Homeಮುಖಪುಟಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

ಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

- Advertisement -
- Advertisement -

ಟಿವಿ ಚರ್ಚೆಗಳ ತುಣುಕುಗಳನ್ನು ಪೋಸ್ಟ್ ಮಾಡುವ ಮೂಲಕ ಹಕ್ಕುಸ್ವಾಮ್ಯ ಕಾನೂನನ್ನು ಉಲ್ಲಂಘಿಸಿದ್ದಾರೆ ಎಂಬ ದೂರುಗಳ ಮೇಲೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್‌ ಪ್ರಸಾದ್ ಅವರ ಟ್ವಿಟರ್‌ ಖಾತೆಗೆ ಒಂಉ ಗಂಟೆ ನಿರ್ಬಂಧ ವಿಧಿಸಲಾಗಿದೆ.

“ಯುಎಸ್ಎದ ಡಿಜಿಟಲ್ ಮಿಲೇನಿಯಮ್ ಕೃತಿಸ್ವಾಮ್ಯ ಕಾಯ್ದೆಯ ಉಲ್ಲಂಘನೆ ಇದೆ ಎಂದು ಆರೋಪಿಸಿ ಸುಮಾರು ಒಂದು ಗಂಟೆಗಳ ಕಾಲ ನನ್ನ ಖಾತೆಗೆ ಟ್ವಿಟರ್ ನಿರ್ಬಂಧ ವಿಧಿಸಿತ್ತು ಎಂದು ಸಚಿವ ರವಿಶಂಕರ್‌ ಪ್ರಸಾದ್ ಸರಣಿ ಟ್ವೀಟ್‌ಗಳಲ್ಲಿ ತಿಳಿಸಿದ್ದಾರೆ.

“ಟ್ವಿಟ್ಟರ್‌ನ ಈ ಕ್ರಮ, ಮಾಹಿತಿ ತಂತ್ರಜ್ಞಾನ ನಿಯಮಗಳು 2021 ರ ನಿಯಮ 4 (8) ಅನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ,  ನನ್ನ ಸ್ವಂತ ಖಾತೆಗೆ ನನ್ನನ್ನು ನಿರ್ಬಂಧಿಸುವ ಮೊದಲು ಯಾವುದೇ ಮುನ್ಸೂಚನೆಯನ್ನು ನೀಡಿಲ್ಲ” ಎಂದು ಸಚಿವ ಆರೋಪಿಸಿದ್ದಾರೆ.

ಇದನ್ನೂ ಓದಿ: ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ವೈದ್ಯಕೀಯ ಆಮ್ಲಜನಕ ಬಳಸಿಕೊಂಡ ದೆಹಲಿ: ಸುಪ್ರೀಂ ಕೋರ್ಟ್ ಸಮಿತಿ

“ಕೇಂದ್ರದ ಮಧ್ಯವರ್ತಿ ಮಾರ್ಗಸೂಚಿಗಳನ್ನು ಅನುಸರಿಸಲು ಟ್ವಿಟರ್ ಏಕೆ ನಿರಾಕರಿಸುತ್ತಿದೆ ಎಂಬುದು ಈಗ ಸ್ಪಷ್ಟವಾಗಿದೆ. ಏಕೆಂದರೆ ಟ್ವಿಟರ್ ಈ ಮಾರ್ಗಸೂಚಿಗಳನ್ನು ಅನುಸರಿಸಿದರೆ, ಅವರ ಕಾರ್ಯಸೂಚಿಗೆ ಸರಿಹೊಂದದ ವ್ಯಕ್ತಿಯ ಖಾತೆಯನ್ನು ನಿರ್ಬಂಧಿಸುವುದು ಸಾಧ್ಯವಾಗುವುದಿಲ್ಲ” ಎಂದು ಟ್ವಿಟರ್‌ ವಿರುದ್ಧ ಕಿಡಿಕಾರಿದ್ದಾರೆ.

ಇದರ ಜೊತೆಗೆ “ಯಾವುದೇ ಪ್ಲಾಟ್‌ಫಾರ್ಮ್ ಇರಲಿ ಎಲ್ಲರು ಹೊಸ ಐಟಿ ನಿಯಮಗಳನ್ನು ಸಂಪೂರ್ಣವಾಗಿ ಪಾಲಿಸಬೇಕಾಗುತ್ತದೆ. ಅದರ ಬಗ್ಗೆ ಯಾವುದೇ ರಾಜಿ ಇಲ್ಲ” ಎಂದು ಒತ್ತಿ ಹೇಳಿದ್ದಾರೆ.

ರವಿಶಂಕರ್‌ ಪ್ರಸಾದ್‌ ಅವರ ಟ್ವಿಟರ್‌ ಖಾತೆ ನಿರ್ಬಂಧಕ್ಕೆ ಕಾಂಗ್ರೆಸ್ ನಾಯಕ ಶ್ರೀವತ್ಸ ಪ್ರತಿಕ್ರಿಯೆ ನೀಡಿದ್ದು, ಟ್ವಿಟರ್‌ ನಿಯಮಗಳನ್ನು ಏಕೆ ಪಾಲಿಸುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಅಮೆರಿಕಾದಲ್ಲಿ,  ಟ್ವಿಟರ್ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ ಯುಎಸ್ ಅಧ್ಯಕ್ಷರನ್ನು ಬ್ಯಾನ್ ಮಾಡಲಾಗಿದೆ. ಭಾರತದಲ್ಲಿ, ಟ್ವಿಟರ್ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ ಕೆಲವು ಗಂಟೆಗಳ ಕಾಲ ಸಚಿವರಿಗೆ ಖಾತೆಯನ್ನು ಬಳಸಲಿ ನಿರ್ಬಂಧ ವಿಧಿಸಲಾಗಿದೆ. ಸಚಿವ ರವಿಶಂಕರ್‌ ಪ್ರಸಾದ್ ನಿಯಮಗಳನ್ನು ಏಕೆ ಅನುಸರಿಸಬಾರದು? ಸರ್ಕಾರ ಈಗ ಟ್ವಿಟರ್ ಮೇಲೆ ದಾಳಿ ನಡೆಸಿ, ಟ್ವಿಟರ್ ಎಂಡಿಗೆ ಕಿರುಕುಳ ನೀಡುತ್ತದೆಯೇ..?” ಎಂದು ಶ್ರಿವತ್ಸ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ‘ಟ್ವಿಟರ್‌ ವಿರುದ್ದ ಹೋರಾಡುವ ಬದಲು ವ್ಯಾಕ್ಸಿನೇಷನ್‌ ಕಡೆ ಗಮನಹರಿಸಿ’ – ಒಕ್ಕೂಟ ಸರ್ಕಾರಕ್ಕೆ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...