Homeಮುಖಪುಟ'ಜೈ ಭೀಮ್' ನಿರ್ಲಕ್ಷಿಸಿ ಕಳ್ಳಸಾಗಾಣಿಕೆ ಕಥಾಹಂದರದ 'ಪುಷ್ಪಾ' ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ: ಬೇಸರ ವ್ಯಕ್ತಪಡಿಸಿದ ಸಚಿವೆ...

‘ಜೈ ಭೀಮ್’ ನಿರ್ಲಕ್ಷಿಸಿ ಕಳ್ಳಸಾಗಾಣಿಕೆ ಕಥಾಹಂದರದ ‘ಪುಷ್ಪಾ’ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ: ಬೇಸರ ವ್ಯಕ್ತಪಡಿಸಿದ ಸಚಿವೆ ಸೀತಕ್ಕ

- Advertisement -
- Advertisement -

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುಷ್ಪ: ದಿ ರೈಸ್ ಚಿತ್ರಕ್ಕೆ ಸಿಕ್ಕಿರುವ ಮನ್ನಣೆ, ಜೈ ಭೀಮ್‌ನಂತಹ ಸಾಮಾಜಿಕ ಪರಿಣಾಮ ಬೀರುವ ಚಿತ್ರಗಳಿಗೆ ಸಿಕ್ಕಿಲ್ಲ ಎಂದು ಸೀತಕ್ಕ ಎಂದೇ ಖ್ಯಾತರಾಗಿರುವ ತೆಲಂಗಾಣ ಸಚಿವೆ ದನಸಾರಿ ಅನಸೂಯಾ ಸೀತಕ್ಕ ಬೇಸರ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್‌ನಲ್ಲಿ ಪುಷ್ಪ 2: ದಿ ರೂಲ್‌ನ ಪ್ರದರ್ಶನದ ವೇಳೆ ಥಿಯೇಟರ್‌ನಲ್ಲಿ ನೂಕುನುಗ್ಗಲು ಉಂಟಾದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಅವರ ಮಗನ ಸ್ಥಿತಿ ಗಂಭೀರವಾಗಿದೆ. ಚಿತ್ರದ ನಾಯಕ ನಟ ಅಲ್ಲು ಅರ್ಜುನ ಬಂಧನದ ವಿವಾದ ಸುದ್ದಿಯಲ್ಲಿರುವಾಗಲೇ ಅವರ ಈ ಹೇಳಿಕೆಗಳು ಬಂದಿವೆ.

ಕಳ್ಳಸಾಗಾಣಿಕೆದಾರನನ್ನು ನಾಯಕನನ್ನಾಗಿ ಚಿತ್ರಿಸುವ ಬಗ್ಗೆ ಸೀತಕ್ಕ ತನ್ನ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಅಂತಹ ಚಲನಚಿತ್ರಗಳು ತಿಳಿಸುವ ಮೌಲ್ಯಗಳು ಏನು ಎಂದು ಅವರು ಪ್ರಶ್ನಿಸಿದ್ದಾರೆ.

ಮುಳುಗು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸೀತಕ್ಕ, “ಜೈ ಭೀಮ್‌ನಂತಹ ದಮನಿತರ ಹಕ್ಕುಗಳನ್ನು ಪ್ರದರ್ಶಿಸಿದ, ದೀನದಲಿತರಿಗೆ ಸ್ಫೂರ್ತಿ ನೀಡಿದ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಬಂದಿಲ್ಲ. ಅಂತಹ ಅರ್ಥಪೂರ್ಣ ಚಿತ್ರಗಳಿಗೆ ಕೇಂದ್ರದ ಪ್ರೋತ್ಸಾಹವಿಲ್ಲ. ಬದಲಾಗಿ, ಒಬ್ಬ ಕಳ್ಳಸಾಗಣೆದಾರನಿಗೆ, ಪೋಲೀಸ್‌ನನ್ನು ವಿವಸ್ತ್ರಗೊಳಿಸಿ ಪ್ರಶಸ್ತಿ ನೀಡಲಾಯಿತು.. ಇದು ಯಾವ ಸಂದೇಶವನ್ನು ಕಳುಹಿಸುತ್ತದೆ” ಎಂದು ಅವರು ಪ್ರಶ್ನಿಸಿದ್ದಾರೆ.

ಪುಷ್ಪಾ ಚಿತ್ರದ ನಿರೂಪಣೆಯನ್ನು ಅವರು ಟೀಕಿಸಿದರು. ಅಲ್ಲಿ ಕಳ್ಳಸಾಗಾಣಿಕೆದಾರನನ್ನು ವೈಭವೀಕರಿಸಲಾಗುತ್ತದೆ ಮತ್ತು ಕಾನೂನು ಜಾರಿಯ ಸಂಕೇತವಾದ ಪೊಲೀಸ್ ಅಧಿಕಾರಿಯನ್ನು ಖಳನಾಯಕನಂತೆ ಚಿತ್ರಿಸಲಾಗಿದೆ. “ಕಾನೂನುಬದ್ಧವಾಗಿ ಅಪರಾಧವನ್ನು ತಡೆಯುವ ಪೋಲೀಸ್ ಅಧಿಕಾರಿ ಶೂನ್ಯವಾಗುವುದು ಹೇಗೆ” ಎಂದು ಅವರು ಕೇಳಿದರು.

ನಟ ಸೂರ್ಯ ಅಭಿನಯದ ‘ಜೈ ಭೀಮ್’ ಚಿತ್ರದ ಪೋಸ್ಟರ್.

ಸಮಾಜವನ್ನು ರೂಪಿಸುವಲ್ಲಿ ಮತ್ತು ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುವಲ್ಲಿ ಸಿನಿಮಾದ ಪಾತ್ರವನ್ನು ಒತ್ತಿ ಹೇಳಿದ ಸೀತಕ್ಕ, ಬಲವಾದ ಸಾಮಾಜಿಕ ಮೌಲ್ಯಗಳನ್ನು ಹೊಂದಿರುವ ಚಲನಚಿತ್ರಗಳಿಗೆ ಅವರು ಕರೆ ನೀಡಿದರು. “ಚಲನಚಿತ್ರಗಳು ಸಮಾಜವನ್ನು ಉನ್ನತೀಕರಿಸುವ ಮತ್ತು ಇತರರ ಘನತೆಯನ್ನು ಕಾಪಾಡುವ ಗುಣಗಳನ್ನು ಹೊಂದಿರಬೇಕು. ಸಂವಿಧಾನ ಸ್ಥಾಪಿಸಿದ ಸಂಸ್ಥೆಗಳನ್ನು ಗೌರವಿಸಿದರೆ ಮಾತ್ರ ಸಮಾಜ ಪ್ರಗತಿ ಹೊಂದುತ್ತದೆ” ಎಂದರು.

ಸಕಾರಾತ್ಮಕ ಸಂದೇಶಗಳನ್ನು ನೀಡುವ ಮತ್ತು ಸಮಾಜದ ಪ್ರಗತಿಯನ್ನು ಉತ್ತೇಜಿಸುವ ಚಲನಚಿತ್ರಗಳನ್ನು ಸೀತಕ್ಕ ಒತ್ತಾಯಿಸಿದರು. “ಪ್ರಶಸ್ತಿಗಳು ಸಮಾಜವನ್ನು ಪ್ರೇರೇಪಿಸುವ, ಮುಂದಕ್ಕೆ ಕೊಂಡೊಯ್ಯುವ ಚಲನಚಿತ್ರಗಳಿಗೆ ಹೋಗಬೇಕು. ಕಳ್ಳಸಾಗಣೆಯನ್ನು ವೈಭವೀಕರಿಸುವ ಅಥವಾ ಕಾನೂನುಬದ್ಧ ಅಧಿಕಾರವನ್ನು ದುರ್ಬಲಗೊಳಿಸುವ ಚಿತ್ರಗಳಿಗಲ್ಲ” ಎಂದು ಅವರು ಹೇಳಿದರು.

ಪುಷ್ಪ: ದಿ ರೈಸ್ (2021) ಚಿತ್ರದಲ್ಲಿನ ಶೀರ್ಷಿಕೆಯ ಪಾತ್ರದ ಚಿತ್ರಣಕ್ಕಾಗಿ ನಟ ಅಲ್ಲು ಅರ್ಜುನ್ ಅತ್ಯುತ್ತಮ ನಟ (ಪುರುಷ) ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದರು. ಆದರೆ, ದಮನಿತರ ನ್ಯಾಯಕ್ಕಾಗಿ ಹೋರಾಡುವ ವಕೀಲರಾಗಿ ಸೂರ್ಯ ನಟಿಸಿದ ತಮಿಳು ಚಲನಚಿತ್ರ ಜೈ ಭೀಮ್ ರಾಷ್ಟ್ರೀಯ ಪ್ರಶಸ್ತಿಗಳ ಮನ್ನಣೆಯಿಂದ ಹೊರಗುಳಿದಿದೆ.

ಇದನ್ನೂ ಓದಿ; ಛತ್ತೀಸ್‌ಗಢ| ಅಕ್ಕಿ ಕದ್ದ ಆರೋಪದ ಮೇಲೆ ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು; ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...