Homeಮುಖಪುಟಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಸಚಿವ ಪ್ರಹ್ಲಾದ್ ಜೋಶಿ

ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಸಚಿವ ಪ್ರಹ್ಲಾದ್ ಜೋಶಿ

- Advertisement -
- Advertisement -

2002 ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರ ಮೇಲೆ ನಡೆದ ಅತ್ಯಾಚಾರ ಮತ್ತು ಅವರ ಕುಟುಂಬವನ್ನು ಕೊಂದ 11 ಆರೋಪಿಗಳ ಬಿಡುಗಡೆಯನ್ನು ಒಕ್ಕೂಟ ಸರ್ಕಾರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸಮರ್ಥಿಸಿಕೊಂಡಿದ್ದಾರೆ. ಅಪರಾಧಿಗಳ ಬಿಡುಗಡೆಗೆ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಒಪ್ಪಿಗೆ ನೀಡಿತ್ತು ಎಂದು ಗುಜರಾತ್ ಸರ್ಕಾರವು ಸುಪ್ರಿಂಕೋರ್ಟ್‌ನಲ್ಲಿ ಹೇಳಿದ್ದು, ಇದರ ನಂತರ ವಿರೋಧ ಪಕ್ಷಗಳು ಮೋದಿ ನೇತೃತ್ವದ ಸರ್ಕಾರ ಮೇಲೆ ವಾಗ್ದಾಳಿ ನಡೆಸುತ್ತಿವೆ.

ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ವೇಳೆ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಧಾರವಾಡ ಸಂಸದರೂ ಆಗಿರುವ ಪ್ರಹ್ಲಾದ್ ಜೋಶಿ,“ಇದು ಸರ್ಕಾರ ಮತ್ತು ಸಂಬಂಧಪಟ್ಟವರು ತೆಗೆದುಕೊಂಡ ನಿರ್ಧಾರ. ಇದು ಕಾನೂನಿನ ಪ್ರಕ್ರಿಯೆಯಾಗಿರುವುದರಿಂದ ನನಗೆ ಅದರಲ್ಲಿ ಯಾವುದೇ ತಪ್ಪು ಕಂಡುಬಂದಿಲ್ಲ” ಎಂದು ಎನ್‌ಡಿಟಿವಿ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜೈಲಿನಲ್ಲಿ ‘ಸಾಕಷ್ಟು ಸಮಯ’ ಕಳೆದ ಅಪರಾಧಿಗಳನ್ನು, ಬಿಡುಗಡೆ ಮಾಡುವ ‘ಕಾನೂನು’ ಇದೆ. ಈ ಕಾನೂನಿನ ಪ್ರಕಾರ ಅವರನ್ನು ಬಿಡುಗಡೆ ಮಾಡಲಾಗುತ್ತದೆ” ಎಂದು ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಒಪ್ಪಿದ ಮೋದಿ ಸರ್ಕಾರ; ಏನೇನಾಯ್ತು ಈ ವರೆಗೆ? | ಸಂಕ್ಷಿಪ್ತ ವರದಿ

ಘೋರ, ಹೇಯ ಮತ್ತು ಗಂಭೀರ ಅಪರಾಧ ಎಂದು ಸಿಬಿಐ ಕರೆದಿರುವ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ವ್ಯಕ್ತವಾದ ಆಕ್ರೋಶಕ್ಕೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಗುಜರಾತ್‌ ಸರ್ಕಾರ ಹೇಳಿದ್ದ ‘ಉತ್ತಮ ನಡವಳಿಕೆ’ ವಾದವನ್ನು ಪುನರುಚ್ಚರಿಸಿದರು.

“ಕೆಲವು ಕಾಲ ಜೈಲಿನಲ್ಲಿದ್ದ ನಂತರ, ಅವರ ನಡವಳಿಕೆಯ ಬಗ್ಗೆ … ಹಲವಾರು ಘಟನೆಗಳು ಇವೆ, ನಾನು ಅದರ ಬಗ್ಗೆ ಮಾತನಾಡಲು ಬಯಸುವುದಿಲ್ಲ” ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಜೂನ್‌ನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಕೂಡಾ ಅಪರಾಧಿಗಳ ಬಿಡುಗಡೆಯನ್ನು ಬೆಂಬಲಿಸಿದ್ದಾರೆ. “ರಾಜ್ಯ ಸರ್ಕಾರವು ಕೈದಿಗಳನ್ನು ಉತ್ತಮ ನಡವಳಿಕೆಗಾಗಿ ಬಿಡುಗಡೆ ಮಾಡುವ ಅಧಿಕಾರವನ್ನು ಹೊಂದಿದೆ. ಇದನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ತೋರಿಸಲಾಗುತ್ತಿದೆ ಎಂದು ನಾನು ನಂಬುತ್ತೇನೆ. ಯಾವುದೇ ಅಪರಾಧಿಯು ಅವರ ಕೃತ್ಯಗಳಿಗೆ ಶಿಕ್ಷೆಗೆ ಅರ್ಹರು” ಎಂದು ಹಾರ್ದಿಕ್ ಪಟೇಲ್ ಹೇಳಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಕೇಂದ್ರದಿಂದ ಅನುಮೋದನೆ: ಗುಜರಾತ್‌ ಸರ್ಕಾರದ ಅಫಿಡವಿಟ್‌ನಲ್ಲಿ ಉಲ್ಲೇಖ

ಪ್ರಹ್ಲಾದ್ ಜೋಶಿ ಮತ್ತು ಹಾರ್ದಿಕ್ ಪಟೇಲ್ ಅವರೊಂದಿಗೆ ಪ್ರಚಾರ ಮಾಡುತ್ತಿದ್ದ ಮತ್ತೊಬ್ಬ ಬಿಜೆಪಿ ನಾಯಕ ಅಲ್ಪೇಶ್ ಠಾಕೋರ್ ಮಾತ್ರ ಅಪರಾಧಿಗಳ ಬಿಡುಗಡೆಯನ್ನು ಬೆಂಬಲಿಸದೆ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯ ಅಪರಾಧಿಗಳನ್ನು ಮುಕ್ತಗೊಳಿಸುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

“ಇದನ್ನು ನಾನು ಒಪ್ಪಿಕೊಳ್ಳುವುದಿಲ್ಲ. ಅಂತಹ ವ್ಯಕ್ತಿಗಳನ್ನು ಬಿಡುಗಡೆ ಮಾಡಲು ಕೇವಲ ಉತ್ತಮ ನಡವಳಿಕೆಯು ಸಾಕಾಗುವುದಿಲ್ಲ. ಅವರು ಜೈಲಿನಿಂದ ಹೊರ ಬಂದಾಗ ಅವರಿಗೆ ಸಿಹಿತಿಂಡಿ ನೀಡಿರುವುದು ನಾಚಿಕೆಗೇಡಿನ ಸಂಗತಿ” ಎಂದು ಠಾಕೋರ್‌ ತಿಳಿಸಿದ್ದಾರೆ.-

14 ವರ್ಷಗಳ ಕಾಲ ಜೈಲಿನಲ್ಲಿದ್ದ ಕಾರಣ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಗುಜರಾತ್ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ; ಅವರ ನಡವಳಿಕೆಯು ಒಳ್ಳೆಯದು ಎಂದು ಕಂಡುಬಂದಿದ್ದು ಮತ್ತು ಕೇಂದ್ರವು ಅದನ್ನು ಅನುಮೋದಿಸಿತು ಎಂದು ಹೇಳಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಕೊಲೆ, ಅತ್ಯಾಚಾರದಂತಹ ಹೀನಕೃತ್ಯ ಎಸಗಿದವರಿಗೆ ಕ್ಷಮಾದಾನ ಸರಿಯೇ?

ರಾಷ್ಟ್ರವ್ಯಾಪಿ ಆಕ್ರೋಶದ ನಡುವೆ ಆಗಸ್ಟ್ 15 ಸ್ವಾತಂತ್ರ್ಯ ದಿನದಂದು ಅಪರಾಧಿಗಳು ಬಿಡುಗಡೆಯಾಗಿದ್ದು, ಗುಜರಾತಿನ ಜೈಲಿನ ಹೊರಗೆ ಹೂಮಾಲೆ ಹಾಕಿ ಸಿಹಿ ಹಂಚಿ ಅವರನ್ನು ಸ್ವಾಗತಿಸಲಾತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...