಯಿಡಾ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿದೆ. ಕಾಡು ಪ್ರಾಣಿಗಳಿಗೆ ಕಾಳಿ ನೀರೆ ಸಂಜೀವಿನಿ. ಇಂಥ ಜೀವ ಸಂಕುಲದ ಉಸಿರಾದ ನದಿ ನೀರನ್ನು ಬಲವಂತವಾಗಿ ತಿರುಗಿಸಿದರೆ ಇಡೀ ದೇಶದ ಪರಿಸರದ ಮೇಲೆ ದುಶ್ಪರಿಣಾಮವಾಗುತ್ತದೆಂದು ಹಲವು ಅಧ್ಯಯನಗಳು ಸ್ಪಷ್ಟವಾಗಿ ಹೇಳಿವೆ.

PC : Prajavani , (ಸಂಗಮೇಶ ನಿರಾಣಿ)

ನಿರಾಣಿ ಸಹೋದರರು ನದಿ ಜೋಡಣೆ ವರದಿ ಸಿದ್ದಪಡಿಸುವ ಮೊದಲು ಪಶ್ಚಿಮ ಘಟ್ಟದ ಪರಿಸರದ ಬಗೆಗಿನ ಮಾಧವ ಗಾಡ್ಗೀಳ್ ವರದಿ ಅಥವಾ ಕಸ್ತೂರಿ ರಂಗನ್ ವರದಿ ಓದಿದಹಾಗಿಲ್ಲ; ತಮ್ಮ ಸಕ್ಕರೆ ಉದ್ಯಮದ ಹಿತಾಸಕ್ತಿ ಒಂದನ್ನೆ ಗಮನದಲ್ಲಿಟ್ಟುಕೊಂಡು ಅವೈಜ್ಞನಿಕ ನದಿ ತಿರುವು ಯೋಜನಾವರದಿ ತಯಾರಿಸಿದ್ದಾರೆಂದು ದಾಂಡೇಲಿಯ ಪರಿಸರ ಸಂರಕ್ಷಣಾ ಸಂಸ್ಥೆಯ ಕಾರ್ಯದರ್ಶಿ ಕೀರ್ತಿ ಗಾಂವ್ಕರ್, ನಗರ ಸಭಾ ಸದಸ್ಯ ಮೋಹನ ಹಲವಾಯಿ, ದಾಂಡೇಲಿ ಪ್ರವಾಸೋದ್ಯಮ ಸಂಘದ ಸಲಹೆಗಾರ ಅನಿಲ್ ದಂಡಗಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಯಲು ಸೀಮೆಯ ಐದು ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸು ಮತ್ತು ಕೆರೆಗಳನ್ನು ತುಂಬಿಸುವ ನೆಪದಲ್ಲಿ ಕಬ್ಬು ಬೆಳೆಯಲು ಮತ್ತು ಸಕ್ಕರೆ ಕಾರ್ಖಾನೆಗಳಿಗೆ ಬೇಕಾದ ನೀರು ಪಡೆಯಲು ಸಕ್ಕರೆ ಲಾಬಿ ಕಾಳಿ ನೀರಿಗಾಗಿ ಹೊಂಚು ಹಾಕಿದೆ ಎಂಬುದು ಉತ್ತರ ಕನ್ನಡದಲ್ಲಿ ಚಾಲ್ತಿಯಲ್ಲಿರುವ ಅಭಿಪ್ರಾಯ. ಈ ಕಾರಣಕ್ಕಾಗಿಯೆ ಸಕ್ಕರೆ ಉದ್ಯಮಿಯಾದ ಸಚಿವ ನಿರಾಣಿ ನಿರಂತರವಾಗಿ ಕಾಳಿ ನೀರನ್ನು ಘಟಪ್ರಭಾ-ಮಲಪ್ರಭಾ ನದಿಗೆ ತುಂಬಿಸುವ ಪ್ರಯತ್ನ ನಡೆಸಿದ್ದಾರೆಂದು ಜಿಲ್ಲೆಯ ಪರಿಸರ ಹೋರಟಗಾರರು ನೇರವಾಗಿಯೇ ಹೇಳುತ್ತಾರೆ.


ಇದನ್ನೂ ಓದಿ: ಅಭಿವೃದ್ಧಿ ಭ್ರಮೆಯ ಮತ್ತೊಂದು ಪ್ರಯೋಗ ; ಅಘನಾಶಿನಿ ನದಿ ನೀರನ್ನು ಬಯಲುಸೀಮೆಗೊಯ್ಯುವ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...