Homeಕರ್ನಾಟಕರಾಜ್ಯ ಸರ್ಕಾರದ ಸಮೀಕ್ಷೆಯಲ್ಲಿ ಇವಿಎಂ ಮೇಲೆ ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದ ವರದಿ : ಅಲ್ಲಗಳೆದ...

ರಾಜ್ಯ ಸರ್ಕಾರದ ಸಮೀಕ್ಷೆಯಲ್ಲಿ ಇವಿಎಂ ಮೇಲೆ ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದ ವರದಿ : ಅಲ್ಲಗಳೆದ ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಹೆಚ್ಚಿನ ನಾಗರಿಕರು ಭಾರತದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತವಾಗಿ ನಡೆಯುತ್ತಿವೆ ಎಂದು ನಂಬುತ್ತಾರೆ ಹಾಗೂ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೇಲಿನ ನಂಬಿಕೆ ಹೆಚ್ಚಾಗಿದೆ ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಕಟಿಸಿದ ರಾಜ್ಯವ್ಯಾಪಿ ಸಮೀಕ್ಷೆಯ ಫಲಿತಾಂಶಗಳು ತಿಳಿಸಿವೆ ಎಂಬ ವರದಿಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತ ಡೆಕ್ಕನ್ ಹೆರಾಲ್ಡ್ ಪತ್ರಿಕಾ ವರದಿಯನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರ ಸಮೀಕ್ಷೆ ಮಾಡಿಸಿಲ್ಲ. ಇದು ಚುನಾವಣಾ ಆಯೋಗದಿಂದ ರಾಜ್ಯ ಮುಖ್ಯ ಚುನಾವಣಾಧಿಕಾರಿಯ ಮೂಲಕ ಆಯೋಜಿಸಲಾದ ಸಮೀಕ್ಷೆ. ಪ್ರಧಾನಿ ಕಚೇರಿಯಲ್ಲೇ ಕೆಲಸ ಮಾಡುವ, ಪ್ರಧಾನಿಗೆ ಅದ್ಧೂರಿ ಗೌರವದ ಕಾಣಿಕೆ ನೀಡಿದ ಪ್ರಧಾನಿಯ ಸೇವಕನಿಂದ ನಡೆದ ಸಮೀಕ್ಷೆ ಎಂದಿದ್ದಾರೆ.

ಮುಂದುವರಿದು, ಸಮೀಕ್ಷೆ ನಡೆದಿದ್ದು ಮೇ 2025ರಲ್ಲಿ. ಕಾಂಗ್ರೆಸ್ ಪಕ್ಷ ಮತಗಳ್ಳತನ (ವೋಟ್‌ ಚೋರಿ) ಕುರಿತು ವಿವರವಾಗಿ ಬಹಿರಂಗಪಡಿಸಿದ್ದು ಆಗಸ್ಟ್ 2025ರಲ್ಲಿ ಎಂದು ತಿಳಿಸಿದ್ದಾರೆ.

ಪ್ರತಿ ವಿಧಾನಸಭಾ ವ್ಯಾಪ್ತಿಯಲ್ಲಿ ಕೇವಲ 50 ಜನರನ್ನು ಸಂದರ್ಶಿಸಿದ್ದ ಈ ಸಮೀಕ್ಷೆಯು ಸಂಖ್ಯೆಯಲ್ಲಿ ದುರ್ಬಲ, ಮಾದರಿಗಳಲ್ಲಿ ವ್ಯಾಪಕ ದೋಷ ಮತ್ತು ಆಯ್ಕೆ ಪ್ರಕ್ರಿಯೆಯಲ್ಲಿ ಪಕ್ಷಪಾತ ಹೊಂದಿದ್ದು ನಿರ್ಧಾರ ಕೈಗೊಳ್ಳಲು ಸೂಕ್ತವಾಗಿಲ್ಲ. ಆದರೂ ಬಿಜೆಪಿ ಈ ಸಮೀಕ್ಷೆಯನ್ನು “ರಾಜ್ಯ ಸರ್ಕಾರದ ಸಮೀಕ್ಷೆ” ಎಂದು ತಪ್ಪಾಗಿ ಪ್ರಚಾರ ಮಾಡುತ್ತಿದೆ. ಆಶ್ಚರ್ಯದ ವಿಷಯವೆಂದರೆ, ಆಳಂದ ಕ್ಷೇತ್ರದ ಮತಗಳ್ಳತನ ಆರೋಪ ಪಟ್ಟಿಯಲ್ಲಿ ಮಾಜಿ ಬಿಜೆಪಿ ಶಾಸಕರನ್ನು ಮೊದಲ ಆರೋಪಿ (ಎ1) ಎಂದು ಹೆಸರಿಸಿರುವುದರ ಬಗ್ಗೆ ಬಿಜೆಪಿ ಮೌನವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಪ್ರಿಯಾಂಕ್‌ ಖರ್ಗೆ ಹಂಚಿಕೊಂಡಿರುವ ವರದಿಯಲ್ಲಿ, ಬೆಂಗಳೂರು, ಬೆಳಗಾವಿ, ಕಲಬುರಗಿ ಮತ್ತು ಮೈಸೂರಿನ ಆಡಳಿತ ವಿಭಾಗಗಳಲ್ಲಿರುವ 102 ವಿಧಾನಸಭಾ ಕ್ಷೇತ್ರಗಳಲ್ಲಿ 5,100 ಜನರನ್ನು ಒಳಗೊಂಡ ಈ ಸಮೀಕ್ಷೆಯನ್ನು ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ನಿಯೋಜಿಸಿದ್ದರು ಎಂದು ಹೇಳಲಾಗಿದೆ. ಆದರೆ, ವರದಿಯ ಆರಂಭದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿದ ವರದಿ ಎಂದು ಹೇಳಲಾಗಿದೆ.

ಇದು 2024ರ ಲೋಕಸಭಾ ಚುನಾವಣೆಯ ನಂತರ ನಾಗರಿಕರ ಜ್ಞಾನ (Knowledge), ಧೋರಣೆ (Attitude) ಮತ್ತು ಅಭ್ಯಾಸ (Practice) ಅಂದರೆ ಕೆಎಪಿ (KAP) ಸಮೀಕ್ಷೆಯ ಅಂತಿಮ ಹಂತದ (endline) ಸಮೀಕ್ಷೆಯಾಗಿದೆ. ಈ ಸಮೀಕ್ಷೆಯ ವರದಿಯನ್ನು ಕರ್ನಾಟಕ ಸರ್ಕಾರದ ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಅಂಕಿಅಂಶಗಳ ಇಲಾಖೆಯಡಿ ಬರುವ ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರ ಪ್ರಕಟಿಸಿದೆ. ಈ ಸಮೀಕ್ಷೆಯು ಚುನಾವಣಾ ಆಯೋಗದ ಕಾರ್ಯಕ್ರಮದ ಪ್ರಭಾವವನ್ನು ಮೌಲ್ಯಮಾಪನ ಮಾಡಲು ನಡೆಸಲಾಗಿದ್ದು, ಕರ್ನಾಟಕದಲ್ಲಿ ಮತದಾರರ ಚುನಾವಣಾ ಪ್ರಕ್ರಿಯೆ ಬಗ್ಗೆ ತಿಳುವಳಿಕೆ, ನಂಬಿಕೆ ಮತ್ತು ಭಾಗವಹಿಸುವಿಕೆಯನ್ನು ಅಧ್ಯಯನ ಮಾಡಿದೆ ಎಂದು ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...