Homeಕರ್ನಾಟಕಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ - ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ...

ಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ – ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಬೆಂಗಳೂರು ಕೋವಿಡ್ ಕೇಂದ್ರಗಳಲ್ಲಿ ಎಲ್ಲಾ ಅವ್ರೆ ಸ್ವಾಮಿ, ಏನ್ ಮಾಡೋದು, ಎಲ್ಲಿ ನೋಡಿದ್ರೂ ಗಿಜಿಗಿಜಿ ಅಂತಾರೆ ಎಂದು ಕೊರೊನಾ ರೋಗಿಗಳ ಕುರಿತು ಸಚಿವ ವಿ.ಸೋಮಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ‘ಕುರಿಮಂದೆ ಇದ್ದಂಗೆ ಇದಾರೆ ಸ್ವಾಮೀಜಿ, ಎಲ್ಲಿ ನೋಡಿದ್ರೂ ಅವರೆ’ ಎಂದು ಸಚಿವರ ಮಾತಿಗೆ ದನಿಗೂಡಿಸಿದ್ದಾರೆ.

ಇಂದು ಬೆಳಗ್ಗೆ ಸಿದ್ದಗಂಗಾ ಮಠಕ್ಕೆ ಸಚಿವ ವಿ.ಸೋಮಣ್ಣ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯವರ ಜೊತೆ ಮಾತನಾಡುತ್ತಾರೆ. ಬೆಂಗಳೂರಿನಲ್ಲಿ ಕೋವಿಡ್ ಸಂದರ್ಭದಲ್ಲಿ ತಾನು ಕೈಗೊಂಡಿರುವ ಕಾರ್ಯಗಳನ್ನು ವಿವರಿಸುತ್ತಾರೆ. ಆ ಸಂದರ್ಭದಲ್ಲಿ ಮೇಲಿನ ವಿವಾದಾತ್ಮಕ ಮಾತುಳನ್ನು ಆಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವಿಡಿಯೋ ನೋಡಿ

ಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ – ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ ಹೇಳಿಕೆ.. ಅವರೆ ಎಂದರೆ ಯಾರು ಎಂದು ಪ್ರಶ್ನೆ ಉದ್ಭವ??

Posted by Naanu Gauri on Tuesday, July 14, 2020

ಬೆಂಗಳೂರಿನ 53 ವಾರ್ಡ್‌ಗಳಲ್ಲಿ 26 ಕಡೆ ಕೋವಿಡ್ ಆಸ್ಪತ್ರೆಗಳನ್ನು ತೆರೆದಿದ್ದೇನೆ. 24*7 ಸಹಾಯವಾಣಿ, ಆಂಬುಲೆನ್ಸ್, ಒಂದು ಆಕ್ಸಿಜನ್ ಇದ್ದು ಎಲ್ಲಾ ಸೌಲಭ್ಯ ಒದಗಿಸಲಾಗಿದೆ ಎಂದು ಹೇಳುತ್ತಾರೆ.

ಆಗ ಮಾಜಿ ಸಚಿವ ಸೊಗಡು ಶಿವಣ್ಣ ‘ಕುರಿಮಂದೆ ಇದ್ದಂಗೆ ಇದ್ದಾರೆ ಸ್ವಾಮೀಜಿ ಅನ್ನುತ್ತಾರೆ. ಇದರಿಂದ ಉತ್ತೇಜನಗೊಂಡ ಸಚಿವ ಸೋಮಣ್ಣ ‘ಎಲ್ಲಾ ಅವ್ರೆ ಏನ್ ಮಾಡೋದು, ಗಿಜಿಗಿಜಿ ಅಂತಾರೆ ಸ್ವಾಮೀಜಿ’ ಎಂದು ಹೇಳುತ್ತಾರೆ.

ಇಲ್ಲಿ ಎಲ್ಲಾ ಅವರೆ ಎಂದು ಯಾರು? ಒಂದು ಸಮುದಾಯದವರನ್ನು ಹೀಗೆ ಗುರಿ ಮಾಡಬಹುದೇ? ಸಂವಿಧಾನಬದ್ದವಾಗಿ ಆಡಳಿತ ನಡೆಸುತ್ತೇವೆಂದು ಪ್ರತಿಜ್ಞೆ ಸ್ವೀಕರಿಸಿರುವ ಸಚಿವರು ಈಗೆ ಸಾರ್ವಜನಿಕವಾಗಿ ಕೋವಿಡ್ ಸೋಂಕಿತರನ್ನು ಹೀಯಾಳಿಸಬಹುದೇ? ಎಂದು ಹಲವರು ಪ್ರಶ್ನಿಸಿದ್ದಾರೆ.

ಆಂಬುಲೆನ್ಸ್ ನವರು ಕೋವಿಡ್ ಸೋಂಕಿತರನ್ನು ಕರೆತರಲು 3000 ರೂಪಾಯಿ ಕೊಟ್ರೆ ಹೋಗೋದು.. ಇಲ್ಲದಿದ್ದರೆ ಹೋಗೋದೇ ಇಲ್ಲ ಎಂದು ಸಚಿವ ಸೋಮಣ್ಣ ಅಸಹಾಯಕತೆ ವ್ಯಕ್ತಪಡಿಸುತ್ತಾ, ಹಾಗಾಗಿ ನಾವು ದೊಡ್ಡ ಆಸ್ಪತ್ರೆಗಳಲ್ಲಿ 4500 ರೂಪಾಯಿ ಫಿಕ್ಸ್ ಮಾಡಿದ್ದೇವೆ ಎನ್ನುತ್ತಾರೆ. ಇದು ಸಹ ವಿಡಿಯೋದಲ್ಲಿ ದಾಖಲಾಗಿದೆ.

ಪ್ರತಿ ವಾರ್ಡ್‌ನಲ್ಲಿರುವ ಕೌಂಟರ್‌ ಗೆ ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಿದ್ದೇನೆ. ಅವರು ಆಯಾ ವಾರ್ಡ್‌ನಷ್ಟೇ ನೋಡಿಕೊಳ್ಳುತ್ತಾರೆ. ಹೀಗಾಗಿ ಸೋಂಕು ಕಂಟ್ರೋಲ್ ಗೆ ಬಂದಿದೆ ಎಂದು ಸ್ವಾಮೀಗೆ ವಿವರಿಸಿದ್ದಾರೆ.

ನಿನ್ನೆ ಮಾಜಿ ಸಚಿವ ಜಾರ್ಜ್, ಕಾಂಗ್ರೆಸ್ ಮುಖಂಡ ಹ್ಯಾರೀಸ್ ಮತ್ತು ಶಾಸಕ ರಿಜ್ವನ್  ಅರ್ಷದ್, ಅಖಂಡ ಶ್ರೀನಿವಾಸಮೂರ್ತಿ ಅವರ ಜೊತೆ ಮಾತುಕತೆ ನಡೆಸಿದ್ದೇನೆ. ಸೋಂಕು ನಿಯಂತ್ರಣದ ಸಂಬಂಧ ಚರ್ಚೆಸಿದ್ದೇನೆ ಎಂದೂ ಸಹ ಸೋಮಣ್ಣ ಹೇಳಿದ್ದಾರೆ.


ಇದನ್ನೂ ಓದಿ:

ಒಳಚರಂಡಿ ನಿರ್ಮಾಣ ಕಾಮಗಾರಿ: ಕ್ಯೂರಿಂಗ್‌ಗೆ ಮೊದಲೇ ಹಾಳಾದ ಛೇಂಬರ್‌ಗಳು ತುಮಕೂರಿನಲ್ಲಿ ಹೀಗೊಂದು ಕಳಪೆ ಕಾಮಗಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...