Homeಕರ್ನಾಟಕಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ - ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ...

ಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ – ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಬೆಂಗಳೂರು ಕೋವಿಡ್ ಕೇಂದ್ರಗಳಲ್ಲಿ ಎಲ್ಲಾ ಅವ್ರೆ ಸ್ವಾಮಿ, ಏನ್ ಮಾಡೋದು, ಎಲ್ಲಿ ನೋಡಿದ್ರೂ ಗಿಜಿಗಿಜಿ ಅಂತಾರೆ ಎಂದು ಕೊರೊನಾ ರೋಗಿಗಳ ಕುರಿತು ಸಚಿವ ವಿ.ಸೋಮಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ‘ಕುರಿಮಂದೆ ಇದ್ದಂಗೆ ಇದಾರೆ ಸ್ವಾಮೀಜಿ, ಎಲ್ಲಿ ನೋಡಿದ್ರೂ ಅವರೆ’ ಎಂದು ಸಚಿವರ ಮಾತಿಗೆ ದನಿಗೂಡಿಸಿದ್ದಾರೆ.

ಇಂದು ಬೆಳಗ್ಗೆ ಸಿದ್ದಗಂಗಾ ಮಠಕ್ಕೆ ಸಚಿವ ವಿ.ಸೋಮಣ್ಣ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯವರ ಜೊತೆ ಮಾತನಾಡುತ್ತಾರೆ. ಬೆಂಗಳೂರಿನಲ್ಲಿ ಕೋವಿಡ್ ಸಂದರ್ಭದಲ್ಲಿ ತಾನು ಕೈಗೊಂಡಿರುವ ಕಾರ್ಯಗಳನ್ನು ವಿವರಿಸುತ್ತಾರೆ. ಆ ಸಂದರ್ಭದಲ್ಲಿ ಮೇಲಿನ ವಿವಾದಾತ್ಮಕ ಮಾತುಳನ್ನು ಆಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವಿಡಿಯೋ ನೋಡಿ

ಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ – ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ ಹೇಳಿಕೆ.. ಅವರೆ ಎಂದರೆ ಯಾರು ಎಂದು ಪ್ರಶ್ನೆ ಉದ್ಭವ??

Posted by Naanu Gauri on Tuesday, July 14, 2020

ಬೆಂಗಳೂರಿನ 53 ವಾರ್ಡ್‌ಗಳಲ್ಲಿ 26 ಕಡೆ ಕೋವಿಡ್ ಆಸ್ಪತ್ರೆಗಳನ್ನು ತೆರೆದಿದ್ದೇನೆ. 24*7 ಸಹಾಯವಾಣಿ, ಆಂಬುಲೆನ್ಸ್, ಒಂದು ಆಕ್ಸಿಜನ್ ಇದ್ದು ಎಲ್ಲಾ ಸೌಲಭ್ಯ ಒದಗಿಸಲಾಗಿದೆ ಎಂದು ಹೇಳುತ್ತಾರೆ.

ಆಗ ಮಾಜಿ ಸಚಿವ ಸೊಗಡು ಶಿವಣ್ಣ ‘ಕುರಿಮಂದೆ ಇದ್ದಂಗೆ ಇದ್ದಾರೆ ಸ್ವಾಮೀಜಿ ಅನ್ನುತ್ತಾರೆ. ಇದರಿಂದ ಉತ್ತೇಜನಗೊಂಡ ಸಚಿವ ಸೋಮಣ್ಣ ‘ಎಲ್ಲಾ ಅವ್ರೆ ಏನ್ ಮಾಡೋದು, ಗಿಜಿಗಿಜಿ ಅಂತಾರೆ ಸ್ವಾಮೀಜಿ’ ಎಂದು ಹೇಳುತ್ತಾರೆ.

ಇಲ್ಲಿ ಎಲ್ಲಾ ಅವರೆ ಎಂದು ಯಾರು? ಒಂದು ಸಮುದಾಯದವರನ್ನು ಹೀಗೆ ಗುರಿ ಮಾಡಬಹುದೇ? ಸಂವಿಧಾನಬದ್ದವಾಗಿ ಆಡಳಿತ ನಡೆಸುತ್ತೇವೆಂದು ಪ್ರತಿಜ್ಞೆ ಸ್ವೀಕರಿಸಿರುವ ಸಚಿವರು ಈಗೆ ಸಾರ್ವಜನಿಕವಾಗಿ ಕೋವಿಡ್ ಸೋಂಕಿತರನ್ನು ಹೀಯಾಳಿಸಬಹುದೇ? ಎಂದು ಹಲವರು ಪ್ರಶ್ನಿಸಿದ್ದಾರೆ.

ಆಂಬುಲೆನ್ಸ್ ನವರು ಕೋವಿಡ್ ಸೋಂಕಿತರನ್ನು ಕರೆತರಲು 3000 ರೂಪಾಯಿ ಕೊಟ್ರೆ ಹೋಗೋದು.. ಇಲ್ಲದಿದ್ದರೆ ಹೋಗೋದೇ ಇಲ್ಲ ಎಂದು ಸಚಿವ ಸೋಮಣ್ಣ ಅಸಹಾಯಕತೆ ವ್ಯಕ್ತಪಡಿಸುತ್ತಾ, ಹಾಗಾಗಿ ನಾವು ದೊಡ್ಡ ಆಸ್ಪತ್ರೆಗಳಲ್ಲಿ 4500 ರೂಪಾಯಿ ಫಿಕ್ಸ್ ಮಾಡಿದ್ದೇವೆ ಎನ್ನುತ್ತಾರೆ. ಇದು ಸಹ ವಿಡಿಯೋದಲ್ಲಿ ದಾಖಲಾಗಿದೆ.

ಪ್ರತಿ ವಾರ್ಡ್‌ನಲ್ಲಿರುವ ಕೌಂಟರ್‌ ಗೆ ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಿದ್ದೇನೆ. ಅವರು ಆಯಾ ವಾರ್ಡ್‌ನಷ್ಟೇ ನೋಡಿಕೊಳ್ಳುತ್ತಾರೆ. ಹೀಗಾಗಿ ಸೋಂಕು ಕಂಟ್ರೋಲ್ ಗೆ ಬಂದಿದೆ ಎಂದು ಸ್ವಾಮೀಗೆ ವಿವರಿಸಿದ್ದಾರೆ.

ನಿನ್ನೆ ಮಾಜಿ ಸಚಿವ ಜಾರ್ಜ್, ಕಾಂಗ್ರೆಸ್ ಮುಖಂಡ ಹ್ಯಾರೀಸ್ ಮತ್ತು ಶಾಸಕ ರಿಜ್ವನ್  ಅರ್ಷದ್, ಅಖಂಡ ಶ್ರೀನಿವಾಸಮೂರ್ತಿ ಅವರ ಜೊತೆ ಮಾತುಕತೆ ನಡೆಸಿದ್ದೇನೆ. ಸೋಂಕು ನಿಯಂತ್ರಣದ ಸಂಬಂಧ ಚರ್ಚೆಸಿದ್ದೇನೆ ಎಂದೂ ಸಹ ಸೋಮಣ್ಣ ಹೇಳಿದ್ದಾರೆ.


ಇದನ್ನೂ ಓದಿ:

ಒಳಚರಂಡಿ ನಿರ್ಮಾಣ ಕಾಮಗಾರಿ: ಕ್ಯೂರಿಂಗ್‌ಗೆ ಮೊದಲೇ ಹಾಳಾದ ಛೇಂಬರ್‌ಗಳು ತುಮಕೂರಿನಲ್ಲಿ ಹೀಗೊಂದು ಕಳಪೆ ಕಾಮಗಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...