Homeಮುಖಪುಟಸಿದ್ದಗಂಗಾ ಮಠಕ್ಕೆ ಸಚಿವೆ ಜೊಲ್ಲೆ ಭೇಟಿ : ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನ..

ಸಿದ್ದಗಂಗಾ ಮಠಕ್ಕೆ ಸಚಿವೆ ಜೊಲ್ಲೆ ಭೇಟಿ : ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನ..

- Advertisement -
- Advertisement -

ಸಿದ್ದಗಂಗಾ ಮಠವೂ ಸೇರಿದಂತೆ 355 ಶಾಲೆಗಳಿಗೆ ಅಕ್ಕಿ ಮತ್ತು ಗೋದಿ ಪೂರೈಕೆ ಸ್ಥಗಿತಗೊಳಿಸಿದ್ದ ರಾಜ್ಯ ಸರ್ಕಾರ ಇದರಿಂದಾದ ಡ್ಯಾಮೇಜ್ ಕಂಟ್ರೋಲ್ ಮಾಡಲು ಸಚಿವೆ ಶಶಿಕಲಾ ಜೊಲ್ಲೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮಿಗಳೊಂದಿಗೆ ಚರ್ಚೆ ನಡೆಸಿದರು. ಕೇಂದ್ರ ಸರ್ಕಾರ ಸಬ್ಸೀಡಿ ಅಕ್ಕಿ ಮತ್ತು ಗೋದಿ ನಿಲ್ಲಿಸಿರುವುದರಿಂದ ತಾತ್ಕಾಲಿಕ ವ್ಯತ್ಯಯವಾಗಿದೆ ಎಂಬುದನ್ನು ಸ್ವಾಮಿಗಳ ಗಮನಕ್ಕೆ ತಂದಿದ್ದಾರೆ.

ಕೆಲವು ಸಂಘ ಸಂಸ್ಥೆಗಳು ಸರ್ಕಾರಕ್ಕೆ ಪತ್ರವನ್ನು ಬರೆದಿದ್ದವು. ಆ ಪತ್ರಗಳನ್ನು ಪರಿಶೀಲಿಸಿದ ಅಧಿಕಾರಿಗಳು ಕೇಂದ್ರ ಸರ್ಕಾರ ಸಬ್ಸೀಡಿ ಅಕ್ಕಿ ಗೋದಿ ನಿಲ್ಲಿಸಿದೆ. ಸಿದ್ದಗಂಗಾ ಮಠಕ್ಕೆ ಅಕ್ಷರ ದಾಸೋಹ ಯೋಜನೆಯಡಿ ನೀಡುತ್ತಿದ್ದ ಅಕ್ಕಿ, ಗೋದಿ ನಿಲ್ಲಿಸಲಾಗಿದೆ ಎಂಬುದನ್ನು ಮಠದ ಶ್ರೀಗಳಿಗೆ ಸಚಿವೆ ವಿವರಿಸಿದರು. ಆಗಿರುವ ವ್ಯತ್ಯಯಕ್ಕೆ ಸಚಿವ ಶಶಿಕಲಾ ಜೊಲ್ಲೆ ವಿಷಾದ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.

ಸಿದ್ದಲಿಂಗ ಸ್ವಾಮಿಗಳ ಕಚೇರಿಯಿಂದ ಹೊರ ಬಂದ ಸಚಿವೆ ಶಶಿಕಲಾ ಜೊಲ್ಲೆ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಸಮಾಧಾನದಿಂದಲೇ ಉತ್ತರಿಸಿದರು. ಸಿದ್ದಗಂಗಾ ಮಠ ಸೇರಿದಂತೆ 355 ಶಾಲೆಗೆಳಿಗೆ ಅಕ್ಷರ ದಾಸೋಹದ ಅಕ್ಕಿ ಮತ್ತು ಗೋದಿ ಪೂರೈಕೆಯಲ್ಲಿ ಆಗಿರುವ ವ್ಯತ್ಯಯಕ್ಕೆ ಮುಖ್ಯಮಂತ್ರಿಗಳು ನನ್ನ ಮೇಲೆ ಗರಂ ಆಗಿಲ್ಲ. ಸಂಘ-ಸಂಸ್ಥೆಗಳು ಬರೆದಿರುವ ಪತ್ರದ ಸಾರಾಂಶವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾಗಿ ಜೊಲ್ಲೆ ಸಮಜಾಯಿಸಿ ನೀಡಿದರು.

ಅಕ್ಷರ ದಾಸೋಹ ಯೋಜನೆಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಸಬ್ಸೀಡಿ ದರದಲ್ಲಿ ನೀಡುತ್ತಿದ್ದ ಅಕ್ಕಿ ಮತ್ತು ಗೋಧಿಯನ್ನು ಸಂಪೂರ್ಣವಾಗಿ ನಿಲ್ಲಿಸಿದೆ. ಇದರಿಂದ ಒಂದೆರಡು ದಿನ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದು ಸತ್ಯ ಎಂದು ಒಪ್ಪಿಕೊಂಡ ಸಚಿವೆ ಶಶಿಕಲ ಸಚಿವ ಸಂಪುಟದಲ್ಲಿ ಈ ಕುರಿತು ಚರ್ಚೆ ನಡೆಸಲಾಯಿತು. ಮುಖ್ಯಮಂತ್ರಿಗಳು ಎಷ್ಟು ಖರ್ಚಾಗುತ್ತದೆ ಎಂದು ಕೇಳಿದರು. 18 ಕೋಟಿ ರೂಪಾಯಿ ಬೇಕಾಗುತ್ತದೆ ಎಂದು ಹೇಳಿದೆ. ಅದಕ್ಕೆ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರದಿಂದಲೇ ಅಕ್ಕಿ ಗೋಧಿ ಪೂರೈಕೆ ಮಾಡೋಣ ಎಂದು ಅನುಮೋದನೆ ನೀಡಿದರು ಎಂದು ವಿವರಿಸಿದರು.

ಮಠದ ವಿದ್ಯಾರ್ಥಿಗಳಿಗೆ ತಿಂಗಳಿಗೆ 735 ಕ್ವಿಂಟಾಲ್ ಅಕ್ಕಿ, 365 ಕ್ವಿಂಟಾಲ್ ಗೋಧಿ ಬೇಕಾಗುತ್ತದೆ. ವಾರ್ಷಿಕ 360 ಮೆಟ್ರಿಕ್ ಟನ್ ಅಕ್ಕಿ, 160 ಮೆಟ್ರಿಕ್ ಟನ್ ಗೋಧಿ ಬೇಕು. ಅದನ್ನು ರಾಜ್ಯ ಸರ್ಕಾರವೇ ಪೂರೈಕೆ ಮಾಡುತ್ತದೆ. ಯಾವುದೇ ಕಾರಣಕ್ಕೂ ಅಕ್ಕಿ, ಗೋಧಿ ವಿತರಿಸುವುದನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಬರುವ ಅಂಗನವಾಡಿ ಕಾರ್ಯಕರ್ತರಿಗೆ ಬೇರೆ ಹೆಸರನ್ನು ಕೊಡುವ ಬಗ್ಗೆ ಸಮಾಲೋಚನೆ ನಡೆಯುತ್ತಿದೆ. ಕಾರ್ಯಕರ್ತೆ ಅಂದರೆ ಯಾಕೋ ಸರಿಹೋಗುತ್ತಿಲ್ಲ. ಹಾಗಾಗಿ ಸಾರ್ವಜನಿಕರಿಂದ ಉತ್ತಮ ಹೆಸರು ನೀಡುವಂತೆ ಆಹ್ವಾನ ನೀಡಿದ್ದೇವೆ. ಒಳ್ಳೆಯ ಹೆಸರು ದೊರೆತ ಮೇಲೆ ಅಂಗನವಾಡಿ ಕಾರ್ಯಕರ್ತೆಯರ ಹೆಸರು ಬದಲಾವಣೆ ಮಾಡಲಾಗುವುದು ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...