Homeಕರ್ನಾಟಕಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ - ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ...

ಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ – ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಬೆಂಗಳೂರು ಕೋವಿಡ್ ಕೇಂದ್ರಗಳಲ್ಲಿ ಎಲ್ಲಾ ಅವ್ರೆ ಸ್ವಾಮಿ, ಏನ್ ಮಾಡೋದು, ಎಲ್ಲಿ ನೋಡಿದ್ರೂ ಗಿಜಿಗಿಜಿ ಅಂತಾರೆ ಎಂದು ಕೊರೊನಾ ರೋಗಿಗಳ ಕುರಿತು ಸಚಿವ ವಿ.ಸೋಮಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ‘ಕುರಿಮಂದೆ ಇದ್ದಂಗೆ ಇದಾರೆ ಸ್ವಾಮೀಜಿ, ಎಲ್ಲಿ ನೋಡಿದ್ರೂ ಅವರೆ’ ಎಂದು ಸಚಿವರ ಮಾತಿಗೆ ದನಿಗೂಡಿಸಿದ್ದಾರೆ.

ಇಂದು ಬೆಳಗ್ಗೆ ಸಿದ್ದಗಂಗಾ ಮಠಕ್ಕೆ ಸಚಿವ ವಿ.ಸೋಮಣ್ಣ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯವರ ಜೊತೆ ಮಾತನಾಡುತ್ತಾರೆ. ಬೆಂಗಳೂರಿನಲ್ಲಿ ಕೋವಿಡ್ ಸಂದರ್ಭದಲ್ಲಿ ತಾನು ಕೈಗೊಂಡಿರುವ ಕಾರ್ಯಗಳನ್ನು ವಿವರಿಸುತ್ತಾರೆ. ಆ ಸಂದರ್ಭದಲ್ಲಿ ಮೇಲಿನ ವಿವಾದಾತ್ಮಕ ಮಾತುಳನ್ನು ಆಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವಿಡಿಯೋ ನೋಡಿ

ಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ – ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ ಹೇಳಿಕೆ.. ಅವರೆ ಎಂದರೆ ಯಾರು ಎಂದು ಪ್ರಶ್ನೆ ಉದ್ಭವ??

Posted by Naanu Gauri on Tuesday, July 14, 2020

ಬೆಂಗಳೂರಿನ 53 ವಾರ್ಡ್‌ಗಳಲ್ಲಿ 26 ಕಡೆ ಕೋವಿಡ್ ಆಸ್ಪತ್ರೆಗಳನ್ನು ತೆರೆದಿದ್ದೇನೆ. 24*7 ಸಹಾಯವಾಣಿ, ಆಂಬುಲೆನ್ಸ್, ಒಂದು ಆಕ್ಸಿಜನ್ ಇದ್ದು ಎಲ್ಲಾ ಸೌಲಭ್ಯ ಒದಗಿಸಲಾಗಿದೆ ಎಂದು ಹೇಳುತ್ತಾರೆ.

ಆಗ ಮಾಜಿ ಸಚಿವ ಸೊಗಡು ಶಿವಣ್ಣ ‘ಕುರಿಮಂದೆ ಇದ್ದಂಗೆ ಇದ್ದಾರೆ ಸ್ವಾಮೀಜಿ ಅನ್ನುತ್ತಾರೆ. ಇದರಿಂದ ಉತ್ತೇಜನಗೊಂಡ ಸಚಿವ ಸೋಮಣ್ಣ ‘ಎಲ್ಲಾ ಅವ್ರೆ ಏನ್ ಮಾಡೋದು, ಗಿಜಿಗಿಜಿ ಅಂತಾರೆ ಸ್ವಾಮೀಜಿ’ ಎಂದು ಹೇಳುತ್ತಾರೆ.

ಇಲ್ಲಿ ಎಲ್ಲಾ ಅವರೆ ಎಂದು ಯಾರು? ಒಂದು ಸಮುದಾಯದವರನ್ನು ಹೀಗೆ ಗುರಿ ಮಾಡಬಹುದೇ? ಸಂವಿಧಾನಬದ್ದವಾಗಿ ಆಡಳಿತ ನಡೆಸುತ್ತೇವೆಂದು ಪ್ರತಿಜ್ಞೆ ಸ್ವೀಕರಿಸಿರುವ ಸಚಿವರು ಈಗೆ ಸಾರ್ವಜನಿಕವಾಗಿ ಕೋವಿಡ್ ಸೋಂಕಿತರನ್ನು ಹೀಯಾಳಿಸಬಹುದೇ? ಎಂದು ಹಲವರು ಪ್ರಶ್ನಿಸಿದ್ದಾರೆ.

ಆಂಬುಲೆನ್ಸ್ ನವರು ಕೋವಿಡ್ ಸೋಂಕಿತರನ್ನು ಕರೆತರಲು 3000 ರೂಪಾಯಿ ಕೊಟ್ರೆ ಹೋಗೋದು.. ಇಲ್ಲದಿದ್ದರೆ ಹೋಗೋದೇ ಇಲ್ಲ ಎಂದು ಸಚಿವ ಸೋಮಣ್ಣ ಅಸಹಾಯಕತೆ ವ್ಯಕ್ತಪಡಿಸುತ್ತಾ, ಹಾಗಾಗಿ ನಾವು ದೊಡ್ಡ ಆಸ್ಪತ್ರೆಗಳಲ್ಲಿ 4500 ರೂಪಾಯಿ ಫಿಕ್ಸ್ ಮಾಡಿದ್ದೇವೆ ಎನ್ನುತ್ತಾರೆ. ಇದು ಸಹ ವಿಡಿಯೋದಲ್ಲಿ ದಾಖಲಾಗಿದೆ.

ಪ್ರತಿ ವಾರ್ಡ್‌ನಲ್ಲಿರುವ ಕೌಂಟರ್‌ ಗೆ ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಿದ್ದೇನೆ. ಅವರು ಆಯಾ ವಾರ್ಡ್‌ನಷ್ಟೇ ನೋಡಿಕೊಳ್ಳುತ್ತಾರೆ. ಹೀಗಾಗಿ ಸೋಂಕು ಕಂಟ್ರೋಲ್ ಗೆ ಬಂದಿದೆ ಎಂದು ಸ್ವಾಮೀಗೆ ವಿವರಿಸಿದ್ದಾರೆ.

ನಿನ್ನೆ ಮಾಜಿ ಸಚಿವ ಜಾರ್ಜ್, ಕಾಂಗ್ರೆಸ್ ಮುಖಂಡ ಹ್ಯಾರೀಸ್ ಮತ್ತು ಶಾಸಕ ರಿಜ್ವನ್  ಅರ್ಷದ್, ಅಖಂಡ ಶ್ರೀನಿವಾಸಮೂರ್ತಿ ಅವರ ಜೊತೆ ಮಾತುಕತೆ ನಡೆಸಿದ್ದೇನೆ. ಸೋಂಕು ನಿಯಂತ್ರಣದ ಸಂಬಂಧ ಚರ್ಚೆಸಿದ್ದೇನೆ ಎಂದೂ ಸಹ ಸೋಮಣ್ಣ ಹೇಳಿದ್ದಾರೆ.


ಇದನ್ನೂ ಓದಿ:

ಒಳಚರಂಡಿ ನಿರ್ಮಾಣ ಕಾಮಗಾರಿ: ಕ್ಯೂರಿಂಗ್‌ಗೆ ಮೊದಲೇ ಹಾಳಾದ ಛೇಂಬರ್‌ಗಳು ತುಮಕೂರಿನಲ್ಲಿ ಹೀಗೊಂದು ಕಳಪೆ ಕಾಮಗಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...