Homeಮುಖಪುಟಸಿದ್ದಗಂಗಾ ಮಠಕ್ಕೆ ಸಚಿವೆ ಜೊಲ್ಲೆ ಭೇಟಿ : ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನ..

ಸಿದ್ದಗಂಗಾ ಮಠಕ್ಕೆ ಸಚಿವೆ ಜೊಲ್ಲೆ ಭೇಟಿ : ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನ..

- Advertisement -
- Advertisement -

ಸಿದ್ದಗಂಗಾ ಮಠವೂ ಸೇರಿದಂತೆ 355 ಶಾಲೆಗಳಿಗೆ ಅಕ್ಕಿ ಮತ್ತು ಗೋದಿ ಪೂರೈಕೆ ಸ್ಥಗಿತಗೊಳಿಸಿದ್ದ ರಾಜ್ಯ ಸರ್ಕಾರ ಇದರಿಂದಾದ ಡ್ಯಾಮೇಜ್ ಕಂಟ್ರೋಲ್ ಮಾಡಲು ಸಚಿವೆ ಶಶಿಕಲಾ ಜೊಲ್ಲೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮಿಗಳೊಂದಿಗೆ ಚರ್ಚೆ ನಡೆಸಿದರು. ಕೇಂದ್ರ ಸರ್ಕಾರ ಸಬ್ಸೀಡಿ ಅಕ್ಕಿ ಮತ್ತು ಗೋದಿ ನಿಲ್ಲಿಸಿರುವುದರಿಂದ ತಾತ್ಕಾಲಿಕ ವ್ಯತ್ಯಯವಾಗಿದೆ ಎಂಬುದನ್ನು ಸ್ವಾಮಿಗಳ ಗಮನಕ್ಕೆ ತಂದಿದ್ದಾರೆ.

ಕೆಲವು ಸಂಘ ಸಂಸ್ಥೆಗಳು ಸರ್ಕಾರಕ್ಕೆ ಪತ್ರವನ್ನು ಬರೆದಿದ್ದವು. ಆ ಪತ್ರಗಳನ್ನು ಪರಿಶೀಲಿಸಿದ ಅಧಿಕಾರಿಗಳು ಕೇಂದ್ರ ಸರ್ಕಾರ ಸಬ್ಸೀಡಿ ಅಕ್ಕಿ ಗೋದಿ ನಿಲ್ಲಿಸಿದೆ. ಸಿದ್ದಗಂಗಾ ಮಠಕ್ಕೆ ಅಕ್ಷರ ದಾಸೋಹ ಯೋಜನೆಯಡಿ ನೀಡುತ್ತಿದ್ದ ಅಕ್ಕಿ, ಗೋದಿ ನಿಲ್ಲಿಸಲಾಗಿದೆ ಎಂಬುದನ್ನು ಮಠದ ಶ್ರೀಗಳಿಗೆ ಸಚಿವೆ ವಿವರಿಸಿದರು. ಆಗಿರುವ ವ್ಯತ್ಯಯಕ್ಕೆ ಸಚಿವ ಶಶಿಕಲಾ ಜೊಲ್ಲೆ ವಿಷಾದ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.

ಸಿದ್ದಲಿಂಗ ಸ್ವಾಮಿಗಳ ಕಚೇರಿಯಿಂದ ಹೊರ ಬಂದ ಸಚಿವೆ ಶಶಿಕಲಾ ಜೊಲ್ಲೆ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಸಮಾಧಾನದಿಂದಲೇ ಉತ್ತರಿಸಿದರು. ಸಿದ್ದಗಂಗಾ ಮಠ ಸೇರಿದಂತೆ 355 ಶಾಲೆಗೆಳಿಗೆ ಅಕ್ಷರ ದಾಸೋಹದ ಅಕ್ಕಿ ಮತ್ತು ಗೋದಿ ಪೂರೈಕೆಯಲ್ಲಿ ಆಗಿರುವ ವ್ಯತ್ಯಯಕ್ಕೆ ಮುಖ್ಯಮಂತ್ರಿಗಳು ನನ್ನ ಮೇಲೆ ಗರಂ ಆಗಿಲ್ಲ. ಸಂಘ-ಸಂಸ್ಥೆಗಳು ಬರೆದಿರುವ ಪತ್ರದ ಸಾರಾಂಶವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾಗಿ ಜೊಲ್ಲೆ ಸಮಜಾಯಿಸಿ ನೀಡಿದರು.

ಅಕ್ಷರ ದಾಸೋಹ ಯೋಜನೆಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಸಬ್ಸೀಡಿ ದರದಲ್ಲಿ ನೀಡುತ್ತಿದ್ದ ಅಕ್ಕಿ ಮತ್ತು ಗೋಧಿಯನ್ನು ಸಂಪೂರ್ಣವಾಗಿ ನಿಲ್ಲಿಸಿದೆ. ಇದರಿಂದ ಒಂದೆರಡು ದಿನ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದು ಸತ್ಯ ಎಂದು ಒಪ್ಪಿಕೊಂಡ ಸಚಿವೆ ಶಶಿಕಲ ಸಚಿವ ಸಂಪುಟದಲ್ಲಿ ಈ ಕುರಿತು ಚರ್ಚೆ ನಡೆಸಲಾಯಿತು. ಮುಖ್ಯಮಂತ್ರಿಗಳು ಎಷ್ಟು ಖರ್ಚಾಗುತ್ತದೆ ಎಂದು ಕೇಳಿದರು. 18 ಕೋಟಿ ರೂಪಾಯಿ ಬೇಕಾಗುತ್ತದೆ ಎಂದು ಹೇಳಿದೆ. ಅದಕ್ಕೆ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರದಿಂದಲೇ ಅಕ್ಕಿ ಗೋಧಿ ಪೂರೈಕೆ ಮಾಡೋಣ ಎಂದು ಅನುಮೋದನೆ ನೀಡಿದರು ಎಂದು ವಿವರಿಸಿದರು.

ಮಠದ ವಿದ್ಯಾರ್ಥಿಗಳಿಗೆ ತಿಂಗಳಿಗೆ 735 ಕ್ವಿಂಟಾಲ್ ಅಕ್ಕಿ, 365 ಕ್ವಿಂಟಾಲ್ ಗೋಧಿ ಬೇಕಾಗುತ್ತದೆ. ವಾರ್ಷಿಕ 360 ಮೆಟ್ರಿಕ್ ಟನ್ ಅಕ್ಕಿ, 160 ಮೆಟ್ರಿಕ್ ಟನ್ ಗೋಧಿ ಬೇಕು. ಅದನ್ನು ರಾಜ್ಯ ಸರ್ಕಾರವೇ ಪೂರೈಕೆ ಮಾಡುತ್ತದೆ. ಯಾವುದೇ ಕಾರಣಕ್ಕೂ ಅಕ್ಕಿ, ಗೋಧಿ ವಿತರಿಸುವುದನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಬರುವ ಅಂಗನವಾಡಿ ಕಾರ್ಯಕರ್ತರಿಗೆ ಬೇರೆ ಹೆಸರನ್ನು ಕೊಡುವ ಬಗ್ಗೆ ಸಮಾಲೋಚನೆ ನಡೆಯುತ್ತಿದೆ. ಕಾರ್ಯಕರ್ತೆ ಅಂದರೆ ಯಾಕೋ ಸರಿಹೋಗುತ್ತಿಲ್ಲ. ಹಾಗಾಗಿ ಸಾರ್ವಜನಿಕರಿಂದ ಉತ್ತಮ ಹೆಸರು ನೀಡುವಂತೆ ಆಹ್ವಾನ ನೀಡಿದ್ದೇವೆ. ಒಳ್ಳೆಯ ಹೆಸರು ದೊರೆತ ಮೇಲೆ ಅಂಗನವಾಡಿ ಕಾರ್ಯಕರ್ತೆಯರ ಹೆಸರು ಬದಲಾವಣೆ ಮಾಡಲಾಗುವುದು ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...