Homeಮುಖಪುಟನೀವು ಅಧಿಕಾರದಲ್ಲಿದ್ದಾಗ ಹೀರೋ ಆಗಿ ಕಂಡಿದ್ದ ಪೊಲೀಸರು ಈಗ ವಿಲನ್ ಆದರೆ?; ಹೆಚ್​ಡಿಕೆ ವಿರುದ್ಧ ಕಿಡಿಕಾರಿದ...

ನೀವು ಅಧಿಕಾರದಲ್ಲಿದ್ದಾಗ ಹೀರೋ ಆಗಿ ಕಂಡಿದ್ದ ಪೊಲೀಸರು ಈಗ ವಿಲನ್ ಆದರೆ?; ಹೆಚ್​ಡಿಕೆ ವಿರುದ್ಧ ಕಿಡಿಕಾರಿದ ಆರ್. ಅಶೋಕ್

ಅಲ್ಪಸಂಖ್ಯಾತ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಹರಿದು ಹೋಗುತ್ತವೆ ಎಂಬ ಭಯ ಕುಮಾರಸ್ವಾಮಿ ಅವರನ್ನು ಕಾಡುತ್ತಿದೆ. ಹೀಗಾಗಿ ಆ ಸಮುದಾಯದ ಮತಗಳನ್ನು ಸೆಳೆಯೋ ಕಾರಣಕ್ಕೆ ಕುಮಾರಸ್ವಾಮಿ ಇಂತಹ ಹೇಳಿಕೆ ನೀಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಬೆಂಗಳೂರು (ಜನವರಿ 23); ಜೆಡಿಎಸ್ ಅಧಿಕಾರದಲ್ಲಿರುವಾಗ ಪೊಲೀಸರು ಹೀರೋ ರೀತಿ ಕಂಡರು. ಆದರೆ, ಅಧಿಕಾರ ಹೋದ ತಕ್ಷಣ ಪೊಲೀಸರು ವಿಲನ್ ಆಗಿದ್ದಾರೆಯೇ? ಎಂದು ಸಚಿವ ಆರ್. ಅಶೋಕ್ ಕುಮಾರ್ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಸಜೀವ ಬಾಂಬ್ ಅನ್ನು ಪೊಲೀಸರು ಯಶಸ್ವಿಯಾಗಿ ನಿಷ್ಕ್ರಿಯಗೊಳಿಸಿದ್ದರು. ಆದರೆ, ಪೊಲೀಸರ ಈ ಕಾರ್ಯಾಚರಣೆಯನ್ನು ಹೆಚ್.ಡಿ. ಕುಮಾರಸ್ವಾಮಿ ಅಣಕು ಪ್ರದರ್ಶನ ಎಂದು ಕುಹಕವಾಡಿದ್ದರು. ಅಲ್ಲದೆ, ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಹರ್ಷ ವಿರುದ್ಧ ಕಿಡಿಕಾರಿದ್ದರು.

ಕುಮಾರಸ್ವಾಮಿ ಅವರ ಈ ಹೇಳಿಕೆ ಇಂದು ಅಷ್ಟೇ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಹಿರಿಯ ನಾಯಕ ಹಾಗೂ ಸಚಿವ ಆರ್. ಆಶೋಕ್, “ಹೆಚ್ಡಿಕೆ ಅಧಿಕಾರದಲ್ಲಿದ್ದಾಗ ಅವರಿಗೆ ಪೊಲೀಸರು ಬೇಕಿತ್ತು. ಅವರನ್ನು ಹೀರೋ ರೀತಿ ಬಿಂಬಿಸುತ್ತಿದ್ದರು. ಆದರೆ, ಅಧಿಕಾರ ಹೋದ ತಕ್ಷಣ ಪೊಲೀಸರು ವಿಲನ್ ಆಗಿದ್ದಾರೆ.

ಅಲ್ಪಸಂಖ್ಯಾತ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಹರಿದು ಹೋಗುತ್ತವೆ ಎಂಬ ಭಯ ಕುಮಾರಸ್ವಾಮಿ ಅವರನ್ನು ಕಾಡುತ್ತಿದೆ. ಹೀಗಾಗಿ ಆ ಸಮುದಾಯದ ಮತಗಳನ್ನು ಸೆಳೆಯೋ ಕಾರಣಕ್ಕೆ ಕುಮಾರಸ್ವಾಮಿ ಇಂತಹ ಹೇಳಿಕೆ ನೀಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...