Homeಮುಖಪುಟಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಸಚಿವ ಪ್ರಹ್ಲಾದ್ ಜೋಶಿ

ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಸಚಿವ ಪ್ರಹ್ಲಾದ್ ಜೋಶಿ

- Advertisement -
- Advertisement -

2002 ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರ ಮೇಲೆ ನಡೆದ ಅತ್ಯಾಚಾರ ಮತ್ತು ಅವರ ಕುಟುಂಬವನ್ನು ಕೊಂದ 11 ಆರೋಪಿಗಳ ಬಿಡುಗಡೆಯನ್ನು ಒಕ್ಕೂಟ ಸರ್ಕಾರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸಮರ್ಥಿಸಿಕೊಂಡಿದ್ದಾರೆ. ಅಪರಾಧಿಗಳ ಬಿಡುಗಡೆಗೆ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಒಪ್ಪಿಗೆ ನೀಡಿತ್ತು ಎಂದು ಗುಜರಾತ್ ಸರ್ಕಾರವು ಸುಪ್ರಿಂಕೋರ್ಟ್‌ನಲ್ಲಿ ಹೇಳಿದ್ದು, ಇದರ ನಂತರ ವಿರೋಧ ಪಕ್ಷಗಳು ಮೋದಿ ನೇತೃತ್ವದ ಸರ್ಕಾರ ಮೇಲೆ ವಾಗ್ದಾಳಿ ನಡೆಸುತ್ತಿವೆ.

ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ವೇಳೆ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಧಾರವಾಡ ಸಂಸದರೂ ಆಗಿರುವ ಪ್ರಹ್ಲಾದ್ ಜೋಶಿ,“ಇದು ಸರ್ಕಾರ ಮತ್ತು ಸಂಬಂಧಪಟ್ಟವರು ತೆಗೆದುಕೊಂಡ ನಿರ್ಧಾರ. ಇದು ಕಾನೂನಿನ ಪ್ರಕ್ರಿಯೆಯಾಗಿರುವುದರಿಂದ ನನಗೆ ಅದರಲ್ಲಿ ಯಾವುದೇ ತಪ್ಪು ಕಂಡುಬಂದಿಲ್ಲ” ಎಂದು ಎನ್‌ಡಿಟಿವಿ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜೈಲಿನಲ್ಲಿ ‘ಸಾಕಷ್ಟು ಸಮಯ’ ಕಳೆದ ಅಪರಾಧಿಗಳನ್ನು, ಬಿಡುಗಡೆ ಮಾಡುವ ‘ಕಾನೂನು’ ಇದೆ. ಈ ಕಾನೂನಿನ ಪ್ರಕಾರ ಅವರನ್ನು ಬಿಡುಗಡೆ ಮಾಡಲಾಗುತ್ತದೆ” ಎಂದು ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಒಪ್ಪಿದ ಮೋದಿ ಸರ್ಕಾರ; ಏನೇನಾಯ್ತು ಈ ವರೆಗೆ? | ಸಂಕ್ಷಿಪ್ತ ವರದಿ

ಘೋರ, ಹೇಯ ಮತ್ತು ಗಂಭೀರ ಅಪರಾಧ ಎಂದು ಸಿಬಿಐ ಕರೆದಿರುವ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ವ್ಯಕ್ತವಾದ ಆಕ್ರೋಶಕ್ಕೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಗುಜರಾತ್‌ ಸರ್ಕಾರ ಹೇಳಿದ್ದ ‘ಉತ್ತಮ ನಡವಳಿಕೆ’ ವಾದವನ್ನು ಪುನರುಚ್ಚರಿಸಿದರು.

“ಕೆಲವು ಕಾಲ ಜೈಲಿನಲ್ಲಿದ್ದ ನಂತರ, ಅವರ ನಡವಳಿಕೆಯ ಬಗ್ಗೆ … ಹಲವಾರು ಘಟನೆಗಳು ಇವೆ, ನಾನು ಅದರ ಬಗ್ಗೆ ಮಾತನಾಡಲು ಬಯಸುವುದಿಲ್ಲ” ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಜೂನ್‌ನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಕೂಡಾ ಅಪರಾಧಿಗಳ ಬಿಡುಗಡೆಯನ್ನು ಬೆಂಬಲಿಸಿದ್ದಾರೆ. “ರಾಜ್ಯ ಸರ್ಕಾರವು ಕೈದಿಗಳನ್ನು ಉತ್ತಮ ನಡವಳಿಕೆಗಾಗಿ ಬಿಡುಗಡೆ ಮಾಡುವ ಅಧಿಕಾರವನ್ನು ಹೊಂದಿದೆ. ಇದನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ತೋರಿಸಲಾಗುತ್ತಿದೆ ಎಂದು ನಾನು ನಂಬುತ್ತೇನೆ. ಯಾವುದೇ ಅಪರಾಧಿಯು ಅವರ ಕೃತ್ಯಗಳಿಗೆ ಶಿಕ್ಷೆಗೆ ಅರ್ಹರು” ಎಂದು ಹಾರ್ದಿಕ್ ಪಟೇಲ್ ಹೇಳಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಕೇಂದ್ರದಿಂದ ಅನುಮೋದನೆ: ಗುಜರಾತ್‌ ಸರ್ಕಾರದ ಅಫಿಡವಿಟ್‌ನಲ್ಲಿ ಉಲ್ಲೇಖ

ಪ್ರಹ್ಲಾದ್ ಜೋಶಿ ಮತ್ತು ಹಾರ್ದಿಕ್ ಪಟೇಲ್ ಅವರೊಂದಿಗೆ ಪ್ರಚಾರ ಮಾಡುತ್ತಿದ್ದ ಮತ್ತೊಬ್ಬ ಬಿಜೆಪಿ ನಾಯಕ ಅಲ್ಪೇಶ್ ಠಾಕೋರ್ ಮಾತ್ರ ಅಪರಾಧಿಗಳ ಬಿಡುಗಡೆಯನ್ನು ಬೆಂಬಲಿಸದೆ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯ ಅಪರಾಧಿಗಳನ್ನು ಮುಕ್ತಗೊಳಿಸುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

“ಇದನ್ನು ನಾನು ಒಪ್ಪಿಕೊಳ್ಳುವುದಿಲ್ಲ. ಅಂತಹ ವ್ಯಕ್ತಿಗಳನ್ನು ಬಿಡುಗಡೆ ಮಾಡಲು ಕೇವಲ ಉತ್ತಮ ನಡವಳಿಕೆಯು ಸಾಕಾಗುವುದಿಲ್ಲ. ಅವರು ಜೈಲಿನಿಂದ ಹೊರ ಬಂದಾಗ ಅವರಿಗೆ ಸಿಹಿತಿಂಡಿ ನೀಡಿರುವುದು ನಾಚಿಕೆಗೇಡಿನ ಸಂಗತಿ” ಎಂದು ಠಾಕೋರ್‌ ತಿಳಿಸಿದ್ದಾರೆ.-

14 ವರ್ಷಗಳ ಕಾಲ ಜೈಲಿನಲ್ಲಿದ್ದ ಕಾರಣ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಗುಜರಾತ್ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ; ಅವರ ನಡವಳಿಕೆಯು ಒಳ್ಳೆಯದು ಎಂದು ಕಂಡುಬಂದಿದ್ದು ಮತ್ತು ಕೇಂದ್ರವು ಅದನ್ನು ಅನುಮೋದಿಸಿತು ಎಂದು ಹೇಳಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಕೊಲೆ, ಅತ್ಯಾಚಾರದಂತಹ ಹೀನಕೃತ್ಯ ಎಸಗಿದವರಿಗೆ ಕ್ಷಮಾದಾನ ಸರಿಯೇ?

ರಾಷ್ಟ್ರವ್ಯಾಪಿ ಆಕ್ರೋಶದ ನಡುವೆ ಆಗಸ್ಟ್ 15 ಸ್ವಾತಂತ್ರ್ಯ ದಿನದಂದು ಅಪರಾಧಿಗಳು ಬಿಡುಗಡೆಯಾಗಿದ್ದು, ಗುಜರಾತಿನ ಜೈಲಿನ ಹೊರಗೆ ಹೂಮಾಲೆ ಹಾಕಿ ಸಿಹಿ ಹಂಚಿ ಅವರನ್ನು ಸ್ವಾಗತಿಸಲಾತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...