Homeಕರ್ನಾಟಕಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

ಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ಬಳಿಕ ಬೆದರಿಕೆ ಕರೆಗಳು ಬರುತ್ತಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ನಿನ್ನೆ (ಅ.13) ಹೇಳಿಕೊಂಡಿದ್ದರು. ಈ ಕುರಿತಂತೆ ಇಂದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿರುವ ವಿಡಿಯೋದಲ್ಲಿ, ವ್ಯಕ್ತಿಯೊಬ್ಬರು ಸಚಿವರಿಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸುವುದು ಇದೆ. ಹಿಂದಿ ಭಾಷೆಯಲ್ಲಿ ಮಾತನಾಡಿದ ವ್ಯಕ್ತಿ “ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಲು ನಿನಗೆಷ್ಟು ಧೈರ್ಯ?” ಎಂದು ಖರ್ಗೆ ಅವರಿಗೆ ಧಮ್ಕಿ ಹಾಕಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “ನಿಮ್ಮ ಆರ್‌ಎಸ್‌ಎಸ್‌ ಶಾಖೆಗಳಲ್ಲಿ ಇದನ್ನೇ ಕಲಿಸಿಕೊಡುತ್ತಾರಾ?” ಎಂದು ಆತನಿಗೆ ಪ್ರಶ್ನಿಸಿದ್ದಾರೆ.

ಈ ಕುರಿತು ಬರೆದುಕೊಂಡಿರುವ ಪ್ರಿಯಾಂಕ್ ಖರ್ಗೆ, “ಆರ್‌ಎಸ್‌ಎಸ್‌ ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ. ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ. ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ?” ಎಂದು ಪ್ರಶ್ನಿಸಿದ್ದಾರೆ.
“ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ಬಿವೈ ವಿಜಯೇಂದ್ರ, ಆರ್‌.ಅಶೋಕ, ಸಿ.ಟಿ ರವಿ, ಸುನಿಲ್ ಕುಮಾರ್, ಪ್ರತಾಪ್ ಸಿಂಹ, ಛಲವಾದಿ ನಾರಾಯಣಸ್ವಾಮಿ ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ?” ಎಂದು ಕೇಳಿದ್ದಾರೆ.
“ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು, ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ” ಎಂದಿದ್ದಾರೆ.
“ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, ಆರ್‌ಎಸ್‌ಸ್‌ ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ. ಮುಗ್ದರನ್ನು ಬ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ” ಎಂದು ಸ್ಪಷ್ಟಪಡಿಸಿದ್ದಾರೆ.
“ಆರ್‌ಎಸ್‌ಎಸ್‌ನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ, ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ. ಮುಗ್ದ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ ಮತ್ತು ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ” ಎಂದು ಹೇಳಿದ್ದಾರೆ.
“ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆಯಷ್ಟೇ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ದಾಂತಿಕ ರಾಜಕಾರಣ, ಮುಗ್ದ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣ: ಶವಪರೀಕ್ಷೆಗೆ ಒಪ್ಪಿದ ದಲಿತ ಐಪಿಎಸ್ ಅಧಿಕಾರಿ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...