Homeಮುಖಪುಟಸಚಿವ ರಾಜೀನಾಮೆ | ಇಕ್ಕಟ್ಟಿನಲ್ಲಿ ಉತ್ತರಾಖಂಡ ಸಿಎಂ ಧಾಮಿ!

ಸಚಿವ ರಾಜೀನಾಮೆ | ಇಕ್ಕಟ್ಟಿನಲ್ಲಿ ಉತ್ತರಾಖಂಡ ಸಿಎಂ ಧಾಮಿ!

- Advertisement -
- Advertisement -

ಉತ್ತರಾಖಂಡ ವಿಧಾನಸಭೆಯಲ್ಲಿ ಫೆಬ್ರವರಿ ವೇಳೆ ನಡೆದ ಬಜೆಟ್ ಅಧಿವೇಶನದಲ್ಲಿ “ಸಾಲಾ ಪಹಾಡಿ” ಎಂಬ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆ ಬಂದ ನಂತರ ಉತ್ತರಾಖಂಡದ ಹಣಕಾಸು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರೇಮ್‌ಚಂದ್ ಅಗರ್ವಾಲ್ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಗೆ ಸವಾಲಾಗಿ ಪರಿಣಮಿಸಿದ್ದು, 2022 ರ ವಿಧಾನಸಭಾ ಚುನಾವಣೆಯ ನಂತರ ಭರ್ತಿಯಾಗದೆ ಉಳಿದಿರುವ ನಾಲ್ಕು ಸ್ಥಾನಗಳು ಸೇರಿದಂತೆ ಸಂಪುಟದಲ್ಲಿ ಐದು ಸ್ಥಾನಗಳು ಖಾಲಿಯಾಗಿವೆ. ಸಚಿವ ರಾಜೀನಾಮೆ

ಅಗರ್ವಾಲ್ ಅವರ ಹೇಳಿಕೆಯು ರಾಜ್ಯಾದ್ಯಂತ ಆಕ್ರೋಶವನ್ನು ಹುಟ್ಟುಹಾಕಿದ್ದು, ವ್ಯಾಪಕ ಪ್ರತಿಭಟನೆಗಳಿಗೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಟೀಕೆಗೆ ಕಾರಣವಾಯಿತು. ವಿಧಾನಸಭಾ ಅಧಿವೇಶನದಲ್ಲಿ ಕೇಳಿದ್ದ ಕ್ಷಮೆಯಾಚನೆ ಸೇರಿದಂತೆ ಹಲವಾರು ಕ್ಷಮೆಯಾಚನೆಗಳನ್ನು ನೀಡಿದ್ದರೂ, ಸಾರ್ವಜನಿಕರ ಆಕ್ರೋಶ ಕಡಿಮೆಯಾಗಿಲ್ಲ. ಸಚಿವ ರಾಜೀನಾಮೆ

“ನನ್ನ ಹೇಳಿಕೆಗೆ ನಾನು ತೀವ್ರವಾಗಿ ವಿಷಾದಿಸುತ್ತೇನೆ” ಎಂದು ಅಗರ್ವಾಲ್ ಹೇಳಿದ್ದಾರೆ. ಉತ್ತರಾಖಂಡದ ಚಳವಳಿಯೊಂದಿಗಿನ ತನ್ನ ದೀರ್ಘಕಾಲದ ಸಂಬಂಧವನ್ನು ಒತ್ತಿ ಹೇಳಿದ ಅವರು, ತಾನು ಎಂದಿಗೂ ಯಾರನ್ನೂ ನಿಂದಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ವಿಧಾನಸಭೆ ಅಧಿವೇಶನ ಮುಗಿದ ನಂತರವೂ ಪ್ರತಿಭಟನೆಗಳು ಮುಂದುವರೆದಿದ್ದು, ಅಂತಿಮವಾಗಿ ಅವರ ಸ್ಥಾನದಿಂದ ಕೆಳಗಿಳಿಯುವಂತೆ ಒತ್ತಡ ಹೇರಲಾಗಿದೆ.

ಅಗರ್ವಾಲ್ ಅವರ ರಾಜೀನಾಮೆಯೊಂದಿಗೆ, ಧಾಮಿ ಸಚಿವ ಸಂಪುಟದಲ್ಲಿ ಈಗ ಕೇವಲ ಆರು ಸಚಿವರು ಉಳಿಸಿದ್ದಾರೆ. ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್, ಕೃಷಿ ಸಚಿವ ಗಣೇಶ್ ಜೋಶಿ, ಶಿಕ್ಷಣ ಸಚಿವ ಧನ್ ಸಿಂಗ್ ರಾವತ್, ಅರಣ್ಯ ಸಚಿವ ಸುಬೋಧ್ ಉನಿಯಲ್, ಕ್ರೀಡಾ ಸಚಿವೆ ರೇಖಾ ಆರ್ಯ ಮತ್ತು ಪಶುಸಂಗೋಪನಾ ಸಚಿವೆ ಸೌರಭ್ ಬಹುಗುಣ.

ಕಳೆದ ವರ್ಷ ಮಾಜಿ ಕ್ಯಾಬಿನೆಟ್ ಸಚಿವ ಚಂದನ್ ರಾಮದಾಸ್ ಅವರ ನಿಧನದ ನಂತರ ಸಂಪುಟದಲ್ಲಿ ಸದಸ್ಯರ ಕೊರತೆಯಾಗಿತ್ತು. ಅವರ ಸ್ಥಾನ ಸೇರಿದಂತೆ ಪ್ರಸ್ತುತ ಭರ್ತಿಯಾಗದ ಸಚಿವ ಸ್ಥಾನಗಳ ಒಟ್ಟು ಸಂಖ್ಯೆ ಐದಕ್ಕೆ ಏರಿದೆ.

ಭಾರತದ ಸಂವಿಧಾನದ 164(1A) ನೇ ವಿಧಿಯ ಪ್ರಕಾರ, ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಮಂತ್ರಿಮಂಡಲವು 70 ಸದಸ್ಯರ ಉತ್ತರಾಖಂಡ ವಿಧಾನಸಭೆಯಲ್ಲಿ ಒಟ್ಟು ಸದಸ್ಯರಲ್ಲಿ 15 ಪ್ರತಿಶತವನ್ನು ಮೀರಬಾರದು. ಹೆಚ್ಚುವರಿಯಾಗಿ, ಮುಖ್ಯಮಂತ್ರಿ ಸೇರಿದಂತೆ ಕನಿಷ್ಠ ಸಚಿವರ ಸಂಖ್ಯೆ 12 ಆಗಿರಬೇಕು. ಪ್ರಸ್ತುತ, ಧಾಮಿ ಸಚಿವ ಸಂಪುಟವು ಖಾಲಿ ಹುದ್ದೆಗಳ ಕಾರಣದಿಂದಾಗಿ ಈ ಅವಶ್ಯಕತೆಯನ್ನು ಪೂರೈಸುತ್ತಿಲ್ಲ.

ಬಿಜೆಪಿ ಹೈಕಮಾಂಡ್ ಈಗ ಸಂಪುಟಕ್ಕೆ ಹೊಸ ಮುಖಗಳ ಹುಡುಕಾಟದಲ್ಲಿದ್ದು, ಪಕ್ಷದ ನಾಯಕರಲ್ಲಿ ತೀವ್ರ ಲಾಬಿ ನಡೆಯುತ್ತಿದೆ. ಪ್ರಸ್ತುತ ಸಚಿವರ ಕಾರ್ಯಕ್ಷಮತೆಯ ವಿಮರ್ಶೆಗಳು ಸಹ ನಡೆಯುತ್ತಿವೆ ಮತ್ತು ಕೆಲವು ಸಚಿವರು ನಿರೀಕ್ಷೆಗಳನ್ನು ಪೂರೈಸಲು ವಿಫಲವಾದರೆ, ಅವರನ್ನು ಪಕ್ಷವು ತೆಗೆದುಹಾಕಲಿದೆ ಎಂದು ಮೂಲಗಳು ಸೂಚಿಸಿವೆ.

“ರಿಪೋರ್ಟ್ ಕಾರ್ಡ್‌ಗಳು ನಿರೀಕ್ಷೆಗಳನ್ನು ಪೂರೈಸದಿದ್ದರೆ, ಕನಿಷ್ಠ ಒಬ್ಬರು ಮತ್ತು ಬಹುಶಃ ಇಬ್ಬರು, ಅಸ್ತಿತ್ವದಲ್ಲಿರುವ ಸಚಿವರ ತಲೆದಂಡವಾಗಲಿದೆ” ಎಂದು ಬಿಜೆಪಿ ಮೂಲಗಳು ಹೇಳಿವೆ.

2027 ರ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಮುಂಬರುವ ಸಚಿವ ಸಂಪುಟ ಪುನರ್ರಚನೆಯಲ್ಲಿ ಪಕ್ಷವು ಪ್ರಾದೇಶಿಕ ಮತ್ತು ರಾಜಕೀಯ ಸಮತೋಲನವನ್ನು ಕಾಯ್ದುಕೊಳ್ಳುವತ್ತ ಗಮನಹರಿಸುತ್ತಿದೆ. ಸತ್ಪಾಲ್ ಮಹಾರಾಜ್, ಧನ್ ಸಿಂಗ್ ರಾವತ್ ಮತ್ತು ಸುಬೋಧ್ ಉನಿಯಾಲ್ ಅವರಂತಹ ಸಚಿವರು ಪೌರಿ ಲೋಕಸಭಾ ಕ್ಷೇತ್ರಕ್ಕೆ ಸೇರಿದವರಾಗಿದ್ದರೂ, ಹರಿದ್ವಾರ, ಉತ್ತರಕಾಶಿ, ಪಿಥೋರಗಢ ಮತ್ತು ಚಮೋಲಿಯಂತಹ ಗಮನಾರ್ಹ ಪ್ರದೇಶಗಳು ಪ್ರಸ್ತುತ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯವಿಲ್ಲದೆ ಉಳಿದಿವೆ ಎಂದು ಚರ್ಚೆಗಳು ನಡೆಯುತ್ತಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಪ್ರಶ್ನೆ

ಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...