Homeಮುಖಪುಟಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

ಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

- Advertisement -
- Advertisement -

ಟಿವಿ ಚರ್ಚೆಗಳ ತುಣುಕುಗಳನ್ನು ಪೋಸ್ಟ್ ಮಾಡುವ ಮೂಲಕ ಹಕ್ಕುಸ್ವಾಮ್ಯ ಕಾನೂನನ್ನು ಉಲ್ಲಂಘಿಸಿದ್ದಾರೆ ಎಂಬ ದೂರುಗಳ ಮೇಲೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್‌ ಪ್ರಸಾದ್ ಅವರ ಟ್ವಿಟರ್‌ ಖಾತೆಗೆ ಒಂಉ ಗಂಟೆ ನಿರ್ಬಂಧ ವಿಧಿಸಲಾಗಿದೆ.

“ಯುಎಸ್ಎದ ಡಿಜಿಟಲ್ ಮಿಲೇನಿಯಮ್ ಕೃತಿಸ್ವಾಮ್ಯ ಕಾಯ್ದೆಯ ಉಲ್ಲಂಘನೆ ಇದೆ ಎಂದು ಆರೋಪಿಸಿ ಸುಮಾರು ಒಂದು ಗಂಟೆಗಳ ಕಾಲ ನನ್ನ ಖಾತೆಗೆ ಟ್ವಿಟರ್ ನಿರ್ಬಂಧ ವಿಧಿಸಿತ್ತು ಎಂದು ಸಚಿವ ರವಿಶಂಕರ್‌ ಪ್ರಸಾದ್ ಸರಣಿ ಟ್ವೀಟ್‌ಗಳಲ್ಲಿ ತಿಳಿಸಿದ್ದಾರೆ.

“ಟ್ವಿಟ್ಟರ್‌ನ ಈ ಕ್ರಮ, ಮಾಹಿತಿ ತಂತ್ರಜ್ಞಾನ ನಿಯಮಗಳು 2021 ರ ನಿಯಮ 4 (8) ಅನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ,  ನನ್ನ ಸ್ವಂತ ಖಾತೆಗೆ ನನ್ನನ್ನು ನಿರ್ಬಂಧಿಸುವ ಮೊದಲು ಯಾವುದೇ ಮುನ್ಸೂಚನೆಯನ್ನು ನೀಡಿಲ್ಲ” ಎಂದು ಸಚಿವ ಆರೋಪಿಸಿದ್ದಾರೆ.

ಇದನ್ನೂ ಓದಿ: ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ವೈದ್ಯಕೀಯ ಆಮ್ಲಜನಕ ಬಳಸಿಕೊಂಡ ದೆಹಲಿ: ಸುಪ್ರೀಂ ಕೋರ್ಟ್ ಸಮಿತಿ

“ಕೇಂದ್ರದ ಮಧ್ಯವರ್ತಿ ಮಾರ್ಗಸೂಚಿಗಳನ್ನು ಅನುಸರಿಸಲು ಟ್ವಿಟರ್ ಏಕೆ ನಿರಾಕರಿಸುತ್ತಿದೆ ಎಂಬುದು ಈಗ ಸ್ಪಷ್ಟವಾಗಿದೆ. ಏಕೆಂದರೆ ಟ್ವಿಟರ್ ಈ ಮಾರ್ಗಸೂಚಿಗಳನ್ನು ಅನುಸರಿಸಿದರೆ, ಅವರ ಕಾರ್ಯಸೂಚಿಗೆ ಸರಿಹೊಂದದ ವ್ಯಕ್ತಿಯ ಖಾತೆಯನ್ನು ನಿರ್ಬಂಧಿಸುವುದು ಸಾಧ್ಯವಾಗುವುದಿಲ್ಲ” ಎಂದು ಟ್ವಿಟರ್‌ ವಿರುದ್ಧ ಕಿಡಿಕಾರಿದ್ದಾರೆ.

ಇದರ ಜೊತೆಗೆ “ಯಾವುದೇ ಪ್ಲಾಟ್‌ಫಾರ್ಮ್ ಇರಲಿ ಎಲ್ಲರು ಹೊಸ ಐಟಿ ನಿಯಮಗಳನ್ನು ಸಂಪೂರ್ಣವಾಗಿ ಪಾಲಿಸಬೇಕಾಗುತ್ತದೆ. ಅದರ ಬಗ್ಗೆ ಯಾವುದೇ ರಾಜಿ ಇಲ್ಲ” ಎಂದು ಒತ್ತಿ ಹೇಳಿದ್ದಾರೆ.

ರವಿಶಂಕರ್‌ ಪ್ರಸಾದ್‌ ಅವರ ಟ್ವಿಟರ್‌ ಖಾತೆ ನಿರ್ಬಂಧಕ್ಕೆ ಕಾಂಗ್ರೆಸ್ ನಾಯಕ ಶ್ರೀವತ್ಸ ಪ್ರತಿಕ್ರಿಯೆ ನೀಡಿದ್ದು, ಟ್ವಿಟರ್‌ ನಿಯಮಗಳನ್ನು ಏಕೆ ಪಾಲಿಸುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಅಮೆರಿಕಾದಲ್ಲಿ,  ಟ್ವಿಟರ್ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ ಯುಎಸ್ ಅಧ್ಯಕ್ಷರನ್ನು ಬ್ಯಾನ್ ಮಾಡಲಾಗಿದೆ. ಭಾರತದಲ್ಲಿ, ಟ್ವಿಟರ್ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ ಕೆಲವು ಗಂಟೆಗಳ ಕಾಲ ಸಚಿವರಿಗೆ ಖಾತೆಯನ್ನು ಬಳಸಲಿ ನಿರ್ಬಂಧ ವಿಧಿಸಲಾಗಿದೆ. ಸಚಿವ ರವಿಶಂಕರ್‌ ಪ್ರಸಾದ್ ನಿಯಮಗಳನ್ನು ಏಕೆ ಅನುಸರಿಸಬಾರದು? ಸರ್ಕಾರ ಈಗ ಟ್ವಿಟರ್ ಮೇಲೆ ದಾಳಿ ನಡೆಸಿ, ಟ್ವಿಟರ್ ಎಂಡಿಗೆ ಕಿರುಕುಳ ನೀಡುತ್ತದೆಯೇ..?” ಎಂದು ಶ್ರಿವತ್ಸ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ‘ಟ್ವಿಟರ್‌ ವಿರುದ್ದ ಹೋರಾಡುವ ಬದಲು ವ್ಯಾಕ್ಸಿನೇಷನ್‌ ಕಡೆ ಗಮನಹರಿಸಿ’ – ಒಕ್ಕೂಟ ಸರ್ಕಾರಕ್ಕೆ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...