Homeಕರ್ನಾಟಕರಾಜ್ಯ ಸರ್ಕಾರದ ಸಮೀಕ್ಷೆಯಲ್ಲಿ ಇವಿಎಂ ಮೇಲೆ ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದ ವರದಿ : ಅಲ್ಲಗಳೆದ...

ರಾಜ್ಯ ಸರ್ಕಾರದ ಸಮೀಕ್ಷೆಯಲ್ಲಿ ಇವಿಎಂ ಮೇಲೆ ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದ ವರದಿ : ಅಲ್ಲಗಳೆದ ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಹೆಚ್ಚಿನ ನಾಗರಿಕರು ಭಾರತದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತವಾಗಿ ನಡೆಯುತ್ತಿವೆ ಎಂದು ನಂಬುತ್ತಾರೆ ಹಾಗೂ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೇಲಿನ ನಂಬಿಕೆ ಹೆಚ್ಚಾಗಿದೆ ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಕಟಿಸಿದ ರಾಜ್ಯವ್ಯಾಪಿ ಸಮೀಕ್ಷೆಯ ಫಲಿತಾಂಶಗಳು ತಿಳಿಸಿವೆ ಎಂಬ ವರದಿಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತ ಡೆಕ್ಕನ್ ಹೆರಾಲ್ಡ್ ಪತ್ರಿಕಾ ವರದಿಯನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರ ಸಮೀಕ್ಷೆ ಮಾಡಿಸಿಲ್ಲ. ಇದು ಚುನಾವಣಾ ಆಯೋಗದಿಂದ ರಾಜ್ಯ ಮುಖ್ಯ ಚುನಾವಣಾಧಿಕಾರಿಯ ಮೂಲಕ ಆಯೋಜಿಸಲಾದ ಸಮೀಕ್ಷೆ. ಪ್ರಧಾನಿ ಕಚೇರಿಯಲ್ಲೇ ಕೆಲಸ ಮಾಡುವ, ಪ್ರಧಾನಿಗೆ ಅದ್ಧೂರಿ ಗೌರವದ ಕಾಣಿಕೆ ನೀಡಿದ ಪ್ರಧಾನಿಯ ಸೇವಕನಿಂದ ನಡೆದ ಸಮೀಕ್ಷೆ ಎಂದಿದ್ದಾರೆ.

ಮುಂದುವರಿದು, ಸಮೀಕ್ಷೆ ನಡೆದಿದ್ದು ಮೇ 2025ರಲ್ಲಿ. ಕಾಂಗ್ರೆಸ್ ಪಕ್ಷ ಮತಗಳ್ಳತನ (ವೋಟ್‌ ಚೋರಿ) ಕುರಿತು ವಿವರವಾಗಿ ಬಹಿರಂಗಪಡಿಸಿದ್ದು ಆಗಸ್ಟ್ 2025ರಲ್ಲಿ ಎಂದು ತಿಳಿಸಿದ್ದಾರೆ.

ಪ್ರತಿ ವಿಧಾನಸಭಾ ವ್ಯಾಪ್ತಿಯಲ್ಲಿ ಕೇವಲ 50 ಜನರನ್ನು ಸಂದರ್ಶಿಸಿದ್ದ ಈ ಸಮೀಕ್ಷೆಯು ಸಂಖ್ಯೆಯಲ್ಲಿ ದುರ್ಬಲ, ಮಾದರಿಗಳಲ್ಲಿ ವ್ಯಾಪಕ ದೋಷ ಮತ್ತು ಆಯ್ಕೆ ಪ್ರಕ್ರಿಯೆಯಲ್ಲಿ ಪಕ್ಷಪಾತ ಹೊಂದಿದ್ದು ನಿರ್ಧಾರ ಕೈಗೊಳ್ಳಲು ಸೂಕ್ತವಾಗಿಲ್ಲ. ಆದರೂ ಬಿಜೆಪಿ ಈ ಸಮೀಕ್ಷೆಯನ್ನು “ರಾಜ್ಯ ಸರ್ಕಾರದ ಸಮೀಕ್ಷೆ” ಎಂದು ತಪ್ಪಾಗಿ ಪ್ರಚಾರ ಮಾಡುತ್ತಿದೆ. ಆಶ್ಚರ್ಯದ ವಿಷಯವೆಂದರೆ, ಆಳಂದ ಕ್ಷೇತ್ರದ ಮತಗಳ್ಳತನ ಆರೋಪ ಪಟ್ಟಿಯಲ್ಲಿ ಮಾಜಿ ಬಿಜೆಪಿ ಶಾಸಕರನ್ನು ಮೊದಲ ಆರೋಪಿ (ಎ1) ಎಂದು ಹೆಸರಿಸಿರುವುದರ ಬಗ್ಗೆ ಬಿಜೆಪಿ ಮೌನವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಪ್ರಿಯಾಂಕ್‌ ಖರ್ಗೆ ಹಂಚಿಕೊಂಡಿರುವ ವರದಿಯಲ್ಲಿ, ಬೆಂಗಳೂರು, ಬೆಳಗಾವಿ, ಕಲಬುರಗಿ ಮತ್ತು ಮೈಸೂರಿನ ಆಡಳಿತ ವಿಭಾಗಗಳಲ್ಲಿರುವ 102 ವಿಧಾನಸಭಾ ಕ್ಷೇತ್ರಗಳಲ್ಲಿ 5,100 ಜನರನ್ನು ಒಳಗೊಂಡ ಈ ಸಮೀಕ್ಷೆಯನ್ನು ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ನಿಯೋಜಿಸಿದ್ದರು ಎಂದು ಹೇಳಲಾಗಿದೆ. ಆದರೆ, ವರದಿಯ ಆರಂಭದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿದ ವರದಿ ಎಂದು ಹೇಳಲಾಗಿದೆ.

ಇದು 2024ರ ಲೋಕಸಭಾ ಚುನಾವಣೆಯ ನಂತರ ನಾಗರಿಕರ ಜ್ಞಾನ (Knowledge), ಧೋರಣೆ (Attitude) ಮತ್ತು ಅಭ್ಯಾಸ (Practice) ಅಂದರೆ ಕೆಎಪಿ (KAP) ಸಮೀಕ್ಷೆಯ ಅಂತಿಮ ಹಂತದ (endline) ಸಮೀಕ್ಷೆಯಾಗಿದೆ. ಈ ಸಮೀಕ್ಷೆಯ ವರದಿಯನ್ನು ಕರ್ನಾಟಕ ಸರ್ಕಾರದ ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಅಂಕಿಅಂಶಗಳ ಇಲಾಖೆಯಡಿ ಬರುವ ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರ ಪ್ರಕಟಿಸಿದೆ. ಈ ಸಮೀಕ್ಷೆಯು ಚುನಾವಣಾ ಆಯೋಗದ ಕಾರ್ಯಕ್ರಮದ ಪ್ರಭಾವವನ್ನು ಮೌಲ್ಯಮಾಪನ ಮಾಡಲು ನಡೆಸಲಾಗಿದ್ದು, ಕರ್ನಾಟಕದಲ್ಲಿ ಮತದಾರರ ಚುನಾವಣಾ ಪ್ರಕ್ರಿಯೆ ಬಗ್ಗೆ ತಿಳುವಳಿಕೆ, ನಂಬಿಕೆ ಮತ್ತು ಭಾಗವಹಿಸುವಿಕೆಯನ್ನು ಅಧ್ಯಯನ ಮಾಡಿದೆ ಎಂದು ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...