Homeಕರ್ನಾಟಕಕಾಳಿ ನದಿ ಮೇಲೆ ಸಚಿವ ನಿರಾಣಿ ಸಹೋದರರ ಕಣ್ಣು!

ಕಾಳಿ ನದಿ ಮೇಲೆ ಸಚಿವ ನಿರಾಣಿ ಸಹೋದರರ ಕಣ್ಣು!

ಇದು ಮತ್ತೊಂದು ಎತ್ತಿನ ಹೊಳೆ ಯೋಜನೆಯಾಗಿ ಹಾಳಾಗುವುದರಲ್ಲಿ ಅನಮಾನವೇ ಇಲ್ಲ; ನದಿ ಹರಿವಿನ ವಿರುದ್ಧ ದಿಕ್ಕಿಗೆ ನದಿ ತಿರುಗಿಸುವ ಪ್ರಯತ್ನವೇ ಅವೈಜ್ಞಾನಿಕ ಎಂದು ಪರಿಸರ ತಜ್ಞರು ಹೇಳುತ್ತಾರೆ.

- Advertisement -
- Advertisement -

ಕಾಳಿ-ಮಲಪ್ರಭಾ-ಘಟಪ್ರಭಾ ನದಿ ಜೋಡಣೆಗೆ ಉತ್ತರ ಕನ್ನಡದಲ್ಲಿ ವಿರೋಧ ವ್ಯಕ್ತವಾಗಿದೆ. ಕಾಳಿ ನದಿ ಉತ್ತರ ಕನ್ನಡದ ಕಾರವಾರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲ್ಲೂಕಿನ ಜೀವಜಾಲದ ಜೀವನ! ಈ ತಾಲೂಕಿನ ಬದುಕಿನೊಂದಿಗೆ ಭಾವನಾತ್ಮಕವಾಗಿ ಬೆಸೆದುಕೊಂಡಿರುವ ಕಾಳಿ ಇಲ್ಲದಿದ್ದರೆ ಎಲ್ಲವೂ ಖಾಲಿ-ಖಾಲಿ!! ಉತ್ತರ ಕರ್ನಾಟಕದ ಸಕ್ಕರೆ ಫ್ಯಾಕ್ಟರಿ ಲಾಬಿಯ ಕಣ್ಣು ಕಾಳಿ ಮೇಲೆ ಬಿದ್ದಾಗಿಂದ ಅದರ ಎರಡೂ ದಂಡೆ ಮೇಲಿರುವ ಮಂದಿ ಕಂಗಾಲಾಗಿ ಹೋಗಿದ್ದಾರೆ. ಮುರುಗೇಶ್ ನಿರಾಣಿ ಬೃಹತ್ ಕೈಗಾರಿಕಾ ಮಂತ್ರಿಯಾದಾಗೆಲ್ಲ ಕಾಳಿಯನ್ನು ಮಲಪ್ರಭಾ ಮತ್ತು ಘಟಪ್ರಭಾ ನದಿಗೆ ಜೋಡಿಸಿ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಿಗೆ ನೀರೊದಗಿಸುವ ಕಾರ್ಯಸಾಧ್ಯವಲ್ಲದ ಹುಚ್ಚು ಯೋಜನೆ ಕಾರ್ಯಗತಗೊಳಿಸುವ ಸಂಚೊಂದು ಒಳಗೊಳಗೇ ಬಿರುಸಿಂದ ನಡೆಯುತ್ತದೆಂದು ಕಾಳಿ ನದಿ ಪಾತ್ರದ ಮಂದಿ ಆತಂಕಿತರಾಗುತ್ತಾರೆ.

ಮೊನ್ನೆ ನಿರಾಣಿ ಮತ್ತೆ ದೊಡ್ಡ ಕೈಗಾರಿಕಾ ಮಂತ್ರಿಯಾಗುತ್ತಲೇ ತಮ್ಮ ಜೀವ ನದಿಗೆ ಕುತ್ತು ಬರುವ ಭಯಕ್ಕೆ ಕಾಳಿ ಮಕ್ಕಳು ಬಿದ್ದಿದ್ದಾರೆ. 2019ರಲ್ಲಿ ನಿರಾಣಿ ಸಹೋದರರಾದ ಮಂತ್ರಿ ಮುರುಗೇಶ್, ಎಮ್‌ಎಲ್‌ಸಿ ಹನುಮಂತ ಮತ್ತು ಉದ್ಯಮಿ ಸಂಗಮೇಶ್‌ರ ನಿರಾಣಿ ಪೌಂಡೇಶನ್ ಘಟಪ್ರಭಾ-ಮಲಪ್ರಭಾ ನದಿಗಳಿಗೆ ಉತ್ತರ ಕನ್ನಡದ ಕಾಳಿ ನದಿಯ 25 ಟಿಎಮ್‌ಸಿ ನೀರನ್ನು ಹರಿಸುವ ವಿಸ್ತ್ರತ ವರದಿಯೊಂದನ್ನು ಸರಕಾಕ್ಕೆ ನೀಡಿತ್ತು. ಏತ ನೀರಾವರಿ ಯೋಜನೆಯಿಂದ ಘಟಪ್ರಭಾ ಮತ್ತು ಮಲಪ್ರಭಾಕ್ಕೆ ಕಾಳಿ ನೀರನ್ನು ತುಂಬಿದರೆ ಬೆಳಗಾವಿ, ಧಾರವಾಡ, ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳ ಸಮಗ್ರ ಕುಡಿಯುವ ನೀರು ಮತ್ತು ಸುಮಾರು 600 ಕೆರೆಗಳ ಪುನಶ್ಚೇತನ ಯೋಜನೆಗಳನ್ನು ಕೈಗೊಳ್ಳಬಹುದೆಂಬ ಆಕರ್ಷಕ ವರದಿ ನಿರಾಣಿ ಪೌಂಡೇಶನ್ ತಯಾರು ಮಾಡಿತ್ತು. ಸದ್ರಿ ಯೋಜನೆಗೆ ಒಪ್ಪಿಗೆ ಪಡೆಯಲು ಸಚಿವ ನಿರಾಣಿ ಆರು ಬಾರಿ ಕೇಂದ್ರ ಸರಕಾರದ ಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.

PC : Kannada News – News18, (ಮುರುಗೇಶ್ ನಿರಾಣಿ)

ಘಟಪ್ರಭಾ-ಮಲಪ್ರಭಾದಲ್ಲಿ ನೀರಿನ ಹರಿವು ಕಡಿಮೆಯಾಗಿರುವುದರಿಂದ ಈ ಯೋಜನೆ ಜಾರಿಗೆ ಬಯಲು ಸೀಮೆ ಕಡೆಯ ಕೆಲವು ಮಠಾಧೀಶರು ಮತ್ತು ರೈತ ನಾಯಕರು ಒತ್ತಾಯಿಸುತ್ತಿದ್ದಾರೆ. ಆದರೆ ಉತ್ತರ ಕನ್ನಡದಲ್ಲಿ ಸದ್ರಿ ನದಿ ತಿರುವು ಯೋಜನೆ ವಿರುದ್ಧ ದೊಡ್ಡ ಕೂಗೆದದ್ದಿದೆ. ಕಾಳಿಯ 140 ಟಿಎಮ್‌ಸಿ ನೀರು ವಿದ್ಯುತ್ ಉತ್ಪಾದನೆಯ ಬಳಿಕ ವ್ಯರ್ಥವಾಗಿ ಸಮುದ್ರ ಸೇರುತ್ತದೆಂಬುದು ನಿರಾಣಿ ಬಳಗದ ವಾದ. ಆದರೆ ಸೂಪಾ ಜಲಾಶಯದ ನೀರಿನ ಸಂಗ್ರಹದ ಸಾಮರ್ಥ್ಯವೇ 144 ಟಿಎಮ್‌ಸಿ; ನಿರಾಣಿಗಳ ವರದಿಯಲ್ಲಿ ಹೇಳಿರುವಷ್ಟು ಸುಲಭವಾಗಿ ಕಾಳಿ ನೀರನ್ನು ಬಯಲು ಸೀಮೆಯೆಡೆ ತಿರುಗಿಸಲಾಗದು. ಇದು ಮತ್ತೊಂದು ಎತ್ತಿನ ಹೊಳೆ ಯೋಜನೆಯಾಗಿ ಹಾಳಾಗುವುದರಲ್ಲಿ ಅನಮಾನವೇ ಇಲ್ಲ; ನದಿ ಹರಿವಿನ ವಿರುದ್ಧ ದಿಕ್ಕಿಗೆ ನದಿ ತಿರುಗಿಸುವ ಪ್ರಯತ್ನವೇ ಅವೈಜ್ಞಾನಿಕ ಎಂದು ಪರಿಸರ ತಜ್ಞರು ಹೇಳುತ್ತಾರೆ.

ಕಾಳಿ ಜನ್ಮ ತಳೆಯುವ ಜೋಯಿಡಾದ ಡಿಗ್ಗಿ ಗ್ರಾಮದಿಂದ ಕಾರವಾರದಲ್ಲಿ ಅರಬ್ಬಿ ಸಮುದ್ರ ಸೇರುವ ತನಕ ಐದು ಜಲ ವಿದ್ಯುತ್ ತಯಾರಿಸುವ ಆಣೆಕಟ್ಟುಗಳಿವೆ. ಈ ಜಲಾಶಯಗಳಲ್ಲಿ ಸಂಗ್ರಹವಾಗುವ ನೀರು ವಿದ್ಯುತ್ ಉತ್ಪಾದನೆ ನಂತರ ಸಮುದ್ರ ಸೇರುತ್ತದೆ. ಇದು ನಿರಾಣಿಗಳು ಹೇಳುವಂತೆ ವ್ಯರ್ಥ ನೀರಲ್ಲ. ಸಮುದ್ರದ ಲವಣಾಂಶ ಕಾಪಾಡಲು ಸಿಹಿ ನಿರು ಬೇಕು. ಆಗ ಮಾತ್ರ ಸಮುದ್ರದಲ್ಲಿರುವ ಜಲಚರಗಳು ಬದುಕಲು ಸಾಧ್ಯವೆಂದು ಅಧ್ಯಯನ ವರದಿಗಳು ಹೇಳುತ್ತವೆ. ನದಿಯ ಇಕ್ಕೆಲದಲ್ಲಿ ಕುಡಿಯುವ ನೀರಿಗಾಗಿ ಹಲವು ಚೆಕ್ ಡ್ಯಾಮ್‌ಗಳನ್ನು ನಿರ್ಮಿಸಲಾಗಿದೆ. ಕಾಳಿ ದಡದ ಮೇಲೆಯೇ ಕೈಗಾ ಅಣು ಸ್ಥಾವರವಿದ್ದು ಅದರ ಶೀಥಲೀಕರಣಕ್ಕೆ ಕಾಳಿ ನೀರನ್ನೆ ಬಳಸಲಾಗುತ್ತಿದೆ. ಹಳಿಯಾಳ ಭಾಗದ ರೈತರಿಗೆ ಅನಿವಾರ್ಯವಾದ ಕಾಳಿ ನೀರಾವರಿ ಯೋಜನೆಯಿದೆ. ಈ ನದಿ ಪಶ್ಚಿಮ ಘಟ್ಟದ ಜೀವ ವೈವಿದ್ಯತೆಯ ಮತ್ತು ತೀರಾ ಸೂಕ್ಷ್ಮಜೀವವಲಯವಾದ ಮಧ್ಯ ಪಶ್ಚಿಮ ಘಟ್ಟ ಪ್ರದೇಶದಿಂದ ಹರಿಯುತ್ತಿದೆ. ಇಂಥ ನದಿಯನ್ನು ತಿರುಗಿಸಲು ಪ್ರಯತ್ನಿಸುವುದು ಅಪಾಯಕಾರಿ ದುಸ್ಸಾಹಸವೆಂದು ಪರಿಸರ ವಿಜ್ಞಾನಿಗಳು ಅಭಿಪ್ರಾಯಪಡುತ್ತಾರೆ.

ಕಾಳಿ ನೀರು ಬಯಲು ಸೀಮೆಯೆಡೆ ತಿರುಗಿಸಿದರೆ ನದಿ ಪಾತ್ರದಲ್ಲಿ ಹರಿವು ಸೊರಗಿ ಕಣಿವೆ ಬರಡಾಗುವುದು ಖಂಡಿತ. ಅಷ್ಟೇ ಅಲ್ಲ, ನೀರು ಬಯಲು ಸೀಮೆಗೂ ತಲುಪದೆ ಯೋಜಿತ ಉದ್ದೇಶ ವಿಫಲವಾಗಲಿದೆ.

ಸ್ಥಳಿಯ ಜೀವ ಜಾಲವನ್ನು ಛಿದ್ರಗೊಳಿಸುವ ಈ ನದಿ ತಿರುವು ಯೋಜನೆಗೆ ಅವಕಾಶ ಕೊಡುವುದಿಲ್ಲವೆಂದು ಕಾಳಿ ತೀರದ ಮಂದಿ ಒಂದಾಗಿ ಒಕ್ಕೊರಳಲ್ಲಿ ಹೇಳುತ್ತಿದ್ದಾರೆ. ಕಾಳಿ ಕಣಿವೆ ಇಡೀ ಭಾರತಕ್ಕೆ ಮುಂಗಾರು ಮಳೆ ತರುವ ಪಶ್ಚಿಮ ಘಟ್ಟದ ಸೂಕ್ಷ್ಮಾತಿ ಸೂಕ್ಷ್ಮ ಪ್ರದೇಶ ಅದರಲ್ಲೂ ಜೋಯಿಡಾ ಮತ್ತು ದಾಂಡೇಲಿ ಭಾಗಗಳು ಸೂಕ್ಷ್ಮಜೀವ ವಲಯ ವ್ಯಾಪ್ತಿಯಲ್ಲಿವೆ. ಯುನೆಸ್ಕೊ ಪಶ್ಚಿಮ ಘಟ್ಟವನ್ನು ಪಾರಂಪರಿಕ ತಾಣವೆಂದು ಘೋಶಿಸಿದೆ. ಕಾಳಿ ಕಣಿವೆ ಹುಲಿ ಸಂರಕ್ಷಿತ ಪ್ರದೇಶವಾದರೆ ಜೋಯಿಡಾ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿದೆ. ಕಾಡು ಪ್ರಾಣಿಗಳಿಗೆ ಕಾಳಿ ನೀರೆ ಸಂಜೀವಿನಿ. ಇಂಥ ಜೀವ ಸಂಕುಲದ ಉಸಿರಾದ ನದಿ ನೀರನ್ನು ಬಲವಂತವಾಗಿ ತಿರುಗಿಸಿದರೆ ಇಡೀ ದೇಶದ ಪರಿಸರದ ಮೇಲೆ ದುಶ್ಪರಿಣಾಮವಾಗುತ್ತದೆಂದು ಹಲವು ಅಧ್ಯಯನಗಳು ಸ್ಪಷ್ಟವಾಗಿ ಹೇಳಿವೆ.

PC : Prajavani , (ಸಂಗಮೇಶ ನಿರಾಣಿ)

ನಿರಾಣಿ ಸಹೋದರರು ನದಿ ಜೋಡಣೆ ವರದಿ ಸಿದ್ದಪಡಿಸುವ ಮೊದಲು ಪಶ್ಚಿಮ ಘಟ್ಟದ ಪರಿಸರದ ಬಗೆಗಿನ ಮಾಧವ ಗಾಡ್ಗೀಳ್ ವರದಿ ಅಥವಾ ಕಸ್ತೂರಿ ರಂಗನ್ ವರದಿ ಓದಿದಹಾಗಿಲ್ಲ; ತಮ್ಮ ಸಕ್ಕರೆ ಉದ್ಯಮದ ಹಿತಾಸಕ್ತಿ ಒಂದನ್ನೆ ಗಮನದಲ್ಲಿಟ್ಟುಕೊಂಡು ಅವೈಜ್ಞನಿಕ ನದಿ ತಿರುವು ಯೋಜನಾವರದಿ ತಯಾರಿಸಿದ್ದಾರೆಂದು ದಾಂಡೇಲಿಯ ಪರಿಸರ ಸಂರಕ್ಷಣಾ ಸಂಸ್ಥೆಯ ಕಾರ್ಯದರ್ಶಿ ಕೀರ್ತಿ ಗಾಂವ್ಕರ್, ನಗರ ಸಭಾ ಸದಸ್ಯ ಮೋಹನ ಹಲವಾಯಿ, ದಾಂಡೇಲಿ ಪ್ರವಾಸೋದ್ಯಮ ಸಂಘದ ಸಲಹೆಗಾರ ಅನಿಲ್ ದಂಡಗಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಯಲು ಸೀಮೆಯ ಐದು ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸು ಮತ್ತು ಕೆರೆಗಳನ್ನು ತುಂಬಿಸುವ ನೆಪದಲ್ಲಿ ಕಬ್ಬು ಬೆಳೆಯಲು ಮತ್ತು ಸಕ್ಕರೆ ಕಾರ್ಖಾನೆಗಳಿಗೆ ಬೇಕಾದ ನೀರು ಪಡೆಯಲು ಸಕ್ಕರೆ ಲಾಬಿ ಕಾಳಿ ನೀರಿಗಾಗಿ ಹೊಂಚು ಹಾಕಿದೆ ಎಂಬುದು ಉತ್ತರ ಕನ್ನಡದಲ್ಲಿ ಚಾಲ್ತಿಯಲ್ಲಿರುವ ಅಭಿಪ್ರಾಯ. ಈ ಕಾರಣಕ್ಕಾಗಿಯೆ ಸಕ್ಕರೆ ಉದ್ಯಮಿಯಾದ ಸಚಿವ ನಿರಾಣಿ ನಿರಂತರವಾಗಿ ಕಾಳಿ ನೀರನ್ನು ಘಟಪ್ರಭಾ-ಮಲಪ್ರಭಾ ನದಿಗೆ ತುಂಬಿಸುವ ಪ್ರಯತ್ನ ನಡೆಸಿದ್ದಾರೆಂದು ಜಿಲ್ಲೆಯ ಪರಿಸರ ಹೋರಟಗಾರರು ನೇರವಾಗಿಯೇ ಹೇಳುತ್ತಾರೆ.


ಇದನ್ನೂ ಓದಿ: ಅಭಿವೃದ್ಧಿ ಭ್ರಮೆಯ ಮತ್ತೊಂದು ಪ್ರಯೋಗ ; ಅಘನಾಶಿನಿ ನದಿ ನೀರನ್ನು ಬಯಲುಸೀಮೆಗೊಯ್ಯುವ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...