Homeಮುಖಪುಟಸಚಿವ ರಾಜೀನಾಮೆ | ಇಕ್ಕಟ್ಟಿನಲ್ಲಿ ಉತ್ತರಾಖಂಡ ಸಿಎಂ ಧಾಮಿ!

ಸಚಿವ ರಾಜೀನಾಮೆ | ಇಕ್ಕಟ್ಟಿನಲ್ಲಿ ಉತ್ತರಾಖಂಡ ಸಿಎಂ ಧಾಮಿ!

- Advertisement -
- Advertisement -

ಉತ್ತರಾಖಂಡ ವಿಧಾನಸಭೆಯಲ್ಲಿ ಫೆಬ್ರವರಿ ವೇಳೆ ನಡೆದ ಬಜೆಟ್ ಅಧಿವೇಶನದಲ್ಲಿ “ಸಾಲಾ ಪಹಾಡಿ” ಎಂಬ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆ ಬಂದ ನಂತರ ಉತ್ತರಾಖಂಡದ ಹಣಕಾಸು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರೇಮ್‌ಚಂದ್ ಅಗರ್ವಾಲ್ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಗೆ ಸವಾಲಾಗಿ ಪರಿಣಮಿಸಿದ್ದು, 2022 ರ ವಿಧಾನಸಭಾ ಚುನಾವಣೆಯ ನಂತರ ಭರ್ತಿಯಾಗದೆ ಉಳಿದಿರುವ ನಾಲ್ಕು ಸ್ಥಾನಗಳು ಸೇರಿದಂತೆ ಸಂಪುಟದಲ್ಲಿ ಐದು ಸ್ಥಾನಗಳು ಖಾಲಿಯಾಗಿವೆ. ಸಚಿವ ರಾಜೀನಾಮೆ

ಅಗರ್ವಾಲ್ ಅವರ ಹೇಳಿಕೆಯು ರಾಜ್ಯಾದ್ಯಂತ ಆಕ್ರೋಶವನ್ನು ಹುಟ್ಟುಹಾಕಿದ್ದು, ವ್ಯಾಪಕ ಪ್ರತಿಭಟನೆಗಳಿಗೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಟೀಕೆಗೆ ಕಾರಣವಾಯಿತು. ವಿಧಾನಸಭಾ ಅಧಿವೇಶನದಲ್ಲಿ ಕೇಳಿದ್ದ ಕ್ಷಮೆಯಾಚನೆ ಸೇರಿದಂತೆ ಹಲವಾರು ಕ್ಷಮೆಯಾಚನೆಗಳನ್ನು ನೀಡಿದ್ದರೂ, ಸಾರ್ವಜನಿಕರ ಆಕ್ರೋಶ ಕಡಿಮೆಯಾಗಿಲ್ಲ. ಸಚಿವ ರಾಜೀನಾಮೆ

“ನನ್ನ ಹೇಳಿಕೆಗೆ ನಾನು ತೀವ್ರವಾಗಿ ವಿಷಾದಿಸುತ್ತೇನೆ” ಎಂದು ಅಗರ್ವಾಲ್ ಹೇಳಿದ್ದಾರೆ. ಉತ್ತರಾಖಂಡದ ಚಳವಳಿಯೊಂದಿಗಿನ ತನ್ನ ದೀರ್ಘಕಾಲದ ಸಂಬಂಧವನ್ನು ಒತ್ತಿ ಹೇಳಿದ ಅವರು, ತಾನು ಎಂದಿಗೂ ಯಾರನ್ನೂ ನಿಂದಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ವಿಧಾನಸಭೆ ಅಧಿವೇಶನ ಮುಗಿದ ನಂತರವೂ ಪ್ರತಿಭಟನೆಗಳು ಮುಂದುವರೆದಿದ್ದು, ಅಂತಿಮವಾಗಿ ಅವರ ಸ್ಥಾನದಿಂದ ಕೆಳಗಿಳಿಯುವಂತೆ ಒತ್ತಡ ಹೇರಲಾಗಿದೆ.

ಅಗರ್ವಾಲ್ ಅವರ ರಾಜೀನಾಮೆಯೊಂದಿಗೆ, ಧಾಮಿ ಸಚಿವ ಸಂಪುಟದಲ್ಲಿ ಈಗ ಕೇವಲ ಆರು ಸಚಿವರು ಉಳಿಸಿದ್ದಾರೆ. ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್, ಕೃಷಿ ಸಚಿವ ಗಣೇಶ್ ಜೋಶಿ, ಶಿಕ್ಷಣ ಸಚಿವ ಧನ್ ಸಿಂಗ್ ರಾವತ್, ಅರಣ್ಯ ಸಚಿವ ಸುಬೋಧ್ ಉನಿಯಲ್, ಕ್ರೀಡಾ ಸಚಿವೆ ರೇಖಾ ಆರ್ಯ ಮತ್ತು ಪಶುಸಂಗೋಪನಾ ಸಚಿವೆ ಸೌರಭ್ ಬಹುಗುಣ.

ಕಳೆದ ವರ್ಷ ಮಾಜಿ ಕ್ಯಾಬಿನೆಟ್ ಸಚಿವ ಚಂದನ್ ರಾಮದಾಸ್ ಅವರ ನಿಧನದ ನಂತರ ಸಂಪುಟದಲ್ಲಿ ಸದಸ್ಯರ ಕೊರತೆಯಾಗಿತ್ತು. ಅವರ ಸ್ಥಾನ ಸೇರಿದಂತೆ ಪ್ರಸ್ತುತ ಭರ್ತಿಯಾಗದ ಸಚಿವ ಸ್ಥಾನಗಳ ಒಟ್ಟು ಸಂಖ್ಯೆ ಐದಕ್ಕೆ ಏರಿದೆ.

ಭಾರತದ ಸಂವಿಧಾನದ 164(1A) ನೇ ವಿಧಿಯ ಪ್ರಕಾರ, ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಮಂತ್ರಿಮಂಡಲವು 70 ಸದಸ್ಯರ ಉತ್ತರಾಖಂಡ ವಿಧಾನಸಭೆಯಲ್ಲಿ ಒಟ್ಟು ಸದಸ್ಯರಲ್ಲಿ 15 ಪ್ರತಿಶತವನ್ನು ಮೀರಬಾರದು. ಹೆಚ್ಚುವರಿಯಾಗಿ, ಮುಖ್ಯಮಂತ್ರಿ ಸೇರಿದಂತೆ ಕನಿಷ್ಠ ಸಚಿವರ ಸಂಖ್ಯೆ 12 ಆಗಿರಬೇಕು. ಪ್ರಸ್ತುತ, ಧಾಮಿ ಸಚಿವ ಸಂಪುಟವು ಖಾಲಿ ಹುದ್ದೆಗಳ ಕಾರಣದಿಂದಾಗಿ ಈ ಅವಶ್ಯಕತೆಯನ್ನು ಪೂರೈಸುತ್ತಿಲ್ಲ.

ಬಿಜೆಪಿ ಹೈಕಮಾಂಡ್ ಈಗ ಸಂಪುಟಕ್ಕೆ ಹೊಸ ಮುಖಗಳ ಹುಡುಕಾಟದಲ್ಲಿದ್ದು, ಪಕ್ಷದ ನಾಯಕರಲ್ಲಿ ತೀವ್ರ ಲಾಬಿ ನಡೆಯುತ್ತಿದೆ. ಪ್ರಸ್ತುತ ಸಚಿವರ ಕಾರ್ಯಕ್ಷಮತೆಯ ವಿಮರ್ಶೆಗಳು ಸಹ ನಡೆಯುತ್ತಿವೆ ಮತ್ತು ಕೆಲವು ಸಚಿವರು ನಿರೀಕ್ಷೆಗಳನ್ನು ಪೂರೈಸಲು ವಿಫಲವಾದರೆ, ಅವರನ್ನು ಪಕ್ಷವು ತೆಗೆದುಹಾಕಲಿದೆ ಎಂದು ಮೂಲಗಳು ಸೂಚಿಸಿವೆ.

“ರಿಪೋರ್ಟ್ ಕಾರ್ಡ್‌ಗಳು ನಿರೀಕ್ಷೆಗಳನ್ನು ಪೂರೈಸದಿದ್ದರೆ, ಕನಿಷ್ಠ ಒಬ್ಬರು ಮತ್ತು ಬಹುಶಃ ಇಬ್ಬರು, ಅಸ್ತಿತ್ವದಲ್ಲಿರುವ ಸಚಿವರ ತಲೆದಂಡವಾಗಲಿದೆ” ಎಂದು ಬಿಜೆಪಿ ಮೂಲಗಳು ಹೇಳಿವೆ.

2027 ರ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಮುಂಬರುವ ಸಚಿವ ಸಂಪುಟ ಪುನರ್ರಚನೆಯಲ್ಲಿ ಪಕ್ಷವು ಪ್ರಾದೇಶಿಕ ಮತ್ತು ರಾಜಕೀಯ ಸಮತೋಲನವನ್ನು ಕಾಯ್ದುಕೊಳ್ಳುವತ್ತ ಗಮನಹರಿಸುತ್ತಿದೆ. ಸತ್ಪಾಲ್ ಮಹಾರಾಜ್, ಧನ್ ಸಿಂಗ್ ರಾವತ್ ಮತ್ತು ಸುಬೋಧ್ ಉನಿಯಾಲ್ ಅವರಂತಹ ಸಚಿವರು ಪೌರಿ ಲೋಕಸಭಾ ಕ್ಷೇತ್ರಕ್ಕೆ ಸೇರಿದವರಾಗಿದ್ದರೂ, ಹರಿದ್ವಾರ, ಉತ್ತರಕಾಶಿ, ಪಿಥೋರಗಢ ಮತ್ತು ಚಮೋಲಿಯಂತಹ ಗಮನಾರ್ಹ ಪ್ರದೇಶಗಳು ಪ್ರಸ್ತುತ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯವಿಲ್ಲದೆ ಉಳಿದಿವೆ ಎಂದು ಚರ್ಚೆಗಳು ನಡೆಯುತ್ತಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಪ್ರಶ್ನೆ

ಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...