Homeಕರ್ನಾಟಕಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

ಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ಬಳಿಕ ಬೆದರಿಕೆ ಕರೆಗಳು ಬರುತ್ತಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ನಿನ್ನೆ (ಅ.13) ಹೇಳಿಕೊಂಡಿದ್ದರು. ಈ ಕುರಿತಂತೆ ಇಂದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿರುವ ವಿಡಿಯೋದಲ್ಲಿ, ವ್ಯಕ್ತಿಯೊಬ್ಬರು ಸಚಿವರಿಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸುವುದು ಇದೆ. ಹಿಂದಿ ಭಾಷೆಯಲ್ಲಿ ಮಾತನಾಡಿದ ವ್ಯಕ್ತಿ “ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಲು ನಿನಗೆಷ್ಟು ಧೈರ್ಯ?” ಎಂದು ಖರ್ಗೆ ಅವರಿಗೆ ಧಮ್ಕಿ ಹಾಕಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “ನಿಮ್ಮ ಆರ್‌ಎಸ್‌ಎಸ್‌ ಶಾಖೆಗಳಲ್ಲಿ ಇದನ್ನೇ ಕಲಿಸಿಕೊಡುತ್ತಾರಾ?” ಎಂದು ಆತನಿಗೆ ಪ್ರಶ್ನಿಸಿದ್ದಾರೆ.

ಈ ಕುರಿತು ಬರೆದುಕೊಂಡಿರುವ ಪ್ರಿಯಾಂಕ್ ಖರ್ಗೆ, “ಆರ್‌ಎಸ್‌ಎಸ್‌ ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ. ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ. ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ?” ಎಂದು ಪ್ರಶ್ನಿಸಿದ್ದಾರೆ.
“ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ಬಿವೈ ವಿಜಯೇಂದ್ರ, ಆರ್‌.ಅಶೋಕ, ಸಿ.ಟಿ ರವಿ, ಸುನಿಲ್ ಕುಮಾರ್, ಪ್ರತಾಪ್ ಸಿಂಹ, ಛಲವಾದಿ ನಾರಾಯಣಸ್ವಾಮಿ ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ?” ಎಂದು ಕೇಳಿದ್ದಾರೆ.
“ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು, ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ” ಎಂದಿದ್ದಾರೆ.
“ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, ಆರ್‌ಎಸ್‌ಸ್‌ ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ. ಮುಗ್ದರನ್ನು ಬ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ” ಎಂದು ಸ್ಪಷ್ಟಪಡಿಸಿದ್ದಾರೆ.
“ಆರ್‌ಎಸ್‌ಎಸ್‌ನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ, ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ. ಮುಗ್ದ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ ಮತ್ತು ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ” ಎಂದು ಹೇಳಿದ್ದಾರೆ.
“ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆಯಷ್ಟೇ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ದಾಂತಿಕ ರಾಜಕಾರಣ, ಮುಗ್ದ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣ: ಶವಪರೀಕ್ಷೆಗೆ ಒಪ್ಪಿದ ದಲಿತ ಐಪಿಎಸ್ ಅಧಿಕಾರಿ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...