Homeಮುಖಪುಟ'ಜೈ ಭೀಮ್' ನಿರ್ಲಕ್ಷಿಸಿ ಕಳ್ಳಸಾಗಾಣಿಕೆ ಕಥಾಹಂದರದ 'ಪುಷ್ಪಾ' ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ: ಬೇಸರ ವ್ಯಕ್ತಪಡಿಸಿದ ಸಚಿವೆ...

‘ಜೈ ಭೀಮ್’ ನಿರ್ಲಕ್ಷಿಸಿ ಕಳ್ಳಸಾಗಾಣಿಕೆ ಕಥಾಹಂದರದ ‘ಪುಷ್ಪಾ’ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ: ಬೇಸರ ವ್ಯಕ್ತಪಡಿಸಿದ ಸಚಿವೆ ಸೀತಕ್ಕ

- Advertisement -
- Advertisement -

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುಷ್ಪ: ದಿ ರೈಸ್ ಚಿತ್ರಕ್ಕೆ ಸಿಕ್ಕಿರುವ ಮನ್ನಣೆ, ಜೈ ಭೀಮ್‌ನಂತಹ ಸಾಮಾಜಿಕ ಪರಿಣಾಮ ಬೀರುವ ಚಿತ್ರಗಳಿಗೆ ಸಿಕ್ಕಿಲ್ಲ ಎಂದು ಸೀತಕ್ಕ ಎಂದೇ ಖ್ಯಾತರಾಗಿರುವ ತೆಲಂಗಾಣ ಸಚಿವೆ ದನಸಾರಿ ಅನಸೂಯಾ ಸೀತಕ್ಕ ಬೇಸರ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್‌ನಲ್ಲಿ ಪುಷ್ಪ 2: ದಿ ರೂಲ್‌ನ ಪ್ರದರ್ಶನದ ವೇಳೆ ಥಿಯೇಟರ್‌ನಲ್ಲಿ ನೂಕುನುಗ್ಗಲು ಉಂಟಾದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಅವರ ಮಗನ ಸ್ಥಿತಿ ಗಂಭೀರವಾಗಿದೆ. ಚಿತ್ರದ ನಾಯಕ ನಟ ಅಲ್ಲು ಅರ್ಜುನ ಬಂಧನದ ವಿವಾದ ಸುದ್ದಿಯಲ್ಲಿರುವಾಗಲೇ ಅವರ ಈ ಹೇಳಿಕೆಗಳು ಬಂದಿವೆ.

ಕಳ್ಳಸಾಗಾಣಿಕೆದಾರನನ್ನು ನಾಯಕನನ್ನಾಗಿ ಚಿತ್ರಿಸುವ ಬಗ್ಗೆ ಸೀತಕ್ಕ ತನ್ನ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಅಂತಹ ಚಲನಚಿತ್ರಗಳು ತಿಳಿಸುವ ಮೌಲ್ಯಗಳು ಏನು ಎಂದು ಅವರು ಪ್ರಶ್ನಿಸಿದ್ದಾರೆ.

ಮುಳುಗು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸೀತಕ್ಕ, “ಜೈ ಭೀಮ್‌ನಂತಹ ದಮನಿತರ ಹಕ್ಕುಗಳನ್ನು ಪ್ರದರ್ಶಿಸಿದ, ದೀನದಲಿತರಿಗೆ ಸ್ಫೂರ್ತಿ ನೀಡಿದ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಬಂದಿಲ್ಲ. ಅಂತಹ ಅರ್ಥಪೂರ್ಣ ಚಿತ್ರಗಳಿಗೆ ಕೇಂದ್ರದ ಪ್ರೋತ್ಸಾಹವಿಲ್ಲ. ಬದಲಾಗಿ, ಒಬ್ಬ ಕಳ್ಳಸಾಗಣೆದಾರನಿಗೆ, ಪೋಲೀಸ್‌ನನ್ನು ವಿವಸ್ತ್ರಗೊಳಿಸಿ ಪ್ರಶಸ್ತಿ ನೀಡಲಾಯಿತು.. ಇದು ಯಾವ ಸಂದೇಶವನ್ನು ಕಳುಹಿಸುತ್ತದೆ” ಎಂದು ಅವರು ಪ್ರಶ್ನಿಸಿದ್ದಾರೆ.

ಪುಷ್ಪಾ ಚಿತ್ರದ ನಿರೂಪಣೆಯನ್ನು ಅವರು ಟೀಕಿಸಿದರು. ಅಲ್ಲಿ ಕಳ್ಳಸಾಗಾಣಿಕೆದಾರನನ್ನು ವೈಭವೀಕರಿಸಲಾಗುತ್ತದೆ ಮತ್ತು ಕಾನೂನು ಜಾರಿಯ ಸಂಕೇತವಾದ ಪೊಲೀಸ್ ಅಧಿಕಾರಿಯನ್ನು ಖಳನಾಯಕನಂತೆ ಚಿತ್ರಿಸಲಾಗಿದೆ. “ಕಾನೂನುಬದ್ಧವಾಗಿ ಅಪರಾಧವನ್ನು ತಡೆಯುವ ಪೋಲೀಸ್ ಅಧಿಕಾರಿ ಶೂನ್ಯವಾಗುವುದು ಹೇಗೆ” ಎಂದು ಅವರು ಕೇಳಿದರು.

ನಟ ಸೂರ್ಯ ಅಭಿನಯದ ‘ಜೈ ಭೀಮ್’ ಚಿತ್ರದ ಪೋಸ್ಟರ್.

ಸಮಾಜವನ್ನು ರೂಪಿಸುವಲ್ಲಿ ಮತ್ತು ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುವಲ್ಲಿ ಸಿನಿಮಾದ ಪಾತ್ರವನ್ನು ಒತ್ತಿ ಹೇಳಿದ ಸೀತಕ್ಕ, ಬಲವಾದ ಸಾಮಾಜಿಕ ಮೌಲ್ಯಗಳನ್ನು ಹೊಂದಿರುವ ಚಲನಚಿತ್ರಗಳಿಗೆ ಅವರು ಕರೆ ನೀಡಿದರು. “ಚಲನಚಿತ್ರಗಳು ಸಮಾಜವನ್ನು ಉನ್ನತೀಕರಿಸುವ ಮತ್ತು ಇತರರ ಘನತೆಯನ್ನು ಕಾಪಾಡುವ ಗುಣಗಳನ್ನು ಹೊಂದಿರಬೇಕು. ಸಂವಿಧಾನ ಸ್ಥಾಪಿಸಿದ ಸಂಸ್ಥೆಗಳನ್ನು ಗೌರವಿಸಿದರೆ ಮಾತ್ರ ಸಮಾಜ ಪ್ರಗತಿ ಹೊಂದುತ್ತದೆ” ಎಂದರು.

ಸಕಾರಾತ್ಮಕ ಸಂದೇಶಗಳನ್ನು ನೀಡುವ ಮತ್ತು ಸಮಾಜದ ಪ್ರಗತಿಯನ್ನು ಉತ್ತೇಜಿಸುವ ಚಲನಚಿತ್ರಗಳನ್ನು ಸೀತಕ್ಕ ಒತ್ತಾಯಿಸಿದರು. “ಪ್ರಶಸ್ತಿಗಳು ಸಮಾಜವನ್ನು ಪ್ರೇರೇಪಿಸುವ, ಮುಂದಕ್ಕೆ ಕೊಂಡೊಯ್ಯುವ ಚಲನಚಿತ್ರಗಳಿಗೆ ಹೋಗಬೇಕು. ಕಳ್ಳಸಾಗಣೆಯನ್ನು ವೈಭವೀಕರಿಸುವ ಅಥವಾ ಕಾನೂನುಬದ್ಧ ಅಧಿಕಾರವನ್ನು ದುರ್ಬಲಗೊಳಿಸುವ ಚಿತ್ರಗಳಿಗಲ್ಲ” ಎಂದು ಅವರು ಹೇಳಿದರು.

ಪುಷ್ಪ: ದಿ ರೈಸ್ (2021) ಚಿತ್ರದಲ್ಲಿನ ಶೀರ್ಷಿಕೆಯ ಪಾತ್ರದ ಚಿತ್ರಣಕ್ಕಾಗಿ ನಟ ಅಲ್ಲು ಅರ್ಜುನ್ ಅತ್ಯುತ್ತಮ ನಟ (ಪುರುಷ) ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದರು. ಆದರೆ, ದಮನಿತರ ನ್ಯಾಯಕ್ಕಾಗಿ ಹೋರಾಡುವ ವಕೀಲರಾಗಿ ಸೂರ್ಯ ನಟಿಸಿದ ತಮಿಳು ಚಲನಚಿತ್ರ ಜೈ ಭೀಮ್ ರಾಷ್ಟ್ರೀಯ ಪ್ರಶಸ್ತಿಗಳ ಮನ್ನಣೆಯಿಂದ ಹೊರಗುಳಿದಿದೆ.

ಇದನ್ನೂ ಓದಿ; ಛತ್ತೀಸ್‌ಗಢ| ಅಕ್ಕಿ ಕದ್ದ ಆರೋಪದ ಮೇಲೆ ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು; ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...