Homeಮುಖಪುಟಸಿದ್ದಗಂಗಾ ಮಠಕ್ಕೆ ಸಚಿವೆ ಜೊಲ್ಲೆ ಭೇಟಿ : ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನ..

ಸಿದ್ದಗಂಗಾ ಮಠಕ್ಕೆ ಸಚಿವೆ ಜೊಲ್ಲೆ ಭೇಟಿ : ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನ..

- Advertisement -
- Advertisement -

ಸಿದ್ದಗಂಗಾ ಮಠವೂ ಸೇರಿದಂತೆ 355 ಶಾಲೆಗಳಿಗೆ ಅಕ್ಕಿ ಮತ್ತು ಗೋದಿ ಪೂರೈಕೆ ಸ್ಥಗಿತಗೊಳಿಸಿದ್ದ ರಾಜ್ಯ ಸರ್ಕಾರ ಇದರಿಂದಾದ ಡ್ಯಾಮೇಜ್ ಕಂಟ್ರೋಲ್ ಮಾಡಲು ಸಚಿವೆ ಶಶಿಕಲಾ ಜೊಲ್ಲೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮಿಗಳೊಂದಿಗೆ ಚರ್ಚೆ ನಡೆಸಿದರು. ಕೇಂದ್ರ ಸರ್ಕಾರ ಸಬ್ಸೀಡಿ ಅಕ್ಕಿ ಮತ್ತು ಗೋದಿ ನಿಲ್ಲಿಸಿರುವುದರಿಂದ ತಾತ್ಕಾಲಿಕ ವ್ಯತ್ಯಯವಾಗಿದೆ ಎಂಬುದನ್ನು ಸ್ವಾಮಿಗಳ ಗಮನಕ್ಕೆ ತಂದಿದ್ದಾರೆ.

ಕೆಲವು ಸಂಘ ಸಂಸ್ಥೆಗಳು ಸರ್ಕಾರಕ್ಕೆ ಪತ್ರವನ್ನು ಬರೆದಿದ್ದವು. ಆ ಪತ್ರಗಳನ್ನು ಪರಿಶೀಲಿಸಿದ ಅಧಿಕಾರಿಗಳು ಕೇಂದ್ರ ಸರ್ಕಾರ ಸಬ್ಸೀಡಿ ಅಕ್ಕಿ ಗೋದಿ ನಿಲ್ಲಿಸಿದೆ. ಸಿದ್ದಗಂಗಾ ಮಠಕ್ಕೆ ಅಕ್ಷರ ದಾಸೋಹ ಯೋಜನೆಯಡಿ ನೀಡುತ್ತಿದ್ದ ಅಕ್ಕಿ, ಗೋದಿ ನಿಲ್ಲಿಸಲಾಗಿದೆ ಎಂಬುದನ್ನು ಮಠದ ಶ್ರೀಗಳಿಗೆ ಸಚಿವೆ ವಿವರಿಸಿದರು. ಆಗಿರುವ ವ್ಯತ್ಯಯಕ್ಕೆ ಸಚಿವ ಶಶಿಕಲಾ ಜೊಲ್ಲೆ ವಿಷಾದ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.

ಸಿದ್ದಲಿಂಗ ಸ್ವಾಮಿಗಳ ಕಚೇರಿಯಿಂದ ಹೊರ ಬಂದ ಸಚಿವೆ ಶಶಿಕಲಾ ಜೊಲ್ಲೆ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಸಮಾಧಾನದಿಂದಲೇ ಉತ್ತರಿಸಿದರು. ಸಿದ್ದಗಂಗಾ ಮಠ ಸೇರಿದಂತೆ 355 ಶಾಲೆಗೆಳಿಗೆ ಅಕ್ಷರ ದಾಸೋಹದ ಅಕ್ಕಿ ಮತ್ತು ಗೋದಿ ಪೂರೈಕೆಯಲ್ಲಿ ಆಗಿರುವ ವ್ಯತ್ಯಯಕ್ಕೆ ಮುಖ್ಯಮಂತ್ರಿಗಳು ನನ್ನ ಮೇಲೆ ಗರಂ ಆಗಿಲ್ಲ. ಸಂಘ-ಸಂಸ್ಥೆಗಳು ಬರೆದಿರುವ ಪತ್ರದ ಸಾರಾಂಶವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾಗಿ ಜೊಲ್ಲೆ ಸಮಜಾಯಿಸಿ ನೀಡಿದರು.

ಅಕ್ಷರ ದಾಸೋಹ ಯೋಜನೆಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಸಬ್ಸೀಡಿ ದರದಲ್ಲಿ ನೀಡುತ್ತಿದ್ದ ಅಕ್ಕಿ ಮತ್ತು ಗೋಧಿಯನ್ನು ಸಂಪೂರ್ಣವಾಗಿ ನಿಲ್ಲಿಸಿದೆ. ಇದರಿಂದ ಒಂದೆರಡು ದಿನ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದು ಸತ್ಯ ಎಂದು ಒಪ್ಪಿಕೊಂಡ ಸಚಿವೆ ಶಶಿಕಲ ಸಚಿವ ಸಂಪುಟದಲ್ಲಿ ಈ ಕುರಿತು ಚರ್ಚೆ ನಡೆಸಲಾಯಿತು. ಮುಖ್ಯಮಂತ್ರಿಗಳು ಎಷ್ಟು ಖರ್ಚಾಗುತ್ತದೆ ಎಂದು ಕೇಳಿದರು. 18 ಕೋಟಿ ರೂಪಾಯಿ ಬೇಕಾಗುತ್ತದೆ ಎಂದು ಹೇಳಿದೆ. ಅದಕ್ಕೆ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರದಿಂದಲೇ ಅಕ್ಕಿ ಗೋಧಿ ಪೂರೈಕೆ ಮಾಡೋಣ ಎಂದು ಅನುಮೋದನೆ ನೀಡಿದರು ಎಂದು ವಿವರಿಸಿದರು.

ಮಠದ ವಿದ್ಯಾರ್ಥಿಗಳಿಗೆ ತಿಂಗಳಿಗೆ 735 ಕ್ವಿಂಟಾಲ್ ಅಕ್ಕಿ, 365 ಕ್ವಿಂಟಾಲ್ ಗೋಧಿ ಬೇಕಾಗುತ್ತದೆ. ವಾರ್ಷಿಕ 360 ಮೆಟ್ರಿಕ್ ಟನ್ ಅಕ್ಕಿ, 160 ಮೆಟ್ರಿಕ್ ಟನ್ ಗೋಧಿ ಬೇಕು. ಅದನ್ನು ರಾಜ್ಯ ಸರ್ಕಾರವೇ ಪೂರೈಕೆ ಮಾಡುತ್ತದೆ. ಯಾವುದೇ ಕಾರಣಕ್ಕೂ ಅಕ್ಕಿ, ಗೋಧಿ ವಿತರಿಸುವುದನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಬರುವ ಅಂಗನವಾಡಿ ಕಾರ್ಯಕರ್ತರಿಗೆ ಬೇರೆ ಹೆಸರನ್ನು ಕೊಡುವ ಬಗ್ಗೆ ಸಮಾಲೋಚನೆ ನಡೆಯುತ್ತಿದೆ. ಕಾರ್ಯಕರ್ತೆ ಅಂದರೆ ಯಾಕೋ ಸರಿಹೋಗುತ್ತಿಲ್ಲ. ಹಾಗಾಗಿ ಸಾರ್ವಜನಿಕರಿಂದ ಉತ್ತಮ ಹೆಸರು ನೀಡುವಂತೆ ಆಹ್ವಾನ ನೀಡಿದ್ದೇವೆ. ಒಳ್ಳೆಯ ಹೆಸರು ದೊರೆತ ಮೇಲೆ ಅಂಗನವಾಡಿ ಕಾರ್ಯಕರ್ತೆಯರ ಹೆಸರು ಬದಲಾವಣೆ ಮಾಡಲಾಗುವುದು ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...