Homeಕರ್ನಾಟಕಕಾಳಿ ನದಿ ಮೇಲೆ ಸಚಿವ ನಿರಾಣಿ ಸಹೋದರರ ಕಣ್ಣು!

ಕಾಳಿ ನದಿ ಮೇಲೆ ಸಚಿವ ನಿರಾಣಿ ಸಹೋದರರ ಕಣ್ಣು!

ಇದು ಮತ್ತೊಂದು ಎತ್ತಿನ ಹೊಳೆ ಯೋಜನೆಯಾಗಿ ಹಾಳಾಗುವುದರಲ್ಲಿ ಅನಮಾನವೇ ಇಲ್ಲ; ನದಿ ಹರಿವಿನ ವಿರುದ್ಧ ದಿಕ್ಕಿಗೆ ನದಿ ತಿರುಗಿಸುವ ಪ್ರಯತ್ನವೇ ಅವೈಜ್ಞಾನಿಕ ಎಂದು ಪರಿಸರ ತಜ್ಞರು ಹೇಳುತ್ತಾರೆ.

- Advertisement -
- Advertisement -

ಕಾಳಿ-ಮಲಪ್ರಭಾ-ಘಟಪ್ರಭಾ ನದಿ ಜೋಡಣೆಗೆ ಉತ್ತರ ಕನ್ನಡದಲ್ಲಿ ವಿರೋಧ ವ್ಯಕ್ತವಾಗಿದೆ. ಕಾಳಿ ನದಿ ಉತ್ತರ ಕನ್ನಡದ ಕಾರವಾರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲ್ಲೂಕಿನ ಜೀವಜಾಲದ ಜೀವನ! ಈ ತಾಲೂಕಿನ ಬದುಕಿನೊಂದಿಗೆ ಭಾವನಾತ್ಮಕವಾಗಿ ಬೆಸೆದುಕೊಂಡಿರುವ ಕಾಳಿ ಇಲ್ಲದಿದ್ದರೆ ಎಲ್ಲವೂ ಖಾಲಿ-ಖಾಲಿ!! ಉತ್ತರ ಕರ್ನಾಟಕದ ಸಕ್ಕರೆ ಫ್ಯಾಕ್ಟರಿ ಲಾಬಿಯ ಕಣ್ಣು ಕಾಳಿ ಮೇಲೆ ಬಿದ್ದಾಗಿಂದ ಅದರ ಎರಡೂ ದಂಡೆ ಮೇಲಿರುವ ಮಂದಿ ಕಂಗಾಲಾಗಿ ಹೋಗಿದ್ದಾರೆ. ಮುರುಗೇಶ್ ನಿರಾಣಿ ಬೃಹತ್ ಕೈಗಾರಿಕಾ ಮಂತ್ರಿಯಾದಾಗೆಲ್ಲ ಕಾಳಿಯನ್ನು ಮಲಪ್ರಭಾ ಮತ್ತು ಘಟಪ್ರಭಾ ನದಿಗೆ ಜೋಡಿಸಿ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಿಗೆ ನೀರೊದಗಿಸುವ ಕಾರ್ಯಸಾಧ್ಯವಲ್ಲದ ಹುಚ್ಚು ಯೋಜನೆ ಕಾರ್ಯಗತಗೊಳಿಸುವ ಸಂಚೊಂದು ಒಳಗೊಳಗೇ ಬಿರುಸಿಂದ ನಡೆಯುತ್ತದೆಂದು ಕಾಳಿ ನದಿ ಪಾತ್ರದ ಮಂದಿ ಆತಂಕಿತರಾಗುತ್ತಾರೆ.

ಮೊನ್ನೆ ನಿರಾಣಿ ಮತ್ತೆ ದೊಡ್ಡ ಕೈಗಾರಿಕಾ ಮಂತ್ರಿಯಾಗುತ್ತಲೇ ತಮ್ಮ ಜೀವ ನದಿಗೆ ಕುತ್ತು ಬರುವ ಭಯಕ್ಕೆ ಕಾಳಿ ಮಕ್ಕಳು ಬಿದ್ದಿದ್ದಾರೆ. 2019ರಲ್ಲಿ ನಿರಾಣಿ ಸಹೋದರರಾದ ಮಂತ್ರಿ ಮುರುಗೇಶ್, ಎಮ್‌ಎಲ್‌ಸಿ ಹನುಮಂತ ಮತ್ತು ಉದ್ಯಮಿ ಸಂಗಮೇಶ್‌ರ ನಿರಾಣಿ ಪೌಂಡೇಶನ್ ಘಟಪ್ರಭಾ-ಮಲಪ್ರಭಾ ನದಿಗಳಿಗೆ ಉತ್ತರ ಕನ್ನಡದ ಕಾಳಿ ನದಿಯ 25 ಟಿಎಮ್‌ಸಿ ನೀರನ್ನು ಹರಿಸುವ ವಿಸ್ತ್ರತ ವರದಿಯೊಂದನ್ನು ಸರಕಾಕ್ಕೆ ನೀಡಿತ್ತು. ಏತ ನೀರಾವರಿ ಯೋಜನೆಯಿಂದ ಘಟಪ್ರಭಾ ಮತ್ತು ಮಲಪ್ರಭಾಕ್ಕೆ ಕಾಳಿ ನೀರನ್ನು ತುಂಬಿದರೆ ಬೆಳಗಾವಿ, ಧಾರವಾಡ, ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳ ಸಮಗ್ರ ಕುಡಿಯುವ ನೀರು ಮತ್ತು ಸುಮಾರು 600 ಕೆರೆಗಳ ಪುನಶ್ಚೇತನ ಯೋಜನೆಗಳನ್ನು ಕೈಗೊಳ್ಳಬಹುದೆಂಬ ಆಕರ್ಷಕ ವರದಿ ನಿರಾಣಿ ಪೌಂಡೇಶನ್ ತಯಾರು ಮಾಡಿತ್ತು. ಸದ್ರಿ ಯೋಜನೆಗೆ ಒಪ್ಪಿಗೆ ಪಡೆಯಲು ಸಚಿವ ನಿರಾಣಿ ಆರು ಬಾರಿ ಕೇಂದ್ರ ಸರಕಾರದ ಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.

PC : Kannada News – News18, (ಮುರುಗೇಶ್ ನಿರಾಣಿ)

ಘಟಪ್ರಭಾ-ಮಲಪ್ರಭಾದಲ್ಲಿ ನೀರಿನ ಹರಿವು ಕಡಿಮೆಯಾಗಿರುವುದರಿಂದ ಈ ಯೋಜನೆ ಜಾರಿಗೆ ಬಯಲು ಸೀಮೆ ಕಡೆಯ ಕೆಲವು ಮಠಾಧೀಶರು ಮತ್ತು ರೈತ ನಾಯಕರು ಒತ್ತಾಯಿಸುತ್ತಿದ್ದಾರೆ. ಆದರೆ ಉತ್ತರ ಕನ್ನಡದಲ್ಲಿ ಸದ್ರಿ ನದಿ ತಿರುವು ಯೋಜನೆ ವಿರುದ್ಧ ದೊಡ್ಡ ಕೂಗೆದದ್ದಿದೆ. ಕಾಳಿಯ 140 ಟಿಎಮ್‌ಸಿ ನೀರು ವಿದ್ಯುತ್ ಉತ್ಪಾದನೆಯ ಬಳಿಕ ವ್ಯರ್ಥವಾಗಿ ಸಮುದ್ರ ಸೇರುತ್ತದೆಂಬುದು ನಿರಾಣಿ ಬಳಗದ ವಾದ. ಆದರೆ ಸೂಪಾ ಜಲಾಶಯದ ನೀರಿನ ಸಂಗ್ರಹದ ಸಾಮರ್ಥ್ಯವೇ 144 ಟಿಎಮ್‌ಸಿ; ನಿರಾಣಿಗಳ ವರದಿಯಲ್ಲಿ ಹೇಳಿರುವಷ್ಟು ಸುಲಭವಾಗಿ ಕಾಳಿ ನೀರನ್ನು ಬಯಲು ಸೀಮೆಯೆಡೆ ತಿರುಗಿಸಲಾಗದು. ಇದು ಮತ್ತೊಂದು ಎತ್ತಿನ ಹೊಳೆ ಯೋಜನೆಯಾಗಿ ಹಾಳಾಗುವುದರಲ್ಲಿ ಅನಮಾನವೇ ಇಲ್ಲ; ನದಿ ಹರಿವಿನ ವಿರುದ್ಧ ದಿಕ್ಕಿಗೆ ನದಿ ತಿರುಗಿಸುವ ಪ್ರಯತ್ನವೇ ಅವೈಜ್ಞಾನಿಕ ಎಂದು ಪರಿಸರ ತಜ್ಞರು ಹೇಳುತ್ತಾರೆ.

ಕಾಳಿ ಜನ್ಮ ತಳೆಯುವ ಜೋಯಿಡಾದ ಡಿಗ್ಗಿ ಗ್ರಾಮದಿಂದ ಕಾರವಾರದಲ್ಲಿ ಅರಬ್ಬಿ ಸಮುದ್ರ ಸೇರುವ ತನಕ ಐದು ಜಲ ವಿದ್ಯುತ್ ತಯಾರಿಸುವ ಆಣೆಕಟ್ಟುಗಳಿವೆ. ಈ ಜಲಾಶಯಗಳಲ್ಲಿ ಸಂಗ್ರಹವಾಗುವ ನೀರು ವಿದ್ಯುತ್ ಉತ್ಪಾದನೆ ನಂತರ ಸಮುದ್ರ ಸೇರುತ್ತದೆ. ಇದು ನಿರಾಣಿಗಳು ಹೇಳುವಂತೆ ವ್ಯರ್ಥ ನೀರಲ್ಲ. ಸಮುದ್ರದ ಲವಣಾಂಶ ಕಾಪಾಡಲು ಸಿಹಿ ನಿರು ಬೇಕು. ಆಗ ಮಾತ್ರ ಸಮುದ್ರದಲ್ಲಿರುವ ಜಲಚರಗಳು ಬದುಕಲು ಸಾಧ್ಯವೆಂದು ಅಧ್ಯಯನ ವರದಿಗಳು ಹೇಳುತ್ತವೆ. ನದಿಯ ಇಕ್ಕೆಲದಲ್ಲಿ ಕುಡಿಯುವ ನೀರಿಗಾಗಿ ಹಲವು ಚೆಕ್ ಡ್ಯಾಮ್‌ಗಳನ್ನು ನಿರ್ಮಿಸಲಾಗಿದೆ. ಕಾಳಿ ದಡದ ಮೇಲೆಯೇ ಕೈಗಾ ಅಣು ಸ್ಥಾವರವಿದ್ದು ಅದರ ಶೀಥಲೀಕರಣಕ್ಕೆ ಕಾಳಿ ನೀರನ್ನೆ ಬಳಸಲಾಗುತ್ತಿದೆ. ಹಳಿಯಾಳ ಭಾಗದ ರೈತರಿಗೆ ಅನಿವಾರ್ಯವಾದ ಕಾಳಿ ನೀರಾವರಿ ಯೋಜನೆಯಿದೆ. ಈ ನದಿ ಪಶ್ಚಿಮ ಘಟ್ಟದ ಜೀವ ವೈವಿದ್ಯತೆಯ ಮತ್ತು ತೀರಾ ಸೂಕ್ಷ್ಮಜೀವವಲಯವಾದ ಮಧ್ಯ ಪಶ್ಚಿಮ ಘಟ್ಟ ಪ್ರದೇಶದಿಂದ ಹರಿಯುತ್ತಿದೆ. ಇಂಥ ನದಿಯನ್ನು ತಿರುಗಿಸಲು ಪ್ರಯತ್ನಿಸುವುದು ಅಪಾಯಕಾರಿ ದುಸ್ಸಾಹಸವೆಂದು ಪರಿಸರ ವಿಜ್ಞಾನಿಗಳು ಅಭಿಪ್ರಾಯಪಡುತ್ತಾರೆ.

ಕಾಳಿ ನೀರು ಬಯಲು ಸೀಮೆಯೆಡೆ ತಿರುಗಿಸಿದರೆ ನದಿ ಪಾತ್ರದಲ್ಲಿ ಹರಿವು ಸೊರಗಿ ಕಣಿವೆ ಬರಡಾಗುವುದು ಖಂಡಿತ. ಅಷ್ಟೇ ಅಲ್ಲ, ನೀರು ಬಯಲು ಸೀಮೆಗೂ ತಲುಪದೆ ಯೋಜಿತ ಉದ್ದೇಶ ವಿಫಲವಾಗಲಿದೆ.

ಸ್ಥಳಿಯ ಜೀವ ಜಾಲವನ್ನು ಛಿದ್ರಗೊಳಿಸುವ ಈ ನದಿ ತಿರುವು ಯೋಜನೆಗೆ ಅವಕಾಶ ಕೊಡುವುದಿಲ್ಲವೆಂದು ಕಾಳಿ ತೀರದ ಮಂದಿ ಒಂದಾಗಿ ಒಕ್ಕೊರಳಲ್ಲಿ ಹೇಳುತ್ತಿದ್ದಾರೆ. ಕಾಳಿ ಕಣಿವೆ ಇಡೀ ಭಾರತಕ್ಕೆ ಮುಂಗಾರು ಮಳೆ ತರುವ ಪಶ್ಚಿಮ ಘಟ್ಟದ ಸೂಕ್ಷ್ಮಾತಿ ಸೂಕ್ಷ್ಮ ಪ್ರದೇಶ ಅದರಲ್ಲೂ ಜೋಯಿಡಾ ಮತ್ತು ದಾಂಡೇಲಿ ಭಾಗಗಳು ಸೂಕ್ಷ್ಮಜೀವ ವಲಯ ವ್ಯಾಪ್ತಿಯಲ್ಲಿವೆ. ಯುನೆಸ್ಕೊ ಪಶ್ಚಿಮ ಘಟ್ಟವನ್ನು ಪಾರಂಪರಿಕ ತಾಣವೆಂದು ಘೋಶಿಸಿದೆ. ಕಾಳಿ ಕಣಿವೆ ಹುಲಿ ಸಂರಕ್ಷಿತ ಪ್ರದೇಶವಾದರೆ ಜೋಯಿಡಾ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿದೆ. ಕಾಡು ಪ್ರಾಣಿಗಳಿಗೆ ಕಾಳಿ ನೀರೆ ಸಂಜೀವಿನಿ. ಇಂಥ ಜೀವ ಸಂಕುಲದ ಉಸಿರಾದ ನದಿ ನೀರನ್ನು ಬಲವಂತವಾಗಿ ತಿರುಗಿಸಿದರೆ ಇಡೀ ದೇಶದ ಪರಿಸರದ ಮೇಲೆ ದುಶ್ಪರಿಣಾಮವಾಗುತ್ತದೆಂದು ಹಲವು ಅಧ್ಯಯನಗಳು ಸ್ಪಷ್ಟವಾಗಿ ಹೇಳಿವೆ.

PC : Prajavani , (ಸಂಗಮೇಶ ನಿರಾಣಿ)

ನಿರಾಣಿ ಸಹೋದರರು ನದಿ ಜೋಡಣೆ ವರದಿ ಸಿದ್ದಪಡಿಸುವ ಮೊದಲು ಪಶ್ಚಿಮ ಘಟ್ಟದ ಪರಿಸರದ ಬಗೆಗಿನ ಮಾಧವ ಗಾಡ್ಗೀಳ್ ವರದಿ ಅಥವಾ ಕಸ್ತೂರಿ ರಂಗನ್ ವರದಿ ಓದಿದಹಾಗಿಲ್ಲ; ತಮ್ಮ ಸಕ್ಕರೆ ಉದ್ಯಮದ ಹಿತಾಸಕ್ತಿ ಒಂದನ್ನೆ ಗಮನದಲ್ಲಿಟ್ಟುಕೊಂಡು ಅವೈಜ್ಞನಿಕ ನದಿ ತಿರುವು ಯೋಜನಾವರದಿ ತಯಾರಿಸಿದ್ದಾರೆಂದು ದಾಂಡೇಲಿಯ ಪರಿಸರ ಸಂರಕ್ಷಣಾ ಸಂಸ್ಥೆಯ ಕಾರ್ಯದರ್ಶಿ ಕೀರ್ತಿ ಗಾಂವ್ಕರ್, ನಗರ ಸಭಾ ಸದಸ್ಯ ಮೋಹನ ಹಲವಾಯಿ, ದಾಂಡೇಲಿ ಪ್ರವಾಸೋದ್ಯಮ ಸಂಘದ ಸಲಹೆಗಾರ ಅನಿಲ್ ದಂಡಗಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಯಲು ಸೀಮೆಯ ಐದು ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸು ಮತ್ತು ಕೆರೆಗಳನ್ನು ತುಂಬಿಸುವ ನೆಪದಲ್ಲಿ ಕಬ್ಬು ಬೆಳೆಯಲು ಮತ್ತು ಸಕ್ಕರೆ ಕಾರ್ಖಾನೆಗಳಿಗೆ ಬೇಕಾದ ನೀರು ಪಡೆಯಲು ಸಕ್ಕರೆ ಲಾಬಿ ಕಾಳಿ ನೀರಿಗಾಗಿ ಹೊಂಚು ಹಾಕಿದೆ ಎಂಬುದು ಉತ್ತರ ಕನ್ನಡದಲ್ಲಿ ಚಾಲ್ತಿಯಲ್ಲಿರುವ ಅಭಿಪ್ರಾಯ. ಈ ಕಾರಣಕ್ಕಾಗಿಯೆ ಸಕ್ಕರೆ ಉದ್ಯಮಿಯಾದ ಸಚಿವ ನಿರಾಣಿ ನಿರಂತರವಾಗಿ ಕಾಳಿ ನೀರನ್ನು ಘಟಪ್ರಭಾ-ಮಲಪ್ರಭಾ ನದಿಗೆ ತುಂಬಿಸುವ ಪ್ರಯತ್ನ ನಡೆಸಿದ್ದಾರೆಂದು ಜಿಲ್ಲೆಯ ಪರಿಸರ ಹೋರಟಗಾರರು ನೇರವಾಗಿಯೇ ಹೇಳುತ್ತಾರೆ.


ಇದನ್ನೂ ಓದಿ: ಅಭಿವೃದ್ಧಿ ಭ್ರಮೆಯ ಮತ್ತೊಂದು ಪ್ರಯೋಗ ; ಅಘನಾಶಿನಿ ನದಿ ನೀರನ್ನು ಬಯಲುಸೀಮೆಗೊಯ್ಯುವ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...